Homeಎಕಾನಮಿಆರ್ಥಿಕ ಕುಸಿತದಿಂದ ಲಾಸ್ ಆಗುತ್ತಿರುವುದು ಸೋಮಾರಿ ಕಂಪನಿಗಳಾ?

ಆರ್ಥಿಕ ಕುಸಿತದಿಂದ ಲಾಸ್ ಆಗುತ್ತಿರುವುದು ಸೋಮಾರಿ ಕಂಪನಿಗಳಾ?

- Advertisement -
- Advertisement -

ಭಾರತದ ಆರ್ಥಿಕತೆ ಬೀಳುತ್ತಿದೆ ಎಂದು ಜಾಗತಿಕ ಮಟ್ಟದಲ್ಲಿ ಆರ್ಥಿಕ ತಜ್ಞರು ಹೇಳುತ್ತಿದ್ದಾರೆ, ಆರ್.ಬಿ.ಐ. ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು “ಈ ದೇಶ ನಿರುದ್ಯೋಗದ ಟೈಂ ಬಾಂಬ್ ಮೇಲೆ ಕೂತಿದೆ” ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿರುವ ಸಂದರ್ಭದಲ್ಲಿ ಈ ಟೈಂ ಬಾಂಬ್ ಸಿಡಿಯದೇ ದೇಶ ರಕ್ಷಣೆ ಹೇಗೆ ಮಾಡಬೇಕು ಎಂದು ಕೆಲವರು ಯೋಚಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ “ಕೆಲಸ ಮಾಡದ ಸೋಮಾರಿಗಳ ಕಂಪನಿಗಳು ಮಾತ್ರ ಮುಚ್ಚುತ್ತಿವೆ, ಅವುಗಳು ಇದ್ದೂ ಏನೂ ಪ್ರಯೋಜನವಿಲ್ಲ ಹೋಗ್ಲಿ ಬಿಡಿ, ದೇಶಕ್ಕೆ ಯಾವುದೇ ಅಪಾಯವಿಲ್ಲ” ಎಂದು ಮೋದಿಯ ಅಭಿಮಾನಿಗಳು ವಾದಿಸುತ್ತಿದ್ದಾರೆ. ಹಾಗಾದರೆ ನಷ್ಟದಲ್ಲಿರುವ ಕಂಪನಿಗಳು/ಕಾರ್ಖಾನೆಗಳೆಲ್ಲಾ ಸೋಮಾರಿಗಳಾ? ನಷ್ಟದಲ್ಲಿರುವ ಕಂಪನಿಗಳು ಈಗ ಮೂರಂಕೆಯ ಸಂಖ್ಯೆ ದಾಟಿವೆಯಾದರೂ ಇಲ್ಲಿ ಕೆಲವನ್ನು ಮಾತ್ರ ನೋಡೋಣ.

