Homeಅಂತರಾಷ್ಟ್ರೀಯIMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

IMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

ದಕ್ಷಿಣ ಅಮೇರಿಕಾ ಖಂಡದ ವಾಯವ್ಯ ಕರಾವಳಿಯಲ್ಲಿರುವ ಪುಟ್ಟ ರಾಷ್ಟ್ರ ಈಕ್ವಡೋರ್‌ನ ಮೂಲನಿವಾಸಿ ಜನರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಜೊತೆ ಸೇರಿ ನಡೆಸಿದ ಎರಡು ವಾರಗಳ ಉಗ್ರ ಪ್ರತಿಭಟನೆಯ ಬಳಿಕ ಸರಕಾರವನ್ನು ಮಣಿಸಿ, ಐಎಂಎಫ್ ಹೇರಿದ್ದ ಆರ್ಥಿಕ 'ಸುಧಾರಣೆ'ಗಳನ್ನು ತಿರಸ್ಕರಿಸುವಂತೆ ಮಾಡಿದ್ದಾರೆ.

- Advertisement -
- Advertisement -

ಮೂಲ: ಸ್ವಾತಿ ಶುಕ್ಲಾ

ಅನುವಾದ: ನಿಖಿಲ್ ಕೋಲ್ಪೆ

ಈಕ್ವಡೋರ್ ರಾಜಧಾನಿ ಕ್ವಿಟೋ ಕಳೆದ ಎರಡು ವಾರಗಳಿಂದ ರಣರಂಗವಾಗಿಬಿಟ್ಟಿತ್ತು. ಕಾರಣವೆಂದರೆ, ಇಂಧನ ಸಬ್ಸಿಡಿಯ ಹಿಂತೆಗೆತವನ್ನು ಮೂಲ ನಿವಾಸಿ ಜನರು ಖಂಡತುಂಡವಾಗಿ ಪ್ರತಿಭಟಿಸಿದ್ದರು. ಇಂಧನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿರುವುದಾಗಿ ಅಧ್ಯಕ್ಷ ಲೆನಿನ್ ಮೊರೆನೊ ಘೋಷಿಸಿದ ಬೆನ್ನಲ್ಲೇ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಇದೀಗ ಪ್ರತಿಭಟನಕಾರರಿಗೆ ಮಣಿದಿರುವ ಸರಕಾರ, ಐಎಂಎಫ್ ಹೇರಿದ್ದ ಪ್ಯಾಕೇಜನ್ನು ಹಿಂತೆಗೆದುಕೊಂಡಿದೆ.

ಮೊರೆನೊ ಸರಕಾರವು ಪ್ರಸ್ತಾಪಿಸಿದ್ದ ಹಲವಾರು ನವ ‘ಉದಾರವಾದಿ’ ಕ್ರಮಗಳಲ್ಲಿ ತೈಲ ಸಬ್ಸಿಡಿ ಹಿಂತೆಗೆತವೂ ಒಂದಾಗಿತ್ತು. ಮೂಲನಿವಾಸಿ ಗುಂಪುಗಳು ದೇಶದ ಅತ್ಯಂತ ದೊಡ್ಡ ಕಾರ್ಮಿಕ ಸಂಘಟನೆಗಳು ಹಾಗೂ ವಿದ್ಯಾರ್ಥಿ ಚಳವಳಿಗಳ ಜೊತೆ ಸೇರಿ ರಾಷ್ಟ್ರೀಯ ಮುಷ್ಕರವನ್ನು ಆಯೋಜಿಸಿದ್ದು, ಮಿಲಿಟರಿ ಮತ್ತು ಪೊಲೀಸ್ ಪಡೆಗಳು ಅತ್ಯಂತ ದಮನಕಾರಿಯಗಿ ಪ್ರತಿಭಟನೆಯನ್ನು ಬಗ್ಗುಬಡಿಯಲು ಯತ್ನಿಸಿದ್ದವು.

ಮೊದಲಾಗಿ ಇಂಧನ ಸಬ್ಸಿಡಿ ಹಿಂತೆಗೆತದ ವಿರುದ್ಧ ಆರಂಭವಾದ ಪ್ರತಿಭಟನೆಗಳು ಮೂಲನಿವಾಸಿ ಗುಂಪುಗಳ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಮತ್ತು ಅದರ ಧಣಿಗಳು ಹೇರಿರುವ ‘ನವ ಉದಾರವಾದಿ’ ಮಾದರಿಯ ವಿರುದ್ಧದ ಪ್ರತಿಭಟನೆಯಾಗಿ ಪರಿವರ್ತನೆಗೊಂಡು ಉಗ್ರರೂಪ ತಳೆಯಿತು.

