HomeUncategorizedಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

ಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

- Advertisement -
- Advertisement -

ತಾಯ್ತನ ಎನ್ನುವುದು ಹೆಣ್ಣಿನ ಹೊಣೆಯೂ ಹೌದು, ಅದರ ಆಯ್ಕೆ ಅವಳ ಹಕ್ಕೂ ಹೌದು. ಆದರೆ `ಅದು ಅವಳ ಹೊಣೆ ಮಾತ್ರ’ ಎಂದು ಜಗತ್ತಿನ ಅನೇಕ ದೇಶಗಳು ಕಟ್ಟುನಿಟ್ಟು ಮಾಡಿವೆ. ಹೆಣ್ಣಿನ ಸಮ್ಮತಿ ಇಲ್ಲದೆ ಸಂಭೋಗ ನಡೆದಿರಬಹುದು, ಅತ್ಯಾಚಾರ ಆಗಿರಬಹುದು, ಬಲಾತ್ಕಾರ ನಡೆದಿರಬಹುದು- ಗಂಡಸು ಏನಾದರೂ ಮಾಡಿರಲಿ, ಅದರಿಂದ ಅವಳು ಬಸಿರಾದರೆ ಒಂಬತ್ತು ತಿಂಗಳು ಹೊತ್ತು ಮಗುವನ್ನು ಹೆರಲೇಬೇಕೇ ಹೊರತು, ಗರ್ಭಪಾತ ಮಾಡಿಸಲು ಅವಳಿಗೆ ಹಕ್ಕಿಲ್ಲ ಎಂದು ಆ ದೇಶಗಳ ಕಾನೂನುಗಳು ಹೇಳುತ್ತವೆ. ಕೆಲವೇ ದಿನಗಳ ಹಿಂದೆ, ಈಕ್ವೆಡಾರ್ ದೇಶ ಇದನ್ನು ಮತ್ತೊಮ್ಮೆ ಗಟ್ಟಿಗೊಳಿಸಿತು. ಅತ್ಯಾಚಾರದಿಂದ ಆಗುವ ಬಸಿರನ್ನು ತೆಗೆಸಿಕೊಳ್ಳಲು ಅನುಮತಿ ನೀಡುವ ತಿದ್ದುಪಡಿ ಪ್ರಸ್ತಾವನೆ ಅಲ್ಲಿನ ಸಂಸತ್ತಿನಲ್ಲಿ ಕೇವಲ ಐದು ಮತಗಳಿಂದ ಸೋಲು ಕಂಡಿತು.

ಈಕ್ವೆಡಾರ್ ದೇಶದಲ್ಲಿ 1938 ರಿಂದ ಜಾರಿಯಲ್ಲಿರುವ ಅತ್ಯಂತ ಹಳೆಯ ಕೊಳೆತ ಕಾನೂನಿನ ಪ್ರಕಾರ, ಮಾನಸಿಕ ಅಸ್ವಾಸ್ಥ್ಯ ಇರುವ ಹೆಣ್ಣಿನ ಮೇಲೆ ಅತ್ಯಾಚಾರ ನಡೆದು ಬಸಿರಾದರೆ ಮಾತ್ರ ಗರ್ಭ ತೆಗೆಸಲು ಅವಕಾಶವಿದೆ. ಇದು ಬಿಟ್ಟರೆ ಗರ್ಭದಿಂದ ಹೆಣ್ಣಿನ ಜೀವಕ್ಕೇ ತೊಂದರೆ ಇದ್ದರೆ ಮಾತ್ರ ಗರ್ಭಪಾತ ಮಾಡಿಸಬಹುದು. ಇವೆರಡು ಬಿಟ್ಟರೆ ಇನ್ನಾವ ಕಾರಣಕ್ಕೂ ಗರ್ಭಪಾತ ಮಾಡಿಸಲು ಅವಕಾಶವಿಲ್ಲ. ಏನಾದರೂ ಗರ್ಭ ತೆಗೆಸಿದರೆ, ಅದನ್ನು ಅಪರಾಧ ಎಂದು ಪರಿಗಣಿಸಿ ಸೆರೆಮನೆಗೆ ದೂಡಲಾಗುತ್ತದೆ. ಅಂದರೆ ಹೆಣ್ಣಿನ ಗರ್ಭಕೋಶ, ತಾಯ್ತನದ ಆಯ್ಕೆ ಯಾವುವೂ ಅವಳಿಗೆ ಸೇರಿಲ್ಲ, ಎಲ್ಲವೂ ಪುರುಷಾಧಿಪತ್ಯ, ಅದು ರೂಪಿಸುವ ಕಾನೂನು, ಮತ್ತು ಧರ್ಮವನ್ನು ಹೊದ್ದುಕೊಂಡ ಪುರುಷ ಅಹಂಕಾರದ ಹಿಡಿತದಲ್ಲಿ ಇವೆ. ಹೆಣ್ಣನ್ನು ಬಸಿರು ಮಾಡುವುದೂ ಅದನ್ನು ಉಳಿಸುವುದೂ ಗಂಡಸಿನ ಧರ್ಮ ಎಂದು ಧರ್ಮದ ಹೆಸರಿನಲ್ಲೂ ಹೇಳಲಾಗಿದೆ. ಕೆಥೊಲಿಕ್ ಕ್ರೈಸ್ತ ಧರ್ಮದ ಪ್ರಾಬಲ್ಯ ಇರುವ ಈಕ್ವೆಡಾರ್ ಇದನ್ನೇ ಎತ್ತಿ ಹಿಡಿದಿದೆ.

