Homeಎಕಾನಮಿಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಜಿಡಿಪಿ ಕುಸಿತ: ಕೇಂದ್ರದ ನೀತಿಗಳ ವಿರುದ್ಧ ಎನ್‌ಡಿಎ ಮತ್ತು ಬಿಜೆಪಿಯಿಂದಲೇ ಭಾರೀ ವಿರೋಧ!

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಭಾರತದ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು ಆರು ವರ್ಷಗಳಲ್ಲಿಯೇ ಕನಿಷ್ಠ 4.5% ಕ್ಕೆ ಇಳಿದ ದಿನ, ಪ್ರತಿಪಕ್ಷದ ಸದಸ್ಯರು, ಆಡಳಿತ ಪಕ್ಷ ಮತ್ತು ಅದರ ಮಿತ್ರಪಕ್ಷಗಳು ಸಹ ಒಗ್ಗೂಡಿ ಆರ್ಥಿಕ ಕುಸಿತವನ್ನು ನಿಗ್ರಹಿಸಲು ವಿಫಲವಾದ ಕೇಂದ್ರದ ಅಸಮರ್ಥತೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಮಿತ್ರಪಕ್ಷಗಳೇ ಬಿಜೆಪಿಯನ್ನು ಪ್ರಶ್ನಿಸುತ್ತಿವೆ!

ಕೇಂದ್ರ ಸರ್ಕಾರವನ್ನು ಮೊದಲು ಪ್ರಶ್ನಿಸಿದವರು ಬಿಜೆಪಿಯ ಸ್ವಂತ ಮಿತ್ರರು. “ಆರ್ಥಿಕತೆಯ ಸ್ಥಿತಿ ಆತಂಕಕಾರಿಯಾಗಿದೆ, ಆರ್ಥಿಕ ಬೆಳವಣಿಗೆಯ ಕೊರತೆಯು ನಿರುದ್ಯೋಗಕ್ಕೆ ಕಾರಣವಾಗುತ್ತಿರುವುದರಿಂದ ನಾವೆಲ್ಲರೂ ಕಳವಳ ಹೊಂದಿದ್ದೇವೆ. ಜಿಡಿಪಿ ಕುಸಿತ ನಮಗೆ ದೊಡ್ಡ ಎಚ್ಚರಿಕೆಯಾಗಿದೆ ಎಂದು ಶಿರೋಮಣಿ ಅಕಾಲಿ ದಳದ ಮುಖಂಡ ನರೇಶ್ ಗುಜ್ರಾಲ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.]

ನರೇಶ್ ಗುಜ್ರಾಲ್‌

ಎನ್‌ಡಿಎ ಪಕ್ಷಗಳಲ್ಲಿಯೇ ಅಸಮಾಧಾನವಿದೆ ಮತ್ತು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಬಿಜೆಪಿ ತನ್ನ ಮಿತ್ರಪಕ್ಷಗಳೊಂದಿಗೆ ಒಂದೇ ಒಂದು ಸಭೆ ಕರೆದಿಲ್ಲ ಎಂದು ಗುಜ್ರಾಲ್ ಹೇಳಿದ್ದಾರೆ. “ಮಿತ್ರಪಕ್ಷಗಳು ಸಾಕಷ್ಟು ಅತೃಪ್ತಿ ಹೊಂದಿದ್ದಾರೆ. ಹಳೆಯ ಮಿತ್ರಪಕ್ಷ ಶಿವಸೇನೆ ಈಗಾಗಲೇ ಎನ್‌ಡಿಎಯಿಂದ ಹೊರನಡೆದಿದೆ ಮತ್ತು ಇತರರು ನಿರ್ಗಮನಕ್ಕೆ ಕಾಯುತ್ತಿದ್ದಾರೆ. ಮಿತ್ರಪಕ್ಷಗಳು ಸ್ಥಾನಗಳಿಗಾಗಿ ಸ್ಪರ್ಧಿಸುತ್ತಿಲ್ಲ, ಆದರೆ ಅವರೊಂದಿಗೆ ಕನಿಷ್ಠ ಸಮಾಲೋಚನೆ ನಡೆಸಬೇಕಾಗಿದೆ” ಎಂದು ಗುಜ್ರಾಲ್ ಹೇಳಿದ್ದಾರೆ.

