Homeಎಕಾನಮಿಆರ್ಥಿಕ ಕುಸಿತದಿಂದ ಲಾಸ್ ಆಗುತ್ತಿರುವುದು ಸೋಮಾರಿ ಕಂಪನಿಗಳಾ?

ಆರ್ಥಿಕ ಕುಸಿತದಿಂದ ಲಾಸ್ ಆಗುತ್ತಿರುವುದು ಸೋಮಾರಿ ಕಂಪನಿಗಳಾ?

- Advertisement -
- Advertisement -

ಭಾರತದ ಆರ್ಥಿಕತೆ ಬೀಳುತ್ತಿದೆ ಎಂದು ಜಾಗತಿಕ ಮಟ್ಟದಲ್ಲಿ ಆರ್ಥಿಕ ತಜ್ಞರು ಹೇಳುತ್ತಿದ್ದಾರೆ, ಆರ್.ಬಿ.ಐ. ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು “ಈ ದೇಶ ನಿರುದ್ಯೋಗದ ಟೈಂ ಬಾಂಬ್ ಮೇಲೆ ಕೂತಿದೆ” ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಹೀಗಿರುವ ಸಂದರ್ಭದಲ್ಲಿ ಈ ಟೈಂ ಬಾಂಬ್ ಸಿಡಿಯದೇ ದೇಶ ರಕ್ಷಣೆ ಹೇಗೆ ಮಾಡಬೇಕು ಎಂದು ಕೆಲವರು ಯೋಚಿಸುತ್ತಿದ್ದಾರೆ. ಆದರೆ ಇನ್ನೊಂದು ಕಡೆ “ಕೆಲಸ ಮಾಡದ ಸೋಮಾರಿಗಳ ಕಂಪನಿಗಳು ಮಾತ್ರ ಮುಚ್ಚುತ್ತಿವೆ, ಅವುಗಳು ಇದ್ದೂ ಏನೂ ಪ್ರಯೋಜನವಿಲ್ಲ ಹೋಗ್ಲಿ ಬಿಡಿ, ದೇಶಕ್ಕೆ ಯಾವುದೇ ಅಪಾಯವಿಲ್ಲ” ಎಂದು ಮೋದಿಯ ಅಭಿಮಾನಿಗಳು ವಾದಿಸುತ್ತಿದ್ದಾರೆ. ಹಾಗಾದರೆ ನಷ್ಟದಲ್ಲಿರುವ ಕಂಪನಿಗಳು/ಕಾರ್ಖಾನೆಗಳೆಲ್ಲಾ ಸೋಮಾರಿಗಳಾ? ನಷ್ಟದಲ್ಲಿರುವ ಕಂಪನಿಗಳು ಈಗ ಮೂರಂಕೆಯ ಸಂಖ್ಯೆ ದಾಟಿವೆಯಾದರೂ ಇಲ್ಲಿ ಕೆಲವನ್ನು ಮಾತ್ರ ನೋಡೋಣ.

