Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...