Homeಚಳವಳಿಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಕೃಷಿ ಕಾಯ್ದೆ ಹಿಂತೆಗೆದುಕೊಳ್ಳಲು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದ ಖ್ಯಾತ ಅರ್ಥಶಾಸ್ತ್ರಜ್ಞರು

ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಪಟ್ಟು ಹಿಡಿದಿರುವ ರೈತರ ಪ್ರತಿಭಟನೆ ಮೂರು ವಾರಗಳನ್ನು ಪೂರ್ಣಗೊಳಿಸಿದೆ. ಅನ್ನದಾತರ ಹೋರಾಟಕ್ಕೆ ರಾಜಕೀಯ ಪಕ್ಷಗಳು, ದೇಶದಾದ್ಯಂತ ಹಲವು ಸಂಘಟನೆಗಳು ಕೈ ಜೋಡಿಸಿವೆ. ಈಗ ಈ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 10 ಹಿರಿಯ ಖ್ಯಾತ ಅರ್ಥಶಾಸ್ತ್ರಜ್ಞರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ಗೆ ಪತ್ರ ಬರೆದಿದ್ದಾರೆ.

ದೇಶದ ಸಣ್ಣ ಮತ್ತು ಅಂಚಿನಲ್ಲಿರುವ ಅತಿಸಣ್ಣ ರೈತರ ಹಿತಾಸಕ್ತಿಗಳಿಲ್ಲದ ಕಾರಣ ಈ ಕಾನೂನುಗಳನ್ನು ರದ್ದುಗೊಳಿಸಬೇಕಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದು, ಕೃಷಿ ಕಾನೂನುಗಳ ಏಕೆ ರದ್ದಾಗಬೇಕು ಎಂಬುದಕ್ಕೆ 5 ಕಾರಣಗಳನ್ನು ನೀಡಿದ್ದಾರೆ.

“ದೇಶದ ಸಣ್ಣ ಮತ್ತು ಅತಿಸಣ್ಣ ರೈತರ ಹಿತದೃಷ್ಟಿ ಹೊಂದಿಲ್ಲದ ಇತ್ತೀಚಿನ ಕೃಷಿ ಕಾಯ್ದೆಗಳನ್ನು ಭಾರತ ಸರ್ಕಾರ ರದ್ದುಪಡಿಸಬೇಕು ಎಂದು ನಾವು ಆಗ್ರಹಿಸುತ್ತೇವೆ. ಈ ಕಾಯ್ದೆಗಳ ಬಗ್ಗೆ ರೈತ ಸಂಘಟನೆಗಳು ಭಾರಿ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಕೃಷಿ ವ್ಯಾಪಾರೋದ್ಯಮವನ್ನು ಸುಧಾರಿಸುವ ಅವಶ್ಯಕತೆ ಇದೆ. ಆದರೆ, ಈ ಕಾನೂನುಗಳು ಆ ಉದ್ದೇಶವನ್ನು ಪೂರೈಸುವುದಿಲ್ಲ ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ’ಮೋದಿಯವರಂತೆ ಆಗಬೇಡಿ, ಮಾಸ್ಕ್ ಧರಿಸಿ’: ಮೋದಿ ವಿಡಿಯೋ ಟ್ರೋಲ್ ಮಾಡಿದ ಆಪ್

ಈ ವಿವಾದಾತ್ಮಕ ಕೃಷಿ ಕಾನೂನುಗಳು ಸಣ್ಣ ರೈತರಿಗೆ ಮೂಲಭೂತವಾಗಿ ಹಾನಿಕಾರಕವಾಗಿರುವುದಕ್ಕೆ ಐದು ಕಾರಣಗಳನ್ನು ಅರ್ಥಶಾಸ್ತ್ರಜ್ಞರು ಪಟ್ಟಿ ಮಾಡಿದ್ದಾರೆ.

೧. ಈ ಕಾನೂನುಗಳು, ರಾಜ್ಯ ಸರ್ಕಾರಗಳ ಪಾತ್ರವನ್ನು ದುರ್ಬಲಗೊಳಿಸುತ್ತವೆ. ಆದರೆ, ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಬೇಗ ಸ್ಪಂದಿಸಬಹುದು ಮತ್ತು ಜವಾಬ್ದಾರಿ ಹೊಂದಿರುತ್ತದೆ.

