HomeUncategorizedಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

ಈಕ್ವೆಡಾರ್‌ ದೇಶದ ಮಹಿಳೆಯರಿಗೆ ಅವರ ಗರ್ಭಕೋಶದ ಮೇಲೆ ಹಕ್ಕಿಲ್ಲ

- Advertisement -
- Advertisement -

ತಾಯ್ತನ ಎನ್ನುವುದು ಹೆಣ್ಣಿನ ಹೊಣೆಯೂ ಹೌದು, ಅದರ ಆಯ್ಕೆ ಅವಳ ಹಕ್ಕೂ ಹೌದು. ಆದರೆ `ಅದು ಅವಳ ಹೊಣೆ ಮಾತ್ರ’ ಎಂದು ಜಗತ್ತಿನ ಅನೇಕ ದೇಶಗಳು ಕಟ್ಟುನಿಟ್ಟು ಮಾಡಿವೆ. ಹೆಣ್ಣಿನ ಸಮ್ಮತಿ ಇಲ್ಲದೆ ಸಂಭೋಗ ನಡೆದಿರಬಹುದು, ಅತ್ಯಾಚಾರ ಆಗಿರಬಹುದು, ಬಲಾತ್ಕಾರ ನಡೆದಿರಬಹುದು- ಗಂಡಸು ಏನಾದರೂ ಮಾಡಿರಲಿ, ಅದರಿಂದ ಅವಳು ಬಸಿರಾದರೆ ಒಂಬತ್ತು ತಿಂಗಳು ಹೊತ್ತು ಮಗುವನ್ನು ಹೆರಲೇಬೇಕೇ ಹೊರತು, ಗರ್ಭಪಾತ ಮಾಡಿಸಲು ಅವಳಿಗೆ ಹಕ್ಕಿಲ್ಲ ಎಂದು ಆ ದೇಶಗಳ ಕಾನೂನುಗಳು ಹೇಳುತ್ತವೆ. ಕೆಲವೇ ದಿನಗಳ ಹಿಂದೆ, ಈಕ್ವೆಡಾರ್ ದೇಶ ಇದನ್ನು ಮತ್ತೊಮ್ಮೆ ಗಟ್ಟಿಗೊಳಿಸಿತು. ಅತ್ಯಾಚಾರದಿಂದ ಆಗುವ ಬಸಿರನ್ನು ತೆಗೆಸಿಕೊಳ್ಳಲು ಅನುಮತಿ ನೀಡುವ ತಿದ್ದುಪಡಿ ಪ್ರಸ್ತಾವನೆ ಅಲ್ಲಿನ ಸಂಸತ್ತಿನಲ್ಲಿ ಕೇವಲ ಐದು ಮತಗಳಿಂದ ಸೋಲು ಕಂಡಿತು.

ಈಕ್ವೆಡಾರ್ ದೇಶದಲ್ಲಿ 1938 ರಿಂದ ಜಾರಿಯಲ್ಲಿರುವ ಅತ್ಯಂತ ಹಳೆಯ ಕೊಳೆತ ಕಾನೂನಿನ ಪ್ರಕಾರ, ಮಾನಸಿಕ ಅಸ್ವಾಸ್ಥ್ಯ ಇರುವ ಹೆಣ್ಣಿನ ಮೇಲೆ ಅತ್ಯಾಚಾರ ನಡೆದು ಬಸಿರಾದರೆ ಮಾತ್ರ ಗರ್ಭ ತೆಗೆಸಲು ಅವಕಾಶವಿದೆ. ಇದು ಬಿಟ್ಟರೆ ಗರ್ಭದಿಂದ ಹೆಣ್ಣಿನ ಜೀವಕ್ಕೇ ತೊಂದರೆ ಇದ್ದರೆ ಮಾತ್ರ ಗರ್ಭಪಾತ ಮಾಡಿಸಬಹುದು. ಇವೆರಡು ಬಿಟ್ಟರೆ ಇನ್ನಾವ ಕಾರಣಕ್ಕೂ ಗರ್ಭಪಾತ ಮಾಡಿಸಲು ಅವಕಾಶವಿಲ್ಲ. ಏನಾದರೂ ಗರ್ಭ ತೆಗೆಸಿದರೆ, ಅದನ್ನು ಅಪರಾಧ ಎಂದು ಪರಿಗಣಿಸಿ ಸೆರೆಮನೆಗೆ ದೂಡಲಾಗುತ್ತದೆ. ಅಂದರೆ ಹೆಣ್ಣಿನ ಗರ್ಭಕೋಶ, ತಾಯ್ತನದ ಆಯ್ಕೆ ಯಾವುವೂ ಅವಳಿಗೆ ಸೇರಿಲ್ಲ, ಎಲ್ಲವೂ ಪುರುಷಾಧಿಪತ್ಯ, ಅದು ರೂಪಿಸುವ ಕಾನೂನು, ಮತ್ತು ಧರ್ಮವನ್ನು ಹೊದ್ದುಕೊಂಡ ಪುರುಷ ಅಹಂಕಾರದ ಹಿಡಿತದಲ್ಲಿ ಇವೆ. ಹೆಣ್ಣನ್ನು ಬಸಿರು ಮಾಡುವುದೂ ಅದನ್ನು ಉಳಿಸುವುದೂ ಗಂಡಸಿನ ಧರ್ಮ ಎಂದು ಧರ್ಮದ ಹೆಸರಿನಲ್ಲೂ ಹೇಳಲಾಗಿದೆ. ಕೆಥೊಲಿಕ್ ಕ್ರೈಸ್ತ ಧರ್ಮದ ಪ್ರಾಬಲ್ಯ ಇರುವ ಈಕ್ವೆಡಾರ್ ಇದನ್ನೇ ಎತ್ತಿ ಹಿಡಿದಿದೆ.

