Homeಚಳವಳಿಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಪಟ್ಟು ಹಿಡಿದಿರುವ ರೈತರ ಪ್ರತಿಭಟನೆ ಮೂರು ವಾರಗಳನ್ನು ಪೂರ್ಣಗೊಳಿಸಿದೆ. ಅನ್ನದಾತರ ಹೋರಾಟಕ್ಕೆ ರಾಜಕೀಯ ಪಕ್ಷಗಳು, ದೇಶದಾದ್ಯಂತ ಹಲವು ಸಂಘಟನೆಗಳು ಕೈ ಜೋಡಿಸಿವೆ. ಈಗ ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 10 ಹಿರಿಯ ಖ್ಯಾತ ಅರ್ಥಶಾಸ್ತ್ರಜ್ಞರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದಾರೆ.

ದೇಶದ ಸಣ್ಣ ಮತ್ತು ಅಂಚಿನಲ್ಲಿರುವ ಅತಿಸಣ್ಣ ರೈತರ ಹಿತಾಸಕ್ತಿಗಳಿಲ್ಲದ ಕಾರಣ ಈ ಕಾನೂನುಗಳನ್ನು ರದ್ದುಗೊಳಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು, ಕೃಷಿ ಕಾನೂನುಗಳ ಏಕೆ ರದ್ದಾಗಬೇಕು ಎಂಬುದಕ್ಕೆ 5 ಕಾರಣಗಳನ್ನು ನೀಡಿದ್ದಾರೆ.

“ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಹಿತದೃಷ್ಟಿ ಹೊಂದಿಲ್ಲದ ಇತ್ತೀಚಿನ ಕೃಷಿ ಕಾಯ್ದೆಗಳನ್ನು ಭಾರತ ಸರ್ಕಾರ ರದ್ದುಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕಾಯ್ದೆಗಳ ಬಗ್ಗೆ ರೈತ ಸಂಘಟನೆಗಳು ಭಾರಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೃಷಿ ವ್ಯಾಪಾರೋದ್ಯಮವನ್ನು ಸುಧಾರಿಸುವ ಅವಶ್ಯಕತೆ ಇದೆ. ಆದರೆ, ಈ ಕಾನೂನುಗಳು ಆ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಈ ವಿವಾದಾತ್ಮಕ ಕೃಷಿ ಕಾನೂನುಗಳು ಸಣ್ಣ ರೈತರಿಗೆ ಮೂಲಭೂತವಾಗಿ ಹಾನಿಕಾರಕವಾಗಿರುವುದಕ್ಕೆ ಐದು ಕಾರಣಗಳನ್ನು ಅರ್ಥಶಾಸ್ತ್ರಜ್ಞರು ಪಟ್ಟಿ ಮಾಡಿದ್ದಾರೆ.

೧. ಈ ಕಾನೂನುಗಳು, ರಾಜ್ಯ ಸರ್ಕಾರಗಳ ಪಾತ್ರವನ್ನು ದುರ್ಬಲಗೊಳಿಸುತ್ತವೆ. ಆದರೆ, ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಬೇಗ ಸ್ಪಂದಿಸಬಹುದು ಮತ್ತು ಜವಾಬ್ದಾರಿ ಹೊಂದಿರುತ್ತದೆ.

೨. ಈ ಕಾನೂನುಗಳು ಎರಡು ನಿಯಮಗಳೊಂದಿಗೆ ಎರಡು ಮಾರುಕಟ್ಟೆಗಳ ರಚನೆಗೆ ಕಾರಣವಾಗುತ್ತವೆ. “ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ನಿಯಂತ್ರಿತ ಮಾರುಕಟ್ಟೆ ಮತ್ತು ವ್ಯಾಪಾರ ಪ್ರದೇಶದಲ್ಲಿ ಅನಿಯಂತ್ರಿತ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಎರಡು ಕೂಡ ವಿಭಿನ್ನ ಕಾರ್ಯಗಳಿಗೆ, ಮಾರುಕಟ್ಟೆ ಶುಲ್ಕದ ವಿಭಿನ್ನ ನಿಯಮಗಳು ಮತ್ತು ವಿಭಿನ್ನ ಗುಂಪುಗಳ ನಿಯಮಗಳ ಸೃಷ್ಟಿ ಈ ಕಾನೂನುಗಳು ಕಾರಣವಾಗುತ್ತವೆ.