ಇದನ್ನು ಓದಿ: ಸಂಪಾದಕೀಯ | ಕೊಲೆ, ಅತ್ಯಾಚಾರದ ಬೆದರಿಕೆಗಳಿಗೆ ರಾಜಾಶ್ರಯವಿದ್ದಾಗ…?

ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಎಗ್ಗುಸಿಗ್ಗಿಲ್ಲದೆ ಸಾಂಕ್ರಾಮಿಕ ರೋಗದಂತೆ ಅತ್ಯಾಚಾರ ನಡೆಯುತ್ತಿದೆ, ತೀರಾ ಕಿರಿಯ ವಯಸ್ಸಿನ ಹುಡುಗಿಯರು ಬಸುರಿಯರಾಗುತ್ತಿದ್ದಾರೆ, ಪ್ರತಿದಿನ ಕನಿಷ್ಠ ಹನ್ನೊಂದು ಅತ್ಯಾಚಾರಗಳಾದರೂ ವರದಿಯಾಗುತ್ತವೆ. ಲೈಂಗಿಕ ಸಂಪರ್ಕಕ್ಕೆ ಸಮ್ಮತಿ ನೀಡಲು ಹದಿನಾಲ್ಕು ವರ್ಷ ಆಗಿರಬೇಕು ಎಂಬ ನಿಯಮ ಆ ದೇಶದಲ್ಲಿದೆ, ಆದರೆ ಪ್ರತಿದಿನ ಆ ವಯಸ್ಸಿಗಿಂತ ಚಿಕ್ಕವರಾದ ಏಳು ಹುಡುಗಿಯರು ಮಗುವಿಗೆ ಜನ್ಮ ನೀಡುತ್ತಾರೆ. 15 ರಿಂದ 19 ವಯಸ್ಸಿನೊಳಗೆ ಮಗು ಹೆರುವ ಹುಡುಗಿಯರಲ್ಲಿ ಬಹುಪಾಲು ಅತ್ಯಾಚಾರದ ಬಲಿಪಶುಗಳೇ ಆಗಿರುತ್ತಾರೆ. ಇಂಥ ಹೀನ ಕೃತ್ಯದಿಂದ ಬೇಡದ ಬಸಿರು ಹೊರುವ ಹೆಣ್ಣು ಮಕ್ಕಳಿಗೆ ಗರ್ಭಪಾತದ ಹಕ್ಕು ನೀಡಬೇಕು ಎಂಬ ಆಂದೋಲನವೇ ಶುರುವಾಗಿ, ತಿದ್ದುಪಡಿಗೆ ಒತ್ತಾಯಿಸಲಾಗಿತ್ತು.