ಇದೇ ರೀತಿಯ ಧಾಟಿಯಲ್ಲಿ, ಜನತಾದಳ (ಯುನೈಟೆಡ್) ನಾಯಕ ಕೆ.ಸಿ ತ್ಯಾಗಿ ಕೂಡ ಭಾರತದ ಸಾರ್ವಜನಿಕ ಕಂಪನಿಗಳನ್ನು ರಕ್ಷಿಸುವಲ್ಲಿ ವಿಫಲರಾಗಿದ್ದಕ್ಕಾಗಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಕುಸಿಯುತ್ತಿರುವ ಬೆಳವಣಿಗೆಯ ದರ, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣಗೊಳಿಸುವ ಕೇಂದ್ರದ ಯೋಜನೆ ಮತ್ತು ಎಲ್ಲೆಡೆ ವ್ಯಾಪಿಸಿರುವ ಕೃಷಿ ಬಿಕ್ಕಟ್ಟಿನ ಬಗ್ಗೆ ತಮ್ಮ ಪಕ್ಷವು ಚಿಂತಿತವಾಗಿದೆ ಎಂದು ಹಿರಿಯ ನಾಯಕ ಕೆ.ಸಿ ತ್ಯಾಗಿ ಹೇಳಿದ್ದಾರೆ.

“ಅರ್ಥಶಾಸ್ತ್ರಜ್ಞರು ಅಥವಾ ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು. ಅವರೊಂದಿಗೆ ಸಂಪರ್ಕವಿರಬೇಕು. ರಾಜಕೀಯ ನಾಯಕರು ಮತ್ತು ಅರ್ಥಶಾಸ್ತ್ರಜ್ಞರ ಸಭೆ ನಡೆಯಬೇಕು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಂತಹ ತಜ್ಞರನ್ನು ಕರೆದು ಚರ್ಚಿಸಬೇಕು. ಏಕೆಂದರೆ ಇದು ಗುದ್ದಾಟದ ವಿಷಯವಲ್ಲ, ಇದು ಸಮಾಲೋಚನೆಯ ವಿಷಯವಾಗಿದೆ ”ಎಂದು ತ್ಯಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೆ.ಸಿ ತ್ಯಾಗಿ

