Homeಮುಖಪುಟಆರ್ಥಿಕ ಸಮೀಕ್ಷೆ ವಿರುದ್ಧದ ಹೇಳಿಕೆ - ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಆರ್ಥಿಕ ಸಮೀಕ್ಷೆ ವಿರುದ್ಧದ ಹೇಳಿಕೆ – ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

- Advertisement -
- Advertisement -

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀಡಲಾಗಿದ್ದ ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ಕಾಂಗ್ರೆಸ್ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಜನವರಿ 7 ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಬರೇಲಿಯ ನ್ಯಾಯಾಲಯವು ಸಮನ್ಸ್ ನೀಡಿದೆ. ರಾಹುಲ್‌ ಗಾಂಧಿ ಅವರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ. ಆರ್ಥಿಕ ಸಮೀಕ್ಷೆ

ಅಖಿಲ ಭಾರತ ಹಿಂದೂ ಮಹಾಸಂಘ ಸಂಘಟನೆಯ ಮಂಡಲ್ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿದ ಮನವಿಗೆ ಸಂಬಂಧಿಸಿ ನ್ಯಾಯಾಲಯ ಈ ಸಮನ್ಸ್ ನೀಡಿದೆ. ಪಾಠಕ್ ಅವರು ಆರಂಭದಲ್ಲಿ ಶಾಸಕ-ಸಂಸದ ನ್ಯಾಯಾಲಯ/ಸಿಜೆಎಂ ಕೋರ್ಟ್‌ಗೆ ಆಗಸ್ಟ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಆಗಸ್ಟ್ 27ರಂದು ಅರ್ಜಿಯನ್ನು ತಿರಸ್ಕರಿಸಿತ್ತು. ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸೆಷನ್ಸ್ ನ್ಯಾಯಾಲಯದಲ್ಲಿ ಪರಿಷ್ಕರಣೆ ಅರ್ಜಿಯನ್ನು ಸಲ್ಲಿಸಿದ್ದು, ನ್ಯಾಯಾಲಯ ಪ್ರಸ್ತುತ ಸಮನ್ಸ್‌ ನೀಡಿದೆ. ಪಾಠಕ್ ಅವರನ್ನು ಪ್ರತಿನಿಧಿಸಿದ ವಕೀಲ ವೀರೇಂದ್ರ ಪಾಲ್ ಗುಪ್ತಾ ಅವರು, ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು “ಶೇಕಡಾವಾರು ದುರ್ಬಲ ವರ್ಗದವರ ಸಂಖ್ಯೆ ಹೆಚ್ಚಿದ್ದರೂ, ಅವರು ಹೊಂದಿರುವ ಆಸ್ತಿಯ ಶೇಕಡಾವಾರು ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ಹೇಳಿದ್ದರು. ಇದೇ ರೀತಿ ಮುಂದುವರಿದರೆ ಹೆಚ್ಚಿನ ಜನಸಂಖ್ಯೆ ಹೊಂದಿರುವವರು ಹೆಚ್ಚಿನ ಆಸ್ತಿಗೆ ಬೇಡಿಕೆ ಇಡುವ ಸಾಧ್ಯತೆಯಿದೆ” ಎಂದು ಹೇಳಿದ್ದರು.

“ರಾಜಕೀಯ ಲಾಭಕ್ಕಾಗಿ ವರ್ಗ ದ್ವೇಷವನ್ನು ಸೃಷ್ಟಿಸುವ” ಗುರಿಯನ್ನು ಹೊಂದಿರುವ ಈ ಹೇಳಿಕೆಗಳ ಮೂಲಕ ದುರ್ಬಲ ವರ್ಗಗಳನ್ನು ಪ್ರಚೋದಿಸಲು ರಾಹುಲ್ ಗಾಂಧಿ ಪ್ರಯತ್ನಿಸಿದ್ದಾರೆ ಎಂದು ವಕೀಲ ಗುಪ್ತಾ ಆರೋಪಿಸಿದ್ದಾರೆ. ಕಾಂಗ್ರೆಸ್‌ನ ಹಿತಾಸಕ್ತಿಗಾಗಿ ಆರ್ಥಿಕವಾಗಿ ದುರ್ಬಲ ವರ್ಗಗಳ ನಡುವೆ ದ್ವೇಷ ಬಿತ್ತಲು ಗಾಂಧಿ ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧೀ ಪ್ರಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ಬಿಎನ್ಎಸ್ ಸೆಕ್ಷನ್ 152 ಭಿನ್ನಾಬಿಪ್ರಾಯ ಹತ್ತಿಕ್ಕುವ ಅಸ್ತ್ರವಾಗಿ ಬಳಸಬಾರದು : ರಾಜಸ್ಥಾನ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...