Homeಮುಖಪುಟಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) “ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ” ಎಂದು ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಎಚ್ಚರಿಸಿದ್ದಾರೆ. ಅಲ್ಲದೆ, ಈ ಕೂಡಲೇ ಆ ಹೊಸ ವಿಭಾಗವನ್ನು ಹಿಂಪಡೆಯಬೇಕು ಎಂದು ಅವರು ಆಯೋಗವನ್ನು ಒತ್ತಾಯಿಸಿದ್ದಾರೆ.

ಹೊಸ ಮತದಾರರು ಫಾರ್ಮ್ 6 ಅನ್ನು ಬಳಸಿಕೊಂಡು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಇದರ ಆನ್‌ಲೈನ್ ಆವೃತ್ತಿಯಲ್ಲಿ ಈಗ ಅರ್ಜಿದಾರರು ತಮ್ಮ, ತಮ್ಮ ಪೋಷಕರ ಅಥವಾ ಅಜ್ಜ-ಅಜ್ಜಿಯರ ಹೆಸರುಗಳು ಕೊನೆಯ ಎಸ್‌ಐಆರ್ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಯಲ್ಲಿ ಇವೆಯೇ ಎಂದು ಘೋಷಿಸಲು ಕೋರಲಾಗುತ್ತಿದೆ. ಆದರೆ, ಇದೇ ಫಾರ್ಮ್‌ನ ಡೌನ್‌ಲೋಡ್ ಮಾಡಬಹುದಾದ (ಪಿಡಿಎಫ್) ಆವೃತ್ತಿಯಲ್ಲಿ ಈ ಮಾಹಿತಿಯನ್ನು ಕೇಳಲಾಗಿಲ್ಲ.

ಸಾಮಾನ್ಯವಾಗಿ ಫಾರ್ಮ್ 6 ರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲು 1950ರ ಜನಪ್ರತಿನಿಧಿ ಕಾಯ್ದೆ ಅಥವಾ ಅದಕ್ಕೆ ಸಂಬಂಧಿಸಿದ ನಿಯಮಗಳಿಗೆ ಸಂಸತ್ತಿನ ತಿದ್ದುಪಡಿಯ ಅಗತ್ಯವಿರುತ್ತದೆ. ಆದರೆ, ಈ ಎಸ್‌ಐಆರ್ ಘೋಷಣೆಯ ಸೇರ್ಪಡೆಯನ್ನು ಬೆಂಬಲಿಸಲು ಅಂತಹ ಯಾವುದೇ ತಿದ್ದುಪಡಿಯನ್ನು ಮಾಡಲಾಗಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ನ ದಾಮಿನಿ ನಾಥ್ ಭಾನುವಾರ ವರದಿ ಮಾಡಿದ್ದರು.

“ಒಂದು ವೇಳೆ ಪರಿಸ್ಥಿತಿ ನಿಜಕ್ಕೂ ಹೀಗಿದ್ದರೆ (ಮೇಲೆ ಹೇಳಿದಂತೆ), ಆಯೋಗವು ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ” ಎಂದು ಕೇರಳದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದ ಬ್ರಿಟ್ಟಾಸ್ ಅವರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಸೋಮವಾರ (ಜುಲೈ 13) ಬರೆದ ಪತ್ರದಲ್ಲಿ ತಿಳಿಸಿದ್ದು, ಈ ಬೆಳವಣಿಗೆಯ ಕುರಿತು ತಮ್ಮ “ತೀವ್ರ ಕಳಕಳಿ”ಯನ್ನು ವ್ಯಕ್ತಪಡಿಸಿದ್ದಾರೆ.