ದೇಶದ ಬಹುದೊಡ್ಡ ಉದ್ಯೋಗ ಕ್ಷೇತ್ರ ಕೃಷಿ. ಇದೀಗ ಕೃಷಿ ಲಾಭದಾಯಕದ ಮಾತು ಹಾಗಿರಲಿ ಕೃಷಿಯಲ್ಲಿ ತೊಡಗಿರುವ ಮುಂದೊಂದು ದಿನ ಆತ್ಮಹತ್ಯೆ ಮಾಡಿಕೊಳ್ಳಲಿರುವ ರೈತರು ಹಾಗೂ ರೈತ ಕಾರ್ಮಿಕರ ಬದುಕನ್ನು ಉಳಿಸಿಕೊಳ್ಳಲು ನಾವೆಲ್ಲಾ ಪರದಾಡುತ್ತಿರುವ ಸಂದರ್ಭದಲ್ಲಿದ್ದೇವೆ. ರೈತರನ್ನು ಸೋಮಾರಿಗಳು ಕಷ್ಟಪಟ್ಟು ದುಡಿಯದವರು ಎಂದು ವಾದ ಮಾಡುವುದಾದರೆ ಇದು ಆತ್ಮವಂಚನೆ ಅಲ್ಲವೇ? ‘ಕೃಷಿ ಆತ್ಮಹತ್ಯೆ ಕ್ಷೇತ್ರ’ವಾಗಿದ್ದು ಮೋದಿಯ ಕಾಲದಲ್ಲೇ ಅಲ್ಲ. ಇದಕ್ಕೆ ಕಾಂಗ್ರೆಸ್ ಆಡಳಿತವೂ ಸೇರಿ ಕಾರಣವಾಗಿದೆ. ಆದರೆ ದುರಾದೃಷ್ಟವಶಾತ್ ಹೋಲಿಸಿ ನೋಡಲು ರೈತರ ಆತ್ಮಹತ್ಯೆಯ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಲೇ ಇಲ್ಲ! ಇಂದಿಗೂ ಸಾಪೇಕ್ಷವಾಗಿ ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಹಿಂದಿನ ಸರ್ಕಾರಗಳು ಕಾರಣವಾಗಿರುವುದು ನಿಜವೇ ಆದರೂ ಮೋದಿ ‘ಆಳ್ವಿಕೆಯಲ್ಲಿ’ ನಷ್ಟ ಕಂಡ/ಕಾಣುತ್ತಿರುವ ಸಂಸ್ಥೆಯ ಬಗ್ಗೆ ಗಮನಹರಿಸೋಣ.

ಎಚ್.ಎ.ಎಲ್: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯು 1940 ರಿಂದಲೂ ಬಾಹ್ಯಾಕಾಶಕ್ಕೆ ಕೊಡುಗೆ ನೀಡುತ್ತಾ ಬಂದಿದೆ. 1964 ರಿಂದ ಹಿಂದುಸ್ತಾನ್ ಏರ್ ಕ್ರಾಫ್ಟ್ ನಿಂದ ಎಚ್.ಎ.ಎಲ್ ಎಂದು ಮರುನಾಮಕರಣಗೊಂಡು ಬಾಹ್ಯಾಕಾಶ ಹಾಗೂ ಭಾರತೀಯ ಸೈನ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸೇನೆಗೆ ಧೃವ್, ಚೇತಕ್, ಲ್ಯಾನ್ಸರ್ ಇನ್ನೂ ಮುಂತಾದ ಹೆಲಿಕಾಪ್ಟರ್ ಅನ್ನು ನೀಡಿದೆ. ಹಾಗೂ ಎಲ್.ಸಿ.ಎ, ಎಚ್ ಟಿಟಿ-40, ಐಜೆಟಿ ನಂತಹ ಯುದ್ಧ ವಿಮಾನಗಳನ್ನೂ ಕೊಡೆಗೆಯಾಗಿ ನೀಡಿದೆ. ಇದಲ್ಲದೆ ಫೈಟರ್ ಜೆಟ್, ಪವರ್ ಪ್ಲಾಂಟ್, ಹಲವಾರು ಬೇರೆ ಬೇರೆ ಉಪಕರಣಗಳನ್ನು ನೀಡಿದೆ.