ಆದರೆ ಈ ತಿದ್ದುಪಡಿ ಪ್ರಸ್ತಾವನೆಗೆ ಉಗ್ರ ವಿರೋಧವೂ ಇತ್ತು. ಇದು ಧರ್ಮದ್ರೋಹ, ದೇವರು ಕೊಟ್ಟ ಜೀವವನ್ನು ಹೊಸಕಿಹಾಕಬಾರದು, ಆ ಕಾರಣ ಗರ್ಭಪಾತಕ್ಕೆ ಮುಕ್ತ ಅವಕಾಶ ಕೊಡಬಾರದು ಎಂದು ಅದರ ವಿರೋಧಿಗಳು ಆಗ್ರಹಿಸಿದ್ದರು. ಇದಕ್ಕೆ ಅವಕಾಶ ಕೊಡಬೇಡಿ ಎಂದು ಕ್ಯಾಥೊಲಿಕ್ ಚರ್ಚಿನ ಆರ್ಚ್‍ಬಿಷಪ್ ಬೇರೆ ಕರೆನೀಡಿದ್ದರು. ಹೆಣ್ಣಿನ ಹಕ್ಕನ್ನು ಹತ್ತಿಕ್ಕಿ ಅವಳಿಗೆ ಬೇಡದ ಮಗುವನ್ನು ಉಳಿಸುವುದು ಜೀವಪ್ರೀತಿ ಎನ್ನುವ ಧರ್ಮಾಧಿಕಾರಿಗಳು ಮತ್ತು ಸನಾತನವಾದಿಗಳು ಜಗತ್ತಿನಾದ್ಯಂತ ನಡೆಯುವ ಯುದ್ಧಗಳಲ್ಲಿ ಆಗುವ ಸಾವುನೋವುಗಳ ಬಗ್ಗೆ ಸೊಲ್ಲೆತ್ತುವುದಿಲ್ಲ. ಒಟ್ಟಿನಲ್ಲಿ ಅವರ ಕೈಮೇಲಾಯಿತು. ರಾಜಧಾನಿ ಕ್ವಿಟೋದಲ್ಲಿರುವ ಸಂಸತ್ತಿನಲ್ಲಿ ಮತದಾನ ಆಗುತ್ತಿದ್ದಾಗ ಅದರ ಹೊರಗೆ ಸೇರಿದ್ದ ಗರ್ಭಪಾತ ನಮ್ಮ ಹಕ್ಕು ಎನ್ನುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಮೆಣಸಿನಪುಡಿ ಎರಚಿ ಅವರನ್ನು ದೂರ ಅಟ್ಟಿದರು.

ಇದನ್ನು ಓದಿ: ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಅತ್ಯಾಚಾರದಿಂದ ಬಸಿರಾದರೆ ಮಾತ್ರ ಅದನ್ನು ತೆಗೆಸಲು ಮೆಕ್ಸಿಕೋ, ಬ್ರೆಜಿಲ್, ಚಿಲಿ, ಅರ್ಜೆಂಟೀನ ಮುಂತಾದ ದೇಶಗಳಲ್ಲಿ ಅವಕಾಶವಿದೆ. ಇನ್ನುಳಿದಂತೆ ಗರ್ಭಪಾತ ಹೆಣ್ಣಿನ ಆಯ್ಕೆ ಆಗಿಲ್ಲ. ಆದರೆ, ಹೊಂಡುರಾಸ್, ಎಲ್ ಸಾಲ್ವಡಾರ್, ನಿಕರಾಗುವ ಮುಂತಾದ ದೇಶಗಳಲ್ಲಿ ಅದಕ್ಕೂ ಅವಕಾಶವಿಲ್ಲ. ಅದನ್ನು ಹೊತ್ತು, ಹೆತ್ತು, ಜೀವನವಿಡೀ ಅವಳು ನಿರ್ವಹಿಸಬೇಕು. ಆದ್ದರಿಂದ ಈ ದೇಶಗಳೂ ಸೇರಿ ಜಗತ್ತಿನ ಹಲವು ಭಾಗಗಳಲ್ಲಿ ಹೆಣ್ಣುಮಕ್ಕಳು, ವೈದ್ಯಕೀಯ ತರಬೇತಿ ಇಲ್ಲದ ಜನರಿಂದ ಗುಟ್ಟಾಗಿ ಗರ್ಭಪಾತ ಮಾಡಿಸಿಕೊಂಡು ಸೋಂಕು, ಶಸ್ತ್ರಗಳ ದುರ್ಬಳಕೆ ಮತ್ತಿತರ ಕಾರಣಗಳಿಂದ ಸಾವಿಗೀಡಾಗುತ್ತಾರೆ. ಹೆಣ್ಣಿನ ದೇಹ ತನಗೆ ಸೇರಿದ್ದು ಎಂಬ ಪುರುಷ ಮನೋಭಾವದಿಂದ ಕಾನೂನು ಕೂಡ ಅವಳಿಗೆ ಶತ್ರುವಾಗಿರುತ್ತದೆ. ಆ ಮನೋಭಾವ ಬದಲಾಯಿಸಲು ಪ್ರಯತ್ನಗಳು ನಡೆದರೆ ಮಾತ್ರ ಅವಳ ದುಸ್ಥಿತಿ ಬದಲಾಗಬಹುದು.

ಕೃಪೆ: ಹಿತೈಷಿಣಿ ಮಹಿಳಾ ಪತ್ರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆಯರ ಗರ್ಭದ ಮೇಲೆ ಅವರಿಗೇ ಹಕ್ಕಿಲ್ಲದಿರುವುದು ಖಂಡನಾರ್ಹ. ಇಂತಹ ಅಮಾನವೀಯ ಕಾನೂನುಗಳನ್ನು ತೊಲಗಿಸಲು ವಿಶ್ವಸಂಸ್ಥೆಯು ಪ್ರಯತ್ನ ಮಾಡಿಬೇಕು

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...