HomeUncategorizedಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

ಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

- Advertisement -
- Advertisement -

ತಾಯ್ತನ ಎನ್ನುವುದು ಹೆಣ್ಣಿನ ಹೊಣೆಯೂ ಹೌದು, ಅದರ ಆಯ್ಕೆ ಅವಳ ಹಕ್ಕೂ ಹೌದು. ಆದರೆ `ಅದು ಅವಳ ಹೊಣೆ ಮಾತ್ರ’ ಎಂದು ಜಗತ್ತಿನ ಅನೇಕ ದೇಶಗಳು ಕಟ್ಟುನಿಟ್ಟು ಮಾಡಿವೆ. ಹೆಣ್ಣಿನ ಸಮ್ಮತಿ ಇಲ್ಲದೆ ಸಂಭೋಗ ನಡೆದಿರಬಹುದು, ಅತ್ಯಾಚಾರ ಆಗಿರಬಹುದು, ಬಲಾತ್ಕಾರ ನಡೆದಿರಬಹುದು- ಗಂಡಸು ಏನಾದರೂ ಮಾಡಿರಲಿ, ಅದರಿಂದ ಅವಳು ಬಸಿರಾದರೆ ಒಂಬತ್ತು ತಿಂಗಳು ಹೊತ್ತು ಮಗುವನ್ನು ಹೆರಲೇಬೇಕೇ ಹೊರತು, ಗರ್ಭಪಾತ ಮಾಡಿಸಲು ಅವಳಿಗೆ ಹಕ್ಕಿಲ್ಲ ಎಂದು ಆ ದೇಶಗಳ ಕಾನೂನುಗಳು ಹೇಳುತ್ತವೆ. ಕೆಲವೇ ದಿನಗಳ ಹಿಂದೆ, ಈಕ್ವೆಡಾರ್ ದೇಶ ಇದನ್ನು ಮತ್ತೊಮ್ಮೆ ಗಟ್ಟಿಗೊಳಿಸಿತು. ಅತ್ಯಾಚಾರದಿಂದ ಆಗುವ ಬಸಿರನ್ನು ತೆಗೆಸಿಕೊಳ್ಳಲು ಅನುಮತಿ ನೀಡುವ ತಿದ್ದುಪಡಿ ಪ್ರಸ್ತಾವನೆ ಅಲ್ಲಿನ ಸಂಸತ್ತಿನಲ್ಲಿ ಕೇವಲ ಐದು ಮತಗಳಿಂದ ಸೋಲು ಕಂಡಿತು.

ಈಕ್ವೆಡಾರ್ ದೇಶದಲ್ಲಿ 1938 ರಿಂದ ಜಾರಿಯಲ್ಲಿರುವ ಅತ್ಯಂತ ಹಳೆಯ ಕೊಳೆತ ಕಾನೂನಿನ ಪ್ರಕಾರ, ಮಾನಸಿಕ ಅಸ್ವಾಸ್ಥ್ಯ ಇರುವ ಹೆಣ್ಣಿನ ಮೇಲೆ ಅತ್ಯಾಚಾರ ನಡೆದು ಬಸಿರಾದರೆ ಮಾತ್ರ ಗರ್ಭ ತೆಗೆಸಲು ಅವಕಾಶವಿದೆ. ಇದು ಬಿಟ್ಟರೆ ಗರ್ಭದಿಂದ ಹೆಣ್ಣಿನ ಜೀವಕ್ಕೇ ತೊಂದರೆ ಇದ್ದರೆ ಮಾತ್ರ ಗರ್ಭಪಾತ ಮಾಡಿಸಬಹುದು. ಇವೆರಡು ಬಿಟ್ಟರೆ ಇನ್ನಾವ ಕಾರಣಕ್ಕೂ ಗರ್ಭಪಾತ ಮಾಡಿಸಲು ಅವಕಾಶವಿಲ್ಲ. ಏನಾದರೂ ಗರ್ಭ ತೆಗೆಸಿದರೆ, ಅದನ್ನು ಅಪರಾಧ ಎಂದು ಪರಿಗಣಿಸಿ ಸೆರೆಮನೆಗೆ ದೂಡಲಾಗುತ್ತದೆ. ಅಂದರೆ ಹೆಣ್ಣಿನ ಗರ್ಭಕೋಶ, ತಾಯ್ತನದ ಆಯ್ಕೆ ಯಾವುವೂ ಅವಳಿಗೆ ಸೇರಿಲ್ಲ, ಎಲ್ಲವೂ ಪುರುಷಾಧಿಪತ್ಯ, ಅದು ರೂಪಿಸುವ ಕಾನೂನು, ಮತ್ತು ಧರ್ಮವನ್ನು ಹೊದ್ದುಕೊಂಡ ಪುರುಷ ಅಹಂಕಾರದ ಹಿಡಿತದಲ್ಲಿ ಇವೆ. ಹೆಣ್ಣನ್ನು ಬಸಿರು ಮಾಡುವುದೂ ಅದನ್ನು ಉಳಿಸುವುದೂ ಗಂಡಸಿನ ಧರ್ಮ ಎಂದು ಧರ್ಮದ ಹೆಸರಿನಲ್ಲೂ ಹೇಳಲಾಗಿದೆ. ಕೆಥೊಲಿಕ್ ಕ್ರೈಸ್ತ ಧರ್ಮದ ಪ್ರಾಬಲ್ಯ ಇರುವ ಈಕ್ವೆಡಾರ್ ಇದನ್ನೇ ಎತ್ತಿ ಹಿಡಿದಿದೆ.