ಸದ್ಯಕ್ಕೆ 32,108 (2014 ರ ಗಣತಿ) ಜನರು ಈ ಸರ್ಕಾರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಐತಿಹಾಸಿಕ ಸಂಸ್ಥೆ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯೇ ಸರಿ. (ರಾಫೇಲ್ ಒಪ್ಪಂದದ ಚರ್ಚೆಯಲ್ಲಿ ಕೇಂದ್ರದ ಮಂತ್ರಿಗಳು ಎಚ್.ಎ.ಎಲ್ ಕಾರ್ಯಕ್ಷಮತೆ ಚೆನ್ನಾಗಿಲ್ಲ ಹಾಗಾಗಿ ಅಂಬಾನಿಗೆ ಈ ಒಪ್ಪಂದ ಮಾಡಿಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಅಂಬಾನಿ ತನ್ನ ಜೀವನದಲ್ಲಿ ಒಂದೂ ಯುದ್ಧ ವಿಮಾನವನ್ನು ತಯಾರು ಮಾಡಿಲ್ಲ ಹಾಗು ಅಂತಹ ಘಟಕ ಆತನ ಬಳಿ ಇಲ್ಲ ಎನ್ನುವುದು ವಾಸ್ತವ. ಇತಿಹಾಸ ತಿಳಿಯದ ಮುಗ್ಧರು ಇದನ್ನೇ ಸತ್ಯವೆಂದು ತಿಳಿದು ವಾದಿಸುವುದು ದುರಂತ) ಇಂತಹ ಎಚ್.ಎ.ಎಲ್ ಸಂಸ್ಥೆ ಇತಿಹಾಸದಲ್ಲೇ ಪ್ರಥಮ ಬಾರಿಗೆ (ಜನವರಿ, 2019) ತನ್ನ ಸಿಬ್ಬಂದಿಗಳಿಗೆ ಸಂಬಳ ನೀಡಲು ಹಣವಿಲ್ಲದೆ 1,000 ಕೋಟಿ ರೂ ಸಾಲವನ್ನು ಮಾಡಿತ್ತು! ಈಗಲೂ ಒಟ್ಟಾರೆ ಆದಾಯ ಏರಿಕೆ ಕಂಡಿಲ್ಲ. ಈ ಸಂಸ್ಥೆಯನ್ನು ಸೋಮಾರಿ ಸಂಸ್ಥೆ ಎಂದರೆ ಆತ್ಮವಂಚನೆಯ ಕೆಲಸವಲ್ಲದೆ ಮತ್ತೇನು?

ಬಿ.ಎಸ್.ಎನ್.ಎಲ್: 2000 ನೇ ಇಸವಿಯಲ್ಲಿ ಶುರುವಾಗಿರುವ ಈ ಸಂಸ್ಥೆಯ ವಾರಸುದಾರರು ಭಾರತ ಸರ್ಕಾರವಾಗಿದೆ. 1,74,216 ಸಿಬ್ದಂದಿಗಳಿರುವ ಈ ಸಂಸ್ಥೆ ಹಳ್ಳಿ ಹಳ್ಳಿಗೂ ದೂರವಾಣಿ ಸಂಪರ್ಕವನ್ನು ನೀಡಿದ ಮೊಟ್ಟ ಮೊದಲ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬಲವರ್ಧನೆಗೆ ಕೆಲಸ ಮಾಡದ ಸರ್ಕಾರ ಜಿಯೋ ಎನ್ನುವ ಖಾಸಗೀ ವ್ಯಕ್ತಿಯೊಬ್ಬನ ಟೆಲಿಕಾಂ ಪ್ರಚಾರಕ್ಕಾಗಿ ದೇಶದ ಪ್ರಧಾನ ಮಂತ್ರಿಗಳೇ ಅಧಿಕೃತ ರಾಯಭಾರಿ ಆಗಿದ್ದು ನಿಜಕ್ಕೂ ದೇಶದ ಬಹುದೊಡ್ಡ ದುರಂತ. ಈಗ ಬಿ.ಎಸ್.ಎನ್.ಎಲ್ ಸಂಸ್ಥೆ ನಷ್ಟದಲ್ಲಿದ್ದು ವರಮಾನ ಇಳಿಮುಖ ಕಾಣುತ್ತಿದೆ. ಇದರ ಆಪರೇಷನಲ್ ಇನ್ಕಂ -14,000 ಕೋಟಿ (ಮೈನಸ್). ಹೀಗಾಗಿ ಸಿಬ್ಬಂದಿಗಳ ವೇತನಕ್ಕೂ ತೊಂದರೆಯಾಗುತ್ತಿದೆ. ಈಗ ಸಂಸ್ಥೆಯ ಬಲವರ್ಧನೆಗೆ ದುಡಿಯದ ಸರ್ಕಾರವನ್ನು ಬಿಟ್ಟು 1,74,216 ಜನರನ್ನೂ ಸೋಮಾರಿಗಳು ಎನ್ನಲು ಸಾಧ್ಯವೇ?

