Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....