Homeಮುಖಪುಟಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

ಕೇರಳ: ಇಡಿಯಿಂದ ಕಾಂಗ್ರೆಸ್‌ ನಾಯಕ ಕೆ.ಕೆ.ಅಬ್ರಹಾಂ ಬಂಧನ

- Advertisement -
- Advertisement -

ವಯನಾಡ್ ಪುಲ್ಪಲ್ಲಿ ಸಹಕಾರಿ ಬ್ಯಾಂಕ್‌ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ.ಅಬ್ರಹಾಂ ಅವರನ್ನು ಕೋಝಿಕ್ಕೋಡ್ ಇಡಿ ಘಟಕ ಬಂಧಿಸಿದೆ.

ಪುಲ್ಪಲ್ಲಿ ಸಹಕಾರಿ ಬ್ಯಾಂಕ್‌ನ ಮಾಜಿ ಅಧ್ಯಕ್ಷರಾಗಿರುವ ಅಬ್ರಹಾಂ ಅವರನ್ನು ನಿನ್ನೆ ವಿಚಾರಣೆ ನಡೆಸಲಾಗಿದ್ದು, ಆ ಬಳಿಕ ಅವರ ಬಂಧನ ನಡೆದಿದೆ. ಈ ಪ್ರಕರಣದಲ್ಲಿ 2ನೇ ಬಂಧನ ಇದಾಗಿದ್ದು, ಈ ಹಿಂದೆ ಸಜೀವನ್ ಕೊಲ್ಲಪಲ್ಲಿಯನ್ನು ಇಡಿ ಬಂಧಿಸಿತ್ತು. ಅಧಿಕೃತ ಮೂಲಗಳ ಪ್ರಕಾರ ಪುಲ್ಪಲ್ಲಿ ಸೇವಾ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

ಬ್ಯಾಂಕ್ ಅವ್ಯವಹಾರಕ್ಕೆ ಸಂಬಂಧಿಸಿ ಈ ಹಿಂದೆ ಸಜೀವನ್‌ ಕೊಲ್ಲಪಲ್ಲಿ ವಿಚಾರಣೆ ವೇಳೆ ನೀಡಿದ ಮಾಹಿತಿಯ ಆಧಾರದ ಮೇಲೆ ಅಬ್ರಹಾಂ ಬಂಧನ ನಡೆದಿದೆ. ಪುಲ್ಪಲ್ಲಿ ಸಹಕಾರಿ ಬ್ಯಾಂಕ್ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಯನ್ನು ಇಡಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ.

ಪುಲ್ಪಲ್ಲಿ ಸೇವಾ ಸಹಕಾರಿ ಬ್ಯಾಂಕ್‌ನಲ್ಲಿ ಅಬ್ರಹಾಂ ಅವರು ಅಧ್ಯಕ್ಷರಾಗಿದ್ದಾಗ ಸಂಜೀವನ್ ಎಂಬವರೊಂದಿಗೆ ಸೇರಿಕೊಂಡು ಬ್ಯಾಂಕ್‌ನ 8ಕೋ.ರೂ.ಗೂ ಅಧಿಕ ಹಣವನ್ನು ಸಾಲದ ಮೂಲಕ ದುರ್ಬಳಕೆ ಮಾಡಿಕೊಂಡಿದ್ದಾರೆ ಆರೋಪಿಸಲಾಗಿದೆ.

ಅಬ್ರಹಾಂ ಅವರು ಅಧ್ಯಕ್ಷರಾಗಿದ್ದಾಗ ಹಣಕಾಸು ಅವ್ಯವಹಾರ ನಡೆದಿದೆ ಎಂಬ ದೂರನ್ನು ಆಧರಿಸಿ ಇಡಿ ತನಿಖೆ ಆರಂಭಿಸಿದೆ. ವೃದ್ಧ ದಂಪತಿಯೊಂದು ಇದಕ್ಕೂ ಮೊದಲು ಅಬ್ರಾಹಂ ವಿರುದ್ಧ ದೂರು ನೀಡಿದ್ದರು.  ಇದೇ ಪ್ರಕರಣಕ್ಕೆ ಸಂಬಂಧಿಸಿ ಹಣ ಕಳೆದುಕೊಂಡ ರೈತರೋರ್ವರು ಕೆಲವು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ನಿನ್ನೆ ಜಮ್ಮು ಕಾಶ್ಮೀರದಲ್ಲಿ ಇಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು-ಕಾಶ್ಮೀರ ಸರ್ಕಾರದ ಮಾಜಿ ಕ್ಯಾಬಿನೆಟ್ ಸಚಿವ ಚೌಧರಿ ಲಾಲ್ ಸಿಂಗ್ ಅವರನ್ನು ಬಂಧಿಸಿದ್ದರು.

ಪತ್ನಿ ಕಾಂತಾ ಅಂಡೋತ್ರಾ ನಡೆಸುತ್ತಿರುವ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣಕಾಸು ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿ ಮಾಜಿ ಸಚಿವರ ಬಂಧನ ನಡೆದಿದೆ. ಬಂಧನಕ್ಕೂ ಮುನ್ನ ಮಾಜಿ ಸಚಿವರನ್ನು ಇಡಿ ಶನಿವಾರ ಮತ್ತು ಸೋಮವಾರ ವಿಚಾರಣೆಗೆ ಒಳಪಡಿಸಿತ್ತು. ಅಕ್ಟೋಬರ್‌ನಲ್ಲಿ ಟ್ರಸ್ಟ್‌ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಮ್ಮುವಿನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದರು.

ಇದನ್ನು ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಚಿವ ಚೌಧರಿ ಲಾಲ್ ಸಿಂಗ್‌ ಬಂಧನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....