Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...