ಇದನ್ನು ಓದಿ: ಸಂಪಾದಕೀಯ | ಕೊಲೆ, ಅತ್ಯಾಚಾರದ ಬೆದರಿಕೆಗಳಿಗೆ ರಾಜಾಶ್ರಯವಿದ್ದಾಗ…?

ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಎಗ್ಗುಸಿಗ್ಗಿಲ್ಲದೆ ಸಾಂಕ್ರಾಮಿಕ ರೋಗದಂತೆ ಅತ್ಯಾಚಾರ ನಡೆಯುತ್ತಿದೆ, ತೀರಾ ಕಿರಿಯ ವಯಸ್ಸಿನ ಹುಡುಗಿಯರು ಬಸುರಿಯರಾಗುತ್ತಿದ್ದಾರೆ, ಪ್ರತಿದಿನ ಕನಿಷ್ಠ ಹನ್ನೊಂದು ಅತ್ಯಾಚಾರಗಳಾದರೂ ವರದಿಯಾಗುತ್ತವೆ. ಲೈಂಗಿಕ ಸಂಪರ್ಕಕ್ಕೆ ಸಮ್ಮತಿ ನೀಡಲು ಹದಿನಾಲ್ಕು ವರ್ಷ ಆಗಿರಬೇಕು ಎಂಬ ನಿಯಮ ಆ ದೇಶದಲ್ಲಿದೆ, ಆದರೆ ಪ್ರತಿದಿನ ಆ ವಯಸ್ಸಿಗಿಂತ ಚಿಕ್ಕವರಾದ ಏಳು ಹುಡುಗಿಯರು ಮಗುವಿಗೆ ಜನ್ಮ ನೀಡುತ್ತಾರೆ. 15 ರಿಂದ 19 ವಯಸ್ಸಿನೊಳಗೆ ಮಗು ಹೆರುವ ಹುಡುಗಿಯರಲ್ಲಿ ಬಹುಪಾಲು ಅತ್ಯಾಚಾರದ ಬಲಿಪಶುಗಳೇ ಆಗಿರುತ್ತಾರೆ. ಇಂಥ ಹೀನ ಕೃತ್ಯದಿಂದ ಬೇಡದ ಬಸಿರು ಹೊರುವ ಹೆಣ್ಣು ಮಕ್ಕಳಿಗೆ ಗರ್ಭಪಾತದ ಹಕ್ಕು ನೀಡಬೇಕು ಎಂಬ ಆಂದೋಲನವೇ ಶುರುವಾಗಿ, ತಿದ್ದುಪಡಿಗೆ ಒತ್ತಾಯಿಸಲಾಗಿತ್ತು.

