Homeಮುಖಪುಟಶೇ. 7.7 ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ಅಂದಾಜು: ತೀವ್ರವಾಗಿ ಕುಸಿಯಲಿರುವ 2020-21ರ ಆರ್ಥಿಕತೆ

ಶೇ. 7.7 ಪ್ರಮಾಣದಲ್ಲಿ ಸಂಕುಚಿತಗೊಳ್ಳುವ ಅಂದಾಜು: ತೀವ್ರವಾಗಿ ಕುಸಿಯಲಿರುವ 2020-21ರ ಆರ್ಥಿಕತೆ

ನಿರ್ಮಾಣ, ಉತ್ಪಾದನೆ, ಗಣಿಗಾರಿಕೆ ಮತ್ತು ಸೇವಾ ಉದ್ಯಮಗಳು ಹೆಚ್ಚು ಹಾನಿಗೊಳಗಾಗಲಿವೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿದ ಮೊದಲ ಮುಂಗಡ ಜಿಡಿಪಿ ಅಂದಾಜು ಹೇಳಿದೆ.

- Advertisement -
- Advertisement -

2020-21ರಲ್ಲಿ ಭಾರತದ ಆರ್ಥಿಕತೆಯು ತನ್ನ ಅತ್ಯಂತ ಕೆಟ್ಟ ಕುಸಿತವನ್ನು ಕಾಣಲಿದ್ದು, ಶೇ 7.7 ಪ್ರಮಾಣದಲ್ಲಿ ಆರ್ಥಿಕತೆ ಸಂಕುಚಿತಗೊಳ್ಳಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ತಿಳಿಸಿದೆ. (ಸಂಕುಚಿತಗೊಳ್ಳುವಿಕೆ ಋಣಾತ್ಮಕ ಬೆಳವಣಿಗೆ ಸೂಚಿಸುತ್ತದೆ. ಗ್ರಾಫ್ ಗಮನಿಸಿ.)

ಭಾರತದ ಆರ್ಥಿಕ ಬೆಳವಣಿಗೆಯು 2019-20ರಲ್ಲಿ ಶೇ. 4.2 ಪ್ರಮಾಣದಲ್ಲಿತ್ತು. ಆರ್ಥಿಕ ವರ್ಷದ ಮೊದಲರ್ಧ ಭಾಗದಲ್ಲಿ ಹಲವು ಹಣಕಾಸು ಸಂಸ್ಥೆಗಳು ಮತ್ತು ರೇಟಿಂಗ್ ಏಜೆನ್ಸಿಗಳು, ಭಾರತದ ಆರ್ಥಿಕತೆ ಎರಡಂಕಿ ಪ್ರಮಾಣದಲ್ಲಿ ಸಂಕುಚಿತಗೊಳ್ಳಬಹುದು ಎಂದು ಅಂದಾಜಿಸಿದ್ದವು. ಆದರೆ ಎನ್‌ಎಸ್‌ಒ ಈಗ ಬಿಡುಗಡೆ ಮಾಡಿರುವ ಮೊದಲ ಮುಂಗಡ ಅಂದಾಜು ಕೇವಲ ಒಂದಂಕಿ ಸಂಕುಚಿತತೆ (ಶೇ.7.7) ಎಂದು ಸೂಚಿಸಿದೆ. ಆದರೂ ಇದು ದೇಶದ ಅತಿ ಕೆಟ್ಟ ಆರ್ಥಿಕ ಕುಸಿತ ಎನ್ನಲಾಗಿದೆ.

ಮೊದಲಿಗೆ ಆರ್ಥಿಕ ವೃದ್ಧಿ ದರವನ್ನು ಶೇಕಡಾ -9.5  (ಮೈನಸ್ 9.5%) ಎಂದು ಅಂದಾಜಿಸಿದ್ದ ಆರ್‌ಬಿಐ, ಡಿಸೆಂಬರ್‌ನಲ್ಲಿ ಅದನ್ನು ಶೇಕಡಾ -7.5 ಎಂದು ಅಂದಾಜಿಸಿದೆ.

