HomeUncategorizedಭಾರತದ ಜಿಡಿಪಿ ಬೆಳವಣಿಗೆಯ ಬಗ್ಗೆ ಸುಳ್ಳು ಅಂಕಿ ಅಂಶಗಳನ್ನು ನೀಡಲಾಗಿದೆ: ಅಶೋಕ ಮೋದಿ

ಭಾರತದ ಜಿಡಿಪಿ ಬೆಳವಣಿಗೆಯ ಬಗ್ಗೆ ಸುಳ್ಳು ಅಂಕಿ ಅಂಶಗಳನ್ನು ನೀಡಲಾಗಿದೆ: ಅಶೋಕ ಮೋದಿ

- Advertisement -
- Advertisement -

ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಸಂದರ್ಶಕ ಪ್ರಾಧ್ಯಾಪಕರಾಗಿರುವ ಅರ್ಥಶಾಸ್ತ್ರಜ್ಞ ಅಶೋಕ ಮೋದಿ ಅವರು ದೆಹಲಿಯಲ್ಲಿ ಜಿ -20 ಸಭೆಯ ವೇಳೆ ಭಾರತದ ಜಿಡಿಪಿ ಬೆಳವಣಿಗೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಕೆಂದ್ರ ಸರಕಾರ ನೀಡಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದೆಂದು ಬಿಂಬಿಸಲು ಪ್ರಯತ್ನಿಸುತ್ತಿದೆ. ಅಶೋಕ ಮೋದಿ ಪ್ರಕಾರ  2023-24ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಜಿಡಿಪಿ ಬೆಳವಣಿಗೆಯ ದರವು 7.8% ಆದರೆ ಅದು ತಪ್ಪಾಗಿದ್ದು, ಜಿಡಿಪಿ ಬೆಳವಣಿಗೆ ದರ ನಿಜವಾಗಿಯೂ  4.5% ಆಗಿದೆ ಎಂದು ಹೇಳಿದ್ದಾರೆ.

ಪ್ರಾಜೆಕ್ಟ್ ಸಿಂಡಿಕೇಟ್‌ ಪ್ರಕಟ ಮಾಡಿದ ಅಶೋಕ ಮೋದಿ ಲೇಖನದಲ್ಲಿ ಬೆಳವಣಿಗೆ ದರವನ್ನು ನಿರ್ಧರಿಸಲು ಎನ್ಎಸ್ಒ ದೇಶಿಯ ಆದಾಯದ ಅಂದಾಜುಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತದೆ. ಅದು ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ವಾದಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿನ GDP ಬೆಳವಣಿಗೆಯ ಅಂಕಿಅಂಶಗಳನ್ನು ಪ್ರತಿಪಕ್ಷಗಳು ದೋಷಪೂರಿತ ಎಂದು ಟೀಕಿಸಿದರೆ. ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಅಶೋಕ ಮೋದಿ ಅವರ ಪ್ರೊಜೆಕ್ಟ್-ಸಿಂಡಿಕೇಟ್‌  ಪ್ರಕಟ ಮಾಡಿದ ‘ಇಂಡಿಯಾಸ್ ಫೇಕ್ ಗ್ರೋತ್ ಸ್ಟೋರಿ’ ಶೀರ್ಷಿಕೆಯ ಲೇಖನದಲ್ಲಿ ಅಂಕಿ- ಅಂಶಗಳನ್ನು ನಕಲಿ ಎಂದು ಕರೆದಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ G20 ಶೃಂಗಸಭೆಯ ವೇಳೆ ಬಿಡುಗಡೆ ಮಾಡಿದ ಈ ಅಂಕಿ ಅಂಶವು  GDP ಹೆಚ್ಚಳ  ಕೇವಲ ಬ್ರಾಂಡಿಂಗ್ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. GDP ಸಂಖ್ಯೆಯನ್ನು ಹೆಚ್ಚಿಸಿದ್ದಲ್ಲದೆ ಭಾರತೀಯ ಆರ್ಥಿಕತೆಯಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ ಎಂದು ಅಶೋಕ ಮೋದಿ ಹೇಳಿಕೊಂಡಿದ್ದಾರೆ.

ಅವರು ಆದಾಯ ಮತ್ತು ವೆಚ್ಚದ ಸಂಖ್ಯೆಗಳ ನಡುವಿನ ‘ವ್ಯತ್ಯಾಸಗಳ’ ಕಾರಣದಿಂದಾಗಿ GDP ಸಂಖ್ಯೆಗಳನ್ನು ದೋಷಪೂರಿತವೆಂದು ಹೇಳಿದ್ದಾರೆ ಮತ್ತು ಕೇವಲ ಆದಾಯವನ್ನು ಬಳಸುವ ಬದಲು ಎರಡರ ಸರಾಸರಿಯನ್ನು ಬಳಸಬೇಕೆಂದು ವಾದಿಸಿದ್ದಾರೆ.

ಆದಾಯದೊಂದಿಗೆ ವೆಚ್ಚವನ್ನು ಹೊಂದಿಸಲು ಬಳಸಲಾದ ‘ವ್ಯತ್ಯಾಸದ ಸಂಖ್ಯೆ’ಯನ್ನು ತೆಗೆದುಹಾಕಿದರೆ 2023 ರಲ್ಲಿ ಏಪ್ರಿಲ್-ಜೂನ್ ಅವಧಿಯಲ್ಲಿ GDP ಬೆಳವಣಿಗೆ ದರವು ಕೇವಲ 1.4% ಆಗಿರುತ್ತದೆ, 7.8% ಅಲ್ಲ ಎಂದು ಅಶೋಕ ಮೋದಿ ಹೇಳಿಕೊಂಡಿದ್ದಾರೆ.

ಎನ್ಎಸ್ಒ ಕ್ರಮ ಸರಿಯಾದ ಕ್ರಮವಲ್ಲ ಮತ್ತು ಆಸ್ಟ್ರೇಲಿಯಾ, ಜರ್ಮನಿ ಮತ್ತು ಯುಕೆ ಎರಡೂ ಸಂಖ್ಯೆಗಳ ಆಧಾರದ ಮೇಲೆ ತಮ್ಮ GDP ಅನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಬೆಳವಣಿಗೆ ದರವನ್ನು ನಿರ್ಧರಿಸಲು ಎನ್ಎಸ್ಒ ದೇಶಿಯ ಆದಾಯದ ಅಂದಾಜುಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತದೆ. ಅದು ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇಶಿಯ ಆದಾಯವು ದೇಶದಲ್ಲಿ ಸರಕುಗಳು ಮತ್ತು ಸೇವೆಗಳಿಂದ ದೊರೆಯುವ ಗಳಿಕೆಯನ್ನು ಸೂಚಿಸಿದರೆ ವೆಚ್ಚವು ಅವುಗಳನ್ನು ಖರೀದಿಸಲು ಭಾರತೀಯರು ಮತ್ತು ವಿದೇಶಿಯರು ವ್ಯಯಿಸುವ ಮೊತ್ತವನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಅವಹೇಳನಾಕಾರಿ ಪೋಸ್ಟ್: ಸತಾರಾದಲ್ಲಿ ಘರ್ಷಣೆ, ಮನೆಗಳಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...