ದೇಶದ ಬಹುದೊಡ್ಡ ಉದ್ಯೋಗ ಕ್ಷೇತ್ರ ಕೃಷಿ. ಇದೀಗ ಕೃಷಿ ಲಾಭದಾಯಕದ ಮಾತು ಹಾಗಿರಲಿ ಕೃಷಿಯಲ್ಲಿ ತೊಡಗಿರುವ ಮುಂದೊಂದು ದಿನ ಆತ್ಮಹತ್ಯೆ ಮಾಡಿಕೊಳ್ಳಲಿರುವ ರೈತರು ಹಾಗೂ ರೈತ ಕಾರ್ಮಿಕರ ಬದುಕನ್ನು ಉಳಿಸಿಕೊಳ್ಳಲು ನಾವೆಲ್ಲಾ ಪರದಾಡುತ್ತಿರುವ ಸಂದರ್ಭದಲ್ಲಿದ್ದೇವೆ. ರೈತರನ್ನು ಸೋಮಾರಿಗಳು ಕಷ್ಟಪಟ್ಟು ದುಡಿಯದವರು ಎಂದು ವಾದ ಮಾಡುವುದಾದರೆ ಇದು ಆತ್ಮವಂಚನೆ ಅಲ್ಲವೇ? ‘ಕೃಷಿ ಆತ್ಮಹತ್ಯೆ ಕ್ಷೇತ್ರ’ವಾಗಿದ್ದು ಮೋದಿಯ ಕಾಲದಲ್ಲೇ ಅಲ್ಲ. ಇದಕ್ಕೆ ಕಾಂಗ್ರೆಸ್ ಆಡಳಿತವೂ ಸೇರಿ ಕಾರಣವಾಗಿದೆ. ಆದರೆ ದುರಾದೃಷ್ಟವಶಾತ್ ಹೋಲಿಸಿ ನೋಡಲು ರೈತರ ಆತ್ಮಹತ್ಯೆಯ ಮಾಹಿತಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಲೇ ಇಲ್ಲ! ಇಂದಿಗೂ ಸಾಪೇಕ್ಷವಾಗಿ ನಷ್ಟದಲ್ಲಿರುವ ಕಾರ್ಖಾನೆಗಳಿಗೆ ಹಿಂದಿನ ಸರ್ಕಾರಗಳು ಕಾರಣವಾಗಿರುವುದು ನಿಜವೇ ಆದರೂ ಮೋದಿ ‘ಆಳ್ವಿಕೆಯಲ್ಲಿ’ ನಷ್ಟ ಕಂಡ/ಕಾಣುತ್ತಿರುವ ಸಂಸ್ಥೆಯ ಬಗ್ಗೆ ಗಮನಹರಿಸೋಣ.

ಎಚ್.ಎ.ಎಲ್: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯು 1940 ರಿಂದಲೂ ಬಾಹ್ಯಾಕಾಶಕ್ಕೆ ಕೊಡುಗೆ ನೀಡುತ್ತಾ ಬಂದಿದೆ. 1964 ರಿಂದ ಹಿಂದುಸ್ತಾನ್ ಏರ್ ಕ್ರಾಫ್ಟ್ ನಿಂದ ಎಚ್.ಎ.ಎಲ್ ಎಂದು ಮರುನಾಮಕರಣಗೊಂಡು ಬಾಹ್ಯಾಕಾಶ ಹಾಗೂ ಭಾರತೀಯ ಸೈನ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿದೆ. ಭಾರತೀಯ ಸೇನೆಗೆ ಧೃವ್, ಚೇತಕ್, ಲ್ಯಾನ್ಸರ್ ಇನ್ನೂ ಮುಂತಾದ ಹೆಲಿಕಾಪ್ಟರ್ ಅನ್ನು ನೀಡಿದೆ. ಹಾಗೂ ಎಲ್.ಸಿ.ಎ, ಎಚ್ ಟಿಟಿ-40, ಐಜೆಟಿ ನಂತಹ ಯುದ್ಧ ವಿಮಾನಗಳನ್ನೂ ಕೊಡೆಗೆಯಾಗಿ ನೀಡಿದೆ. ಇದಲ್ಲದೆ ಫೈಟರ್ ಜೆಟ್, ಪವರ್ ಪ್ಲಾಂಟ್, ಹಲವಾರು ಬೇರೆ ಬೇರೆ ಉಪಕರಣಗಳನ್ನು ನೀಡಿದೆ.

