Homeಅಂತರಾಷ್ಟ್ರೀಯIMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

IMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

ದಕ್ಷಿಣ ಅಮೇರಿಕಾ ಖಂಡದ ವಾಯವ್ಯ ಕರಾವಳಿಯಲ್ಲಿರುವ ಪುಟ್ಟ ರಾಷ್ಟ್ರ ಈಕ್ವಡೋರ್‌ನ ಮೂಲನಿವಾಸಿ ಜನರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಜೊತೆ ಸೇರಿ ನಡೆಸಿದ ಎರಡು ವಾರಗಳ ಉಗ್ರ ಪ್ರತಿಭಟನೆಯ ಬಳಿಕ ಸರಕಾರವನ್ನು ಮಣಿಸಿ, ಐಎಂಎಫ್ ಹೇರಿದ್ದ ಆರ್ಥಿಕ 'ಸುಧಾರಣೆ'ಗಳನ್ನು ತಿರಸ್ಕರಿಸುವಂತೆ ಮಾಡಿದ್ದಾರೆ.

- Advertisement -
- Advertisement -

ಮೂಲ: ಸ್ವಾತಿ ಶುಕ್ಲಾ

ಅನುವಾದ: ನಿಖಿಲ್ ಕೋಲ್ಪೆ

ಈಕ್ವಡೋರ್ ರಾಜಧಾನಿ ಕ್ವಿಟೋ ಕಳೆದ ಎರಡು ವಾರಗಳಿಂದ ರಣರಂಗವಾಗಿಬಿಟ್ಟಿತ್ತು. ಕಾರಣವೆಂದರೆ, ಇಂಧನ ಸಬ್ಸಿಡಿಯ ಹಿಂತೆಗೆತವನ್ನು ಮೂಲ ನಿವಾಸಿ ಜನರು ಖಂಡತುಂಡವಾಗಿ ಪ್ರತಿಭಟಿಸಿದ್ದರು. ಇಂಧನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿರುವುದಾಗಿ ಅಧ್ಯಕ್ಷ ಲೆನಿನ್ ಮೊರೆನೊ ಘೋಷಿಸಿದ ಬೆನ್ನಲ್ಲೇ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಇದೀಗ ಪ್ರತಿಭಟನಕಾರರಿಗೆ ಮಣಿದಿರುವ ಸರಕಾರ, ಐಎಂಎಫ್ ಹೇರಿದ್ದ ಪ್ಯಾಕೇಜನ್ನು ಹಿಂತೆಗೆದುಕೊಂಡಿದೆ.

ಮೊರೆನೊ ಸರಕಾರವು ಪ್ರಸ್ತಾಪಿಸಿದ್ದ ಹಲವಾರು ನವ ‘ಉದಾರವಾದಿ’ ಕ್ರಮಗಳಲ್ಲಿ ತೈಲ ಸಬ್ಸಿಡಿ ಹಿಂತೆಗೆತವೂ ಒಂದಾಗಿತ್ತು. ಮೂಲನಿವಾಸಿ ಗುಂಪುಗಳು ದೇಶದ ಅತ್ಯಂತ ದೊಡ್ಡ ಕಾರ್ಮಿಕ ಸಂಘಟನೆಗಳು ಹಾಗೂ ವಿದ್ಯಾರ್ಥಿ ಚಳವಳಿಗಳ ಜೊತೆ ಸೇರಿ ರಾಷ್ಟ್ರೀಯ ಮುಷ್ಕರವನ್ನು ಆಯೋಜಿಸಿದ್ದು, ಮಿಲಿಟರಿ ಮತ್ತು ಪೊಲೀಸ್ ಪಡೆಗಳು ಅತ್ಯಂತ ದಮನಕಾರಿಯಗಿ ಪ್ರತಿಭಟನೆಯನ್ನು ಬಗ್ಗುಬಡಿಯಲು ಯತ್ನಿಸಿದ್ದವು.

ಮೊದಲಾಗಿ ಇಂಧನ ಸಬ್ಸಿಡಿ ಹಿಂತೆಗೆತದ ವಿರುದ್ಧ ಆರಂಭವಾದ ಪ್ರತಿಭಟನೆಗಳು ಮೂಲನಿವಾಸಿ ಗುಂಪುಗಳ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಮತ್ತು ಅದರ ಧಣಿಗಳು ಹೇರಿರುವ ‘ನವ ಉದಾರವಾದಿ’ ಮಾದರಿಯ ವಿರುದ್ಧದ ಪ್ರತಿಭಟನೆಯಾಗಿ ಪರಿವರ್ತನೆಗೊಂಡು ಉಗ್ರರೂಪ ತಳೆಯಿತು.

