Homeಎಕಾನಮಿಆರ್ಥಿಕ ಕುಸಿತದಿಂದ ಲಾಸ್ ಆಗುತ್ತಿರುವುದು ಸೋಮಾರಿ ಕಂಪನಿಗಳಾ?

ಆರ್ಥಿಕ ಕುಸಿತದಿಂದ ಲಾಸ್ ಆಗುತ್ತಿರುವುದು ಸೋಮಾರಿ ಕಂಪನಿಗಳಾ?

- Advertisement -
- Advertisement -

ಭಾರತದ ಆರ್ಥಿಕತೆ ಬೀಳುತ್ತಿದೆ ಎಂದು ಜಾಗತಿಕ ಮಟ್ಟದಲ್ಲಿ ಆರ್ಥಿಕ ತಜ್ಞರು ಹೇಳುತ್ತಿದ್ದಾರೆ, ಆರ್.ಬಿ.ಐ. ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು “ಈ ದೇಶ ನಿರುದ್ಯೋಗದ ಟೈಂ ಬಾಂಬ್ ಮೇಲೆ ಕೂತಿದೆ” ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿರುವ ಸಂದರ್ಭದಲ್ಲಿ ಈ ಟೈಂ ಬಾಂಬ್ ಸಿಡಿಯದೇ ದೇಶ ರಕ್ಷಣೆ ಹೇಗೆ ಮಾಡಬೇಕು ಎಂದು ಕೆಲವರು ಯೋಚಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ “ಕೆಲಸ ಮಾಡದ ಸೋಮಾರಿಗಳ ಕಂಪನಿಗಳು ಮಾತ್ರ ಮುಚ್ಚುತ್ತಿವೆ, ಅವುಗಳು ಇದ್ದೂ ಏನೂ ಪ್ರಯೋಜನವಿಲ್ಲ ಹೋಗ್ಲಿ ಬಿಡಿ, ದೇಶಕ್ಕೆ ಯಾವುದೇ ಅಪಾಯವಿಲ್ಲ” ಎಂದು ಮೋದಿಯ ಅಭಿಮಾನಿಗಳು ವಾದಿಸುತ್ತಿದ್ದಾರೆ. ಹಾಗಾದರೆ ನಷ್ಟದಲ್ಲಿರುವ ಕಂಪನಿಗಳು/ಕಾರ್ಖಾನೆಗಳೆಲ್ಲಾ ಸೋಮಾರಿಗಳಾ? ನಷ್ಟದಲ್ಲಿರುವ ಕಂಪನಿಗಳು ಈಗ ಮೂರಂಕೆಯ ಸಂಖ್ಯೆ ದಾಟಿವೆಯಾದರೂ ಇಲ್ಲಿ ಕೆಲವನ್ನು ಮಾತ್ರ ನೋಡೋಣ.