ಲೆನಿನ್ ಮೊರೆನೊ

ಮಾರ್ಚ್ 2019ರಲ್ಲಿ ಐಎಂಎಫ್ ಹಲವು ಶರತ್ತುಗಳೊಂದಿಗೆ ಈಕ್ವಡೋರ್‌ಗೆ 4.2 ಬಿಲಿಯನ್ (420 ಕೋಟಿ) ಡಾಲರ್‌ಗಳ ಸಾಲ ನೀಡಿತ್ತು. ಇಂತಹ ಶರತ್ತುಗಳಲ್ಲಿ ಹಲವು ಅಂತರರಾಷ್ಟ್ರೀಯ ಹಗರಣಗಳನ್ನು ಬಯಲು ಮಾಡಿದ ವೀಕೀಲೀಕ್ಸ್ ಸಂಪಾದಕ ಜೂಲಿಯನ್ ಅಸ್ಸಾಂಜೆಯನ್ನು ಯುಎಸ್‌ಎಗೆ ಬಿಟ್ಟುಕೊಡಬೇಕು ಎಂಬುದೂ ಒಂದಾಗಿತ್ತು.

“ನಾವು ಈಕ್ವಡೋರ್‌ಗೆ ನೆರವಾಗಲು ಇಲ್ಲಿದ್ದೇವೆ. ನಮ್ಮ ಉದ್ದೇಶ ಎಂದರೆ, ಆರ್ಥಿಕತೆಯನ್ನು ಆಧುನಿಕರಣಗೊಳಿಸಲು ಈಕ್ವಡೋರಿಗೆ ನೆರವಾಗಿ, ಸುದೃಢ, ಸುಸ್ಥಿರ ಮತ್ತು ನ್ಯಾಯಸಮ್ಮತ ಅಭಿವೃದ್ಧಿಗೆ ದಾರಿಮಾಡಿಕೊಡುವುದು” ಎಂದು ಐಎಂಎಫ್ ಆಡಳಿತ ಮಂಡಳಿ ತನ್ನ ಎಂದಿನ ಬಂಡವಾಳಶಾಹಿ ಶೈಲಿಯಲ್ಲಿ ಬುರುಡೆ ಬಿಟ್ಟಿತ್ತು. ಇದರ ಬೆನ್ನಲ್ಲೇ ಹಲವಾರು “ಸಂಯಮದ” “ಸುಧಾರಣಾ” ಕ್ರಮಗಳನ್ನು ಹೇರಲಾಗಿತ್ತು.

ಐಎಂಎಫ್ ಜೊತೆ ಕಳೆದ ವರ್ಷ ನಡೆಸಿದ ಒಪ್ಪಂದಕ್ಕೆ ಅನುಗುಣವಾಗಿ ಮೊರೆನೊ ಸರಕಾರ ಸೆಪ್ಟೆಂಬರ್ 30ರಂದು ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿಯನ್ನು ಹಿಂತೆಗೆದುಕೊಂಡಿತ್ತು. ಇದರಿಂದ ಸಹಜವಾಗಿ ಇವೆರಡರ ಬೆಲೆಗಳು ಗಗನಕ್ಕೇರಿದ್ದವು.

ಇಂಧನ ಸಬ್ಸಿಡಿ ಹಿಂತೆಗೆತದ ಅರ್ಥವೆಂದರೆ, ಬಡವರು ಮತ್ತು ದುಡಿಯುವ ವರ್ಗದವರು ಇಂಧನಕ್ಕೆ ಹೆಚ್ಚು ಬೆಲೆ ತೆರಬೇಕಾದರೆ, ಖಾಸಗಿ ಇಂಧನ ಸಂಸ್ಥೆಗಳು ಹೆಚ್ಚು ಲಾಭವನ್ನು ದೋಚಬಹುದು.

“ಸರಕಾರ ಮಾಡಿರುವುದು ಏನೆಂದರೆ, ದೊಡ್ಡ ಬ್ಯಾಂಕುಗಳು, ಬಂಡವಾಳಶಾಹಿಗಳಿಗೆ ಬಹುಮಾನ ನೀಡಿ, ಬಡ ಈಕ್ವಡೋರಿಯನ್ನರಿಗೆ ಶಿಕ್ಷೆ ನೀಡಿರುವುದು” ಎಂದು ಕಾರ್ಮಿಕರ ಸಂಘಟನೆಗಳ ಒಕ್ಕೂಟವಾಗಿರುವ ವರ್ಕರ್ಸ್ ಯುನೈಟೆಡ್ ಫ್ರಂಟ್‌ನ ಮುಖ್ಯಸ್ಥ ಮೆಸಿಯಾಸ್ ಟಟಮುಯೆಸ್ ಹೇಳಿದ್ದಾರೆ.

ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಏಕೆಂದರೆ, ಇಂಧನ ಬೆಲೆ ಏರಿಕೆಯಿಂದ ಆಹಾರ ಮತ್ತು ಸಾರಿಗೆ ದರಗಳು ಗಗನಕ್ಕೇರಿದ್ದು, ಮೂಲ ನಿವಾಸಿ ಜನರು ಎಲ್ಲರಿಗಿಂತಲೂ ಹೆಚ್ಚು ಬಾಧಿತರಾಗಿದ್ದಾರೆ ಎಂದು ಪ್ರತಿಭಟನೆಯ ನಾಯಕರು ಹೇಳುತ್ತಾರೆ.