2013ರಲ್ಲಿ ನಂ.1 ಬ್ರಾಂಡ್ ಆಗಿದ್ದ ಭಾರತದ ಪಾರ್ಲೇಜಿ ಕಂಪನಿ 1939 ರಿಂದಲೂ ಕೆಲಸ ಮಾಡುತ್ತಿದೆ. ಅಲ್ಲದೆ ಇದು ಹಾಲು ಉತ್ಪಾದಕ ರೈತರಿಗೂ ಸಂಜೀವಿನಿಯಾಗಿತ್ತು. ಇದೀಗ ಪಾರ್ಲೆಜಿ ಕಂಪನಿಯೂ ನಷ್ಟದಲ್ಲಿದ್ದು 10,000 ನೌಕರರನ್ನು ಕಿತ್ತುಹಾಕಿದೆ. ಜಿ.ಎಸ್.ಟಿ ಮತ್ತು ನೋಟು ರದ್ಧತಿಯೇ ತಮ್ಮ ನಷ್ಟಕ್ಕೆ ಕಾರಣ ಎಂದು ಕಂಪನಿಯ ಆಡಳಿತಾಧಿಕಾರಿಗಳು ಹೇಳಿದ್ದಾರೆ. ಆದರೆ ಇಂತಹ ದೀರ್ಘ ಇತಿಹಾಸವಿರುವ ಕಂಪನಿಯನ್ನು “ಇದು ಭಾರತದ ಕಂಪನಿಯಲ್ಲ, ಅಲ್ಲಿ ಕೇವಲ 4 ಸಾವಿರ ಸಿಬ್ಬಂದಿ ಅಷ್ಟೇ ಇರೋದು, 10 ಸಾವಿರ ಎಲ್ಲಿಂದ?” ಎನ್ನುವ ಸುಳ್ಳು ಸಂದೇಶವನ್ನು ಬಿಜೆಪಿಯ ವಕ್ತಾರರೇ ಹಂಚುತ್ತಿದ್ದಾರೆ. ಅಂದರೆ ಬ್ರಿಟಾನಿಯ ಕಂಪನಿಯ 4 ಸಾವಿರ ಸಿಬ್ಬಂದಿಯನ್ನು ತೋರಿಸಿ ಪಾರ್ಲೆಜಿಗೆ ಹೋಲಿಸುವ ಸುಳ್ಳನ್ನು ಬಿತ್ತುತ್ತಿದ್ದಾರೆ. ಇದನ್ನು ನಂಬಿದ ಮುಗ್ದರು ಪಾರ್ಲೆಜಿಯನ್ನೂ ಸೋಮಾರಿಗಳು ಎನ್ನುತ್ತಿದ್ದಾರೆ.

ಇನ್ನೂ ನೂರಾರು ವರ್ಷಗಳ ಇತಿಹಾಸವಿರುವ ನೇಯ್ಗೆ ಕ್ಷೇತ್ರದ ತಮಿಳುನಾಡಿನಲ್ಲಿ ಒಂದೇ ಬಾರಿ 200 ಕಾರ್ಖಾನೆಗಳು ಮುಚ್ಚಿದವು, ಟೀ ಉತ್ಪಾದನಾ ಕ್ಷೇತ್ರವೂ ನಷ್ಟದಲ್ಲಿದೆ. ಈ ಎರಡು ಕ್ಷೇತ್ರಗಳು ಇತಿಹಾಸದಲ್ಲಿ ಮೊದಲ ಬಾರಿಗೆ “ನಾವು ನಷ್ಟದಲ್ಲಿದ್ದೇವೆ ನಮ್ಮನ್ನು ಕಾಪಾಡಿ” ಎನ್ನುವ ಪತ್ರಿಕಾ ಜಾಹೀರಾತನ್ನೇ ನೀಡಿದವು. ಈ ಗಂಭೀರತಯನ್ನು ಅರ್ಥ ಮಾಡಿಕೊಳ್ಳದೆ ಆ ನೇಕಾರ ಹಾಗೂ ರೈತ ಕಾರ್ಮಿಕರನ್ನೂ ಸೋಮಾರಿಗಳು ಎಂದರೆ ಅಂಬಾನಿಯ ಟ್ರಾಪ್ ಗೆ ನಾವು ಬಿದ್ದಂತೆಯೇ ಸರಿ.