ಸಂವಿಧಾನದ 324 ನೇ ವಿಧಿಯು ಮತದಾರರ ಪಟ್ಟಿಗಳನ್ನು ಸಿದ್ಧಪಡಿಸಲು ಮತ್ತು ಚುನಾವಣೆಗಳನ್ನು ನಡೆಸಲು ಚುನಾವಣಾ ಆಯೋಗಕ್ಕೆ ವ್ಯಾಪಕವಾದ ಅಧಿಕಾರಗಳನ್ನು ನೀಡುತ್ತದೆ. ಆದರೆ ಅದನ್ನು “ಶಾಸನಬದ್ಧ ನಿಯಮಗಳನ್ನು ಮರುಬರೆಯಲು ಅಥವಾ ಸಂಸತ್ತು ಸ್ಪಷ್ಟವಾಗಿ ಬೇರೆಡೆಗೆ ವಹಿಸಿರುವ ಅಧಿಕಾರಗಳನ್ನು ತಾನೇ ವಹಿಸಿಕೊಳ್ಳಲು ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಬ್ರಿಟ್ಟಾಸ್ ವಾದಿಸಿದ್ದಾರೆ. ಯಾವುದೇ ತಿದ್ದುಪಡಿ ಇಲ್ಲದೆ ಈ ಹೊಸ ಘೋಷಣೆಯನ್ನು ಜಾರಿಗೆ ತಂದಿರುವುದನ್ನು ಮತ್ತು ಇದು ಇಲ್ಲದೆ ಆನ್‌ಲೈನ್ ಅರ್ಜಿಯನ್ನು ಪೂರ್ಣಗೊಳಿಸಲು ಸಾಧ್ಯವಾಗದಿರುವುದನ್ನು ಅವರು “ಸಂಪೂರ್ಣವಾಗಿ ಕಾನೂನು ಬಾಹಿರ” ಎಂದು ಕರೆದಿದ್ದಾರೆ.

ಫಾರ್ಮ್ 6 ರ ಆಫ್‌ಲೈನ್ ಆವೃತ್ತಿಯಲ್ಲಿ ಎಸ್‌ಐಆರ್ ಘೋಷಣೆ ಇಲ್ಲದಿರುವುದನ್ನು ಉಲ್ಲೇಖಿಸಿದ ಬ್ರಿಟ್ಟಾಸ್, “ಒಬ್ಬರು ಡಿಜಿಟಲ್ ಪ್ಲಾಟ್‌ಫಾರ್ಮ್ ಅನ್ನು ಆರಿಸಿಕೊಂಡರೆ ಮತ್ತು ಇನ್ನೊಬ್ಬರು ಭೌತಿಕವಾಗಿ ಅರ್ಜಿ ಸಲ್ಲಿಸುತ್ತಾರೆ ಎಂಬ ಕಾರಣಕ್ಕಾಗಿ ಒಂದೇ ಪರಿಸ್ಥಿತಿಯಲ್ಲಿರುವ ನಾಗರಿಕರನ್ನು ವಿಭಿನ್ನ ಕಾನೂನು ಕಟ್ಟುಪಾಡುಗಳಿಗೆ ಒಳಪಡಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಇದು ಕಾನೂನಿನ ಮುಂದೆ ಸಮಾನತೆಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತದೆ ಎಂದಿದ್ದಾರೆ.

“ಲಕ್ಷಾಂತರ ಹೊಸ ಮತದಾರರು, ವಿದ್ಯಾರ್ಥಿಗಳು, ವಲಸೆ ಕಾರ್ಮಿಕರು, ಆಂತರಿಕವಾಗಿ ಸ್ಥಳಾಂತರಗೊಂಡ ವ್ಯಕ್ತಿಗಳು, ದತ್ತು ಪಡೆದ ಮಕ್ಕಳು, ಅನಾಥರು, ತಮ್ಮ ಕುಟುಂಬಗಳಿಂದ ದೂರಾದವರು ಮತ್ತು ಕಳೆದ ಹಲವು ದಶಕಗಳಲ್ಲಿ ಪೋಷಕರು ಅಥವಾ ಅಜ್ಜ-ಅಜ್ಜಿಯರು ಬೇರೆ ಕ್ಷೇತ್ರಗಳಿಗೆ ವಲಸೆ ಹೋಗಿರುವ ನಾಗರಿಕರು ತಮ್ಮ ಹಳೆಯ ಚುನಾವಣಾ ವಿವರಗಳನ್ನು ಒದಗಿಸಲು ಯಾವುದೇ ಪ್ರಾಯೋಗಿಕ ಮಾರ್ಗಗಳನ್ನು ಹೊಂದಿಲ್ಲದಿರಬಹುದು” ಎಂದು ಬರೆದಿರುವ ಬ್ರಿಟ್ಟಾಸ್, 2002-03 ರ ಎಸ್‌ಐಆರ್‌ಗಳ ನಂತರ ಸಿದ್ಧಪಡಿಸಲಾದ ಮತದಾರರ ಪಟ್ಟಿಗಳು ಸುಲಭವಾಗಿ ಲಭ್ಯವಿಲ್ಲದಿರಬಹುದು ಎಂಬುದನ್ನು ಸಹ ನೆನಪಿಸಿದ್ದಾರೆ.

