Homeಚಳವಳಿಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಪಟ್ಟು ಹಿಡಿದಿರುವ ರೈತರ ಪ್ರತಿಭಟನೆ ಮೂರು ವಾರಗಳನ್ನು ಪೂರ್ಣಗೊಳಿಸಿದೆ. ಅನ್ನದಾತರ ಹೋರಾಟಕ್ಕೆ ರಾಜಕೀಯ ಪಕ್ಷಗಳು, ದೇಶದಾದ್ಯಂತ ಹಲವು ಸಂಘಟನೆಗಳು ಕೈ ಜೋಡಿಸಿವೆ. ಈಗ ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 10 ಹಿರಿಯ ಖ್ಯಾತ ಅರ್ಥಶಾಸ್ತ್ರಜ್ಞರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದಾರೆ.

ದೇಶದ ಸಣ್ಣ ಮತ್ತು ಅಂಚಿನಲ್ಲಿರುವ ಅತಿಸಣ್ಣ ರೈತರ ಹಿತಾಸಕ್ತಿಗಳಿಲ್ಲದ ಕಾರಣ ಈ ಕಾನೂನುಗಳನ್ನು ರದ್ದುಗೊಳಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು, ಕೃಷಿ ಕಾನೂನುಗಳ ಏಕೆ ರದ್ದಾಗಬೇಕು ಎಂಬುದಕ್ಕೆ 5 ಕಾರಣಗಳನ್ನು ನೀಡಿದ್ದಾರೆ.

“ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಹಿತದೃಷ್ಟಿ ಹೊಂದಿಲ್ಲದ ಇತ್ತೀಚಿನ ಕೃಷಿ ಕಾಯ್ದೆಗಳನ್ನು ಭಾರತ ಸರ್ಕಾರ ರದ್ದುಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕಾಯ್ದೆಗಳ ಬಗ್ಗೆ ರೈತ ಸಂಘಟನೆಗಳು ಭಾರಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೃಷಿ ವ್ಯಾಪಾರೋದ್ಯಮವನ್ನು ಸುಧಾರಿಸುವ ಅವಶ್ಯಕತೆ ಇದೆ. ಆದರೆ, ಈ ಕಾನೂನುಗಳು ಆ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಈ ವಿವಾದಾತ್ಮಕ ಕೃಷಿ ಕಾನೂನುಗಳು ಸಣ್ಣ ರೈತರಿಗೆ ಮೂಲಭೂತವಾಗಿ ಹಾನಿಕಾರಕವಾಗಿರುವುದಕ್ಕೆ ಐದು ಕಾರಣಗಳನ್ನು ಅರ್ಥಶಾಸ್ತ್ರಜ್ಞರು ಪಟ್ಟಿ ಮಾಡಿದ್ದಾರೆ.

೧. ಈ ಕಾನೂನುಗಳು, ರಾಜ್ಯ ಸರ್ಕಾರಗಳ ಪಾತ್ರವನ್ನು ದುರ್ಬಲಗೊಳಿಸುತ್ತವೆ. ಆದರೆ, ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಬೇಗ ಸ್ಪಂದಿಸಬಹುದು ಮತ್ತು ಜವಾಬ್ದಾರಿ ಹೊಂದಿರುತ್ತದೆ.

೨. ಈ ಕಾನೂನುಗಳು ಎರಡು ನಿಯಮಗಳೊಂದಿಗೆ ಎರಡು ಮಾರುಕಟ್ಟೆಗಳ ರಚನೆಗೆ ಕಾರಣವಾಗುತ್ತವೆ. “ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ನಿಯಂತ್ರಿತ ಮಾರುಕಟ್ಟೆ ಮತ್ತು ವ್ಯಾಪಾರ ಪ್ರದೇಶದಲ್ಲಿ ಅನಿಯಂತ್ರಿತ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಎರಡು ಕೂಡ ವಿಭಿನ್ನ ಕಾರ್ಯಗಳಿಗೆ, ಮಾರುಕಟ್ಟೆ ಶುಲ್ಕದ ವಿಭಿನ್ನ ನಿಯಮಗಳು ಮತ್ತು ವಿಭಿನ್ನ ಗುಂಪುಗಳ ನಿಯಮಗಳ ಸೃಷ್ಟಿ ಈ ಕಾನೂನುಗಳು ಕಾರಣವಾಗುತ್ತವೆ.