ಲೆನಿನ್ ಮೊರೆನೊ

ಮಾರ್ಚ್ 2019ರಲ್ಲಿ ಐಎಂಎಫ್ ಹಲವು ಶರತ್ತುಗಳೊಂದಿಗೆ ಈಕ್ವಡೋರ್‌ಗೆ 4.2 ಬಿಲಿಯನ್ (420 ಕೋಟಿ) ಡಾಲರ್‌ಗಳ ಸಾಲ ನೀಡಿತ್ತು. ಇಂತಹ ಶರತ್ತುಗಳಲ್ಲಿ ಹಲವು ಅಂತರರಾಷ್ಟ್ರೀಯ ಹಗರಣಗಳನ್ನು ಬಯಲು ಮಾಡಿದ ವೀಕೀಲೀಕ್ಸ್ ಸಂಪಾದಕ ಜೂಲಿಯನ್ ಅಸ್ಸಾಂಜೆಯನ್ನು ಯುಎಸ್‌ಎಗೆ ಬಿಟ್ಟುಕೊಡಬೇಕು ಎಂಬುದೂ ಒಂದಾಗಿತ್ತು.

“ನಾವು ಈಕ್ವಡೋರ್‌ಗೆ ನೆರವಾಗಲು ಇಲ್ಲಿದ್ದೇವೆ. ನಮ್ಮ ಉದ್ದೇಶ ಎಂದರೆ, ಆರ್ಥಿಕತೆಯನ್ನು ಆಧುನಿಕರಣಗೊಳಿಸಲು ಈಕ್ವಡೋರಿಗೆ ನೆರವಾಗಿ, ಸುದೃಢ, ಸುಸ್ಥಿರ ಮತ್ತು ನ್ಯಾಯಸಮ್ಮತ ಅಭಿವೃದ್ಧಿಗೆ ದಾರಿಮಾಡಿಕೊಡುವುದು” ಎಂದು ಐಎಂಎಫ್ ಆಡಳಿತ ಮಂಡಳಿ ತನ್ನ ಎಂದಿನ ಬಂಡವಾಳಶಾಹಿ ಶೈಲಿಯಲ್ಲಿ ಬುರುಡೆ ಬಿಟ್ಟಿತ್ತು. ಇದರ ಬೆನ್ನಲ್ಲೇ ಹಲವಾರು “ಸಂಯಮದ” “ಸುಧಾರಣಾ” ಕ್ರಮಗಳನ್ನು ಹೇರಲಾಗಿತ್ತು.

ಐಎಂಎಫ್ ಜೊತೆ ಕಳೆದ ವರ್ಷ ನಡೆಸಿದ ಒಪ್ಪಂದಕ್ಕೆ ಅನುಗುಣವಾಗಿ ಮೊರೆನೊ ಸರಕಾರ ಸೆಪ್ಟೆಂಬರ್ 30ರಂದು ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿಯನ್ನು ಹಿಂತೆಗೆದುಕೊಂಡಿತ್ತು. ಇದರಿಂದ ಸಹಜವಾಗಿ ಇವೆರಡರ ಬೆಲೆಗಳು ಗಗನಕ್ಕೇರಿದ್ದವು.

ಇಂಧನ ಸಬ್ಸಿಡಿ ಹಿಂತೆಗೆತದ ಅರ್ಥವೆಂದರೆ, ಬಡವರು ಮತ್ತು ದುಡಿಯುವ ವರ್ಗದವರು ಇಂಧನಕ್ಕೆ ಹೆಚ್ಚು ಬೆಲೆ ತೆರಬೇಕಾದರೆ, ಖಾಸಗಿ ಇಂಧನ ಸಂಸ್ಥೆಗಳು ಹೆಚ್ಚು ಲಾಭವನ್ನು ದೋಚಬಹುದು.

“ಸರಕಾರ ಮಾಡಿರುವುದು ಏನೆಂದರೆ, ದೊಡ್ಡ ಬ್ಯಾಂಕುಗಳು, ಬಂಡವಾಳಶಾಹಿಗಳಿಗೆ ಬಹುಮಾನ ನೀಡಿ, ಬಡ ಈಕ್ವಡೋರಿಯನ್ನರಿಗೆ ಶಿಕ್ಷೆ ನೀಡಿರುವುದು” ಎಂದು ಕಾರ್ಮಿಕರ ಸಂಘಟನೆಗಳ ಒಕ್ಕೂಟವಾಗಿರುವ ವರ್ಕರ್ಸ್ ಯುನೈಟೆಡ್ ಫ್ರಂಟ್‌ನ ಮುಖ್ಯಸ್ಥ ಮೆಸಿಯಾಸ್ ಟಟಮುಯೆಸ್ ಹೇಳಿದ್ದಾರೆ.

ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಏಕೆಂದರೆ, ಇಂಧನ ಬೆಲೆ ಏರಿಕೆಯಿಂದ ಆಹಾರ ಮತ್ತು ಸಾರಿಗೆ ದರಗಳು ಗಗನಕ್ಕೇರಿದ್ದು, ಮೂಲ ನಿವಾಸಿ ಜನರು ಎಲ್ಲರಿಗಿಂತಲೂ ಹೆಚ್ಚು ಬಾಧಿತರಾಗಿದ್ದಾರೆ ಎಂದು ಪ್ರತಿಭಟನೆಯ ನಾಯಕರು ಹೇಳುತ್ತಾರೆ.

