HomeUncategorizedಭಾರತದ ಜಿಡಿಪಿ ಬೆಳವಣಿಗೆಯ ಬಗ್ಗೆ ಸುಳ್ಳು ಅಂಕಿ ಅಂಶಗಳನ್ನು ನೀಡಲಾಗಿದೆ: ಅಶೋಕ ಮೋದಿ

ಭಾರತದ ಜಿಡಿಪಿ ಬೆಳವಣಿಗೆಯ ಬಗ್ಗೆ ಸುಳ್ಳು ಅಂಕಿ ಅಂಶಗಳನ್ನು ನೀಡಲಾಗಿದೆ: ಅಶೋಕ ಮೋದಿ

- Advertisement -
- Advertisement -

ಪ್ರಿನ್ಸ್‌ಟನ್ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರದ ಸಂದರ್ಶಕ ಪ್ರಾಧ್ಯಾಪಕರಾಗಿರುವ ಅರ್ಥಶಾಸ್ತ್ರಜ್ಞ ಅಶೋಕ ಮೋದಿ ಅವರು ದೆಹಲಿಯಲ್ಲಿ ಜಿ -20 ಸಭೆಯ ವೇಳೆ ಭಾರತದ ಜಿಡಿಪಿ ಬೆಳವಣಿಗೆಯ ಬಗ್ಗೆ ಸುಳ್ಳು ಮಾಹಿತಿಯನ್ನು ಕೆಂದ್ರ ಸರಕಾರ ನೀಡಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಭಾರತವನ್ನು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದೆಂದು ಬಿಂಬಿಸಲು ಪ್ರಯತ್ನಿಸುತ್ತಿದೆ. ಅಶೋಕ ಮೋದಿ ಪ್ರಕಾರ  2023-24ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (ಏಪ್ರಿಲ್-ಜೂನ್) ಜಿಡಿಪಿ ಬೆಳವಣಿಗೆಯ ದರವು 7.8% ಆದರೆ ಅದು ತಪ್ಪಾಗಿದ್ದು, ಜಿಡಿಪಿ ಬೆಳವಣಿಗೆ ದರ ನಿಜವಾಗಿಯೂ  4.5% ಆಗಿದೆ ಎಂದು ಹೇಳಿದ್ದಾರೆ.

ಪ್ರಾಜೆಕ್ಟ್ ಸಿಂಡಿಕೇಟ್‌ ಪ್ರಕಟ ಮಾಡಿದ ಅಶೋಕ ಮೋದಿ ಲೇಖನದಲ್ಲಿ ಬೆಳವಣಿಗೆ ದರವನ್ನು ನಿರ್ಧರಿಸಲು ಎನ್ಎಸ್ಒ ದೇಶಿಯ ಆದಾಯದ ಅಂದಾಜುಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತದೆ. ಅದು ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ವಾದಿಸಿದ್ದಾರೆ.

ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿನ GDP ಬೆಳವಣಿಗೆಯ ಅಂಕಿಅಂಶಗಳನ್ನು ಪ್ರತಿಪಕ್ಷಗಳು ದೋಷಪೂರಿತ ಎಂದು ಟೀಕಿಸಿದರೆ. ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕ ಅಶೋಕ ಮೋದಿ ಅವರ ಪ್ರೊಜೆಕ್ಟ್-ಸಿಂಡಿಕೇಟ್‌  ಪ್ರಕಟ ಮಾಡಿದ ‘ಇಂಡಿಯಾಸ್ ಫೇಕ್ ಗ್ರೋತ್ ಸ್ಟೋರಿ’ ಶೀರ್ಷಿಕೆಯ ಲೇಖನದಲ್ಲಿ ಅಂಕಿ- ಅಂಶಗಳನ್ನು ನಕಲಿ ಎಂದು ಕರೆದಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ G20 ಶೃಂಗಸಭೆಯ ವೇಳೆ ಬಿಡುಗಡೆ ಮಾಡಿದ ಈ ಅಂಕಿ ಅಂಶವು  GDP ಹೆಚ್ಚಳ  ಕೇವಲ ಬ್ರಾಂಡಿಂಗ್ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ. GDP ಸಂಖ್ಯೆಯನ್ನು ಹೆಚ್ಚಿಸಿದ್ದಲ್ಲದೆ ಭಾರತೀಯ ಆರ್ಥಿಕತೆಯಲ್ಲಿ ಯಾವುದೇ ಬೆಳವಣಿಗೆ ಆಗಿಲ್ಲ ಎಂದು ಅಶೋಕ ಮೋದಿ ಹೇಳಿಕೊಂಡಿದ್ದಾರೆ.

