HomeUncategorizedಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

ಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

- Advertisement -
- Advertisement -

ತಾಯ್ತನ ಎನ್ನುವುದು ಹೆಣ್ಣಿನ ಹೊಣೆಯೂ ಹೌದು, ಅದರ ಆಯ್ಕೆ ಅವಳ ಹಕ್ಕೂ ಹೌದು. ಆದರೆ `ಅದು ಅವಳ ಹೊಣೆ ಮಾತ್ರ’ ಎಂದು ಜಗತ್ತಿನ ಅನೇಕ ದೇಶಗಳು ಕಟ್ಟುನಿಟ್ಟು ಮಾಡಿವೆ. ಹೆಣ್ಣಿನ ಸಮ್ಮತಿ ಇಲ್ಲದೆ ಸಂಭೋಗ ನಡೆದಿರಬಹುದು, ಅತ್ಯಾಚಾರ ಆಗಿರಬಹುದು, ಬಲಾತ್ಕಾರ ನಡೆದಿರಬಹುದು- ಗಂಡಸು ಏನಾದರೂ ಮಾಡಿರಲಿ, ಅದರಿಂದ ಅವಳು ಬಸಿರಾದರೆ ಒಂಬತ್ತು ತಿಂಗಳು ಹೊತ್ತು ಮಗುವನ್ನು ಹೆರಲೇಬೇಕೇ ಹೊರತು, ಗರ್ಭಪಾತ ಮಾಡಿಸಲು ಅವಳಿಗೆ ಹಕ್ಕಿಲ್ಲ ಎಂದು ಆ ದೇಶಗಳ ಕಾನೂನುಗಳು ಹೇಳುತ್ತವೆ. ಕೆಲವೇ ದಿನಗಳ ಹಿಂದೆ, ಈಕ್ವೆಡಾರ್ ದೇಶ ಇದನ್ನು ಮತ್ತೊಮ್ಮೆ ಗಟ್ಟಿಗೊಳಿಸಿತು. ಅತ್ಯಾಚಾರದಿಂದ ಆಗುವ ಬಸಿರನ್ನು ತೆಗೆಸಿಕೊಳ್ಳಲು ಅನುಮತಿ ನೀಡುವ ತಿದ್ದುಪಡಿ ಪ್ರಸ್ತಾವನೆ ಅಲ್ಲಿನ ಸಂಸತ್ತಿನಲ್ಲಿ ಕೇವಲ ಐದು ಮತಗಳಿಂದ ಸೋಲು ಕಂಡಿತು.

ಈಕ್ವೆಡಾರ್ ದೇಶದಲ್ಲಿ 1938 ರಿಂದ ಜಾರಿಯಲ್ಲಿರುವ ಅತ್ಯಂತ ಹಳೆಯ ಕೊಳೆತ ಕಾನೂನಿನ ಪ್ರಕಾರ, ಮಾನಸಿಕ ಅಸ್ವಾಸ್ಥ್ಯ ಇರುವ ಹೆಣ್ಣಿನ ಮೇಲೆ ಅತ್ಯಾಚಾರ ನಡೆದು ಬಸಿರಾದರೆ ಮಾತ್ರ ಗರ್ಭ ತೆಗೆಸಲು ಅವಕಾಶವಿದೆ. ಇದು ಬಿಟ್ಟರೆ ಗರ್ಭದಿಂದ ಹೆಣ್ಣಿನ ಜೀವಕ್ಕೇ ತೊಂದರೆ ಇದ್ದರೆ ಮಾತ್ರ ಗರ್ಭಪಾತ ಮಾಡಿಸಬಹುದು. ಇವೆರಡು ಬಿಟ್ಟರೆ ಇನ್ನಾವ ಕಾರಣಕ್ಕೂ ಗರ್ಭಪಾತ ಮಾಡಿಸಲು ಅವಕಾಶವಿಲ್ಲ. ಏನಾದರೂ ಗರ್ಭ ತೆಗೆಸಿದರೆ, ಅದನ್ನು ಅಪರಾಧ ಎಂದು ಪರಿಗಣಿಸಿ ಸೆರೆಮನೆಗೆ ದೂಡಲಾಗುತ್ತದೆ. ಅಂದರೆ ಹೆಣ್ಣಿನ ಗರ್ಭಕೋಶ, ತಾಯ್ತನದ ಆಯ್ಕೆ ಯಾವುವೂ ಅವಳಿಗೆ ಸೇರಿಲ್ಲ, ಎಲ್ಲವೂ ಪುರುಷಾಧಿಪತ್ಯ, ಅದು ರೂಪಿಸುವ ಕಾನೂನು, ಮತ್ತು ಧರ್ಮವನ್ನು ಹೊದ್ದುಕೊಂಡ ಪುರುಷ ಅಹಂಕಾರದ ಹಿಡಿತದಲ್ಲಿ ಇವೆ. ಹೆಣ್ಣನ್ನು ಬಸಿರು ಮಾಡುವುದೂ ಅದನ್ನು ಉಳಿಸುವುದೂ ಗಂಡಸಿನ ಧರ್ಮ ಎಂದು ಧರ್ಮದ ಹೆಸರಿನಲ್ಲೂ ಹೇಳಲಾಗಿದೆ. ಕೆಥೊಲಿಕ್ ಕ್ರೈಸ್ತ ಧರ್ಮದ ಪ್ರಾಬಲ್ಯ ಇರುವ ಈಕ್ವೆಡಾರ್ ಇದನ್ನೇ ಎತ್ತಿ ಹಿಡಿದಿದೆ.

