Homeಚಳವಳಿಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಪಟ್ಟು ಹಿಡಿದಿರುವ ರೈತರ ಪ್ರತಿಭಟನೆ ಮೂರು ವಾರಗಳನ್ನು ಪೂರ್ಣಗೊಳಿಸಿದೆ. ಅನ್ನದಾತರ ಹೋರಾಟಕ್ಕೆ ರಾಜಕೀಯ ಪಕ್ಷಗಳು, ದೇಶದಾದ್ಯಂತ ಹಲವು ಸಂಘಟನೆಗಳು ಕೈ ಜೋಡಿಸಿವೆ. ಈಗ ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 10 ಹಿರಿಯ ಖ್ಯಾತ ಅರ್ಥಶಾಸ್ತ್ರಜ್ಞರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದಾರೆ.

ದೇಶದ ಸಣ್ಣ ಮತ್ತು ಅಂಚಿನಲ್ಲಿರುವ ಅತಿಸಣ್ಣ ರೈತರ ಹಿತಾಸಕ್ತಿಗಳಿಲ್ಲದ ಕಾರಣ ಈ ಕಾನೂನುಗಳನ್ನು ರದ್ದುಗೊಳಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು, ಕೃಷಿ ಕಾನೂನುಗಳ ಏಕೆ ರದ್ದಾಗಬೇಕು ಎಂಬುದಕ್ಕೆ 5 ಕಾರಣಗಳನ್ನು ನೀಡಿದ್ದಾರೆ.

“ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಹಿತದೃಷ್ಟಿ ಹೊಂದಿಲ್ಲದ ಇತ್ತೀಚಿನ ಕೃಷಿ ಕಾಯ್ದೆಗಳನ್ನು ಭಾರತ ಸರ್ಕಾರ ರದ್ದುಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕಾಯ್ದೆಗಳ ಬಗ್ಗೆ ರೈತ ಸಂಘಟನೆಗಳು ಭಾರಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೃಷಿ ವ್ಯಾಪಾರೋದ್ಯಮವನ್ನು ಸುಧಾರಿಸುವ ಅವಶ್ಯಕತೆ ಇದೆ. ಆದರೆ, ಈ ಕಾನೂನುಗಳು ಆ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಈ ವಿವಾದಾತ್ಮಕ ಕೃಷಿ ಕಾನೂನುಗಳು ಸಣ್ಣ ರೈತರಿಗೆ ಮೂಲಭೂತವಾಗಿ ಹಾನಿಕಾರಕವಾಗಿರುವುದಕ್ಕೆ ಐದು ಕಾರಣಗಳನ್ನು ಅರ್ಥಶಾಸ್ತ್ರಜ್ಞರು ಪಟ್ಟಿ ಮಾಡಿದ್ದಾರೆ.

೧. ಈ ಕಾನೂನುಗಳು, ರಾಜ್ಯ ಸರ್ಕಾರಗಳ ಪಾತ್ರವನ್ನು ದುರ್ಬಲಗೊಳಿಸುತ್ತವೆ. ಆದರೆ, ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಬೇಗ ಸ್ಪಂದಿಸಬಹುದು ಮತ್ತು ಜವಾಬ್ದಾರಿ ಹೊಂದಿರುತ್ತದೆ.

೨. ಈ ಕಾನೂನುಗಳು ಎರಡು ನಿಯಮಗಳೊಂದಿಗೆ ಎರಡು ಮಾರುಕಟ್ಟೆಗಳ ರಚನೆಗೆ ಕಾರಣವಾಗುತ್ತವೆ. “ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ನಿಯಂತ್ರಿತ ಮಾರುಕಟ್ಟೆ ಮತ್ತು ವ್ಯಾಪಾರ ಪ್ರದೇಶದಲ್ಲಿ ಅನಿಯಂತ್ರಿತ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಎರಡು ಕೂಡ ವಿಭಿನ್ನ ಕಾರ್ಯಗಳಿಗೆ, ಮಾರುಕಟ್ಟೆ ಶುಲ್ಕದ ವಿಭಿನ್ನ ನಿಯಮಗಳು ಮತ್ತು ವಿಭಿನ್ನ ಗುಂಪುಗಳ ನಿಯಮಗಳ ಸೃಷ್ಟಿ ಈ ಕಾನೂನುಗಳು ಕಾರಣವಾಗುತ್ತವೆ.

