Homeಮುಖಪುಟಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) “ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ” ಎಂದು ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಎಚ್ಚರಿಸಿದ್ದಾರೆ. ಅಲ್ಲದೆ, ಈ ಕೂಡಲೇ ಆ ಹೊಸ ವಿಭಾಗವನ್ನು ಹಿಂಪಡೆಯಬೇಕು ಎಂದು ಅವರು ಆಯೋಗವನ್ನು ಒತ್ತಾಯಿಸಿದ್ದಾರೆ.

ಹೊಸ ಮತದಾರರು ಫಾರ್ಮ್ 6 ಅನ್ನು ಬಳಸಿಕೊಂಡು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಇದರ ಆನ್‌ಲೈನ್ ಆವೃತ್ತಿಯಲ್ಲಿ ಈಗ ಅರ್ಜಿದಾರರು ತಮ್ಮ, ತಮ್ಮ ಪೋಷಕರ ಅಥವಾ ಅಜ್ಜ-ಅಜ್ಜಿಯರ ಹೆಸರುಗಳು ಕೊನೆಯ ಎಸ್‌ಐಆರ್ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಯಲ್ಲಿ ಇವೆಯೇ ಎಂದು ಘೋಷಿಸಲು ಕೋರಲಾಗುತ್ತಿದೆ. ಆದರೆ, ಇದೇ ಫಾರ್ಮ್‌ನ ಡೌನ್‌ಲೋಡ್ ಮಾಡಬಹುದಾದ (ಪಿಡಿಎಫ್) ಆವೃತ್ತಿಯಲ್ಲಿ ಈ ಮಾಹಿತಿಯನ್ನು ಕೇಳಲಾಗಿಲ್ಲ.

ಸಾಮಾನ್ಯವಾಗಿ ಫಾರ್ಮ್ 6 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲು 1950ರ ಜನಪ್ರತಿನಿಧಿ ಕಾಯ್ದೆ ಅಥವಾ ಅದಕ್ಕೆ ಸಂಬಂಧಿಸಿದ ನಿಯಮಗಳಿಗೆ ಸಂಸತ್ತಿನ ತಿದ್ದುಪಡಿಯ ಅಗತ್ಯವಿರುತ್ತದೆ. ಆದರೆ, ಈ ಎಸ್‌ಐಆರ್ ಘೋಷಣೆಯ ಸೇರ್ಪಡೆಯನ್ನು ಬೆಂಬಲಿಸಲು ಅಂತಹ ಯಾವುದೇ ತಿದ್ದುಪಡಿಯನ್ನು ಮಾಡಲಾಗಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ದಾಮಿನಿ ನಾಥ್ ಭಾನುವಾರ ವರದಿ ಮಾಡಿದ್ದರು.

“ಒಂದು ವೇಳೆ ಪರಿಸ್ಥಿತಿ ನಿಜಕ್ಕೂ ಹೀಗಿದ್ದರೆ (ಮೇಲೆ ಹೇಳಿದಂತೆ), ಆಯೋಗವು ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ” ಎಂದು ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದ ಬ್ರಿಟ್ಟಾಸ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಸೋಮವಾರ (ಜುಲೈ 13) ಬರೆದ ಪತ್ರದಲ್ಲಿ ತಿಳಿಸಿದ್ದು, ಈ ಬೆಳವಣಿಗೆಯ ಕುರಿತು ತಮ್ಮ “ತೀವ್ರ ಕಳಕಳಿ”ಯನ್ನು ವ್ಯಕ್ತಪಡಿಸಿದ್ದಾರೆ.

ಸಂವಿಧಾನದ 324 ನೇ ವಿಧಿಯು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಮತ್ತು ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗಕ್ಕೆ ವ್ಯಾಪಕವಾದ ಅಧಿಕಾರಗಳನ್ನು ನೀಡುತ್ತದೆ. ಆದರೆ ಅದನ್ನು “ಶಾಸನಬದ್ಧ ನಿಯಮಗಳನ್ನು ಮರುಬರೆಯಲು ಅಥವಾ ಸಂಸತ್ತು ಸ್ಪಷ್ಟವಾಗಿ ಬೇರೆಡೆಗೆ ವಹಿಸಿರುವ ಅಧಿಕಾರಗಳನ್ನು ತಾನೇ ವಹಿಸಿಕೊಳ್ಳಲು ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಬ್ರಿಟ್ಟಾಸ್ ವಾದಿಸಿದ್ದಾರೆ. ಯಾವುದೇ ತಿದ್ದುಪಡಿ ಇಲ್ಲದೆ ಈ ಹೊಸ ಘೋಷಣೆಯನ್ನು ಜಾರಿಗೆ ತಂದಿರುವುದನ್ನು ಮತ್ತು ಇದು ಇಲ್ಲದೆ ಆನ್‌ಲೈನ್ ಅರ್ಜಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದಿರುವುದನ್ನು ಅವರು “ಸಂಪೂರ್ಣವಾಗಿ ಕಾನೂನು ಬಾಹಿರ” ಎಂದು ಕರೆದಿದ್ದಾರೆ.