ಇದೀಗ ಅತಿದೊಡ್ಡ ನಷ್ಟ ಹಾಗೂ ತಿಂಗಳಿಗೆ 15-20 ವರ್ಷಗಳ ಅನುಭವವಿದ್ದರೂ ನೂರಾರು ಕಾರ್ಮಿಕರನ್ನು ಕೆಲಸದಿಂದ ಕಿತ್ತುಹಾಕುತ್ತಿರುವ ಆಟೋಮೊಬೈಲ್ ಕ್ಷೇತ್ರಗಳಿಗೆ ಹತ್ತಾರು ವರ್ಷದ ಇತಿಹಾಸವಿದೆ ಹಾಗೂ ಲಕ್ಷಾಂತರ ಕಾರ್ಮಿಕರು/ಸಿಬ್ಬಂದಿಗಳು ಜಪಾನ್ ಟೆಕ್ನಾಲಜಿಯ ಅನುಸಾರ ಅಮಾನವೀಯವಾಗಿ ಸೆಕೆಂಡ್ ಲೆಕ್ಕದಲ್ಲಿ ಮಾನೇಸಾರ್, ಹೊಂಡಾ, ಟಿವಿಎಸ್, ಹಿರೋ ಇತ್ಯಾದಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನೂ ಸೋಮಾರಿಗಳು ಎನ್ನಲು ಸಾಧ್ಯವೇ? ಟಿವಿಎಸ್, ಟಾಟಾ ಕಂಪನಿಗಳು ಸಹ ನಷ್ಟಕ್ಕೆ ಸಿಲುಕಿವೆ. ಅದಕ್ಕೆ ಸೋಮಾರಿತನ ಕಾರಣವೇ?

ಹೀಗೆ ನಷ್ಟ ಅನುಭವಿಸುತ್ತಿರುವ ಎಲ್ಲರನ್ನು ಸೋಮಾರಿಗಳು ಎನ್ನುತ್ತಾ ಮುಖೇಶ್ ಅಂಬಾನಿ ಅಥವಾ ಇನ್ನೊಬ್ಬ ವ್ಯಕ್ತಿ ಮಾತ್ರ ‘ಕ್ರೀಯಾಶೀಲ’ ಎಂದು ನಾವು ಹೇಳುವುದಾದರೆ ಅದು ಮೋಸ ಎಂತಲೇ ಅರ್ಥ. ಏಕೆಂದರೆ ಅಂಬಾನಿಗೆ ಸರ್ಕಾರಗಳು ಲಕ್ಷ ಕೋಟಿಗಳ ಲೆಕ್ಕದಲ್ಲಿ ತೆರಿಗೆ ವಿನಾಯಿತಿ ನೀಡಿವೆ. ಅವರ ಸಾವಿರಾರು ಕೋಟಿ ಸಾಲವನ್ನು ಮನ್ನಾ ಮಾಡಿವೆ. ಪುಕ್ಕಟೆಯಾಗಿ ಆತನ ಜಿಯೊ ಟೆಲಿಕಾಂಗೆ ಪ್ರಧಾನಿಗಳು ಜಾಹಿರಾತು ಕೊಟ್ಟಿದ್ದಾರೆ. ಆದರೆ ಇದನ್ನೆ ಸರ್ಕಾರಿ ಸಂಸ್ಥೆಗಳಿಗೆ ಅಥವಾ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಸಂಸ್ಥೆಗಳಿಗೆ ಏಕೆ ಮಾಡಲಿಲ್ಲ? ಕರ್ನಾಟಕ ಸಿದ್ದಾರ್ಥ್ ರವರ ಕಾಫಿಡೇ ಗೆ ಏಕೆ ನೆರವು ನೀಡಲಿಲ್ಲ? ಈ ಪ್ರಶ್ನೆಗೆ ಉತ್ತರಿಸುತ್ತೀರಾ?