೨. ಈ ಕಾನೂನುಗಳು ಎರಡು ನಿಯಮಗಳೊಂದಿಗೆ ಎರಡು ಮಾರುಕಟ್ಟೆಗಳ ರಚನೆಗೆ ಕಾರಣವಾಗುತ್ತವೆ. “ಎಪಿಎಂಸಿ ಮಾರುಕಟ್ಟೆ ಪ್ರಾಂಗಣಗಳಲ್ಲಿ ನಿಯಂತ್ರಿತ ಮಾರುಕಟ್ಟೆ ಮತ್ತು ವ್ಯಾಪಾರ ಪ್ರದೇಶದಲ್ಲಿ ಅನಿಯಂತ್ರಿತ ಮಾರುಕಟ್ಟೆ ಸೃಷ್ಟಿಯಾಗುತ್ತದೆ. ಎರಡು ಕೂಡ ವಿಭಿನ್ನ ಕಾರ್ಯಗಳಿಗೆ, ಮಾರುಕಟ್ಟೆ ಶುಲ್ಕದ ವಿಭಿನ್ನ ನಿಯಮಗಳು ಮತ್ತು ವಿಭಿನ್ನ ಗುಂಪುಗಳ ನಿಯಮಗಳ ಸೃಷ್ಟಿ ಈ ಕಾನೂನುಗಳು ಕಾರಣವಾಗುತ್ತವೆ.

೩. ಕಾನೂನುಗಳು ಛಿದ್ರಗೊಂಡ ಮಾರುಕಟ್ಟೆಗಳನ್ನು ಸೃಷ್ಟಿಸುತ್ತವೆ. ಉದಾಹರಣೆಗೆ ಬಿಹಾರ ರಾಜ್ಯವನ್ನು ತೆಗೆದುಕೊಳ್ಳಬಹುದು. ಬಿಹಾರದಲ್ಲಿ 2006 ರಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗೆದುಹಾಕಲಾಯಿತು. ಇದರಿಂದಾಗಿ ಅಲ್ಲಿ ರೈತರಿಗೆ ಕಡಿಮೆ ಖರೀದಿದಾರರು ಇದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ಬೆಳೆಗಳ ಬೆಲೆಗಳು ಗಮನಾರ್ಹವಾಗಿ ಕಡಿಮೆಯಾಗಿವೆ.

ಇದನ್ನೂ ಓದಿ: ರೈತರ ಹೋರಾಟ ಮುಂದುವರೆಯಲಿ. ಪ್ರತಿಭಟಿಸುವುದು ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್

PC : APN Live

೪. ಕೃಷಿಯ ಒಪ್ಪಂದದ ಕಾನೂನಿನ ಪ್ರಕಾರ ಮಾರುಕಟ್ಟೆ ಅಸಮಾನತೆ ಇರುವ ಇಬ್ಬರು ವ್ಯವಹಾರ ನಡೆಸುವಂತಾಗುತ್ತದೆ. ಕಾರ್ಪೊರೇಟರ್‌ ಕಂಪನಿಗಳು ಬರುತ್ತವೆ. ಇವರಿಂದ ರೈತರ ಹಿತಾಸಕ್ತಿಗಳನ್ನು ರಕ್ಷಿಸಲಾಗುವುದಿಲ್ಲ.

೫. ಅಂತಿಮವಾಗಿ, ಈ ಕಾನೂನುಗಳು ದೊಡ್ಡ ಕೃಷಿ ವ್ಯವಹಾರಗಳು ಕೃಷಿಯಲ್ಲಿ ಪ್ರಾಬಲ್ಯದ ಸಾಧಿಸುವ ಬಗ್ಗೆ ಕಳವಳ ಮೂಡಿಸುತ್ತವೆ. ಇಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಹಿತಾಸಕ್ತಿಯನ್ನು ಬಲಿಕೊಡಬೇಕಾಗುತ್ತದೆ.