ಇದನ್ನು ಓದಿ: ಸಂಪಾದಕೀಯ | ಕೊಲೆ, ಅತ್ಯಾಚಾರದ ಬೆದರಿಕೆಗಳಿಗೆ ರಾಜಾಶ್ರಯವಿದ್ದಾಗ…?

ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಎಗ್ಗುಸಿಗ್ಗಿಲ್ಲದೆ ಸಾಂಕ್ರಾಮಿಕ ರೋಗದಂತೆ ಅತ್ಯಾಚಾರ ನಡೆಯುತ್ತಿದೆ, ತೀರಾ ಕಿರಿಯ ವಯಸ್ಸಿನ ಹುಡುಗಿಯರು ಬಸುರಿಯರಾಗುತ್ತಿದ್ದಾರೆ, ಪ್ರತಿದಿನ ಕನಿಷ್ಠ ಹನ್ನೊಂದು ಅತ್ಯಾಚಾರಗಳಾದರೂ ವರದಿಯಾಗುತ್ತವೆ. ಲೈಂಗಿಕ ಸಂಪರ್ಕಕ್ಕೆ ಸಮ್ಮತಿ ನೀಡಲು ಹದಿನಾಲ್ಕು ವರ್ಷ ಆಗಿರಬೇಕು ಎಂಬ ನಿಯಮ ಆ ದೇಶದಲ್ಲಿದೆ, ಆದರೆ ಪ್ರತಿದಿನ ಆ ವಯಸ್ಸಿಗಿಂತ ಚಿಕ್ಕವರಾದ ಏಳು ಹುಡುಗಿಯರು ಮಗುವಿಗೆ ಜನ್ಮ ನೀಡುತ್ತಾರೆ. 15 ರಿಂದ 19 ವಯಸ್ಸಿನೊಳಗೆ ಮಗು ಹೆರುವ ಹುಡುಗಿಯರಲ್ಲಿ ಬಹುಪಾಲು ಅತ್ಯಾಚಾರದ ಬಲಿಪಶುಗಳೇ ಆಗಿರುತ್ತಾರೆ. ಇಂಥ ಹೀನ ಕೃತ್ಯದಿಂದ ಬೇಡದ ಬಸಿರು ಹೊರುವ ಹೆಣ್ಣು ಮಕ್ಕಳಿಗೆ ಗರ್ಭಪಾತದ ಹಕ್ಕು ನೀಡಬೇಕು ಎಂಬ ಆಂದೋಲನವೇ ಶುರುವಾಗಿ, ತಿದ್ದುಪಡಿಗೆ ಒತ್ತಾಯಿಸಲಾಗಿತ್ತು.