ಪ್ರತಿಭಟನಕಾರರು ಅಧ್ಯಕ್ಷೀಯ ಅರಮನೆಯ ಸುತ್ತಲಿನ ತಡೆಗಳನ್ನು ಭೇದಿಸಿ ಮುನ್ನುಗ್ಗುವ ವಿಫಲ ಪ್ರಯತ್ನ ನಡೆಸಿದ ಬಳಿಕ ಹೆದರಿದ ಮೊರೆನೊ, ತನ್ನ ಸರಕಾರವನ್ನು, ಆಡಳಿತವನ್ನು ಅಕ್ಟೋಬರ್ 7ರಂದು ಬಂದರು ನಗರ ಗ್ವಾಯಾಗುಲಿಗೆ ಸ್ಥಳಾಂತರಿಸಬೇಕಾಗಿ ಬಂದಿತ್ತು.

ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಮೇ, 2017ರಂದು ಅಧಿಕಾರ ತೊರೆದ ಮೇಲೆ ಮೊರೆನೊ ಸರಕಾರ ದೇಶವನ್ನು ಬಲಪಂಥದತ್ತ ಒಯ್ಯುತ್ತಿದೆ. ಈಗ ಮೊರೆನೊ, ಉದ್ಯಮಿಗಳು ಮತ್ತು ಸೇನೆಯ ಬೆಂಬಲ ಹೊಂದಿದ್ದರೂ, ಅವರ ಜನಪ್ರಿಯತೆ 2017ರಲ್ಲಿದ್ದ 70 ಶೇಕಡಾದಿಂದ 30 ಶೇಕಡಾಕ್ಕೆ ಕುಸಿದಿದೆ. ಮೊರೆನೊ ಅಧಿಕಾರಕ್ಕೆ ಬಂದ ಮೇಲೆ ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಸರಕಾರ ತಂದಿದ್ದ ಹಲವು ಪ್ರಗತಿಪರ ಕ್ರಮಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.

ಪ್ರತಿಭಟನೆಯು ಎರಡನೇ ವಾರ ಪ್ರವೇಶಿಸುತ್ತಿದ್ದಂತೆ, ಮೂಲ ನಿವಾಸಿ ಪ್ರತಿಭಟನಕಾರರು ತಾವು ವಶಕ್ಕೆ ತೆಗೆದುಕೊಂಡ ಕೆಲವು ಪೊಲೀಸರನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡುವ ಮೂಲಕ ಮೊರೆನೊ ಸರಕಾರಕ್ಕೆ ತಾವು ಅಂಜುವುದಿಲ್ಲ ಎಂಬ ದಿಟ್ಟ ಸಂದೇಶ ನೀಡಿದ್ದರು.

ಮೂಲನಿವಾಸಿಗಳ ಪ್ರತಿಭಟನೆಗಳು 1997ರಲ್ಲಿ ಅಬ್ದಲಾ ಬುಕಾರಮ್, 2000ದಲ್ಲಿ ಜಮಿಲ್ ಮಹುವದ್ ಮತ್ತು 2005ರಲ್ಲಿ ಲೂಸಿಯೋ ಗುಟಿಯೆರೆಝ್ ಸಹಿತ ಹಲವಾರು ಅಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ.

ಇದೀಗ ಪ್ರತಿಭಟನೆಗೆ ಮಣಿದಿರುವ ಮೊರೆನೊ ಸರಕಾರವು ಮೂಲನಿವಾಸಿಗಳೊಂದಿಗೆ ಬುಧವಾರ ಒಪ್ಪಂದಕ್ಕೆ ಬಂದಿದ್ದು, ಐಎಂಎಫ್ ಹೇರಿಕೆಯ ‘ಸುಧಾರಣಾ ಕ್ರಮ’ಗಳನ್ನು ಹಿಂತೆದುಕೊಳ್ಳಲು ಒಪ್ಪಿದೆ. ಇದರೊಂದಿಗೆ ಆರ್ಥಿಕತೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿ, ಏಳು ಜನರ ಸಾವಿಗೆ ಕಾರಣವಾದ ಹೆಚ್ಚುಕಡಿಮೆ ಎರಡು ವಾರ ಕಾಲದ ಪ್ರತಿಭಟನೆ ಕೊನೆಗೊಳ್ಳಲಿದೆ.

ಒಪ್ಪಂದದ ಪ್ರಕಾರ, ತೈಲ ಬೆಲೆ ತೀವ್ರ ಏರಿಕೆಗೆ ಕಾರಣವಾದ ಡಿಕ್ರಿ 883 ಎಂದು ಕರೆಯಲ್ಪಡುವ ಐಎಂಎಫ್ ಪ್ರೇರಿತ ಪ್ಯಾಕೇಜನ್ನು ಮೊರೆನೊ ಸರಕಾರ ಹಿಂತೆಗೆದುಕೊಳ್ಳಲಿದೆ. ಇದಕ್ಕೆ ಬದಲಾಗಿ, ಪ್ರತಿಭಟನೆ ಮತ್ತು ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳುವಂತೆ ಮೂಲ ನಿವಾಸಿ ಗುಂಪುಗಳ ನಾಯಕರು ತಮ್ಮ ಬೆಂಬಲಿಗರಿಗೆ ಕರೆ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...