ಇದನ್ನು ಓದಿ: ಸಂಪಾದಕೀಯ | ಕೊಲೆ, ಅತ್ಯಾಚಾರದ ಬೆದರಿಕೆಗಳಿಗೆ ರಾಜಾಶ್ರಯವಿದ್ದಾಗ…?

ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಎಗ್ಗುಸಿಗ್ಗಿಲ್ಲದೆ ಸಾಂಕ್ರಾಮಿಕ ರೋಗದಂತೆ ಅತ್ಯಾಚಾರ ನಡೆಯುತ್ತಿದೆ, ತೀರಾ ಕಿರಿಯ ವಯಸ್ಸಿನ ಹುಡುಗಿಯರು ಬಸುರಿಯರಾಗುತ್ತಿದ್ದಾರೆ, ಪ್ರತಿದಿನ ಕನಿಷ್ಠ ಹನ್ನೊಂದು ಅತ್ಯಾಚಾರಗಳಾದರೂ ವರದಿಯಾಗುತ್ತವೆ. ಲೈಂಗಿಕ ಸಂಪರ್ಕಕ್ಕೆ ಸಮ್ಮತಿ ನೀಡಲು ಹದಿನಾಲ್ಕು ವರ್ಷ ಆಗಿರಬೇಕು ಎಂಬ ನಿಯಮ ಆ ದೇಶದಲ್ಲಿದೆ, ಆದರೆ ಪ್ರತಿದಿನ ಆ ವಯಸ್ಸಿಗಿಂತ ಚಿಕ್ಕವರಾದ ಏಳು ಹುಡುಗಿಯರು ಮಗುವಿಗೆ ಜನ್ಮ ನೀಡುತ್ತಾರೆ. 15 ರಿಂದ 19 ವಯಸ್ಸಿನೊಳಗೆ ಮಗು ಹೆರುವ ಹುಡುಗಿಯರಲ್ಲಿ ಬಹುಪಾಲು ಅತ್ಯಾಚಾರದ ಬಲಿಪಶುಗಳೇ ಆಗಿರುತ್ತಾರೆ. ಇಂಥ ಹೀನ ಕೃತ್ಯದಿಂದ ಬೇಡದ ಬಸಿರು ಹೊರುವ ಹೆಣ್ಣು ಮಕ್ಕಳಿಗೆ ಗರ್ಭಪಾತದ ಹಕ್ಕು ನೀಡಬೇಕು ಎಂಬ ಆಂದೋಲನವೇ ಶುರುವಾಗಿ, ತಿದ್ದುಪಡಿಗೆ ಒತ್ತಾಯಿಸಲಾಗಿತ್ತು.

