Homeಅಂತರಾಷ್ಟ್ರೀಯIMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

IMF ನವ ಉದಾರವಾದಿ ಅಜೆಂಡಾ ವಿರುದ್ಧ ಹೋರಾಡಿ ಗೆದ್ದ ಈಕ್ವಡೋರ್‌ನ ಮೂಲನಿವಾಸಿಗಳು

ದಕ್ಷಿಣ ಅಮೇರಿಕಾ ಖಂಡದ ವಾಯವ್ಯ ಕರಾವಳಿಯಲ್ಲಿರುವ ಪುಟ್ಟ ರಾಷ್ಟ್ರ ಈಕ್ವಡೋರ್‌ನ ಮೂಲನಿವಾಸಿ ಜನರು, ಕಾರ್ಮಿಕರು ಮತ್ತು ವಿದ್ಯಾರ್ಥಿಗಳ ಜೊತೆ ಸೇರಿ ನಡೆಸಿದ ಎರಡು ವಾರಗಳ ಉಗ್ರ ಪ್ರತಿಭಟನೆಯ ಬಳಿಕ ಸರಕಾರವನ್ನು ಮಣಿಸಿ, ಐಎಂಎಫ್ ಹೇರಿದ್ದ ಆರ್ಥಿಕ 'ಸುಧಾರಣೆ'ಗಳನ್ನು ತಿರಸ್ಕರಿಸುವಂತೆ ಮಾಡಿದ್ದಾರೆ.

- Advertisement -
- Advertisement -

ಮೂಲ: ಸ್ವಾತಿ ಶುಕ್ಲಾ

ಅನುವಾದ: ನಿಖಿಲ್ ಕೋಲ್ಪೆ

ಈಕ್ವಡೋರ್ ರಾಜಧಾನಿ ಕ್ವಿಟೋ ಕಳೆದ ಎರಡು ವಾರಗಳಿಂದ ರಣರಂಗವಾಗಿಬಿಟ್ಟಿತ್ತು. ಕಾರಣವೆಂದರೆ, ಇಂಧನ ಸಬ್ಸಿಡಿಯ ಹಿಂತೆಗೆತವನ್ನು ಮೂಲ ನಿವಾಸಿ ಜನರು ಖಂಡತುಂಡವಾಗಿ ಪ್ರತಿಭಟಿಸಿದ್ದರು. ಇಂಧನ ಸಬ್ಸಿಡಿಯನ್ನು ಹಿಂತೆಗೆದುಕೊಂಡಿರುವುದಾಗಿ ಅಧ್ಯಕ್ಷ ಲೆನಿನ್ ಮೊರೆನೊ ಘೋಷಿಸಿದ ಬೆನ್ನಲ್ಲೇ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿದ್ದವು. ಇದೀಗ ಪ್ರತಿಭಟನಕಾರರಿಗೆ ಮಣಿದಿರುವ ಸರಕಾರ, ಐಎಂಎಫ್ ಹೇರಿದ್ದ ಪ್ಯಾಕೇಜನ್ನು ಹಿಂತೆಗೆದುಕೊಂಡಿದೆ.

ಮೊರೆನೊ ಸರಕಾರವು ಪ್ರಸ್ತಾಪಿಸಿದ್ದ ಹಲವಾರು ನವ ‘ಉದಾರವಾದಿ’ ಕ್ರಮಗಳಲ್ಲಿ ತೈಲ ಸಬ್ಸಿಡಿ ಹಿಂತೆಗೆತವೂ ಒಂದಾಗಿತ್ತು. ಮೂಲನಿವಾಸಿ ಗುಂಪುಗಳು ದೇಶದ ಅತ್ಯಂತ ದೊಡ್ಡ ಕಾರ್ಮಿಕ ಸಂಘಟನೆಗಳು ಹಾಗೂ ವಿದ್ಯಾರ್ಥಿ ಚಳವಳಿಗಳ ಜೊತೆ ಸೇರಿ ರಾಷ್ಟ್ರೀಯ ಮುಷ್ಕರವನ್ನು ಆಯೋಜಿಸಿದ್ದು, ಮಿಲಿಟರಿ ಮತ್ತು ಪೊಲೀಸ್ ಪಡೆಗಳು ಅತ್ಯಂತ ದಮನಕಾರಿಯಗಿ ಪ್ರತಿಭಟನೆಯನ್ನು ಬಗ್ಗುಬಡಿಯಲು ಯತ್ನಿಸಿದ್ದವು.