ಫಾರ್ಮ್ 6 ರ ಆಫ್‌ಲೈನ್ ಆವೃತ್ತಿಯಲ್ಲಿ ಎಸ್‌ಐಆರ್ ಘೋಷಣೆ ಇಲ್ಲದಿರುವುದನ್ನು ಉಲ್ಲೇಖಿಸಿದ ಬ್ರಿಟ್ಟಾಸ್, “ಒಬ್ಬರು ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಆರಿಸಿಕೊಂಡರೆ ಮತ್ತು ಇನ್ನೊಬ್ಬರು ಭೌತಿಕವಾಗಿ ಅರ್ಜಿ ಸಲ್ಲಿಸುತ್ತಾರೆ ಎಂಬ ಕಾರಣಕ್ಕಾಗಿ ಒಂದೇ ಪರಿಸ್ಥಿತಿಯಲ್ಲಿರುವ ನಾಗರಿಕರನ್ನು ವಿಭಿನ್ನ ಕಾನೂನು ಕಟ್ಟುಪಾಡುಗಳಿಗೆ ಒಳಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಇದು ಕಾನೂನಿನ ಮುಂದೆ ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

“ಲಕ್ಷಾಂತರ ಹೊಸ ಮತದಾರರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು, ದತ್ತು ಪಡೆದ ಮಕ್ಕಳು, ಅನಾಥರು, ತಮ್ಮ ಕುಟುಂಬಗಳಿಂದ ದೂರಾದವರು ಮತ್ತು ಕಳೆದ ಹಲವು ದಶಕಗಳಲ್ಲಿ ಪೋಷಕರು ಅಥವಾ ಅಜ್ಜ-ಅಜ್ಜಿಯರು ಬೇರೆ ಕ್ಷೇತ್ರಗಳಿಗೆ ವಲಸೆ ಹೋಗಿರುವ ನಾಗರಿಕರು ತಮ್ಮ ಹಳೆಯ ಚುನಾವಣಾ ವಿವರಗಳನ್ನು ಒದಗಿಸಲು ಯಾವುದೇ ಪ್ರಾಯೋಗಿಕ ಮಾರ್ಗಗಳನ್ನು ಹೊಂದಿಲ್ಲದಿರಬಹುದು” ಎಂದು ಬರೆದಿರುವ ಬ್ರಿಟ್ಟಾಸ್, 2002-03 ರ ಎಸ್‌ಐಆರ್‌ಗಳ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಗಳು ಸುಲಭವಾಗಿ ಲಭ್ಯವಿಲ್ಲದಿರಬಹುದು ಎಂಬುದನ್ನು ಸಹ ನೆನಪಿಸಿದ್ದಾರೆ.

ಎಸ್‌ಐಆರ್ ವಿಭಾಗವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿರುವ ಬ್ರಿಟ್ಟಾಸ್ ಅವರು, “ಈ ಅನಧಿಕೃತ ಘೋಷಣೆ” ಇಲ್ಲ ಎಂಬ ಒಂದೇ ಕಾರಣಕ್ಕಾಗಿ ಯಾವುದೇ ಅರ್ಜಿಗಳನ್ನು ತಿರಸ್ಕರಿಸದಂತೆ, ಬಾಕಿ ಉಳಿಸಿಕೊಳ್ಳದಂತೆ ಅಥವಾ ಅಪೂರ್ಣ ಎಂದು ಗುರುತಿಸದಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

“ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಘೋಷಣೆ ಅಗತ್ಯ ಎಂದು ಆಯೋಗವು ಭಾವಿಸಿದರೆ, ಅದಕ್ಕೆ ಸರಿಯಾದ ಸಾಂವಿಧಾನಿಕ ಮಾರ್ಗವೆಂದರೆ 1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 28ರ ಅನ್ವಯ, ಸಮರ್ಥ ಪ್ರಾಧಿಕಾರದ ಮೂಲಕ 1960ರ ಮತದಾರರ ನೋಂದಣಿ ನಿಯಮಗಳಿಗೆ ತಿದ್ದುಪಡಿ ಮಾಡಲು ಶಿಫಾರಸು ಮಾಡುವುದಾಗಿದೆ” ಎಂದು ಅವರು ಬೆಟ್ಟು ಮಾಡಿದ್ದಾರೆ.

ಹೆಸರು ಹೇಳಲಿಚ್ಛಿಸದ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಭಾನುವಾರ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಆಯೋಗವು ಈ ಎಸ್‌ಐಆರ್ ಘೋಷಣೆಯನ್ನು ಕೇವಲ ‘ಸೂಚನೆಗಳ ಮೂಲಕ’ ಸೇರಿಸಿದೆಯೇ ಹೊರತು, ಫಾರ್ಮ್ 6 ಅನ್ನು ಯಾವುದೇ ರೀತಿಯಲ್ಲಿ ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದ್ದಾರೆ. “ಇದು ಮತದಾರರ ಮ್ಯಾಪಿಂಗ್ ಮಾಡಲು ಸಹಾಯ ಮಾಡುತ್ತದೆ ಮತ್ತು ಹೊಸ ಮತದಾರರು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ಹೊರೆಯನ್ನು ಕಡಿಮೆ ಮಾಡುತ್ತದೆ” ಎಂದು ಆ ಅಧಿಕಾರಿಯ ಹೇಳಿಕೆಯನ್ನು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಚುನಾವಣಾ ಆಯೋಗವು ಎಸ್‌ಐಆರ್ ನಡೆಸುತ್ತಿರುವ ವಿಧಾನವು ಈಗಾಗಲೇ ತೀವ್ರ ವಿವಾದಕ್ಕೆ ಈಡಾಗಿರುವ ಬೆನ್ನಲ್ಲೇ, ಈ ಹೊಸ ಘೋಷಣೆಯ ಸೇರ್ಪಡೆ ಬಂದಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ, ನೋಂದಣಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತು ತೀರ್ಪು ನೀಡಬೇಕಾಗಿದ್ದ ನ್ಯಾಯಮಂಡಳಿಗಳಿಗೆ ಸಾಕಷ್ಟು ಸಮಯ ನೀಡದ ಕಾರಣಕ್ಕಾಗಿ, ಕಳೆದ ಏಪ್ರಿಲ್‌ನ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 27 ಲಕ್ಷ ಮತದಾರರು ಮತ ಚಲಾಯಿಸಲು ಸಾಧ್ಯವಾಗದ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...