Homeಚಳವಳಿಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಪಟ್ಟು ಹಿಡಿದಿರುವ ರೈತರ ಪ್ರತಿಭಟನೆ ಮೂರು ವಾರಗಳನ್ನು ಪೂರ್ಣಗೊಳಿಸಿದೆ. ಅನ್ನದಾತರ ಹೋರಾಟಕ್ಕೆ ರಾಜಕೀಯ ಪಕ್ಷಗಳು, ದೇಶದಾದ್ಯಂತ ಹಲವು ಸಂಘಟನೆಗಳು ಕೈ ಜೋಡಿಸಿವೆ. ಈಗ ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 10 ಹಿರಿಯ ಖ್ಯಾತ ಅರ್ಥಶಾಸ್ತ್ರಜ್ಞರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದಾರೆ.

ದೇಶದ ಸಣ್ಣ ಮತ್ತು ಅಂಚಿನಲ್ಲಿರುವ ಅತಿಸಣ್ಣ ರೈತರ ಹಿತಾಸಕ್ತಿಗಳಿಲ್ಲದ ಕಾರಣ ಈ ಕಾನೂನುಗಳನ್ನು ರದ್ದುಗೊಳಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು, ಕೃಷಿ ಕಾನೂನುಗಳ ಏಕೆ ರದ್ದಾಗಬೇಕು ಎಂಬುದಕ್ಕೆ 5 ಕಾರಣಗಳನ್ನು ನೀಡಿದ್ದಾರೆ.

“ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಹಿತದೃಷ್ಟಿ ಹೊಂದಿಲ್ಲದ ಇತ್ತೀಚಿನ ಕೃಷಿ ಕಾಯ್ದೆಗಳನ್ನು ಭಾರತ ಸರ್ಕಾರ ರದ್ದುಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕಾಯ್ದೆಗಳ ಬಗ್ಗೆ ರೈತ ಸಂಘಟನೆಗಳು ಭಾರಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೃಷಿ ವ್ಯಾಪಾರೋದ್ಯಮವನ್ನು ಸುಧಾರಿಸುವ ಅವಶ್ಯಕತೆ ಇದೆ. ಆದರೆ, ಈ ಕಾನೂನುಗಳು ಆ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಈ ವಿವಾದಾತ್ಮಕ ಕೃಷಿ ಕಾನೂನುಗಳು ಸಣ್ಣ ರೈತರಿಗೆ ಮೂಲಭೂತವಾಗಿ ಹಾನಿಕಾರಕವಾಗಿರುವುದಕ್ಕೆ ಐದು ಕಾರಣಗಳನ್ನು ಅರ್ಥಶಾಸ್ತ್ರಜ್ಞರು ಪಟ್ಟಿ ಮಾಡಿದ್ದಾರೆ.

೧. ಈ ಕಾನೂನುಗಳು, ರಾಜ್ಯ ಸರ್ಕಾರಗಳ ಪಾತ್ರವನ್ನು ದುರ್ಬಲಗೊಳಿಸುತ್ತವೆ. ಆದರೆ, ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಬೇಗ ಸ್ಪಂದಿಸಬಹುದು ಮತ್ತು ಜವಾಬ್ದಾರಿ ಹೊಂದಿರುತ್ತದೆ.

೨. ಈ ಕಾನೂನುಗಳು ಎರಡು ನಿಯಮಗಳೊಂದಿಗೆ ಎರಡು ಮಾರುಕಟ್ಟೆಗಳ ರಚನೆಗೆ ಕಾರಣವಾಗುತ್ತವೆ. “ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ನಿಯಂತ್ರಿತ ಮಾರುಕಟ್ಟೆ ಮತ್ತು ವ್ಯಾಪಾರ ಪ್ರದೇಶದಲ್ಲಿ ಅನಿಯಂತ್ರಿತ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಎರಡು ಕೂಡ ವಿಭಿನ್ನ ಕಾರ್ಯಗಳಿಗೆ, ಮಾರುಕಟ್ಟೆ ಶುಲ್ಕದ ವಿಭಿನ್ನ ನಿಯಮಗಳು ಮತ್ತು ವಿಭಿನ್ನ ಗುಂಪುಗಳ ನಿಯಮಗಳ ಸೃಷ್ಟಿ ಈ ಕಾನೂನುಗಳು ಕಾರಣವಾಗುತ್ತವೆ.

