HomeUncategorizedಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

ಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

- Advertisement -
- Advertisement -

ತಾಯ್ತನ ಎನ್ನುವುದು ಹೆಣ್ಣಿನ ಹೊಣೆಯೂ ಹೌದು, ಅದರ ಆಯ್ಕೆ ಅವಳ ಹಕ್ಕೂ ಹೌದು. ಆದರೆ `ಅದು ಅವಳ ಹೊಣೆ ಮಾತ್ರ’ ಎಂದು ಜಗತ್ತಿನ ಅನೇಕ ದೇಶಗಳು ಕಟ್ಟುನಿಟ್ಟು ಮಾಡಿವೆ. ಹೆಣ್ಣಿನ ಸಮ್ಮತಿ ಇಲ್ಲದೆ ಸಂಭೋಗ ನಡೆದಿರಬಹುದು, ಅತ್ಯಾಚಾರ ಆಗಿರಬಹುದು, ಬಲಾತ್ಕಾರ ನಡೆದಿರಬಹುದು- ಗಂಡಸು ಏನಾದರೂ ಮಾಡಿರಲಿ, ಅದರಿಂದ ಅವಳು ಬಸಿರಾದರೆ ಒಂಬತ್ತು ತಿಂಗಳು ಹೊತ್ತು ಮಗುವನ್ನು ಹೆರಲೇಬೇಕೇ ಹೊರತು, ಗರ್ಭಪಾತ ಮಾಡಿಸಲು ಅವಳಿಗೆ ಹಕ್ಕಿಲ್ಲ ಎಂದು ಆ ದೇಶಗಳ ಕಾನೂನುಗಳು ಹೇಳುತ್ತವೆ. ಕೆಲವೇ ದಿನಗಳ ಹಿಂದೆ, ಈಕ್ವೆಡಾರ್ ದೇಶ ಇದನ್ನು ಮತ್ತೊಮ್ಮೆ ಗಟ್ಟಿಗೊಳಿಸಿತು. ಅತ್ಯಾಚಾರದಿಂದ ಆಗುವ ಬಸಿರನ್ನು ತೆಗೆಸಿಕೊಳ್ಳಲು ಅನುಮತಿ ನೀಡುವ ತಿದ್ದುಪಡಿ ಪ್ರಸ್ತಾವನೆ ಅಲ್ಲಿನ ಸಂಸತ್ತಿನಲ್ಲಿ ಕೇವಲ ಐದು ಮತಗಳಿಂದ ಸೋಲು ಕಂಡಿತು.

ಈಕ್ವೆಡಾರ್ ದೇಶದಲ್ಲಿ 1938 ರಿಂದ ಜಾರಿಯಲ್ಲಿರುವ ಅತ್ಯಂತ ಹಳೆಯ ಕೊಳೆತ ಕಾನೂನಿನ ಪ್ರಕಾರ, ಮಾನಸಿಕ ಅಸ್ವಾಸ್ಥ್ಯ ಇರುವ ಹೆಣ್ಣಿನ ಮೇಲೆ ಅತ್ಯಾಚಾರ ನಡೆದು ಬಸಿರಾದರೆ ಮಾತ್ರ ಗರ್ಭ ತೆಗೆಸಲು ಅವಕಾಶವಿದೆ. ಇದು ಬಿಟ್ಟರೆ ಗರ್ಭದಿಂದ ಹೆಣ್ಣಿನ ಜೀವಕ್ಕೇ ತೊಂದರೆ ಇದ್ದರೆ ಮಾತ್ರ ಗರ್ಭಪಾತ ಮಾಡಿಸಬಹುದು. ಇವೆರಡು ಬಿಟ್ಟರೆ ಇನ್ನಾವ ಕಾರಣಕ್ಕೂ ಗರ್ಭಪಾತ ಮಾಡಿಸಲು ಅವಕಾಶವಿಲ್ಲ. ಏನಾದರೂ ಗರ್ಭ ತೆಗೆಸಿದರೆ, ಅದನ್ನು ಅಪರಾಧ ಎಂದು ಪರಿಗಣಿಸಿ ಸೆರೆಮನೆಗೆ ದೂಡಲಾಗುತ್ತದೆ. ಅಂದರೆ ಹೆಣ್ಣಿನ ಗರ್ಭಕೋಶ, ತಾಯ್ತನದ ಆಯ್ಕೆ ಯಾವುವೂ ಅವಳಿಗೆ ಸೇರಿಲ್ಲ, ಎಲ್ಲವೂ ಪುರುಷಾಧಿಪತ್ಯ, ಅದು ರೂಪಿಸುವ ಕಾನೂನು, ಮತ್ತು ಧರ್ಮವನ್ನು ಹೊದ್ದುಕೊಂಡ ಪುರುಷ ಅಹಂಕಾರದ ಹಿಡಿತದಲ್ಲಿ ಇವೆ. ಹೆಣ್ಣನ್ನು ಬಸಿರು ಮಾಡುವುದೂ ಅದನ್ನು ಉಳಿಸುವುದೂ ಗಂಡಸಿನ ಧರ್ಮ ಎಂದು ಧರ್ಮದ ಹೆಸರಿನಲ್ಲೂ ಹೇಳಲಾಗಿದೆ. ಕೆಥೊಲಿಕ್ ಕ್ರೈಸ್ತ ಧರ್ಮದ ಪ್ರಾಬಲ್ಯ ಇರುವ ಈಕ್ವೆಡಾರ್ ಇದನ್ನೇ ಎತ್ತಿ ಹಿಡಿದಿದೆ.