ಮೊದಲಾಗಿ ಇಂಧನ ಸಬ್ಸಿಡಿ ಹಿಂತೆಗೆತದ ವಿರುದ್ಧ ಆರಂಭವಾದ ಪ್ರತಿಭಟನೆಗಳು ಮೂಲನಿವಾಸಿ ಗುಂಪುಗಳ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ (ಐಎಂಎಫ್) ಮತ್ತು ಅದರ ಧಣಿಗಳು ಹೇರಿರುವ ‘ನವ ಉದಾರವಾದಿ’ ಮಾದರಿಯ ವಿರುದ್ಧದ ಪ್ರತಿಭಟನೆಯಾಗಿ ಪರಿವರ್ತನೆಗೊಂಡು ಉಗ್ರರೂಪ ತಳೆಯಿತು.

ಲೆನಿನ್ ಮೊರೆನೊ

ಮಾರ್ಚ್ 2019ರಲ್ಲಿ ಐಎಂಎಫ್ ಹಲವು ಶರತ್ತುಗಳೊಂದಿಗೆ ಈಕ್ವಡೋರ್‌ಗೆ 4.2 ಬಿಲಿಯನ್ (420 ಕೋಟಿ) ಡಾಲರ್‌ಗಳ ಸಾಲ ನೀಡಿತ್ತು. ಇಂತಹ ಶರತ್ತುಗಳಲ್ಲಿ ಹಲವು ಅಂತರರಾಷ್ಟ್ರೀಯ ಹಗರಣಗಳನ್ನು ಬಯಲು ಮಾಡಿದ ವೀಕೀಲೀಕ್ಸ್ ಸಂಪಾದಕ ಜೂಲಿಯನ್ ಅಸ್ಸಾಂಜೆಯನ್ನು ಯುಎಸ್‌ಎಗೆ ಬಿಟ್ಟುಕೊಡಬೇಕು ಎಂಬುದೂ ಒಂದಾಗಿತ್ತು.

“ನಾವು ಈಕ್ವಡೋರ್‌ಗೆ ನೆರವಾಗಲು ಇಲ್ಲಿದ್ದೇವೆ. ನಮ್ಮ ಉದ್ದೇಶ ಎಂದರೆ, ಆರ್ಥಿಕತೆಯನ್ನು ಆಧುನಿಕರಣಗೊಳಿಸಲು ಈಕ್ವಡೋರಿಗೆ ನೆರವಾಗಿ, ಸುದೃಢ, ಸುಸ್ಥಿರ ಮತ್ತು ನ್ಯಾಯಸಮ್ಮತ ಅಭಿವೃದ್ಧಿಗೆ ದಾರಿಮಾಡಿಕೊಡುವುದು” ಎಂದು ಐಎಂಎಫ್ ಆಡಳಿತ ಮಂಡಳಿ ತನ್ನ ಎಂದಿನ ಬಂಡವಾಳಶಾಹಿ ಶೈಲಿಯಲ್ಲಿ ಬುರುಡೆ ಬಿಟ್ಟಿತ್ತು. ಇದರ ಬೆನ್ನಲ್ಲೇ ಹಲವಾರು “ಸಂಯಮದ” “ಸುಧಾರಣಾ” ಕ್ರಮಗಳನ್ನು ಹೇರಲಾಗಿತ್ತು.

ಐಎಂಎಫ್ ಜೊತೆ ಕಳೆದ ವರ್ಷ ನಡೆಸಿದ ಒಪ್ಪಂದಕ್ಕೆ ಅನುಗುಣವಾಗಿ ಮೊರೆನೊ ಸರಕಾರ ಸೆಪ್ಟೆಂಬರ್ 30ರಂದು ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿಯನ್ನು ಹಿಂತೆಗೆದುಕೊಂಡಿತ್ತು. ಇದರಿಂದ ಸಹಜವಾಗಿ ಇವೆರಡರ ಬೆಲೆಗಳು ಗಗನಕ್ಕೇರಿದ್ದವು.