ಸದ್ಯಕ್ಕೆ 32,108 (2014 ರ ಗಣತಿ) ಜನರು ಈ ಸರ್ಕಾರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಐತಿಹಾಸಿಕ ಸಂಸ್ಥೆ ನಮ್ಮ ಕರ್ನಾಟಕದಲ್ಲಿರುವುದು ನಮ್ಮ ಹೆಮ್ಮೆಯೇ ಸರಿ. (ರಾಫೇಲ್ ಒಪ್ಪಂದದ ಚರ್ಚೆಯಲ್ಲಿ ಕೇಂದ್ರದ ಮಂತ್ರಿಗಳು ಎಚ್.ಎ.ಎಲ್ ಕಾರ್ಯಕ್ಷಮತೆ ಚೆನ್ನಾಗಿಲ್ಲ ಹಾಗಾಗಿ ಅಂಬಾನಿಗೆ ಈ ಒಪ್ಪಂದ ಮಾಡಿಕೊಡುತ್ತೇವೆ ಎಂದು ಹೇಳಿದ್ದರು. ಆದರೆ ಅಂಬಾನಿ ತನ್ನ ಜೀವನದಲ್ಲಿ ಒಂದೂ ಯುದ್ಧ ವಿಮಾನವನ್ನು ತಯಾರು ಮಾಡಿಲ್ಲ ಹಾಗು ಅಂತಹ ಘಟಕ ಆತನ ಬಳಿ ಇಲ್ಲ ಎನ್ನುವುದು ವಾಸ್ತವ. ಇತಿಹಾಸ ತಿಳಿಯದ ಮುಗ್ಧರು ಇದನ್ನೇ ಸತ್ಯವೆಂದು ತಿಳಿದು ವಾದಿಸುವುದು ದುರಂತ) ಇಂತಹ ಎಚ್.ಎ.ಎಲ್ ಸಂಸ್ಥೆ ಇತಿಹಾಸದಲ್ಲೇ ಪ್ರಥಮ ಬಾರಿಗೆ (ಜನವರಿ, 2019) ತನ್ನ ಸಿಬ್ಬಂದಿಗಳಿಗೆ ಸಂಬಳ ನೀಡಲು ಹಣವಿಲ್ಲದೆ 1,000 ಕೋಟಿ ರೂ ಸಾಲವನ್ನು ಮಾಡಿತ್ತು! ಈಗಲೂ ಒಟ್ಟಾರೆ ಆದಾಯ ಏರಿಕೆ ಕಂಡಿಲ್ಲ. ಈ ಸಂಸ್ಥೆಯನ್ನು ಸೋಮಾರಿ ಸಂಸ್ಥೆ ಎಂದರೆ ಆತ್ಮವಂಚನೆಯ ಕೆಲಸವಲ್ಲದೆ ಮತ್ತೇನು?

ಬಿ.ಎಸ್.ಎನ್.ಎಲ್: 2000 ನೇ ಇಸವಿಯಲ್ಲಿ ಶುರುವಾಗಿರುವ ಈ ಸಂಸ್ಥೆಯ ವಾರಸುದಾರರು ಭಾರತ ಸರ್ಕಾರವಾಗಿದೆ. 1,74,216 ಸಿಬ್ದಂದಿಗಳಿರುವ ಈ ಸಂಸ್ಥೆ ಹಳ್ಳಿ ಹಳ್ಳಿಗೂ ದೂರವಾಣಿ ಸಂಪರ್ಕವನ್ನು ನೀಡಿದ ಮೊಟ್ಟ ಮೊದಲ ಸಂಸ್ಥೆಯಾಗಿದೆ. ಈ ಸಂಸ್ಥೆಯ ಬಲವರ್ಧನೆಗೆ ಕೆಲಸ ಮಾಡದ ಸರ್ಕಾರ ಜಿಯೋ ಎನ್ನುವ ಖಾಸಗೀ ವ್ಯಕ್ತಿಯೊಬ್ಬನ ಟೆಲಿಕಾಂ ಪ್ರಚಾರಕ್ಕಾಗಿ ದೇಶದ ಪ್ರಧಾನ ಮಂತ್ರಿಗಳೇ ಅಧಿಕೃತ ರಾಯಭಾರಿ ಆಗಿದ್ದು ನಿಜಕ್ಕೂ ದೇಶದ ಬಹುದೊಡ್ಡ ದುರಂತ. ಈಗ ಬಿ.ಎಸ್.ಎನ್.ಎಲ್ ಸಂಸ್ಥೆ ನಷ್ಟದಲ್ಲಿದ್ದು ವರಮಾನ ಇಳಿಮುಖ ಕಾಣುತ್ತಿದೆ. ಇದರ ಆಪರೇಷನಲ್ ಇನ್ಕಂ -14,000 ಕೋಟಿ (ಮೈನಸ್). ಹೀಗಾಗಿ ಸಿಬ್ಬಂದಿಗಳ ವೇತನಕ್ಕೂ ತೊಂದರೆಯಾಗುತ್ತಿದೆ. ಈಗ ಸಂಸ್ಥೆಯ ಬಲವರ್ಧನೆಗೆ ದುಡಿಯದ ಸರ್ಕಾರವನ್ನು ಬಿಟ್ಟು 1,74,216 ಜನರನ್ನೂ ಸೋಮಾರಿಗಳು ಎನ್ನಲು ಸಾಧ್ಯವೇ?