ದೇಶದ ಬಹುದೊಡ್ಡ ಉದ್ಯೋಗ ಕ್ಷೇತ್ರ ಕೃಷಿ. ಇದೀಗ ಕೃಷಿ ಲಾಭದಾಯಕದ ಮಾತು ಹಾಗಿರಲಿ ಕೃಷಿಯಲ್ಲಿ ತೊಡಗಿರುವ ಮುಂದೊಂದು ದಿನ ಆತ್ಮಹತ್ಯೆ ಮಾಡಿಕೊಳ್ಳಲಿರುವ ರೈತರು ಹಾಗೂ ರೈತ ಕಾರ್ಮಿಕರ ಬದುಕನ್ನು ಉಳಿಸಿಕೊಳ್ಳಲು ನಾವೆಲ್ಲಾ ಪರದಾಡುತ್ತಿರುವ ಸಂದರ್ಭದಲ್ಲಿದ್ದೇವೆ. ರೈತರನ್ನು ಸೋಮಾರಿಗಳು ಕಷ್ಟಪಟ್ಟು ದುಡಿಯದವರು ಎಂದು ವಾದ ಮಾಡುವುದಾದರೆ ಇದು ಆತ್ಮವಂಚನೆ ಅಲ್ಲವೇ? ‘ಕೃಷಿ ಆತ್ಮಹತ್ಯೆ ಕ್ಷೇತ್ರ’ವಾಗಿದ್ದು ಮೋದಿಯ ಕಾಲದಲ್ಲೇ ಅಲ್ಲ. ಇದಕ್ಕೆ ಕಾಂಗ್ರೆಸ್ ಆಡಳಿತವೂ ಸೇರಿ ಕಾರಣವಾಗಿದೆ. ಆದರೆ ದುರಾದೃಷ್ಟವಶಾತ್ ಹೋಲಿಸಿ ನೋಡಲು ರೈತರ ಆತ್ಮಹತ್ಯೆಯ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಲೇ ಇಲ್ಲ! ಇಂದಿಗೂ ಸಾಪೇಕ್ಷವಾಗಿ ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಹಿಂದಿನ ಸರ್ಕಾರಗಳು ಕಾರಣವಾಗಿರುವುದು ನಿಜವೇ ಆದರೂ ಮೋದಿ ‘ಆಳ್ವಿಕೆಯಲ್ಲಿ’ ನಷ್ಟ ಕಂಡ/ಕಾಣುತ್ತಿರುವ ಸಂಸ್ಥೆಯ ಬಗ್ಗೆ ಗಮನಹರಿಸೋಣ.

ಎಚ್.ಎ.ಎಲ್: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯು 1940 ರಿಂದಲೂ ಬಾಹ್ಯಾಕಾಶಕ್ಕೆ ಕೊಡುಗೆ ನೀಡುತ್ತಾ ಬಂದಿದೆ. 1964 ರಿಂದ ಹಿಂದುಸ್ತಾನ್ ಏರ್ ಕ್ರಾಫ್ಟ್ ನಿಂದ ಎಚ್.ಎ.ಎಲ್ ಎಂದು ಮರುನಾಮಕರಣಗೊಂಡು ಬಾಹ್ಯಾಕಾಶ ಹಾಗೂ ಭಾರತೀಯ ಸೈನ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸೇನೆಗೆ ಧೃವ್, ಚೇತಕ್, ಲ್ಯಾನ್ಸರ್ ಇನ್ನೂ ಮುಂತಾದ ಹೆಲಿಕಾಪ್ಟರ್ ಅನ್ನು ನೀಡಿದೆ. ಹಾಗೂ ಎಲ್.ಸಿ.ಎ, ಎಚ್ ಟಿಟಿ-40, ಐಜೆಟಿ ನಂತಹ ಯುದ್ಧ ವಿಮಾನಗಳನ್ನೂ ಕೊಡೆಗೆಯಾಗಿ ನೀಡಿದೆ. ಇದಲ್ಲದೆ ಫೈಟರ್ ಜೆಟ್, ಪವರ್ ಪ್ಲಾಂಟ್, ಹಲವಾರು ಬೇರೆ ಬೇರೆ ಉಪಕರಣಗಳನ್ನು ನೀಡಿದೆ.