2020-21ರಲ್ಲಿ ಕೃಷಿಯು ಶೇ. 3.4 ದರದ ಬೆಳವಣಿಗೆ ಕಾಣುವ ಅಂದಾಜಿದೆ. ನಿರ್ಮಾಣ ಮತ್ತು ಗಣಿಗಾರಿಕೆಗಳು ಕ್ರಮವಾಗಿ ಶೇ. 9.4 ಮತ್ತು ಶೇ. 12.4 ಪ್ರಮಾಣದಲ್ಲಿ ಸಂಕುಚಿತಗೊಳ್ಳಲಿವೆ, ಅಂದರೆ ಎರಡೂ ಖಣಾತ್ಮಕ ಬೆಳವಣಿಗೆ ಕಾಣಲಿವೆ.

ವ್ಯಾಪಾರ, ಹೋಟೆಲ್ ಸಾರಿಗೆ ಮತ್ತು ಕಮ್ಯುನಿಕೇಷನ್ ಕ್ಷೇತ್ರಗಳು ಅತಿ ಹೆಚ್ಚು ಪ್ರಮಾಣದ ಸಂಕುಚಿತತೆಗೆ (ಶೇ.21.4) ಒಳಗಾಗಲಿದ್ದರೆ, ನಂತರದಲ್ಲಿರುವ ನಿರ್ಮಾಣ ಕ್ಷೇತ್ರವು ಶೇ. 12.6 ರ ಪ್ರಮಾಣದ ಕುಸಿತ ಕಾಣಲಿದೆ.

ನಾಮಿನಲ್ ಜಿಡಿಪಿಯು ಶೇ. 4.2 ದರದಲ್ಲಿ ಸಂಕುಚಿತಗೊಂಡು, 194.82 ಲಕ್ಷ ಕೋಟಿ ರೂ.ಗಳಾಗಲಿದೆ. ವಾಸ್ತವ ಬೆಳವಣಿಗೆ ಜೊತೆಗೆ ಬೆಲೆಯೇರಿಕೆ ಅಂಶವನ್ನೂ ನಾಮಿನಲ್ ಜಿಡಿಪಿ ಒಳಗೊಂಡಿದೆ.

ಸರ್ಕಾರ ಬಜೆಟ್ ಪ್ರಕ್ರಿಯೆ ನಡೆಸಲು ಅನುಕೂಲವಾಗಲೆಂದು ಎನ್‌ಎಸ್‌ಒ ಈ ಅಂದಾಜನ್ನು ಪ್ರಕಟಿಸುತ್ತದೆ.
‘ಜಿಡಿಪಿ ಅಂದಾಜು ಮೂರನೆ ಮತ್ತು ನಾಲ್ಕನೆ ತ್ರೈಮಾಸಿಕದಲ್ಲಿ ಆರ್ಥಿಕತೆಯ ಚೇತರಿಕೆಯನ್ನು ಸೂಚಿಸುತ್ತದೆ’ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ಕಾರಣಕ್ಕೆ ಎರಡು ತಿಂಗಳು ಆರ್ಥಿಕ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡ ಕಾರಣಕ್ಕೆ ಈ ಹಣಕಾಸು ವರ್ಷವು ಭಾರತಕ್ಕೆ ಸವಾಲಿನ ವರ್ಷವಾಗಿದೆ.

ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಆರ್ಥಿಕತೆ ಶೇ. 23.9 ಕುಸಿತವನ್ನು ಕಂಡಿತ್ತು. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ. 7.5 ಸಂಕುಚಿತತೆ ಕಂಡಿತ್ತು. ಎನ್‌ಎಸ್‌ಒ ಅಂಕಿಅಂಶದ ಪ್ರಕಾರ ರಫ್ತು ಮತ್ತು ಆಮದುಗಳಲ್ಲೂ ಕುಸಿತ ಸಂಭವಿಸಲಿದೆ.


ಇದನ್ನೂ ಓದಿ: ರಫ್ತಿನಲ್ಲಿ ಶೇ.0.8 ಕುಸಿತ: 15.71 ಬಿಲಿಯನ್ ಡಾಲರ್‌ಗೇರಿದ‌ ಭಾರತದ ವ್ಯಾಪಾರ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...