ಅವರು ಆದಾಯ ಮತ್ತು ವೆಚ್ಚದ ಸಂಖ್ಯೆಗಳ ನಡುವಿನ ‘ವ್ಯತ್ಯಾಸಗಳ’ ಕಾರಣದಿಂದಾಗಿ GDP ಸಂಖ್ಯೆಗಳನ್ನು ದೋಷಪೂರಿತವೆಂದು ಹೇಳಿದ್ದಾರೆ ಮತ್ತು ಕೇವಲ ಆದಾಯವನ್ನು ಬಳಸುವ ಬದಲು ಎರಡರ ಸರಾಸರಿಯನ್ನು ಬಳಸಬೇಕೆಂದು ವಾದಿಸಿದ್ದಾರೆ.

ಆದಾಯದೊಂದಿಗೆ ವೆಚ್ಚವನ್ನು ಹೊಂದಿಸಲು ಬಳಸಲಾದ ‘ವ್ಯತ್ಯಾಸದ ಸಂಖ್ಯೆ’ಯನ್ನು ತೆಗೆದುಹಾಕಿದರೆ 2023 ರಲ್ಲಿ ಏಪ್ರಿಲ್-ಜೂನ್ ಅವಧಿಯಲ್ಲಿ GDP ಬೆಳವಣಿಗೆ ದರವು ಕೇವಲ 1.4% ಆಗಿರುತ್ತದೆ, 7.8% ಅಲ್ಲ ಎಂದು ಅಶೋಕ ಮೋದಿ ಹೇಳಿಕೊಂಡಿದ್ದಾರೆ.

ಎನ್ಎಸ್ಒ ಕ್ರಮ ಸರಿಯಾದ ಕ್ರಮವಲ್ಲ ಮತ್ತು ಆಸ್ಟ್ರೇಲಿಯಾ, ಜರ್ಮನಿ ಮತ್ತು ಯುಕೆ ಎರಡೂ ಸಂಖ್ಯೆಗಳ ಆಧಾರದ ಮೇಲೆ ತಮ್ಮ GDP ಅನ್ನು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಬೆಳವಣಿಗೆ ದರವನ್ನು ನಿರ್ಧರಿಸಲು ಎನ್ಎಸ್ಒ ದೇಶಿಯ ಆದಾಯದ ಅಂದಾಜುಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳುತ್ತದೆ. ಅದು ವೆಚ್ಚವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇಶಿಯ ಆದಾಯವು ದೇಶದಲ್ಲಿ ಸರಕುಗಳು ಮತ್ತು ಸೇವೆಗಳಿಂದ ದೊರೆಯುವ ಗಳಿಕೆಯನ್ನು ಸೂಚಿಸಿದರೆ ವೆಚ್ಚವು ಅವುಗಳನ್ನು ಖರೀದಿಸಲು ಭಾರತೀಯರು ಮತ್ತು ವಿದೇಶಿಯರು ವ್ಯಯಿಸುವ ಮೊತ್ತವನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಅವಹೇಳನಾಕಾರಿ ಪೋಸ್ಟ್: ಸತಾರಾದಲ್ಲಿ ಘರ್ಷಣೆ, ಮನೆಗಳಿಗೆ ಬೆಂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...