ಸದ್ಯಕ್ಕೆ 32,108 (2014 ರ ಗಣತಿ) ಜನರು ಈ ಸರ್ಕಾರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಐತಿಹಾಸಿಕ ಸಂಸ್ಥೆ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯೇ ಸರಿ. (ರಾಫೇಲ್ ಒಪ್ಪಂದದ ಚರ್ಚೆಯಲ್ಲಿ ಕೇಂದ್ರದ ಮಂತ್ರಿಗಳು ಎಚ್.ಎ.ಎಲ್ ಕಾರ್ಯಕ್ಷಮತೆ ಚೆನ್ನಾಗಿಲ್ಲ ಹಾಗಾಗಿ ಅಂಬಾನಿಗೆ ಈ ಒಪ್ಪಂದ ಮಾಡಿಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಅಂಬಾನಿ ತನ್ನ ಜೀವನದಲ್ಲಿ ಒಂದೂ ಯುದ್ಧ ವಿಮಾನವನ್ನು ತಯಾರು ಮಾಡಿಲ್ಲ ಹಾಗು ಅಂತಹ ಘಟಕ ಆತನ ಬಳಿ ಇಲ್ಲ ಎನ್ನುವುದು ವಾಸ್ತವ. ಇತಿಹಾಸ ತಿಳಿಯದ ಮುಗ್ಧರು ಇದನ್ನೇ ಸತ್ಯವೆಂದು ತಿಳಿದು ವಾದಿಸುವುದು ದುರಂತ) ಇಂತಹ ಎಚ್.ಎ.ಎಲ್ ಸಂಸ್ಥೆ ಇತಿಹಾಸದಲ್ಲೇ ಪ್ರಥಮ ಬಾರಿಗೆ (ಜನವರಿ, 2019) ತನ್ನ ಸಿಬ್ಬಂದಿಗಳಿಗೆ ಸಂಬಳ ನೀಡಲು ಹಣವಿಲ್ಲದೆ 1,000 ಕೋಟಿ ರೂ ಸಾಲವನ್ನು ಮಾಡಿತ್ತು! ಈಗಲೂ ಒಟ್ಟಾರೆ ಆದಾಯ ಏರಿಕೆ ಕಂಡಿಲ್ಲ. ಈ ಸಂಸ್ಥೆಯನ್ನು ಸೋಮಾರಿ ಸಂಸ್ಥೆ ಎಂದರೆ ಆತ್ಮವಂಚನೆಯ ಕೆಲಸವಲ್ಲದೆ ಮತ್ತೇನು?

ಬಿ.ಎಸ್.ಎನ್.ಎಲ್: 2000 ನೇ ಇಸವಿಯಲ್ಲಿ ಶುರುವಾಗಿರುವ ಈ ಸಂಸ್ಥೆಯ ವಾರಸುದಾರರು ಭಾರತ ಸರ್ಕಾರವಾಗಿದೆ. 1,74,216 ಸಿಬ್ದಂದಿಗಳಿರುವ ಈ ಸಂಸ್ಥೆ ಹಳ್ಳಿ ಹಳ್ಳಿಗೂ ದೂರವಾಣಿ ಸಂಪರ್ಕವನ್ನು ನೀಡಿದ ಮೊಟ್ಟ ಮೊದಲ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬಲವರ್ಧನೆಗೆ ಕೆಲಸ ಮಾಡದ ಸರ್ಕಾರ ಜಿಯೋ ಎನ್ನುವ ಖಾಸಗೀ ವ್ಯಕ್ತಿಯೊಬ್ಬನ ಟೆಲಿಕಾಂ ಪ್ರಚಾರಕ್ಕಾಗಿ ದೇಶದ ಪ್ರಧಾನ ಮಂತ್ರಿಗಳೇ ಅಧಿಕೃತ ರಾಯಭಾರಿ ಆಗಿದ್ದು ನಿಜಕ್ಕೂ ದೇಶದ ಬಹುದೊಡ್ಡ ದುರಂತ. ಈಗ ಬಿ.ಎಸ್.ಎನ್.ಎಲ್ ಸಂಸ್ಥೆ ನಷ್ಟದಲ್ಲಿದ್ದು ವರಮಾನ ಇಳಿಮುಖ ಕಾಣುತ್ತಿದೆ. ಇದರ ಆಪರೇಷನಲ್ ಇನ್ಕಂ -14,000 ಕೋಟಿ (ಮೈನಸ್). ಹೀಗಾಗಿ ಸಿಬ್ಬಂದಿಗಳ ವೇತನಕ್ಕೂ ತೊಂದರೆಯಾಗುತ್ತಿದೆ. ಈಗ ಸಂಸ್ಥೆಯ ಬಲವರ್ಧನೆಗೆ ದುಡಿಯದ ಸರ್ಕಾರವನ್ನು ಬಿಟ್ಟು 1,74,216 ಜನರನ್ನೂ ಸೋಮಾರಿಗಳು ಎನ್ನಲು ಸಾಧ್ಯವೇ?