೩. ಕಾನೂನುಗಳು ಛಿದ್ರಗೊಂಡ ಮಾರುಕಟ್ಟೆಗಳನ್ನು ಸೃಷ್ಟಿಸುತ್ತವೆ. ಉದಾಹರಣೆಗೆ ಬಿಹಾರ ರಾಜ್ಯವನ್ನು ತೆಗೆದುಕೊಳ್ಳಬಹುದು. ಬಿಹಾರದಲ್ಲಿ 2006 ರಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗೆದುಹಾಕಲಾಯಿತು. ಇದರಿಂದಾಗಿ ಅಲ್ಲಿ ರೈತರಿಗೆ ಕಡಿಮೆ ಖರೀದಿದಾರರು ಇದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಳೆಗಳ ಬೆಲೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

PC : APN Live

೪. ಕೃಷಿಯ ಒಪ್ಪಂದದ ಕಾನೂನಿನ ಪ್ರಕಾರ ಮಾರುಕಟ್ಟೆ ಅಸಮಾನತೆ ಇರುವ ಇಬ್ಬರು ವ್ಯವಹಾರ ನಡೆಸುವಂತಾಗುತ್ತದೆ. ಕಾರ್ಪೊರೇಟರ್‌ ಕಂಪನಿಗಳು ಬರುತ್ತವೆ. ಇವರಿಂದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲಾಗುವುದಿಲ್ಲ.

೫. ಅಂತಿಮವಾಗಿ, ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಪ್ರೊ.ಡಿ.ನರಸಿಂಹ ರೆಡ್ಡಿ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊ.ಕಮಲ್ ನಯನ್ ಕಬ್ರಾ,  ತಿರುವನಂತಪುರಂನ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯರಾದ ಪ್ರೊ.ಕೆ.ಎನ್. ಹರಿಲಾಲ್, ರೋಹ್ಟಕ್‌ನ ಎಂ.ಡಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ.ರಜಿಂದರ್ ಚೌಧರಿ, ಚಂಡೀಗಢದ ಸಿಆರ್‌ಆರ್‌ಐಡಿಯ ಪ್ರೊ.ಸುರಿಂದರ್ ಕುಮಾರ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇನ್ನೂ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ಮಾಲ್ಕಮ್ ಎಸ್. ಆದಿಶೇಶಿಯ ಚೇರ್ ಪ್ರೊಫೆಸರ್  ಪ್ರೊ.ಅರುಣ್ ಕುಮಾರ್, ಅಮೃತಸರದ ಗುರುನಾನಕ್ ದೇವ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಚಂಡೀಗಢದ CRRIDಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ.ರಂಜಿತ್ ಸಿಂಗ್ ಘುಮನ್, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ನಬಾರ್ಡ್ ಚೇರ್ ಪ್ರೊಫೆಸರ್ ಪ್ರೊ.ಆರ್.ರಾಮಕುಮಾರ್, ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕನಾಮಿಕ್ ಸ್ಟಡೀಸ್ ಅಂಡ್ ಪ್ಲಾನಿಂಗ್ (CESP) ಯಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವಿಕಾಸ್ ರಾವಲ್ ಮತ್ತು ಹಿಮಾಂಶು ಅರ್ಥಶಾಸ್ತ್ರಜ್ಞರು ಸಹಿ ಮಾಡಿ ಪತ್ರ ಬರೆದಿದ್ದಾರೆ.

ಈ ಹೊಸ ವಿವಾದಾತ್ಮಕ ಕಾನೂನುಗಳನ್ನು ತಿದ್ದುಪಡಿ ಮಾಡುವುದು ಸಾಕಾಗುವುದಿಲ್ಲ, ಅವುಗಳನ್ನು ಹಿಂತೆಗೆದುಕೊಳ್ಳಬೇಕು. ರೈತರ ನಿಜವಾದ ಕಾಳಜಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಚಿತ್ರಿಸಬಾರದು ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಯಾವ ಕ್ರಮಗಳು ರೈತರಿಗೆ ಮತ್ತು ಆರ್ಥಿಕತೆಗೆ ಸಮನಾದ ಮತ್ತು ಸುಸ್ಥಿರ ಲಾಭವನ್ನು ತರುತ್ತವೆ ಎಂಬುದರ ಕುರಿತು ರೈತ ಸಂಘಟನೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರ ವ್ಯಾಪಕವಾದ ಚರ್ಚೆ ನಡೆಸಬೇಕೆಂದು ಅರ್ಥಶಾಸ್ತ್ರಜ್ಞರು ಕರೆ ನೀಡುತ್ತಾರೆ. ಜೊತೆಗೆ  “ಇದು ನಿಜವಾದ ಪ್ರಜಾಪ್ರಭುತ್ವದ ಕೆಲಸ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...