HomeUncategorizedಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

ಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

- Advertisement -
- Advertisement -

ತಾಯ್ತನ ಎನ್ನುವುದು ಹೆಣ್ಣಿನ ಹೊಣೆಯೂ ಹೌದು, ಅದರ ಆಯ್ಕೆ ಅವಳ ಹಕ್ಕೂ ಹೌದು. ಆದರೆ `ಅದು ಅವಳ ಹೊಣೆ ಮಾತ್ರ’ ಎಂದು ಜಗತ್ತಿನ ಅನೇಕ ದೇಶಗಳು ಕಟ್ಟುನಿಟ್ಟು ಮಾಡಿವೆ. ಹೆಣ್ಣಿನ ಸಮ್ಮತಿ ಇಲ್ಲದೆ ಸಂಭೋಗ ನಡೆದಿರಬಹುದು, ಅತ್ಯಾಚಾರ ಆಗಿರಬಹುದು, ಬಲಾತ್ಕಾರ ನಡೆದಿರಬಹುದು- ಗಂಡಸು ಏನಾದರೂ ಮಾಡಿರಲಿ, ಅದರಿಂದ ಅವಳು ಬಸಿರಾದರೆ ಒಂಬತ್ತು ತಿಂಗಳು ಹೊತ್ತು ಮಗುವನ್ನು ಹೆರಲೇಬೇಕೇ ಹೊರತು, ಗರ್ಭಪಾತ ಮಾಡಿಸಲು ಅವಳಿಗೆ ಹಕ್ಕಿಲ್ಲ ಎಂದು ಆ ದೇಶಗಳ ಕಾನೂನುಗಳು ಹೇಳುತ್ತವೆ. ಕೆಲವೇ ದಿನಗಳ ಹಿಂದೆ, ಈಕ್ವೆಡಾರ್ ದೇಶ ಇದನ್ನು ಮತ್ತೊಮ್ಮೆ ಗಟ್ಟಿಗೊಳಿಸಿತು. ಅತ್ಯಾಚಾರದಿಂದ ಆಗುವ ಬಸಿರನ್ನು ತೆಗೆಸಿಕೊಳ್ಳಲು ಅನುಮತಿ ನೀಡುವ ತಿದ್ದುಪಡಿ ಪ್ರಸ್ತಾವನೆ ಅಲ್ಲಿನ ಸಂಸತ್ತಿನಲ್ಲಿ ಕೇವಲ ಐದು ಮತಗಳಿಂದ ಸೋಲು ಕಂಡಿತು.

ಈಕ್ವೆಡಾರ್ ದೇಶದಲ್ಲಿ 1938 ರಿಂದ ಜಾರಿಯಲ್ಲಿರುವ ಅತ್ಯಂತ ಹಳೆಯ ಕೊಳೆತ ಕಾನೂನಿನ ಪ್ರಕಾರ, ಮಾನಸಿಕ ಅಸ್ವಾಸ್ಥ್ಯ ಇರುವ ಹೆಣ್ಣಿನ ಮೇಲೆ ಅತ್ಯಾಚಾರ ನಡೆದು ಬಸಿರಾದರೆ ಮಾತ್ರ ಗರ್ಭ ತೆಗೆಸಲು ಅವಕಾಶವಿದೆ. ಇದು ಬಿಟ್ಟರೆ ಗರ್ಭದಿಂದ ಹೆಣ್ಣಿನ ಜೀವಕ್ಕೇ ತೊಂದರೆ ಇದ್ದರೆ ಮಾತ್ರ ಗರ್ಭಪಾತ ಮಾಡಿಸಬಹುದು. ಇವೆರಡು ಬಿಟ್ಟರೆ ಇನ್ನಾವ ಕಾರಣಕ್ಕೂ ಗರ್ಭಪಾತ ಮಾಡಿಸಲು ಅವಕಾಶವಿಲ್ಲ. ಏನಾದರೂ ಗರ್ಭ ತೆಗೆಸಿದರೆ, ಅದನ್ನು ಅಪರಾಧ ಎಂದು ಪರಿಗಣಿಸಿ ಸೆರೆಮನೆಗೆ ದೂಡಲಾಗುತ್ತದೆ. ಅಂದರೆ ಹೆಣ್ಣಿನ ಗರ್ಭಕೋಶ, ತಾಯ್ತನದ ಆಯ್ಕೆ ಯಾವುವೂ ಅವಳಿಗೆ ಸೇರಿಲ್ಲ, ಎಲ್ಲವೂ ಪುರುಷಾಧಿಪತ್ಯ, ಅದು ರೂಪಿಸುವ ಕಾನೂನು, ಮತ್ತು ಧರ್ಮವನ್ನು ಹೊದ್ದುಕೊಂಡ ಪುರುಷ ಅಹಂಕಾರದ ಹಿಡಿತದಲ್ಲಿ ಇವೆ. ಹೆಣ್ಣನ್ನು ಬಸಿರು ಮಾಡುವುದೂ ಅದನ್ನು ಉಳಿಸುವುದೂ ಗಂಡಸಿನ ಧರ್ಮ ಎಂದು ಧರ್ಮದ ಹೆಸರಿನಲ್ಲೂ ಹೇಳಲಾಗಿದೆ. ಕೆಥೊಲಿಕ್ ಕ್ರೈಸ್ತ ಧರ್ಮದ ಪ್ರಾಬಲ್ಯ ಇರುವ ಈಕ್ವೆಡಾರ್ ಇದನ್ನೇ ಎತ್ತಿ ಹಿಡಿದಿದೆ.