2013ರಲ್ಲಿ ನಂ.1 ಬ್ರಾಂಡ್ ಆಗಿದ್ದ ಭಾರತದ ಪಾರ್ಲೇಜಿ ಕಂಪನಿ 1939 ರಿಂದಲೂ ಕೆಲಸ ಮಾಡುತ್ತಿದೆ. ಅಲ್ಲದೆ ಇದು ಹಾಲು ಉತ್ಪಾದಕ ರೈತರಿಗೂ ಸಂಜೀವಿನಿಯಾಗಿತ್ತು. ಇದೀಗ ಪಾರ್ಲೆಜಿ ಕಂಪನಿಯೂ ನಷ್ಟದಲ್ಲಿದ್ದು 10,000 ನೌಕರರನ್ನು ಕಿತ್ತುಹಾಕಿದೆ. ಜಿ.ಎಸ್.ಟಿ ಮತ್ತು ನೋಟು ರದ್ಧತಿಯೇ ತಮ್ಮ ನಷ್ಟಕ್ಕೆ ಕಾರಣ ಎಂದು ಕಂಪನಿಯ ಆಡಳಿತಾಧಿಕಾರಿಗಳು ಹೇಳಿದ್ದಾರೆ. ಆದರೆ ಇಂತಹ ದೀರ್ಘ ಇತಿಹಾಸವಿರುವ ಕಂಪನಿಯನ್ನು “ಇದು ಭಾರತದ ಕಂಪನಿಯಲ್ಲ, ಅಲ್ಲಿ ಕೇವಲ 4 ಸಾವಿರ ಸಿಬ್ಬಂದಿ ಅಷ್ಟೇ ಇರೋದು, 10 ಸಾವಿರ ಎಲ್ಲಿಂದ?” ಎನ್ನುವ ಸುಳ್ಳು ಸಂದೇಶವನ್ನು ಬಿಜೆಪಿಯ ವಕ್ತಾರರೇ ಹಂಚುತ್ತಿದ್ದಾರೆ. ಅಂದರೆ ಬ್ರಿಟಾನಿಯ ಕಂಪನಿಯ 4 ಸಾವಿರ ಸಿಬ್ಬಂದಿಯನ್ನು ತೋರಿಸಿ ಪಾರ್ಲೆಜಿಗೆ ಹೋಲಿಸುವ ಸುಳ್ಳನ್ನು ಬಿತ್ತುತ್ತಿದ್ದಾರೆ. ಇದನ್ನು ನಂಬಿದ ಮುಗ್ದರು ಪಾರ್ಲೆಜಿಯನ್ನೂ ಸೋಮಾರಿಗಳು ಎನ್ನುತ್ತಿದ್ದಾರೆ.

ಇನ್ನೂ ನೂರಾರು ವರ್ಷಗಳ ಇತಿಹಾಸವಿರುವ ನೇಯ್ಗೆ ಕ್ಷೇತ್ರದ ತಮಿಳುನಾಡಿನಲ್ಲಿ ಒಂದೇ ಬಾರಿ 200 ಕಾರ್ಖಾನೆಗಳು ಮುಚ್ಚಿದವು, ಟೀ ಉತ್ಪಾದನಾ ಕ್ಷೇತ್ರವೂ ನಷ್ಟದಲ್ಲಿದೆ. ಈ ಎರಡು ಕ್ಷೇತ್ರಗಳು ಇತಿಹಾಸದಲ್ಲಿ ಮೊದಲ ಬಾರಿಗೆ “ನಾವು ನಷ್ಟದಲ್ಲಿದ್ದೇವೆ ನಮ್ಮನ್ನು ಕಾಪಾಡಿ” ಎನ್ನುವ ಪತ್ರಿಕಾ ಜಾಹೀರಾತನ್ನೇ ನೀಡಿದವು. ಈ ಗಂಭೀರತಯನ್ನು ಅರ್ಥ ಮಾಡಿಕೊಳ್ಳದೆ ಆ ನೇಕಾರ ಹಾಗೂ ರೈತ ಕಾರ್ಮಿಕರನ್ನೂ ಸೋಮಾರಿಗಳು ಎಂದರೆ ಅಂಬಾನಿಯ ಟ್ರಾಪ್ ಗೆ ನಾವು ಬಿದ್ದಂತೆಯೇ ಸರಿ.