ಎಸ್‌ಐಆರ್ ವಿಭಾಗವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿರುವ ಬ್ರಿಟ್ಟಾಸ್ ಅವರು, “ಈ ಅನಧಿಕೃತ ಘೋಷಣೆ” ಇಲ್ಲ ಎಂಬ ಒಂದೇ ಕಾರಣಕ್ಕಾಗಿ ಯಾವುದೇ ಅರ್ಜಿಗಳನ್ನು ತಿರಸ್ಕರಿಸದಂತೆ, ಬಾಕಿ ಉಳಿಸಿಕೊಳ್ಳದಂತೆ ಅಥವಾ ಅಪೂರ್ಣ ಎಂದು ಗುರುತಿಸದಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

“ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಘೋಷಣೆ ಅಗತ್ಯ ಎಂದು ಆಯೋಗವು ಭಾವಿಸಿದರೆ, ಅದಕ್ಕೆ ಸರಿಯಾದ ಸಾಂವಿಧಾನಿಕ ಮಾರ್ಗವೆಂದರೆ 1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 28ರ ಅನ್ವಯ, ಸಮರ್ಥ ಪ್ರಾಧಿಕಾರದ ಮೂಲಕ 1960ರ ಮತದಾರರ ನೋಂದಣಿ ನಿಯಮಗಳಿಗೆ ತಿದ್ದುಪಡಿ ಮಾಡಲು ಶಿಫಾರಸು ಮಾಡುವುದಾಗಿದೆ” ಎಂದು ಅವರು ಬೆಟ್ಟು ಮಾಡಿದ್ದಾರೆ.

ಹೆಸರು ಹೇಳಲಿಚ್ಛಿಸದ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಭಾನುವಾರ ಪಿಟಿಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಆಯೋಗವು ಈ ಎಸ್‌ಐಆರ್ ಘೋಷಣೆಯನ್ನು ಕೇವಲ ‘ಸೂಚನೆಗಳ ಮೂಲಕ’ ಸೇರಿಸಿದೆಯೇ ಹೊರತು, ಫಾರ್ಮ್ 6 ಅನ್ನು ಯಾವುದೇ ರೀತಿಯಲ್ಲಿ ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದ್ದಾರೆ. “ಇದು ಮತದಾರರ ಮ್ಯಾಪಿಂಗ್ ಮಾಡಲು ಸಹಾಯ ಮಾಡುತ್ತದೆ ಮತ್ತು ಹೊಸ ಮತದಾರರು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ಹೊರೆಯನ್ನು ಕಡಿಮೆ ಮಾಡುತ್ತದೆ” ಎಂದು ಆ ಅಧಿಕಾರಿಯ ಹೇಳಿಕೆಯನ್ನು ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಚುನಾವಣಾ ಆಯೋಗವು ಎಸ್‌ಐಆರ್ ನಡೆಸುತ್ತಿರುವ ವಿಧಾನವು ಈಗಾಗಲೇ ತೀವ್ರ ವಿವಾದಕ್ಕೆ ಈಡಾಗಿರುವ ಬೆನ್ನಲ್ಲೇ, ಈ ಹೊಸ ಘೋಷಣೆಯ ಸೇರ್ಪಡೆ ಬಂದಿದೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ, ನೋಂದಣಿಗಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳ ಕುರಿತು ತೀರ್ಪು ನೀಡಬೇಕಾಗಿದ್ದ ನ್ಯಾಯಮಂಡಳಿಗಳಿಗೆ ಸಾಕಷ್ಟು ಸಮಯ ನೀಡದ ಕಾರಣಕ್ಕಾಗಿ, ಕಳೆದ ಏಪ್ರಿಲ್‌ನ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 27 ಲಕ್ಷ ಮತದಾರರು ಮತ ಚಲಾಯಿಸಲು ಸಾಧ್ಯವಾಗದ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...