ಆದರೆ ಈ ತಿದ್ದುಪಡಿ ಪ್ರಸ್ತಾವನೆಗೆ ಉಗ್ರ ವಿರೋಧವೂ ಇತ್ತು. ಇದು ಧರ್ಮದ್ರೋಹ, ದೇವರು ಕೊಟ್ಟ ಜೀವವನ್ನು ಹೊಸಕಿಹಾಕಬಾರದು, ಆ ಕಾರಣ ಗರ್ಭಪಾತಕ್ಕೆ ಮುಕ್ತ ಅವಕಾಶ ಕೊಡಬಾರದು ಎಂದು ಅದರ ವಿರೋಧಿಗಳು ಆಗ್ರಹಿಸಿದ್ದರು. ಇದಕ್ಕೆ ಅವಕಾಶ ಕೊಡಬೇಡಿ ಎಂದು ಕ್ಯಾಥೊಲಿಕ್ ಚರ್ಚಿನ ಆರ್ಚ್‍ಬಿಷಪ್ ಬೇರೆ ಕರೆನೀಡಿದ್ದರು. ಹೆಣ್ಣಿನ ಹಕ್ಕನ್ನು ಹತ್ತಿಕ್ಕಿ ಅವಳಿಗೆ ಬೇಡದ ಮಗುವನ್ನು ಉಳಿಸುವುದು ಜೀವಪ್ರೀತಿ ಎನ್ನುವ ಧರ್ಮಾಧಿಕಾರಿಗಳು ಮತ್ತು ಸನಾತನವಾದಿಗಳು ಜಗತ್ತಿನಾದ್ಯಂತ ನಡೆಯುವ ಯುದ್ಧಗಳಲ್ಲಿ ಆಗುವ ಸಾವುನೋವುಗಳ ಬಗ್ಗೆ ಸೊಲ್ಲೆತ್ತುವುದಿಲ್ಲ. ಒಟ್ಟಿನಲ್ಲಿ ಅವರ ಕೈಮೇಲಾಯಿತು. ರಾಜಧಾನಿ ಕ್ವಿಟೋದಲ್ಲಿರುವ ಸಂಸತ್ತಿನಲ್ಲಿ ಮತದಾನ ಆಗುತ್ತಿದ್ದಾಗ ಅದರ ಹೊರಗೆ ಸೇರಿದ್ದ ಗರ್ಭಪಾತ ನಮ್ಮ ಹಕ್ಕು ಎನ್ನುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಮೆಣಸಿನಪುಡಿ ಎರಚಿ ಅವರನ್ನು ದೂರ ಅಟ್ಟಿದರು.

ಇದನ್ನು ಓದಿ: ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಅತ್ಯಾಚಾರದಿಂದ ಬಸಿರಾದರೆ ಮಾತ್ರ ಅದನ್ನು ತೆಗೆಸಲು ಮೆಕ್ಸಿಕೋ, ಬ್ರೆಜಿಲ್, ಚಿಲಿ, ಅರ್ಜೆಂಟೀನ ಮುಂತಾದ ದೇಶಗಳಲ್ಲಿ ಅವಕಾಶವಿದೆ. ಇನ್ನುಳಿದಂತೆ ಗರ್ಭಪಾತ ಹೆಣ್ಣಿನ ಆಯ್ಕೆ ಆಗಿಲ್ಲ. ಆದರೆ, ಹೊಂಡುರಾಸ್, ಎಲ್ ಸಾಲ್ವಡಾರ್, ನಿಕರಾಗುವ ಮುಂತಾದ ದೇಶಗಳಲ್ಲಿ ಅದಕ್ಕೂ ಅವಕಾಶವಿಲ್ಲ. ಅದನ್ನು ಹೊತ್ತು, ಹೆತ್ತು, ಜೀವನವಿಡೀ ಅವಳು ನಿರ್ವಹಿಸಬೇಕು. ಆದ್ದರಿಂದ ಈ ದೇಶಗಳೂ ಸೇರಿ ಜಗತ್ತಿನ ಹಲವು ಭಾಗಗಳಲ್ಲಿ ಹೆಣ್ಣುಮಕ್ಕಳು, ವೈದ್ಯಕೀಯ ತರಬೇತಿ ಇಲ್ಲದ ಜನರಿಂದ ಗುಟ್ಟಾಗಿ ಗರ್ಭಪಾತ ಮಾಡಿಸಿಕೊಂಡು ಸೋಂಕು, ಶಸ್ತ್ರಗಳ ದುರ್ಬಳಕೆ ಮತ್ತಿತರ ಕಾರಣಗಳಿಂದ ಸಾವಿಗೀಡಾಗುತ್ತಾರೆ. ಹೆಣ್ಣಿನ ದೇಹ ತನಗೆ ಸೇರಿದ್ದು ಎಂಬ ಪುರುಷ ಮನೋಭಾವದಿಂದ ಕಾನೂನು ಕೂಡ ಅವಳಿಗೆ ಶತ್ರುವಾಗಿರುತ್ತದೆ. ಆ ಮನೋಭಾವ ಬದಲಾಯಿಸಲು ಪ್ರಯತ್ನಗಳು ನಡೆದರೆ ಮಾತ್ರ ಅವಳ ದುಸ್ಥಿತಿ ಬದಲಾಗಬಹುದು.

ಕೃಪೆ: ಹಿತೈಷಿಣಿ ಮಹಿಳಾ ಪತ್ರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆಯರ ಗರ್ಭದ ಮೇಲೆ ಅವರಿಗೇ ಹಕ್ಕಿಲ್ಲದಿರುವುದು ಖಂಡನಾರ್ಹ. ಇಂತಹ ಅಮಾನವೀಯ ಕಾನೂನುಗಳನ್ನು ತೊಲಗಿಸಲು ವಿಶ್ವಸಂಸ್ಥೆಯು ಪ್ರಯತ್ನ ಮಾಡಿಬೇಕು

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...