೩. ಕಾನೂನುಗಳು ಛಿದ್ರಗೊಂಡ ಮಾರುಕಟ್ಟೆಗಳನ್ನು ಸೃಷ್ಟಿಸುತ್ತವೆ. ಉದಾಹರಣೆಗೆ ಬಿಹಾರ ರಾಜ್ಯವನ್ನು ತೆಗೆದುಕೊಳ್ಳಬಹುದು. ಬಿಹಾರದಲ್ಲಿ 2006 ರಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗೆದುಹಾಕಲಾಯಿತು. ಇದರಿಂದಾಗಿ ಅಲ್ಲಿ ರೈತರಿಗೆ ಕಡಿಮೆ ಖರೀದಿದಾರರು ಇದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಳೆಗಳ ಬೆಲೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

PC : APN Live

೪. ಕೃಷಿಯ ಒಪ್ಪಂದದ ಕಾನೂನಿನ ಪ್ರಕಾರ ಮಾರುಕಟ್ಟೆ ಅಸಮಾನತೆ ಇರುವ ಇಬ್ಬರು ವ್ಯವಹಾರ ನಡೆಸುವಂತಾಗುತ್ತದೆ. ಕಾರ್ಪೊರೇಟರ್‌ ಕಂಪನಿಗಳು ಬರುತ್ತವೆ. ಇವರಿಂದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲಾಗುವುದಿಲ್ಲ.

೫. ಅಂತಿಮವಾಗಿ, ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಪ್ರೊ.ಡಿ.ನರಸಿಂಹ ರೆಡ್ಡಿ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊ.ಕಮಲ್ ನಯನ್ ಕಬ್ರಾ,  ತಿರುವನಂತಪುರಂನ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯರಾದ ಪ್ರೊ.ಕೆ.ಎನ್. ಹರಿಲಾಲ್, ರೋಹ್ಟಕ್‌ನ ಎಂ.ಡಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ.ರಜಿಂದರ್ ಚೌಧರಿ, ಚಂಡೀಗಢದ ಸಿಆರ್‌ಆರ್‌ಐಡಿಯ ಪ್ರೊ.ಸುರಿಂದರ್ ಕುಮಾರ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇನ್ನೂ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ಮಾಲ್ಕಮ್ ಎಸ್. ಆದಿಶೇಶಿಯ ಚೇರ್ ಪ್ರೊಫೆಸರ್  ಪ್ರೊ.ಅರುಣ್ ಕುಮಾರ್, ಅಮೃತಸರದ ಗುರುನಾನಕ್ ದೇವ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಚಂಡೀಗಢದ CRRIDಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ.ರಂಜಿತ್ ಸಿಂಗ್ ಘುಮನ್, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ನಬಾರ್ಡ್ ಚೇರ್ ಪ್ರೊಫೆಸರ್ ಪ್ರೊ.ಆರ್.ರಾಮಕುಮಾರ್, ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕನಾಮಿಕ್ ಸ್ಟಡೀಸ್ ಅಂಡ್ ಪ್ಲಾನಿಂಗ್ (CESP) ಯಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವಿಕಾಸ್ ರಾವಲ್ ಮತ್ತು ಹಿಮಾಂಶು ಅರ್ಥಶಾಸ್ತ್ರಜ್ಞರು ಸಹಿ ಮಾಡಿ ಪತ್ರ ಬರೆದಿದ್ದಾರೆ.

ಈ ಹೊಸ ವಿವಾದಾತ್ಮಕ ಕಾನೂನುಗಳನ್ನು ತಿದ್ದುಪಡಿ ಮಾಡುವುದು ಸಾಕಾಗುವುದಿಲ್ಲ, ಅವುಗಳನ್ನು ಹಿಂತೆಗೆದುಕೊಳ್ಳಬೇಕು. ರೈತರ ನಿಜವಾದ ಕಾಳಜಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಚಿತ್ರಿಸಬಾರದು ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಯಾವ ಕ್ರಮಗಳು ರೈತರಿಗೆ ಮತ್ತು ಆರ್ಥಿಕತೆಗೆ ಸಮನಾದ ಮತ್ತು ಸುಸ್ಥಿರ ಲಾಭವನ್ನು ತರುತ್ತವೆ ಎಂಬುದರ ಕುರಿತು ರೈತ ಸಂಘಟನೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರ ವ್ಯಾಪಕವಾದ ಚರ್ಚೆ ನಡೆಸಬೇಕೆಂದು ಅರ್ಥಶಾಸ್ತ್ರಜ್ಞರು ಕರೆ ನೀಡುತ್ತಾರೆ. ಜೊತೆಗೆ  “ಇದು ನಿಜವಾದ ಪ್ರಜಾಪ್ರಭುತ್ವದ ಕೆಲಸ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...