ಇದನ್ನು ಓದಿ: ಸಂಪಾದಕೀಯ | ಕೊಲೆ, ಅತ್ಯಾಚಾರದ ಬೆದರಿಕೆಗಳಿಗೆ ರಾಜಾಶ್ರಯವಿದ್ದಾಗ…?

ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಎಗ್ಗುಸಿಗ್ಗಿಲ್ಲದೆ ಸಾಂಕ್ರಾಮಿಕ ರೋಗದಂತೆ ಅತ್ಯಾಚಾರ ನಡೆಯುತ್ತಿದೆ, ತೀರಾ ಕಿರಿಯ ವಯಸ್ಸಿನ ಹುಡುಗಿಯರು ಬಸುರಿಯರಾಗುತ್ತಿದ್ದಾರೆ, ಪ್ರತಿದಿನ ಕನಿಷ್ಠ ಹನ್ನೊಂದು ಅತ್ಯಾಚಾರಗಳಾದರೂ ವರದಿಯಾಗುತ್ತವೆ. ಲೈಂಗಿಕ ಸಂಪರ್ಕಕ್ಕೆ ಸಮ್ಮತಿ ನೀಡಲು ಹದಿನಾಲ್ಕು ವರ್ಷ ಆಗಿರಬೇಕು ಎಂಬ ನಿಯಮ ಆ ದೇಶದಲ್ಲಿದೆ, ಆದರೆ ಪ್ರತಿದಿನ ಆ ವಯಸ್ಸಿಗಿಂತ ಚಿಕ್ಕವರಾದ ಏಳು ಹುಡುಗಿಯರು ಮಗುವಿಗೆ ಜನ್ಮ ನೀಡುತ್ತಾರೆ. 15 ರಿಂದ 19 ವಯಸ್ಸಿನೊಳಗೆ ಮಗು ಹೆರುವ ಹುಡುಗಿಯರಲ್ಲಿ ಬಹುಪಾಲು ಅತ್ಯಾಚಾರದ ಬಲಿಪಶುಗಳೇ ಆಗಿರುತ್ತಾರೆ. ಇಂಥ ಹೀನ ಕೃತ್ಯದಿಂದ ಬೇಡದ ಬಸಿರು ಹೊರುವ ಹೆಣ್ಣು ಮಕ್ಕಳಿಗೆ ಗರ್ಭಪಾತದ ಹಕ್ಕು ನೀಡಬೇಕು ಎಂಬ ಆಂದೋಲನವೇ ಶುರುವಾಗಿ, ತಿದ್ದುಪಡಿಗೆ ಒತ್ತಾಯಿಸಲಾಗಿತ್ತು.