2013ರಲ್ಲಿ ನಂ.1 ಬ್ರಾಂಡ್ ಆಗಿದ್ದ ಭಾರತದ ಪಾರ್ಲೇಜಿ ಕಂಪನಿ 1939 ರಿಂದಲೂ ಕೆಲಸ ಮಾಡುತ್ತಿದೆ. ಅಲ್ಲದೆ ಇದು ಹಾಲು ಉತ್ಪಾದಕ ರೈತರಿಗೂ ಸಂಜೀವಿನಿಯಾಗಿತ್ತು. ಇದೀಗ ಪಾರ್ಲೆಜಿ ಕಂಪನಿಯೂ ನಷ್ಟದಲ್ಲಿದ್ದು 10,000 ನೌಕರರನ್ನು ಕಿತ್ತುಹಾಕಿದೆ. ಜಿ.ಎಸ್.ಟಿ ಮತ್ತು ನೋಟು ರದ್ಧತಿಯೇ ತಮ್ಮ ನಷ್ಟಕ್ಕೆ ಕಾರಣ ಎಂದು ಕಂಪನಿಯ ಆಡಳಿತಾಧಿಕಾರಿಗಳು ಹೇಳಿದ್ದಾರೆ. ಆದರೆ ಇಂತಹ ದೀರ್ಘ ಇತಿಹಾಸವಿರುವ ಕಂಪನಿಯನ್ನು “ಇದು ಭಾರತದ ಕಂಪನಿಯಲ್ಲ, ಅಲ್ಲಿ ಕೇವಲ 4 ಸಾವಿರ ಸಿಬ್ಬಂದಿ ಅಷ್ಟೇ ಇರೋದು, 10 ಸಾವಿರ ಎಲ್ಲಿಂದ?” ಎನ್ನುವ ಸುಳ್ಳು ಸಂದೇಶವನ್ನು ಬಿಜೆಪಿಯ ವಕ್ತಾರರೇ ಹಂಚುತ್ತಿದ್ದಾರೆ. ಅಂದರೆ ಬ್ರಿಟಾನಿಯ ಕಂಪನಿಯ 4 ಸಾವಿರ ಸಿಬ್ಬಂದಿಯನ್ನು ತೋರಿಸಿ ಪಾರ್ಲೆಜಿಗೆ ಹೋಲಿಸುವ ಸುಳ್ಳನ್ನು ಬಿತ್ತುತ್ತಿದ್ದಾರೆ. ಇದನ್ನು ನಂಬಿದ ಮುಗ್ದರು ಪಾರ್ಲೆಜಿಯನ್ನೂ ಸೋಮಾರಿಗಳು ಎನ್ನುತ್ತಿದ್ದಾರೆ.

ಇನ್ನೂ ನೂರಾರು ವರ್ಷಗಳ ಇತಿಹಾಸವಿರುವ ನೇಯ್ಗೆ ಕ್ಷೇತ್ರದ ತಮಿಳುನಾಡಿನಲ್ಲಿ ಒಂದೇ ಬಾರಿ 200 ಕಾರ್ಖಾನೆಗಳು ಮುಚ್ಚಿದವು, ಟೀ ಉತ್ಪಾದನಾ ಕ್ಷೇತ್ರವೂ ನಷ್ಟದಲ್ಲಿದೆ. ಈ ಎರಡು ಕ್ಷೇತ್ರಗಳು ಇತಿಹಾಸದಲ್ಲಿ ಮೊದಲ ಬಾರಿಗೆ “ನಾವು ನಷ್ಟದಲ್ಲಿದ್ದೇವೆ ನಮ್ಮನ್ನು ಕಾಪಾಡಿ” ಎನ್ನುವ ಪತ್ರಿಕಾ ಜಾಹೀರಾತನ್ನೇ ನೀಡಿದವು. ಈ ಗಂಭೀರತಯನ್ನು ಅರ್ಥ ಮಾಡಿಕೊಳ್ಳದೆ ಆ ನೇಕಾರ ಹಾಗೂ ರೈತ ಕಾರ್ಮಿಕರನ್ನೂ ಸೋಮಾರಿಗಳು ಎಂದರೆ ಅಂಬಾನಿಯ ಟ್ರಾಪ್ ಗೆ ನಾವು ಬಿದ್ದಂತೆಯೇ ಸರಿ.