೩. ಕಾನೂನುಗಳು ಛಿದ್ರಗೊಂಡ ಮಾರುಕಟ್ಟೆಗಳನ್ನು ಸೃಷ್ಟಿಸುತ್ತವೆ. ಉದಾಹರಣೆಗೆ ಬಿಹಾರ ರಾಜ್ಯವನ್ನು ತೆಗೆದುಕೊಳ್ಳಬಹುದು. ಬಿಹಾರದಲ್ಲಿ 2006 ರಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗೆದುಹಾಕಲಾಯಿತು. ಇದರಿಂದಾಗಿ ಅಲ್ಲಿ ರೈತರಿಗೆ ಕಡಿಮೆ ಖರೀದಿದಾರರು ಇದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಳೆಗಳ ಬೆಲೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

PC : APN Live

೪. ಕೃಷಿಯ ಒಪ್ಪಂದದ ಕಾನೂನಿನ ಪ್ರಕಾರ ಮಾರುಕಟ್ಟೆ ಅಸಮಾನತೆ ಇರುವ ಇಬ್ಬರು ವ್ಯವಹಾರ ನಡೆಸುವಂತಾಗುತ್ತದೆ. ಕಾರ್ಪೊರೇಟರ್‌ ಕಂಪನಿಗಳು ಬರುತ್ತವೆ. ಇವರಿಂದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲಾಗುವುದಿಲ್ಲ.

೫. ಅಂತಿಮವಾಗಿ, ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಪ್ರೊ.ಡಿ.ನರಸಿಂಹ ರೆಡ್ಡಿ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊ.ಕಮಲ್ ನಯನ್ ಕಬ್ರಾ,  ತಿರುವನಂತಪುರಂನ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯರಾದ ಪ್ರೊ.ಕೆ.ಎನ್. ಹರಿಲಾಲ್, ರೋಹ್ಟಕ್‌ನ ಎಂ.ಡಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ.ರಜಿಂದರ್ ಚೌಧರಿ, ಚಂಡೀಗಢದ ಸಿಆರ್‌ಆರ್‌ಐಡಿಯ ಪ್ರೊ.ಸುರಿಂದರ್ ಕುಮಾರ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇನ್ನೂ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ಮಾಲ್ಕಮ್ ಎಸ್. ಆದಿಶೇಶಿಯ ಚೇರ್ ಪ್ರೊಫೆಸರ್  ಪ್ರೊ.ಅರುಣ್ ಕುಮಾರ್, ಅಮೃತಸರದ ಗುರುನಾನಕ್ ದೇವ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಚಂಡೀಗಢದ CRRIDಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ.ರಂಜಿತ್ ಸಿಂಗ್ ಘುಮನ್, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ನಬಾರ್ಡ್ ಚೇರ್ ಪ್ರೊಫೆಸರ್ ಪ್ರೊ.ಆರ್.ರಾಮಕುಮಾರ್, ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕನಾಮಿಕ್ ಸ್ಟಡೀಸ್ ಅಂಡ್ ಪ್ಲಾನಿಂಗ್ (CESP) ಯಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವಿಕಾಸ್ ರಾವಲ್ ಮತ್ತು ಹಿಮಾಂಶು ಅರ್ಥಶಾಸ್ತ್ರಜ್ಞರು ಸಹಿ ಮಾಡಿ ಪತ್ರ ಬರೆದಿದ್ದಾರೆ.

ಈ ಹೊಸ ವಿವಾದಾತ್ಮಕ ಕಾನೂನುಗಳನ್ನು ತಿದ್ದುಪಡಿ ಮಾಡುವುದು ಸಾಕಾಗುವುದಿಲ್ಲ, ಅವುಗಳನ್ನು ಹಿಂತೆಗೆದುಕೊಳ್ಳಬೇಕು. ರೈತರ ನಿಜವಾದ ಕಾಳಜಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಚಿತ್ರಿಸಬಾರದು ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಯಾವ ಕ್ರಮಗಳು ರೈತರಿಗೆ ಮತ್ತು ಆರ್ಥಿಕತೆಗೆ ಸಮನಾದ ಮತ್ತು ಸುಸ್ಥಿರ ಲಾಭವನ್ನು ತರುತ್ತವೆ ಎಂಬುದರ ಕುರಿತು ರೈತ ಸಂಘಟನೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರ ವ್ಯಾಪಕವಾದ ಚರ್ಚೆ ನಡೆಸಬೇಕೆಂದು ಅರ್ಥಶಾಸ್ತ್ರಜ್ಞರು ಕರೆ ನೀಡುತ್ತಾರೆ. ಜೊತೆಗೆ  “ಇದು ನಿಜವಾದ ಪ್ರಜಾಪ್ರಭುತ್ವದ ಕೆಲಸ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...