Homeಮುಖಪುಟಆರ್ಥಿಕ ಸಮೀಕ್ಷೆ ವಿರುದ್ಧದ ಹೇಳಿಕೆ - ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಆರ್ಥಿಕ ಸಮೀಕ್ಷೆ ವಿರುದ್ಧದ ಹೇಳಿಕೆ – ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಜನವರಿ 7 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಬರೇಲಿಯ ನ್ಯಾಯಾಲಯವು ಸಮನ್ಸ್ ನೀಡಿದೆ. ರಾಹುಲ್‌ ಗಾಂಧಿ ಅವರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ. ಆರ್ಥಿಕ ಸಮೀಕ್ಷೆ

ಅಖಿಲ ಭಾರತ ಹಿಂದೂ ಮಹಾಸಂಘ ಸಂಘಟನೆಯ ಮಂಡಲ್ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ ಮನವಿಗೆ ಸಂಬಂಧಿಸಿ ನ್ಯಾಯಾಲಯ ಈ ಸಮನ್ಸ್ ನೀಡಿದೆ. ಪಾಠಕ್ ಅವರು ಆರಂಭದಲ್ಲಿ ಶಾಸಕ-ಸಂಸದ ನ್ಯಾಯಾಲಯ/ಸಿಜೆಎಂ ಕೋರ್ಟ್‌ಗೆ ಆಗಸ್ಟ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಆಗಸ್ಟ್ 27ರಂದು ಅರ್ಜಿಯನ್ನು ತಿರಸ್ಕರಿಸಿತ್ತು. ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದು, ನ್ಯಾಯಾಲಯ ಪ್ರಸ್ತುತ ಸಮನ್ಸ್‌ ನೀಡಿದೆ. ಪಾಠಕ್ ಅವರನ್ನು ಪ್ರತಿನಿಧಿಸಿದ ವಕೀಲ ವೀರೇಂದ್ರ ಪಾಲ್ ಗುಪ್ತಾ ಅವರು, ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು “ಶೇಕಡಾವಾರು ದುರ್ಬಲ ವರ್ಗದವರ ಸಂಖ್ಯೆ ಹೆಚ್ಚಿದ್ದರೂ, ಅವರು ಹೊಂದಿರುವ ಆಸ್ತಿಯ ಶೇಕಡಾವಾರು ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ಹೇಳಿದ್ದರು. ಇದೇ ರೀತಿ ಮುಂದುವರಿದರೆ ಹೆಚ್ಚಿನ ಜನಸಂಖ್ಯೆ ಹೊಂದಿರುವವರು ಹೆಚ್ಚಿನ ಆಸ್ತಿಗೆ ಬೇಡಿಕೆ ಇಡುವ ಸಾಧ್ಯತೆಯಿದೆ” ಎಂದು ಹೇಳಿದ್ದರು.

“ರಾಜಕೀಯ ಲಾಭಕ್ಕಾಗಿ ವರ್ಗ ದ್ವೇಷವನ್ನು ಸೃಷ್ಟಿಸುವ” ಗುರಿಯನ್ನು ಹೊಂದಿರುವ ಈ ಹೇಳಿಕೆಗಳ ಮೂಲಕ ದುರ್ಬಲ ವರ್ಗಗಳನ್ನು ಪ್ರಚೋದಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದ್ದಾರೆ ಎಂದು ವಕೀಲ ಗುಪ್ತಾ ಆರೋಪಿಸಿದ್ದಾರೆ. ಕಾಂಗ್ರೆಸ್‌ನ ಹಿತಾಸಕ್ತಿಗಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳ ನಡುವೆ ದ್ವೇಷ ಬಿತ್ತಲು ಗಾಂಧಿ ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧೀ ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...