ಇದನ್ನು ಓದಿ: ಸಂಪಾದಕೀಯ | ಕೊಲೆ, ಅತ್ಯಾಚಾರದ ಬೆದರಿಕೆಗಳಿಗೆ ರಾಜಾಶ್ರಯವಿದ್ದಾಗ…?

ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಎಗ್ಗುಸಿಗ್ಗಿಲ್ಲದೆ ಸಾಂಕ್ರಾಮಿಕ ರೋಗದಂತೆ ಅತ್ಯಾಚಾರ ನಡೆಯುತ್ತಿದೆ, ತೀರಾ ಕಿರಿಯ ವಯಸ್ಸಿನ ಹುಡುಗಿಯರು ಬಸುರಿಯರಾಗುತ್ತಿದ್ದಾರೆ, ಪ್ರತಿದಿನ ಕನಿಷ್ಠ ಹನ್ನೊಂದು ಅತ್ಯಾಚಾರಗಳಾದರೂ ವರದಿಯಾಗುತ್ತವೆ. ಲೈಂಗಿಕ ಸಂಪರ್ಕಕ್ಕೆ ಸಮ್ಮತಿ ನೀಡಲು ಹದಿನಾಲ್ಕು ವರ್ಷ ಆಗಿರಬೇಕು ಎಂಬ ನಿಯಮ ಆ ದೇಶದಲ್ಲಿದೆ, ಆದರೆ ಪ್ರತಿದಿನ ಆ ವಯಸ್ಸಿಗಿಂತ ಚಿಕ್ಕವರಾದ ಏಳು ಹುಡುಗಿಯರು ಮಗುವಿಗೆ ಜನ್ಮ ನೀಡುತ್ತಾರೆ. 15 ರಿಂದ 19 ವಯಸ್ಸಿನೊಳಗೆ ಮಗು ಹೆರುವ ಹುಡುಗಿಯರಲ್ಲಿ ಬಹುಪಾಲು ಅತ್ಯಾಚಾರದ ಬಲಿಪಶುಗಳೇ ಆಗಿರುತ್ತಾರೆ. ಇಂಥ ಹೀನ ಕೃತ್ಯದಿಂದ ಬೇಡದ ಬಸಿರು ಹೊರುವ ಹೆಣ್ಣು ಮಕ್ಕಳಿಗೆ ಗರ್ಭಪಾತದ ಹಕ್ಕು ನೀಡಬೇಕು ಎಂಬ ಆಂದೋಲನವೇ ಶುರುವಾಗಿ, ತಿದ್ದುಪಡಿಗೆ ಒತ್ತಾಯಿಸಲಾಗಿತ್ತು.