“ಸಮಾಜವಾದಿ ಪಕ್ಷವಾಗಿರುವುದರಿಂದ, ಜೆಡಿಯು ಸಾರ್ವಜನಿಕ ಸ್ವತ್ತುಗಳನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಕೇಂದ್ರದ ವೇಗದ ಬಗ್ಗೆ ಗಂಭೀರ ಕಳವಳವನ್ನು ಹೊಂದಿದೆ. ಆದಾಯ ಸಂಗ್ರಹಕ್ಕಾಗಿ ಸಾರ್ವಜನಿಕ ಸ್ವತ್ತುಗಳನ್ನು ಮಾರಾಟ ಮಾಡುವುದು ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ತಪ್ಪು ವಿಧಾನವೆಂದು ಈಗಾಗಲೇ ಸಾಬೀತಾಗಿದೆ. ಅಟಲ್ ಬಿಹಾರಿ ವಾಜಪೇಯಿ ಅವರ ಸಮಯದಲ್ಲಿ, ಅದಕ್ಕಾಗಿ ಒಂದು ಸಚಿವಾಲಯವಿತ್ತು, ಆದರೆ ಅದು ಫಲಿತಾಂಶವನ್ನು ನೀಡಲಿಲ್ಲ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿಯೂ ಅದು ಸಂಭವಿಸಿದೆ ಆದರೆ ಯಾವುದೇ ಫಲಿತಾಂಶಗಳಿಲ್ಲ” ಅರ್ಥಶಾಸ್ತ್ರಜ್ಞರು ಮತ್ತು ಮಾಜಿ ಆರ್‌ಬಿಐ ಗವರ್ನರ್‌ಗಳ ಎಚ್ಚರಿಕೆಗಳನ್ನು ಸರ್ಕಾರ ನಿರ್ಲಕ್ಷಿಸಬಾರದು ಅಥವಾ ಅಪಹಾಸ್ಯ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಮತ್ತೊಂದೆಡೆ, ನರೇಶ್ ಗುಜ್ರಾಲ್, ಮೋದಿಯವರ ಸಂಪುಟದಲ್ಲಿ “ಪ್ರತಿಭಾ ಕೊರತೆ” ಯನ್ನು ಗಮನಸೆಳೆದರು. “ಸಮರ್ಥ ಮಂತ್ರಿಗಳಿಂದ ನಿರ್ವಹಿಸಲ್ಪಡುವ” ಎಲ್ಲಾ ಸಚಿವಾಲಯಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ಆದರೆ ಹೆಚ್ಚಿನ ಇಲಾಖೆಗಳು ಸಮರ್ಥ ಮಂತ್ರಿಗಳನ್ನು ಹೊಂದಿಲ್ಲ ಎಂದು ಅವರು ಹೇಳಿದರು. ಗುಜರಾಲ್ ಯಾವ ಮಂತ್ರಿಗಳನ್ನು ಗಮನದಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂಬುದಿನ್ನು ಸ್ಪಷ್ಟವಾಗಿಲ್ಲ.

ಇನ್ನೊಬ್ಬ ಹಿರಿಯ ಬಿಜೆಪಿ ಸಂಸದರು, “ಈ ದಿನಗಳಲ್ಲಿ ಉದ್ಯಮ / ವ್ಯವಹಾರದಲ್ಲಿ ಕೊಳ್ಳುವ ಶಕ್ತಿ ತೀವ್ರ ಕಡಿಮೆಯಾಗಿದೆ. ಜಿಎಸ್ಟಿ ಸಂಗ್ರಹ ಕೂಡ ಕಡಿಮೆಯಾಗಿದೆ. ಇದು ಕಳವಳಕಾರಿ ವಿಷಯ. ನಾವು ಅದರ ಬಗ್ಗೆ ಮಾತನಾಡುತ್ತೇವೆ. ಆದರೆ ದಯವಿಟ್ಟು ಫೋನ್‌ನಲ್ಲಿ ಬೇಡ” ಎಂದಿದ್ದಾರೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಬಿಜೆಪಿ ಪಕ್ಷದ ಮತ್ತೊಬ್ಬರು ಆರ್ಥಿಕತೆಯು ಸರ್ಕಾರದ ಕೇಂದ್ರಬಿಂದುವಾಗಿರಬೇಕು. ಆದರೆ “ಪರಿಸ್ಥಿತಿ ಭರವಸೆಯಂತೆ ಕಾಣುವುದಿಲ್ಲ” ಎಂದು ಹೇಳಿದರು. ಹಣಕಾಸು ಸಚಿವರ ಬಜೆಟ್ ಪ್ರಕಟಣೆಗಳು ಆರ್ಥಿಕತೆಯ ಮೇಲೆ ಯಾವುದೇ ರೀತಿಯ ಸಕಾರಾತ್ಮಕ ಪರಿಣಾಮ ಬೀರಿಲ್ಲ ಎಂದು ಅವರ ಅಭಿಪ್ರಯಪಟ್ಟಿದ್ದಾರೆ.

ಹರಿಯಾಣ ಮತ್ತು ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷದ ಕಳಪೆ ಪ್ರದರ್ಶನವೇ ಆರ್ಥಿಕ ಕುಸಿತಕ್ಕೆ ಕಾರಣ ಎಂದು ಹಲವಾರು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...