ಇದೀಗ ಅತಿದೊಡ್ಡ ನಷ್ಟ ಹಾಗೂ ತಿಂಗಳಿಗೆ 15-20 ವರ್ಷಗಳ ಅನುಭವವಿದ್ದರೂ ನೂರಾರು ಕಾರ್ಮಿಕರನ್ನು ಕೆಲಸದಿಂದ ಕಿತ್ತುಹಾಕುತ್ತಿರುವ ಆಟೋಮೊಬೈಲ್ ಕ್ಷೇತ್ರಗಳಿಗೆ ಹತ್ತಾರು ವರ್ಷದ ಇತಿಹಾಸವಿದೆ ಹಾಗೂ ಲಕ್ಷಾಂತರ ಕಾರ್ಮಿಕರು/ಸಿಬ್ಬಂದಿಗಳು ಜಪಾನ್ ಟೆಕ್ನಾಲಜಿಯ ಅನುಸಾರ ಅಮಾನವೀಯವಾಗಿ ಸೆಕೆಂಡ್ ಲೆಕ್ಕದಲ್ಲಿ ಮಾನೇಸಾರ್, ಹೊಂಡಾ, ಟಿವಿಎಸ್, ಹಿರೋ ಇತ್ಯಾದಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನೂ ಸೋಮಾರಿಗಳು ಎನ್ನಲು ಸಾಧ್ಯವೇ? ಟಿವಿಎಸ್, ಟಾಟಾ ಕಂಪನಿಗಳು ಸಹ ನಷ್ಟಕ್ಕೆ ಸಿಲುಕಿವೆ. ಅದಕ್ಕೆ ಸೋಮಾರಿತನ ಕಾರಣವೇ?

ಹೀಗೆ ನಷ್ಟ ಅನುಭವಿಸುತ್ತಿರುವ ಎಲ್ಲರನ್ನು ಸೋಮಾರಿಗಳು ಎನ್ನುತ್ತಾ ಮುಖೇಶ್ ಅಂಬಾನಿ ಅಥವಾ ಇನ್ನೊಬ್ಬ ವ್ಯಕ್ತಿ ಮಾತ್ರ ‘ಕ್ರೀಯಾಶೀಲ’ ಎಂದು ನಾವು ಹೇಳುವುದಾದರೆ ಅದು ಮೋಸ ಎಂತಲೇ ಅರ್ಥ. ಏಕೆಂದರೆ ಅಂಬಾನಿಗೆ ಸರ್ಕಾರಗಳು ಲಕ್ಷ ಕೋಟಿಗಳ ಲೆಕ್ಕದಲ್ಲಿ ತೆರಿಗೆ ವಿನಾಯಿತಿ ನೀಡಿವೆ. ಅವರ ಸಾವಿರಾರು ಕೋಟಿ ಸಾಲವನ್ನು ಮನ್ನಾ ಮಾಡಿವೆ. ಪುಕ್ಕಟೆಯಾಗಿ ಆತನ ಜಿಯೊ ಟೆಲಿಕಾಂಗೆ ಪ್ರಧಾನಿಗಳು ಜಾಹಿರಾತು ಕೊಟ್ಟಿದ್ದಾರೆ. ಆದರೆ ಇದನ್ನೆ ಸರ್ಕಾರಿ ಸಂಸ್ಥೆಗಳಿಗೆ ಅಥವಾ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಸಂಸ್ಥೆಗಳಿಗೆ ಏಕೆ ಮಾಡಲಿಲ್ಲ? ಕರ್ನಾಟಕ ಸಿದ್ದಾರ್ಥ್ ರವರ ಕಾಫಿಡೇ ಗೆ ಏಕೆ ನೆರವು ನೀಡಲಿಲ್ಲ? ಈ ಪ್ರಶ್ನೆಗೆ ಉತ್ತರಿಸುತ್ತೀರಾ?