ಆದರೆ ಈ ತಿದ್ದುಪಡಿ ಪ್ರಸ್ತಾವನೆಗೆ ಉಗ್ರ ವಿರೋಧವೂ ಇತ್ತು. ಇದು ಧರ್ಮದ್ರೋಹ, ದೇವರು ಕೊಟ್ಟ ಜೀವವನ್ನು ಹೊಸಕಿಹಾಕಬಾರದು, ಆ ಕಾರಣ ಗರ್ಭಪಾತಕ್ಕೆ ಮುಕ್ತ ಅವಕಾಶ ಕೊಡಬಾರದು ಎಂದು ಅದರ ವಿರೋಧಿಗಳು ಆಗ್ರಹಿಸಿದ್ದರು. ಇದಕ್ಕೆ ಅವಕಾಶ ಕೊಡಬೇಡಿ ಎಂದು ಕ್ಯಾಥೊಲಿಕ್ ಚರ್ಚಿನ ಆರ್ಚ್‍ಬಿಷಪ್ ಬೇರೆ ಕರೆನೀಡಿದ್ದರು. ಹೆಣ್ಣಿನ ಹಕ್ಕನ್ನು ಹತ್ತಿಕ್ಕಿ ಅವಳಿಗೆ ಬೇಡದ ಮಗುವನ್ನು ಉಳಿಸುವುದು ಜೀವಪ್ರೀತಿ ಎನ್ನುವ ಧರ್ಮಾಧಿಕಾರಿಗಳು ಮತ್ತು ಸನಾತನವಾದಿಗಳು ಜಗತ್ತಿನಾದ್ಯಂತ ನಡೆಯುವ ಯುದ್ಧಗಳಲ್ಲಿ ಆಗುವ ಸಾವುನೋವುಗಳ ಬಗ್ಗೆ ಸೊಲ್ಲೆತ್ತುವುದಿಲ್ಲ. ಒಟ್ಟಿನಲ್ಲಿ ಅವರ ಕೈಮೇಲಾಯಿತು. ರಾಜಧಾನಿ ಕ್ವಿಟೋದಲ್ಲಿರುವ ಸಂಸತ್ತಿನಲ್ಲಿ ಮತದಾನ ಆಗುತ್ತಿದ್ದಾಗ ಅದರ ಹೊರಗೆ ಸೇರಿದ್ದ ಗರ್ಭಪಾತ ನಮ್ಮ ಹಕ್ಕು ಎನ್ನುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಮೆಣಸಿನಪುಡಿ ಎರಚಿ ಅವರನ್ನು ದೂರ ಅಟ್ಟಿದರು.

ಇದನ್ನು ಓದಿ: ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಅತ್ಯಾಚಾರದಿಂದ ಬಸಿರಾದರೆ ಮಾತ್ರ ಅದನ್ನು ತೆಗೆಸಲು ಮೆಕ್ಸಿಕೋ, ಬ್ರೆಜಿಲ್, ಚಿಲಿ, ಅರ್ಜೆಂಟೀನ ಮುಂತಾದ ದೇಶಗಳಲ್ಲಿ ಅವಕಾಶವಿದೆ. ಇನ್ನುಳಿದಂತೆ ಗರ್ಭಪಾತ ಹೆಣ್ಣಿನ ಆಯ್ಕೆ ಆಗಿಲ್ಲ. ಆದರೆ, ಹೊಂಡುರಾಸ್, ಎಲ್ ಸಾಲ್ವಡಾರ್, ನಿಕರಾಗುವ ಮುಂತಾದ ದೇಶಗಳಲ್ಲಿ ಅದಕ್ಕೂ ಅವಕಾಶವಿಲ್ಲ. ಅದನ್ನು ಹೊತ್ತು, ಹೆತ್ತು, ಜೀವನವಿಡೀ ಅವಳು ನಿರ್ವಹಿಸಬೇಕು. ಆದ್ದರಿಂದ ಈ ದೇಶಗಳೂ ಸೇರಿ ಜಗತ್ತಿನ ಹಲವು ಭಾಗಗಳಲ್ಲಿ ಹೆಣ್ಣುಮಕ್ಕಳು, ವೈದ್ಯಕೀಯ ತರಬೇತಿ ಇಲ್ಲದ ಜನರಿಂದ ಗುಟ್ಟಾಗಿ ಗರ್ಭಪಾತ ಮಾಡಿಸಿಕೊಂಡು ಸೋಂಕು, ಶಸ್ತ್ರಗಳ ದುರ್ಬಳಕೆ ಮತ್ತಿತರ ಕಾರಣಗಳಿಂದ ಸಾವಿಗೀಡಾಗುತ್ತಾರೆ. ಹೆಣ್ಣಿನ ದೇಹ ತನಗೆ ಸೇರಿದ್ದು ಎಂಬ ಪುರುಷ ಮನೋಭಾವದಿಂದ ಕಾನೂನು ಕೂಡ ಅವಳಿಗೆ ಶತ್ರುವಾಗಿರುತ್ತದೆ. ಆ ಮನೋಭಾವ ಬದಲಾಯಿಸಲು ಪ್ರಯತ್ನಗಳು ನಡೆದರೆ ಮಾತ್ರ ಅವಳ ದುಸ್ಥಿತಿ ಬದಲಾಗಬಹುದು.

ಕೃಪೆ: ಹಿತೈಷಿಣಿ ಮಹಿಳಾ ಪತ್ರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆಯರ ಗರ್ಭದ ಮೇಲೆ ಅವರಿಗೇ ಹಕ್ಕಿಲ್ಲದಿರುವುದು ಖಂಡನಾರ್ಹ. ಇಂತಹ ಅಮಾನವೀಯ ಕಾನೂನುಗಳನ್ನು ತೊಲಗಿಸಲು ವಿಶ್ವಸಂಸ್ಥೆಯು ಪ್ರಯತ್ನ ಮಾಡಿಬೇಕು

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...