Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...