ಇದೀಗ ಅತಿದೊಡ್ಡ ನಷ್ಟ ಹಾಗೂ ತಿಂಗಳಿಗೆ 15-20 ವರ್ಷಗಳ ಅನುಭವವಿದ್ದರೂ ನೂರಾರು ಕಾರ್ಮಿಕರನ್ನು ಕೆಲಸದಿಂದ ಕಿತ್ತುಹಾಕುತ್ತಿರುವ ಆಟೋಮೊಬೈಲ್ ಕ್ಷೇತ್ರಗಳಿಗೆ ಹತ್ತಾರು ವರ್ಷದ ಇತಿಹಾಸವಿದೆ ಹಾಗೂ ಲಕ್ಷಾಂತರ ಕಾರ್ಮಿಕರು/ಸಿಬ್ಬಂದಿಗಳು ಜಪಾನ್ ಟೆಕ್ನಾಲಜಿಯ ಅನುಸಾರ ಅಮಾನವೀಯವಾಗಿ ಸೆಕೆಂಡ್ ಲೆಕ್ಕದಲ್ಲಿ ಮಾನೇಸಾರ್, ಹೊಂಡಾ, ಟಿವಿಎಸ್, ಹಿರೋ ಇತ್ಯಾದಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನೂ ಸೋಮಾರಿಗಳು ಎನ್ನಲು ಸಾಧ್ಯವೇ? ಟಿವಿಎಸ್, ಟಾಟಾ ಕಂಪನಿಗಳು ಸಹ ನಷ್ಟಕ್ಕೆ ಸಿಲುಕಿವೆ. ಅದಕ್ಕೆ ಸೋಮಾರಿತನ ಕಾರಣವೇ?

ಹೀಗೆ ನಷ್ಟ ಅನುಭವಿಸುತ್ತಿರುವ ಎಲ್ಲರನ್ನು ಸೋಮಾರಿಗಳು ಎನ್ನುತ್ತಾ ಮುಖೇಶ್ ಅಂಬಾನಿ ಅಥವಾ ಇನ್ನೊಬ್ಬ ವ್ಯಕ್ತಿ ಮಾತ್ರ ‘ಕ್ರೀಯಾಶೀಲ’ ಎಂದು ನಾವು ಹೇಳುವುದಾದರೆ ಅದು ಮೋಸ ಎಂತಲೇ ಅರ್ಥ. ಏಕೆಂದರೆ ಅಂಬಾನಿಗೆ ಸರ್ಕಾರಗಳು ಲಕ್ಷ ಕೋಟಿಗಳ ಲೆಕ್ಕದಲ್ಲಿ ತೆರಿಗೆ ವಿನಾಯಿತಿ ನೀಡಿವೆ. ಅವರ ಸಾವಿರಾರು ಕೋಟಿ ಸಾಲವನ್ನು ಮನ್ನಾ ಮಾಡಿವೆ. ಪುಕ್ಕಟೆಯಾಗಿ ಆತನ ಜಿಯೊ ಟೆಲಿಕಾಂಗೆ ಪ್ರಧಾನಿಗಳು ಜಾಹಿರಾತು ಕೊಟ್ಟಿದ್ದಾರೆ. ಆದರೆ ಇದನ್ನೆ ಸರ್ಕಾರಿ ಸಂಸ್ಥೆಗಳಿಗೆ ಅಥವಾ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಸಂಸ್ಥೆಗಳಿಗೆ ಏಕೆ ಮಾಡಲಿಲ್ಲ? ಕರ್ನಾಟಕ ಸಿದ್ದಾರ್ಥ್ ರವರ ಕಾಫಿಡೇ ಗೆ ಏಕೆ ನೆರವು ನೀಡಲಿಲ್ಲ? ಈ ಪ್ರಶ್ನೆಗೆ ಉತ್ತರಿಸುತ್ತೀರಾ?