ಇಂಧನ ಸಬ್ಸಿಡಿ ಹಿಂತೆಗೆತದ ಅರ್ಥವೆಂದರೆ, ಬಡವರು ಮತ್ತು ದುಡಿಯುವ ವರ್ಗದವರು ಇಂಧನಕ್ಕೆ ಹೆಚ್ಚು ಬೆಲೆ ತೆರಬೇಕಾದರೆ, ಖಾಸಗಿ ಇಂಧನ ಸಂಸ್ಥೆಗಳು ಹೆಚ್ಚು ಲಾಭವನ್ನು ದೋಚಬಹುದು.

“ಸರಕಾರ ಮಾಡಿರುವುದು ಏನೆಂದರೆ, ದೊಡ್ಡ ಬ್ಯಾಂಕುಗಳು, ಬಂಡವಾಳಶಾಹಿಗಳಿಗೆ ಬಹುಮಾನ ನೀಡಿ, ಬಡ ಈಕ್ವಡೋರಿಯನ್ನರಿಗೆ ಶಿಕ್ಷೆ ನೀಡಿರುವುದು” ಎಂದು ಕಾರ್ಮಿಕರ ಸಂಘಟನೆಗಳ ಒಕ್ಕೂಟವಾಗಿರುವ ವರ್ಕರ್ಸ್ ಯುನೈಟೆಡ್ ಫ್ರಂಟ್‌ನ ಮುಖ್ಯಸ್ಥ ಮೆಸಿಯಾಸ್ ಟಟಮುಯೆಸ್ ಹೇಳಿದ್ದಾರೆ.

ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಏಕೆಂದರೆ, ಇಂಧನ ಬೆಲೆ ಏರಿಕೆಯಿಂದ ಆಹಾರ ಮತ್ತು ಸಾರಿಗೆ ದರಗಳು ಗಗನಕ್ಕೇರಿದ್ದು, ಮೂಲ ನಿವಾಸಿ ಜನರು ಎಲ್ಲರಿಗಿಂತಲೂ ಹೆಚ್ಚು ಬಾಧಿತರಾಗಿದ್ದಾರೆ ಎಂದು ಪ್ರತಿಭಟನೆಯ ನಾಯಕರು ಹೇಳುತ್ತಾರೆ.

ಪ್ರತಿಭಟನಕಾರರು ಅಧ್ಯಕ್ಷೀಯ ಅರಮನೆಯ ಸುತ್ತಲಿನ ತಡೆಗಳನ್ನು ಭೇದಿಸಿ ಮುನ್ನುಗ್ಗುವ ವಿಫಲ ಪ್ರಯತ್ನ ನಡೆಸಿದ ಬಳಿಕ ಹೆದರಿದ ಮೊರೆನೊ, ತನ್ನ ಸರಕಾರವನ್ನು, ಆಡಳಿತವನ್ನು ಅಕ್ಟೋಬರ್ 7ರಂದು ಬಂದರು ನಗರ ಗ್ವಾಯಾಗುಲಿಗೆ ಸ್ಥಳಾಂತರಿಸಬೇಕಾಗಿ ಬಂದಿತ್ತು.

ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಮೇ, 2017ರಂದು ಅಧಿಕಾರ ತೊರೆದ ಮೇಲೆ ಮೊರೆನೊ ಸರಕಾರ ದೇಶವನ್ನು ಬಲಪಂಥದತ್ತ ಒಯ್ಯುತ್ತಿದೆ. ಈಗ ಮೊರೆನೊ, ಉದ್ಯಮಿಗಳು ಮತ್ತು ಸೇನೆಯ ಬೆಂಬಲ ಹೊಂದಿದ್ದರೂ, ಅವರ ಜನಪ್ರಿಯತೆ 2017ರಲ್ಲಿದ್ದ 70 ಶೇಕಡಾದಿಂದ 30 ಶೇಕಡಾಕ್ಕೆ ಕುಸಿದಿದೆ. ಮೊರೆನೊ ಅಧಿಕಾರಕ್ಕೆ ಬಂದ ಮೇಲೆ ಮಾಜಿ ಅಧ್ಯಕ್ಷ ರಫಾಯೆಲ್ ಕೊರ್ರಿಯಾ ಸರಕಾರ ತಂದಿದ್ದ ಹಲವು ಪ್ರಗತಿಪರ ಕ್ರಮಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.