ಇದನ್ನೂ ಓದಿ: ಡಾ. ಕಫೀಲ್ ಖಾನ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ: ಯುಪಿ ಸರ್ಕಾರಕ್ಕೆ ಮುಖಭಂಗ

ಹೈದರಾಬಾದ್ ವಿಶ್ವವಿದ್ಯಾಲಯದ ನಿವೃತ್ತ ಪ್ರೊ.ಡಿ.ನರಸಿಂಹ ರೆಡ್ಡಿ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊ.ಕಮಲ್ ನಯನ್ ಕಬ್ರಾ,  ತಿರುವನಂತಪುರಂನ ಅಭಿವೃದ್ಧಿ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಮತ್ತು ಕೇರಳ ರಾಜ್ಯ ಯೋಜನಾ ಮಂಡಳಿಯ ಸದಸ್ಯರಾದ ಪ್ರೊ.ಕೆ.ಎನ್. ಹರಿಲಾಲ್, ರೋಹ್ಟಕ್‌ನ ಎಂ.ಡಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಪ್ರೊ.ರಜಿಂದರ್ ಚೌಧರಿ, ಚಂಡೀಗಢದ ಸಿಆರ್‌ಆರ್‌ಐಡಿಯ ಪ್ರೊ.ಸುರಿಂದರ್ ಕುಮಾರ್ ಪತ್ರಕ್ಕೆ ಸಹಿ ಮಾಡಿದ್ದಾರೆ.

ಇನ್ನೂ, ನವದೆಹಲಿಯ ಸಾಮಾಜಿಕ ವಿಜ್ಞಾನ ಸಂಸ್ಥೆಯ ಮಾಲ್ಕಮ್ ಎಸ್. ಆದಿಶೇಶಿಯ ಚೇರ್ ಪ್ರೊಫೆಸರ್  ಪ್ರೊ.ಅರುಣ್ ಕುಮಾರ್, ಅಮೃತಸರದ ಗುರುನಾನಕ್ ದೇವ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಚಂಡೀಗಢದ CRRIDಯಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕ ಪ್ರೊ.ರಂಜಿತ್ ಸಿಂಗ್ ಘುಮನ್, ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ನಬಾರ್ಡ್ ಚೇರ್ ಪ್ರೊಫೆಸರ್ ಪ್ರೊ.ಆರ್.ರಾಮಕುಮಾರ್, ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸೆಂಟರ್ ಫಾರ್ ಎಕನಾಮಿಕ್ ಸ್ಟಡೀಸ್ ಅಂಡ್ ಪ್ಲಾನಿಂಗ್ (CESP) ಯಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ವಿಕಾಸ್ ರಾವಲ್ ಮತ್ತು ಹಿಮಾಂಶು ಅರ್ಥಶಾಸ್ತ್ರಜ್ಞರು ಸಹಿ ಮಾಡಿ ಪತ್ರ ಬರೆದಿದ್ದಾರೆ.

ಈ ಹೊಸ ವಿವಾದಾತ್ಮಕ ಕಾನೂನುಗಳನ್ನು ತಿದ್ದುಪಡಿ ಮಾಡುವುದು ಸಾಕಾಗುವುದಿಲ್ಲ, ಅವುಗಳನ್ನು ಹಿಂತೆಗೆದುಕೊಳ್ಳಬೇಕು. ರೈತರ ನಿಜವಾದ ಕಾಳಜಿಯನ್ನು ದಾರಿ ತಪ್ಪಿಸಲಾಗಿದೆ ಎಂದು ಚಿತ್ರಿಸಬಾರದು ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಾರೆ.

ಯಾವ ಕ್ರಮಗಳು ರೈತರಿಗೆ ಮತ್ತು ಆರ್ಥಿಕತೆಗೆ ಸಮನಾದ ಮತ್ತು ಸುಸ್ಥಿರ ಲಾಭವನ್ನು ತರುತ್ತವೆ ಎಂಬುದರ ಕುರಿತು ರೈತ ಸಂಘಟನೆಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸರ್ಕಾರ ವ್ಯಾಪಕವಾದ ಚರ್ಚೆ ನಡೆಸಬೇಕೆಂದು ಅರ್ಥಶಾಸ್ತ್ರಜ್ಞರು ಕರೆ ನೀಡುತ್ತಾರೆ. ಜೊತೆಗೆ  “ಇದು ನಿಜವಾದ ಪ್ರಜಾಪ್ರಭುತ್ವದ ಕೆಲಸ” ಎಂದು ಪತ್ರದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...