ಹೀಗೆ ಸೋಮಾರಿ ಕಂಪನಿಗಳು ಎಂಬ ಸುಳ್ಳನ್ನು ಹಂಚುವುದರಿಂದ ನಾವು “ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಕೃಷಿ, ಸಣ್ಣ ವ್ಯಾಪಾರಗಳು ಹಾಗೂ ಗುಡಿ ಕೈಗಾರಿಕೆಗಳನ್ನು ನಾಶ ಮಾಡುತ್ತೇವೆ, ಉದ್ಯೋಗವೇ ಸೃಷ್ಟಿಯಾಗದ ಏಕಸ್ವಾಮ್ಯ ಬಂಡವಾಳವಾದವನ್ನು ಬೆಳೆಸುವ ಮತ್ತು ನಿರುದ್ಯೋಗದ ಪರ ವಹಿಸಿದಂತಾಗುತ್ತದೆ.”

ಹಾಗಾದರೇ ಸೋಮಾರಿತನ ಇಲ್ಲವೇ? ಖಂಡಿತವಾಗಿಯೂ ಇದೆ! ಆರ್ಥಿಕತೆ ಹಿಂಜರಿತ, ನಿರುದ್ಯೋಗಕ್ಕೆ ಕಾರಣಗಳನ್ನು, ಅದರ ಅಪಾಯವನ್ನು ನಾವು ಅರ್ಥ ಮಾಡಿಕೊಳ್ಳುವುದರಲ್ಲಿ, ತರ್ಕಬದ್ದವಾಗಿ ಓದುವುದರಲ್ಲಿ, ಸ್ವಂತ ವಿಚಾರ ಮಾಡುವುದರಲ್ಲಿ ಸೋಮಾರಿತನ ಇದ್ದೇಯಿದೆ. ಇದರಿಂದ ಹೊರಬರಬೇಕಿದೆ. ದೇಶಕ್ಕೆ ಎದುರಾಗಲಿರುವ ಅಪಾಯದಿಂದ ಉಳಿಸಬೇಕಿದೆ. ಮುನ್ನೋಟವನ್ನು ಕಟ್ಟಿಕೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಾರ್ವಜನಿಕ ವಲಯದ ಕಂಪೆನಿಗಳಾದ ಬಿ.ಇ.ಎಂ.ಎಲ್ , ಸೇರಿದಂತೆ ಅನೇಕ ಕಂಪೆನಿಗಳನ್ನು ಇಂದು ಖಾಸಗೀಯವರಿಗೆ ಪರಭಾರೆ ಮಾಡಿ ಸರಕಾರ ಕೈ ತೊಳೆದು ಕೊಳ್ಳಲು ಎಲ್ಲಾ ರೀತಿಯ ತಂತ್ರಗಳನ್ನು ಮಾಡುತ್ತಿದೆ, ಅವರು ನೀಡುವ ಕಾರಣ ಹೆಚ್.ಎ.ಎಲ್ ಸೇರಿದಂತೆ ಎಲ್ಲವೂ ಕೂಡ ಒಂದೋ ನಷ್ಟದಲ್ಲಿ ಇದ್ದಾವೆ ಹಾಗೂ ಅವುಗಳ ಕಾರ್ಯಕ್ಷಮತೆ ಖಾಸಗೀಯವರ ತರಹ ಇಲ್ಲ ಎಂದು. ದುರಂತ ಎಂದರೆ ಸಾರ್ವಜನಿಕ ಉದ್ದಿಮೆಗಳಲ್ಲಿ ಇರುವ ನಮೋ ಭಕ್ತರು ಈ ಕಂಪೆನಿಗಳನ್ನು ಖಾಸಗೀ ಒಡೆತನಕ್ಕೆ ಮಾರಲು ತುದಿಗಾಲಿನಲ್ಲಿ ಕಾದಿದ್ದಾರೆ, ಆ ಮೂಲಕ ಪ್ರಧಾನ ಸೇವಕ ರ ಕೈ ಬಲಪಡಿಸುತ್ತಾರಂತೆ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...