ಪ್ರತಿಭಟನಕಾರರು ಅಧ್ಯಕ್ಷೀಯ ಅರಮನೆಯ ಸುತ್ತಲಿನ ತಡೆಗಳನ್ನು ಭೇದಿಸಿ ಮುನ್ನುಗ್ಗುವ ವಿಫಲ ಪ್ರಯತ್ನ ನಡೆಸಿದ ಬಳಿಕ ಹೆದರಿದ ಮೊರೆನೊ, ತನ್ನ ಸರಕಾರವನ್ನು, ಆಡಳಿತವನ್ನು ಅಕ್ಟೋಬರ್ 7ರಂದು ಬಂದರು ನಗರ ಗ್ವಾಯಾಗುಲಿಗೆ ಸ್ಥಳಾಂತರಿಸಬೇಕಾಗಿ ಬಂದಿತ್ತು.

ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಮೇ, 2017ರಂದು ಅಧಿಕಾರ ತೊರೆದ ಮೇಲೆ ಮೊರೆನೊ ಸರಕಾರ ದೇಶವನ್ನು ಬಲಪಂಥದತ್ತ ಒಯ್ಯುತ್ತಿದೆ. ಈಗ ಮೊರೆನೊ, ಉದ್ಯಮಿಗಳು ಮತ್ತು ಸೇನೆಯ ಬೆಂಬಲ ಹೊಂದಿದ್ದರೂ, ಅವರ ಜನಪ್ರಿಯತೆ 2017ರಲ್ಲಿದ್ದ 70 ಶೇಕಡಾದಿಂದ 30 ಶೇಕಡಾಕ್ಕೆ ಕುಸಿದಿದೆ. ಮೊರೆನೊ ಅಧಿಕಾರಕ್ಕೆ ಬಂದ ಮೇಲೆ ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಸರಕಾರ ತಂದಿದ್ದ ಹಲವು ಪ್ರಗತಿಪರ ಕ್ರಮಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.

ಪ್ರತಿಭಟನೆಯು ಎರಡನೇ ವಾರ ಪ್ರವೇಶಿಸುತ್ತಿದ್ದಂತೆ, ಮೂಲ ನಿವಾಸಿ ಪ್ರತಿಭಟನಕಾರರು ತಾವು ವಶಕ್ಕೆ ತೆಗೆದುಕೊಂಡ ಕೆಲವು ಪೊಲೀಸರನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡುವ ಮೂಲಕ ಮೊರೆನೊ ಸರಕಾರಕ್ಕೆ ತಾವು ಅಂಜುವುದಿಲ್ಲ ಎಂಬ ದಿಟ್ಟ ಸಂದೇಶ ನೀಡಿದ್ದರು.

ಮೂಲನಿವಾಸಿಗಳ ಪ್ರತಿಭಟನೆಗಳು 1997ರಲ್ಲಿ ಅಬ್ದಲಾ ಬುಕಾರಮ್, 2000ದಲ್ಲಿ ಜಮಿಲ್ ಮಹುವದ್ ಮತ್ತು 2005ರಲ್ಲಿ ಲೂಸಿಯೋ ಗುಟಿಯೆರೆಝ್ ಸಹಿತ ಹಲವಾರು ಅಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ.

ಇದೀಗ ಪ್ರತಿಭಟನೆಗೆ ಮಣಿದಿರುವ ಮೊರೆನೊ ಸರಕಾರವು ಮೂಲನಿವಾಸಿಗಳೊಂದಿಗೆ ಬುಧವಾರ ಒಪ್ಪಂದಕ್ಕೆ ಬಂದಿದ್ದು, ಐಎಂಎಫ್ ಹೇರಿಕೆಯ ‘ಸುಧಾರಣಾ ಕ್ರಮ’ಗಳನ್ನು ಹಿಂತೆದುಕೊಳ್ಳಲು ಒಪ್ಪಿದೆ. ಇದರೊಂದಿಗೆ ಆರ್ಥಿಕತೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿ, ಏಳು ಜನರ ಸಾವಿಗೆ ಕಾರಣವಾದ ಹೆಚ್ಚುಕಡಿಮೆ ಎರಡು ವಾರ ಕಾಲದ ಪ್ರತಿಭಟನೆ ಕೊನೆಗೊಳ್ಳಲಿದೆ.

ಒಪ್ಪಂದದ ಪ್ರಕಾರ, ತೈಲ ಬೆಲೆ ತೀವ್ರ ಏರಿಕೆಗೆ ಕಾರಣವಾದ ಡಿಕ್ರಿ 883 ಎಂದು ಕರೆಯಲ್ಪಡುವ ಐಎಂಎಫ್ ಪ್ರೇರಿತ ಪ್ಯಾಕೇಜನ್ನು ಮೊರೆನೊ ಸರಕಾರ ಹಿಂತೆಗೆದುಕೊಳ್ಳಲಿದೆ. ಇದಕ್ಕೆ ಬದಲಾಗಿ, ಪ್ರತಿಭಟನೆ ಮತ್ತು ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳುವಂತೆ ಮೂಲ ನಿವಾಸಿ ಗುಂಪುಗಳ ನಾಯಕರು ತಮ್ಮ ಬೆಂಬಲಿಗರಿಗೆ ಕರೆ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...