ಹೀಗೆ ಸೋಮಾರಿ ಕಂಪನಿಗಳು ಎಂಬ ಸುಳ್ಳನ್ನು ಹಂಚುವುದರಿಂದ ನಾವು “ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿ, ಸಣ್ಣ ವ್ಯಾಪಾರಗಳು ಹಾಗೂ ಗುಡಿ ಕೈಗಾರಿಕೆಗಳನ್ನು ನಾಶ ಮಾಡುತ್ತೇವೆ, ಉದ್ಯೋಗವೇ ಸೃಷ್ಟಿಯಾಗದ ಏಕಸ್ವಾಮ್ಯ ಬಂಡವಾಳವಾದವನ್ನು ಬೆಳೆಸುವ ಮತ್ತು ನಿರುದ್ಯೋಗದ ಪರ ವಹಿಸಿದಂತಾಗುತ್ತದೆ.”

ಹಾಗಾದರೇ ಸೋಮಾರಿತನ ಇಲ್ಲವೇ? ಖಂಡಿತವಾಗಿಯೂ ಇದೆ! ಆರ್ಥಿಕತೆ ಹಿಂಜರಿತ, ನಿರುದ್ಯೋಗಕ್ಕೆ ಕಾರಣಗಳನ್ನು, ಅದರ ಅಪಾಯವನ್ನು ನಾವು ಅರ್ಥ ಮಾಡಿಕೊಳ್ಳುವುದರಲ್ಲಿ, ತರ್ಕಬದ್ದವಾಗಿ ಓದುವುದರಲ್ಲಿ, ಸ್ವಂತ ವಿಚಾರ ಮಾಡುವುದರಲ್ಲಿ ಸೋಮಾರಿತನ ಇದ್ದೇಯಿದೆ. ಇದರಿಂದ ಹೊರಬರಬೇಕಿದೆ. ದೇಶಕ್ಕೆ ಎದುರಾಗಲಿರುವ ಅಪಾಯದಿಂದ ಉಳಿಸಬೇಕಿದೆ. ಮುನ್ನೋಟವನ್ನು ಕಟ್ಟಿಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ವಲಯದ ಕಂಪೆನಿಗಳಾದ ಬಿ.ಇ.ಎಂ.ಎಲ್ , ಸೇರಿದಂತೆ ಅನೇಕ ಕಂಪೆನಿಗಳನ್ನು ಇಂದು ಖಾಸಗೀಯವರಿಗೆ ಪರಭಾರೆ ಮಾಡಿ ಸರಕಾರ ಕೈ ತೊಳೆದು ಕೊಳ್ಳಲು ಎಲ್ಲಾ ರೀತಿಯ ತಂತ್ರಗಳನ್ನು ಮಾಡುತ್ತಿದೆ, ಅವರು ನೀಡುವ ಕಾರಣ ಹೆಚ್.ಎ.ಎಲ್ ಸೇರಿದಂತೆ ಎಲ್ಲವೂ ಕೂಡ ಒಂದೋ ನಷ್ಟದಲ್ಲಿ ಇದ್ದಾವೆ ಹಾಗೂ ಅವುಗಳ ಕಾರ್ಯಕ್ಷಮತೆ ಖಾಸಗೀಯವರ ತರಹ ಇಲ್ಲ ಎಂದು. ದುರಂತ ಎಂದರೆ ಸಾರ್ವಜನಿಕ ಉದ್ದಿಮೆಗಳಲ್ಲಿ ಇರುವ ನಮೋ ಭಕ್ತರು ಈ ಕಂಪೆನಿಗಳನ್ನು ಖಾಸಗೀ ಒಡೆತನಕ್ಕೆ ಮಾರಲು ತುದಿಗಾಲಿನಲ್ಲಿ ಕಾದಿದ್ದಾರೆ, ಆ ಮೂಲಕ ಪ್ರಧಾನ ಸೇವಕ ರ ಕೈ ಬಲಪಡಿಸುತ್ತಾರಂತೆ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...