ಆದರೆ ಈ ತಿದ್ದುಪಡಿ ಪ್ರಸ್ತಾವನೆಗೆ ಉಗ್ರ ವಿರೋಧವೂ ಇತ್ತು. ಇದು ಧರ್ಮದ್ರೋಹ, ದೇವರು ಕೊಟ್ಟ ಜೀವವನ್ನು ಹೊಸಕಿಹಾಕಬಾರದು, ಆ ಕಾರಣ ಗರ್ಭಪಾತಕ್ಕೆ ಮುಕ್ತ ಅವಕಾಶ ಕೊಡಬಾರದು ಎಂದು ಅದರ ವಿರೋಧಿಗಳು ಆಗ್ರಹಿಸಿದ್ದರು. ಇದಕ್ಕೆ ಅವಕಾಶ ಕೊಡಬೇಡಿ ಎಂದು ಕ್ಯಾಥೊಲಿಕ್ ಚರ್ಚಿನ ಆರ್ಚ್‍ಬಿಷಪ್ ಬೇರೆ ಕರೆನೀಡಿದ್ದರು. ಹೆಣ್ಣಿನ ಹಕ್ಕನ್ನು ಹತ್ತಿಕ್ಕಿ ಅವಳಿಗೆ ಬೇಡದ ಮಗುವನ್ನು ಉಳಿಸುವುದು ಜೀವಪ್ರೀತಿ ಎನ್ನುವ ಧರ್ಮಾಧಿಕಾರಿಗಳು ಮತ್ತು ಸನಾತನವಾದಿಗಳು ಜಗತ್ತಿನಾದ್ಯಂತ ನಡೆಯುವ ಯುದ್ಧಗಳಲ್ಲಿ ಆಗುವ ಸಾವುನೋವುಗಳ ಬಗ್ಗೆ ಸೊಲ್ಲೆತ್ತುವುದಿಲ್ಲ. ಒಟ್ಟಿನಲ್ಲಿ ಅವರ ಕೈಮೇಲಾಯಿತು. ರಾಜಧಾನಿ ಕ್ವಿಟೋದಲ್ಲಿರುವ ಸಂಸತ್ತಿನಲ್ಲಿ ಮತದಾನ ಆಗುತ್ತಿದ್ದಾಗ ಅದರ ಹೊರಗೆ ಸೇರಿದ್ದ ಗರ್ಭಪಾತ ನಮ್ಮ ಹಕ್ಕು ಎನ್ನುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಮೆಣಸಿನಪುಡಿ ಎರಚಿ ಅವರನ್ನು ದೂರ ಅಟ್ಟಿದರು.

ಇದನ್ನು ಓದಿ: ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಅತ್ಯಾಚಾರದಿಂದ ಬಸಿರಾದರೆ ಮಾತ್ರ ಅದನ್ನು ತೆಗೆಸಲು ಮೆಕ್ಸಿಕೋ, ಬ್ರೆಜಿಲ್, ಚಿಲಿ, ಅರ್ಜೆಂಟೀನ ಮುಂತಾದ ದೇಶಗಳಲ್ಲಿ ಅವಕಾಶವಿದೆ. ಇನ್ನುಳಿದಂತೆ ಗರ್ಭಪಾತ ಹೆಣ್ಣಿನ ಆಯ್ಕೆ ಆಗಿಲ್ಲ. ಆದರೆ, ಹೊಂಡುರಾಸ್, ಎಲ್ ಸಾಲ್ವಡಾರ್, ನಿಕರಾಗುವ ಮುಂತಾದ ದೇಶಗಳಲ್ಲಿ ಅದಕ್ಕೂ ಅವಕಾಶವಿಲ್ಲ. ಅದನ್ನು ಹೊತ್ತು, ಹೆತ್ತು, ಜೀವನವಿಡೀ ಅವಳು ನಿರ್ವಹಿಸಬೇಕು. ಆದ್ದರಿಂದ ಈ ದೇಶಗಳೂ ಸೇರಿ ಜಗತ್ತಿನ ಹಲವು ಭಾಗಗಳಲ್ಲಿ ಹೆಣ್ಣುಮಕ್ಕಳು, ವೈದ್ಯಕೀಯ ತರಬೇತಿ ಇಲ್ಲದ ಜನರಿಂದ ಗುಟ್ಟಾಗಿ ಗರ್ಭಪಾತ ಮಾಡಿಸಿಕೊಂಡು ಸೋಂಕು, ಶಸ್ತ್ರಗಳ ದುರ್ಬಳಕೆ ಮತ್ತಿತರ ಕಾರಣಗಳಿಂದ ಸಾವಿಗೀಡಾಗುತ್ತಾರೆ. ಹೆಣ್ಣಿನ ದೇಹ ತನಗೆ ಸೇರಿದ್ದು ಎಂಬ ಪುರುಷ ಮನೋಭಾವದಿಂದ ಕಾನೂನು ಕೂಡ ಅವಳಿಗೆ ಶತ್ರುವಾಗಿರುತ್ತದೆ. ಆ ಮನೋಭಾವ ಬದಲಾಯಿಸಲು ಪ್ರಯತ್ನಗಳು ನಡೆದರೆ ಮಾತ್ರ ಅವಳ ದುಸ್ಥಿತಿ ಬದಲಾಗಬಹುದು.

ಕೃಪೆ: ಹಿತೈಷಿಣಿ ಮಹಿಳಾ ಪತ್ರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆಯರ ಗರ್ಭದ ಮೇಲೆ ಅವರಿಗೇ ಹಕ್ಕಿಲ್ಲದಿರುವುದು ಖಂಡನಾರ್ಹ. ಇಂತಹ ಅಮಾನವೀಯ ಕಾನೂನುಗಳನ್ನು ತೊಲಗಿಸಲು ವಿಶ್ವಸಂಸ್ಥೆಯು ಪ್ರಯತ್ನ ಮಾಡಿಬೇಕು

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...