ಪ್ರತಿಭಟನೆಯು ಎರಡನೇ ವಾರ ಪ್ರವೇಶಿಸುತ್ತಿದ್ದಂತೆ, ಮೂಲ ನಿವಾಸಿ ಪ್ರತಿಭಟನಕಾರರು ತಾವು ವಶಕ್ಕೆ ತೆಗೆದುಕೊಂಡ ಕೆಲವು ಪೊಲೀಸರನ್ನು ವೇದಿಕೆಯಲ್ಲಿ ಪ್ರದರ್ಶನ ಮಾಡುವ ಮೂಲಕ ಮೊರೆನೊ ಸರಕಾರಕ್ಕೆ ತಾವು ಅಂಜುವುದಿಲ್ಲ ಎಂಬ ದಿಟ್ಟ ಸಂದೇಶ ನೀಡಿದ್ದರು.

ಮೂಲನಿವಾಸಿಗಳ ಪ್ರತಿಭಟನೆಗಳು 1997ರಲ್ಲಿ ಅಬ್ದಲಾ ಬುಕಾರಮ್, 2000ದಲ್ಲಿ ಜಮಿಲ್ ಮಹುವದ್ ಮತ್ತು 2005ರಲ್ಲಿ ಲೂಸಿಯೋ ಗುಟಿಯೆರೆಝ್ ಸಹಿತ ಹಲವಾರು ಅಧ್ಯಕ್ಷರನ್ನು ಅಧಿಕಾರದಿಂದ ಕೆಳಗಿಳಿಸುವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿವೆ.

ಇದೀಗ ಪ್ರತಿಭಟನೆಗೆ ಮಣಿದಿರುವ ಮೊರೆನೊ ಸರಕಾರವು ಮೂಲನಿವಾಸಿಗಳೊಂದಿಗೆ ಬುಧವಾರ ಒಪ್ಪಂದಕ್ಕೆ ಬಂದಿದ್ದು, ಐಎಂಎಫ್ ಹೇರಿಕೆಯ ‘ಸುಧಾರಣಾ ಕ್ರಮ’ಗಳನ್ನು ಹಿಂತೆದುಕೊಳ್ಳಲು ಒಪ್ಪಿದೆ. ಇದರೊಂದಿಗೆ ಆರ್ಥಿಕತೆಯನ್ನು ಸಂಪೂರ್ಣ ನಿಷ್ಕ್ರಿಯಗೊಳಿಸಿ, ಏಳು ಜನರ ಸಾವಿಗೆ ಕಾರಣವಾದ ಹೆಚ್ಚುಕಡಿಮೆ ಎರಡು ವಾರ ಕಾಲದ ಪ್ರತಿಭಟನೆ ಕೊನೆಗೊಳ್ಳಲಿದೆ.

ಒಪ್ಪಂದದ ಪ್ರಕಾರ, ತೈಲ ಬೆಲೆ ತೀವ್ರ ಏರಿಕೆಗೆ ಕಾರಣವಾದ ಡಿಕ್ರಿ 883 ಎಂದು ಕರೆಯಲ್ಪಡುವ ಐಎಂಎಫ್ ಪ್ರೇರಿತ ಪ್ಯಾಕೇಜನ್ನು ಮೊರೆನೊ ಸರಕಾರ ಹಿಂತೆಗೆದುಕೊಳ್ಳಲಿದೆ. ಇದಕ್ಕೆ ಬದಲಾಗಿ, ಪ್ರತಿಭಟನೆ ಮತ್ತು ರಸ್ತೆ ತಡೆಯನ್ನು ಹಿಂತೆಗೆದುಕೊಳ್ಳುವಂತೆ ಮೂಲ ನಿವಾಸಿ ಗುಂಪುಗಳ ನಾಯಕರು ತಮ್ಮ ಬೆಂಬಲಿಗರಿಗೆ ಕರೆ ನೀಡಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...