ಆದರೆ ಈ ತಿದ್ದುಪಡಿ ಪ್ರಸ್ತಾವನೆಗೆ ಉಗ್ರ ವಿರೋಧವೂ ಇತ್ತು. ಇದು ಧರ್ಮದ್ರೋಹ, ದೇವರು ಕೊಟ್ಟ ಜೀವವನ್ನು ಹೊಸಕಿಹಾಕಬಾರದು, ಆ ಕಾರಣ ಗರ್ಭಪಾತಕ್ಕೆ ಮುಕ್ತ ಅವಕಾಶ ಕೊಡಬಾರದು ಎಂದು ಅದರ ವಿರೋಧಿಗಳು ಆಗ್ರಹಿಸಿದ್ದರು. ಇದಕ್ಕೆ ಅವಕಾಶ ಕೊಡಬೇಡಿ ಎಂದು ಕ್ಯಾಥೊಲಿಕ್ ಚರ್ಚಿನ ಆರ್ಚ್‍ಬಿಷಪ್ ಬೇರೆ ಕರೆನೀಡಿದ್ದರು. ಹೆಣ್ಣಿನ ಹಕ್ಕನ್ನು ಹತ್ತಿಕ್ಕಿ ಅವಳಿಗೆ ಬೇಡದ ಮಗುವನ್ನು ಉಳಿಸುವುದು ಜೀವಪ್ರೀತಿ ಎನ್ನುವ ಧರ್ಮಾಧಿಕಾರಿಗಳು ಮತ್ತು ಸನಾತನವಾದಿಗಳು ಜಗತ್ತಿನಾದ್ಯಂತ ನಡೆಯುವ ಯುದ್ಧಗಳಲ್ಲಿ ಆಗುವ ಸಾವುನೋವುಗಳ ಬಗ್ಗೆ ಸೊಲ್ಲೆತ್ತುವುದಿಲ್ಲ. ಒಟ್ಟಿನಲ್ಲಿ ಅವರ ಕೈಮೇಲಾಯಿತು. ರಾಜಧಾನಿ ಕ್ವಿಟೋದಲ್ಲಿರುವ ಸಂಸತ್ತಿನಲ್ಲಿ ಮತದಾನ ಆಗುತ್ತಿದ್ದಾಗ ಅದರ ಹೊರಗೆ ಸೇರಿದ್ದ ಗರ್ಭಪಾತ ನಮ್ಮ ಹಕ್ಕು ಎನ್ನುತ್ತಿದ್ದ ಮಹಿಳೆಯರ ಮೇಲೆ ಪೊಲೀಸರು ಮೆಣಸಿನಪುಡಿ ಎರಚಿ ಅವರನ್ನು ದೂರ ಅಟ್ಟಿದರು.

ಇದನ್ನು ಓದಿ: ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಅತ್ಯಾಚಾರದಿಂದ ಬಸಿರಾದರೆ ಮಾತ್ರ ಅದನ್ನು ತೆಗೆಸಲು ಮೆಕ್ಸಿಕೋ, ಬ್ರೆಜಿಲ್, ಚಿಲಿ, ಅರ್ಜೆಂಟೀನ ಮುಂತಾದ ದೇಶಗಳಲ್ಲಿ ಅವಕಾಶವಿದೆ. ಇನ್ನುಳಿದಂತೆ ಗರ್ಭಪಾತ ಹೆಣ್ಣಿನ ಆಯ್ಕೆ ಆಗಿಲ್ಲ. ಆದರೆ, ಹೊಂಡುರಾಸ್, ಎಲ್ ಸಾಲ್ವಡಾರ್, ನಿಕರಾಗುವ ಮುಂತಾದ ದೇಶಗಳಲ್ಲಿ ಅದಕ್ಕೂ ಅವಕಾಶವಿಲ್ಲ. ಅದನ್ನು ಹೊತ್ತು, ಹೆತ್ತು, ಜೀವನವಿಡೀ ಅವಳು ನಿರ್ವಹಿಸಬೇಕು. ಆದ್ದರಿಂದ ಈ ದೇಶಗಳೂ ಸೇರಿ ಜಗತ್ತಿನ ಹಲವು ಭಾಗಗಳಲ್ಲಿ ಹೆಣ್ಣುಮಕ್ಕಳು, ವೈದ್ಯಕೀಯ ತರಬೇತಿ ಇಲ್ಲದ ಜನರಿಂದ ಗುಟ್ಟಾಗಿ ಗರ್ಭಪಾತ ಮಾಡಿಸಿಕೊಂಡು ಸೋಂಕು, ಶಸ್ತ್ರಗಳ ದುರ್ಬಳಕೆ ಮತ್ತಿತರ ಕಾರಣಗಳಿಂದ ಸಾವಿಗೀಡಾಗುತ್ತಾರೆ. ಹೆಣ್ಣಿನ ದೇಹ ತನಗೆ ಸೇರಿದ್ದು ಎಂಬ ಪುರುಷ ಮನೋಭಾವದಿಂದ ಕಾನೂನು ಕೂಡ ಅವಳಿಗೆ ಶತ್ರುವಾಗಿರುತ್ತದೆ. ಆ ಮನೋಭಾವ ಬದಲಾಯಿಸಲು ಪ್ರಯತ್ನಗಳು ನಡೆದರೆ ಮಾತ್ರ ಅವಳ ದುಸ್ಥಿತಿ ಬದಲಾಗಬಹುದು.

ಕೃಪೆ: ಹಿತೈಷಿಣಿ ಮಹಿಳಾ ಪತ್ರಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಹಿಳೆಯರ ಗರ್ಭದ ಮೇಲೆ ಅವರಿಗೇ ಹಕ್ಕಿಲ್ಲದಿರುವುದು ಖಂಡನಾರ್ಹ. ಇಂತಹ ಅಮಾನವೀಯ ಕಾನೂನುಗಳನ್ನು ತೊಲಗಿಸಲು ವಿಶ್ವಸಂಸ್ಥೆಯು ಪ್ರಯತ್ನ ಮಾಡಿಬೇಕು

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...