ಹೀಗೆ ಸೋಮಾರಿ ಕಂಪನಿಗಳು ಎಂಬ ಸುಳ್ಳನ್ನು ಹಂಚುವುದರಿಂದ ನಾವು “ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿ, ಸಣ್ಣ ವ್ಯಾಪಾರಗಳು ಹಾಗೂ ಗುಡಿ ಕೈಗಾರಿಕೆಗಳನ್ನು ನಾಶ ಮಾಡುತ್ತೇವೆ, ಉದ್ಯೋಗವೇ ಸೃಷ್ಟಿಯಾಗದ ಏಕಸ್ವಾಮ್ಯ ಬಂಡವಾಳವಾದವನ್ನು ಬೆಳೆಸುವ ಮತ್ತು ನಿರುದ್ಯೋಗದ ಪರ ವಹಿಸಿದಂತಾಗುತ್ತದೆ.”

ಹಾಗಾದರೇ ಸೋಮಾರಿತನ ಇಲ್ಲವೇ? ಖಂಡಿತವಾಗಿಯೂ ಇದೆ! ಆರ್ಥಿಕತೆ ಹಿಂಜರಿತ, ನಿರುದ್ಯೋಗಕ್ಕೆ ಕಾರಣಗಳನ್ನು, ಅದರ ಅಪಾಯವನ್ನು ನಾವು ಅರ್ಥ ಮಾಡಿಕೊಳ್ಳುವುದರಲ್ಲಿ, ತರ್ಕಬದ್ದವಾಗಿ ಓದುವುದರಲ್ಲಿ, ಸ್ವಂತ ವಿಚಾರ ಮಾಡುವುದರಲ್ಲಿ ಸೋಮಾರಿತನ ಇದ್ದೇಯಿದೆ. ಇದರಿಂದ ಹೊರಬರಬೇಕಿದೆ. ದೇಶಕ್ಕೆ ಎದುರಾಗಲಿರುವ ಅಪಾಯದಿಂದ ಉಳಿಸಬೇಕಿದೆ. ಮುನ್ನೋಟವನ್ನು ಕಟ್ಟಿಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ವಲಯದ ಕಂಪೆನಿಗಳಾದ ಬಿ.ಇ.ಎಂ.ಎಲ್ , ಸೇರಿದಂತೆ ಅನೇಕ ಕಂಪೆನಿಗಳನ್ನು ಇಂದು ಖಾಸಗೀಯವರಿಗೆ ಪರಭಾರೆ ಮಾಡಿ ಸರಕಾರ ಕೈ ತೊಳೆದು ಕೊಳ್ಳಲು ಎಲ್ಲಾ ರೀತಿಯ ತಂತ್ರಗಳನ್ನು ಮಾಡುತ್ತಿದೆ, ಅವರು ನೀಡುವ ಕಾರಣ ಹೆಚ್.ಎ.ಎಲ್ ಸೇರಿದಂತೆ ಎಲ್ಲವೂ ಕೂಡ ಒಂದೋ ನಷ್ಟದಲ್ಲಿ ಇದ್ದಾವೆ ಹಾಗೂ ಅವುಗಳ ಕಾರ್ಯಕ್ಷಮತೆ ಖಾಸಗೀಯವರ ತರಹ ಇಲ್ಲ ಎಂದು. ದುರಂತ ಎಂದರೆ ಸಾರ್ವಜನಿಕ ಉದ್ದಿಮೆಗಳಲ್ಲಿ ಇರುವ ನಮೋ ಭಕ್ತರು ಈ ಕಂಪೆನಿಗಳನ್ನು ಖಾಸಗೀ ಒಡೆತನಕ್ಕೆ ಮಾರಲು ತುದಿಗಾಲಿನಲ್ಲಿ ಕಾದಿದ್ದಾರೆ, ಆ ಮೂಲಕ ಪ್ರಧಾನ ಸೇವಕ ರ ಕೈ ಬಲಪಡಿಸುತ್ತಾರಂತೆ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...