ಆದರೆ ಈ ತಿದ್ದುಪಡಿ ಪ್ರಸ್ತಾವನೆಗೆ ಉಗ್ರ ವಿರೋಧವೂ ಇತ್ತು. ಇದು ಧರ್ಮದ್ರೋಹ, ದೇವರು ಕೊಟ್ಟ ಜೀವವನ್ನು ಹೊಸಕಿಹಾಕಬಾರದು, ಆ ಕಾರಣ ಗರ್ಭಪಾತಕ್ಕೆ ಮುಕ್ತ ಅವಕಾಶ ಕೊಡಬಾರದು ಎಂದು ಅದರ ವಿರೋಧಿಗಳು ಆಗ್ರಹಿಸಿದ್ದರು. ಇದಕ್ಕೆ ಅವಕಾಶ ಕೊಡಬೇಡಿ ಎಂದು ಕ್ಯಾಥೊಲಿಕ್ ಚರ್ಚಿನ ಆರ್ಚ್‍ಬಿಷಪ್ ಬೇರೆ ಕರೆನೀಡಿದ್ದರು. ಹೆಣ್ಣಿನ ಹಕ್ಕನ್ನು ಹತ್ತಿಕ್ಕಿ ಅವಳಿಗೆ ಬೇಡದ ಮಗುವನ್ನು ಉಳಿಸುವುದು ಜೀವಪ್ರೀತಿ ಎನ್ನುವ ಧರ್ಮಾಧಿಕಾರಿಗಳು ಮತ್ತು ಸನಾತನವಾದಿಗಳು ಜಗತ್ತಿನಾದ್ಯಂತ ನಡೆಯುವ ಯುದ್ಧಗಳಲ್ಲಿ ಆಗುವ ಸಾವುನೋವುಗಳ ಬಗ್ಗೆ ಸೊಲ್ಲೆತ್ತುವುದಿಲ್ಲ. ಒಟ್ಟಿನಲ್ಲಿ ಅವರ ಕೈಮೇಲಾಯಿತು. ರಾಜಧಾನಿ ಕ್ವಿಟೋದಲ್ಲಿರುವ ಸಂಸತ್ತಿನಲ್ಲಿ ಮತದಾನ ಆಗುತ್ತಿದ್ದಾಗ ಅದರ ಹೊರಗೆ ಸೇರಿದ್ದ ಗರ್ಭಪಾತ ನಮ್ಮ ಹಕ್ಕು ಎನ್ನುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಮೆಣಸಿನಪುಡಿ ಎರಚಿ ಅವರನ್ನು ದೂರ ಅಟ್ಟಿದರು.

ಇದನ್ನು ಓದಿ: ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಅತ್ಯಾಚಾರದಿಂದ ಬಸಿರಾದರೆ ಮಾತ್ರ ಅದನ್ನು ತೆಗೆಸಲು ಮೆಕ್ಸಿಕೋ, ಬ್ರೆಜಿಲ್, ಚಿಲಿ, ಅರ್ಜೆಂಟೀನ ಮುಂತಾದ ದೇಶಗಳಲ್ಲಿ ಅವಕಾಶವಿದೆ. ಇನ್ನುಳಿದಂತೆ ಗರ್ಭಪಾತ ಹೆಣ್ಣಿನ ಆಯ್ಕೆ ಆಗಿಲ್ಲ. ಆದರೆ, ಹೊಂಡುರಾಸ್, ಎಲ್ ಸಾಲ್ವಡಾರ್, ನಿಕರಾಗುವ ಮುಂತಾದ ದೇಶಗಳಲ್ಲಿ ಅದಕ್ಕೂ ಅವಕಾಶವಿಲ್ಲ. ಅದನ್ನು ಹೊತ್ತು, ಹೆತ್ತು, ಜೀವನವಿಡೀ ಅವಳು ನಿರ್ವಹಿಸಬೇಕು. ಆದ್ದರಿಂದ ಈ ದೇಶಗಳೂ ಸೇರಿ ಜಗತ್ತಿನ ಹಲವು ಭಾಗಗಳಲ್ಲಿ ಹೆಣ್ಣುಮಕ್ಕಳು, ವೈದ್ಯಕೀಯ ತರಬೇತಿ ಇಲ್ಲದ ಜನರಿಂದ ಗುಟ್ಟಾಗಿ ಗರ್ಭಪಾತ ಮಾಡಿಸಿಕೊಂಡು ಸೋಂಕು, ಶಸ್ತ್ರಗಳ ದುರ್ಬಳಕೆ ಮತ್ತಿತರ ಕಾರಣಗಳಿಂದ ಸಾವಿಗೀಡಾಗುತ್ತಾರೆ. ಹೆಣ್ಣಿನ ದೇಹ ತನಗೆ ಸೇರಿದ್ದು ಎಂಬ ಪುರುಷ ಮನೋಭಾವದಿಂದ ಕಾನೂನು ಕೂಡ ಅವಳಿಗೆ ಶತ್ರುವಾಗಿರುತ್ತದೆ. ಆ ಮನೋಭಾವ ಬದಲಾಯಿಸಲು ಪ್ರಯತ್ನಗಳು ನಡೆದರೆ ಮಾತ್ರ ಅವಳ ದುಸ್ಥಿತಿ ಬದಲಾಗಬಹುದು.

ಕೃಪೆ: ಹಿತೈಷಿಣಿ ಮಹಿಳಾ ಪತ್ರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆಯರ ಗರ್ಭದ ಮೇಲೆ ಅವರಿಗೇ ಹಕ್ಕಿಲ್ಲದಿರುವುದು ಖಂಡನಾರ್ಹ. ಇಂತಹ ಅಮಾನವೀಯ ಕಾನೂನುಗಳನ್ನು ತೊಲಗಿಸಲು ವಿಶ್ವಸಂಸ್ಥೆಯು ಪ್ರಯತ್ನ ಮಾಡಿಬೇಕು

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...