೩. ಕಾನೂನುಗಳು ಛಿದ್ರಗೊಂಡ ಮಾರುಕಟ್ಟೆಗಳನ್ನು ಸೃಷ್ಟಿಸುತ್ತವೆ. ಉದಾಹರಣೆಗೆ ಬಿಹಾರ ರಾಜ್ಯವನ್ನು ತೆಗೆದುಕೊಳ್ಳಬಹುದು. ಬಿಹಾರದಲ್ಲಿ 2006 ರಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗೆದುಹಾಕಲಾಯಿತು. ಇದರಿಂದಾಗಿ ಅಲ್ಲಿ ರೈತರಿಗೆ ಕಡಿಮೆ ಖರೀದಿದಾರರು ಇದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಳೆಗಳ ಬೆಲೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

PC : APN Live

೪. ಕೃಷಿಯ ಒಪ್ಪಂದದ ಕಾನೂನಿನ ಪ್ರಕಾರ ಮಾರುಕಟ್ಟೆ ಅಸಮಾನತೆ ಇರುವ ಇಬ್ಬರು ವ್ಯವಹಾರ ನಡೆಸುವಂತಾಗುತ್ತದೆ. ಕಾರ್ಪೊರೇಟರ್‌ ಕಂಪನಿಗಳು ಬರುತ್ತವೆ. ಇವರಿಂದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲಾಗುವುದಿಲ್ಲ.

೫. ಅಂತಿಮವಾಗಿ, ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಪ್ರೊ.ಡಿ.ನರಸಿಂಹ ರೆಡ್ಡಿ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊ.ಕಮಲ್ ನಯನ್ ಕಬ್ರಾ,  ತಿರುವನಂತಪುರಂನ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯರಾದ ಪ್ರೊ.ಕೆ.ಎನ್. ಹರಿಲಾಲ್, ರೋಹ್ಟಕ್‌ನ ಎಂ.ಡಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ.ರಜಿಂದರ್ ಚೌಧರಿ, ಚಂಡೀಗಢದ ಸಿಆರ್‌ಆರ್‌ಐಡಿಯ ಪ್ರೊ.ಸುರಿಂದರ್ ಕುಮಾರ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇನ್ನೂ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ಮಾಲ್ಕಮ್ ಎಸ್. ಆದಿಶೇಶಿಯ ಚೇರ್ ಪ್ರೊಫೆಸರ್  ಪ್ರೊ.ಅರುಣ್ ಕುಮಾರ್, ಅಮೃತಸರದ ಗುರುನಾನಕ್ ದೇವ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಚಂಡೀಗಢದ CRRIDಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ.ರಂಜಿತ್ ಸಿಂಗ್ ಘುಮನ್, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ನಬಾರ್ಡ್ ಚೇರ್ ಪ್ರೊಫೆಸರ್ ಪ್ರೊ.ಆರ್.ರಾಮಕುಮಾರ್, ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕನಾಮಿಕ್ ಸ್ಟಡೀಸ್ ಅಂಡ್ ಪ್ಲಾನಿಂಗ್ (CESP) ಯಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವಿಕಾಸ್ ರಾವಲ್ ಮತ್ತು ಹಿಮಾಂಶು ಅರ್ಥಶಾಸ್ತ್ರಜ್ಞರು ಸಹಿ ಮಾಡಿ ಪತ್ರ ಬರೆದಿದ್ದಾರೆ.

ಈ ಹೊಸ ವಿವಾದಾತ್ಮಕ ಕಾನೂನುಗಳನ್ನು ತಿದ್ದುಪಡಿ ಮಾಡುವುದು ಸಾಕಾಗುವುದಿಲ್ಲ, ಅವುಗಳನ್ನು ಹಿಂತೆಗೆದುಕೊಳ್ಳಬೇಕು. ರೈತರ ನಿಜವಾದ ಕಾಳಜಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಚಿತ್ರಿಸಬಾರದು ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಯಾವ ಕ್ರಮಗಳು ರೈತರಿಗೆ ಮತ್ತು ಆರ್ಥಿಕತೆಗೆ ಸಮನಾದ ಮತ್ತು ಸುಸ್ಥಿರ ಲಾಭವನ್ನು ತರುತ್ತವೆ ಎಂಬುದರ ಕುರಿತು ರೈತ ಸಂಘಟನೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರ ವ್ಯಾಪಕವಾದ ಚರ್ಚೆ ನಡೆಸಬೇಕೆಂದು ಅರ್ಥಶಾಸ್ತ್ರಜ್ಞರು ಕರೆ ನೀಡುತ್ತಾರೆ. ಜೊತೆಗೆ  “ಇದು ನಿಜವಾದ ಪ್ರಜಾಪ್ರಭುತ್ವದ ಕೆಲಸ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...