Homeಕರ್ನಾಟಕಇಡಿ ದಾಳಿ | ಗೃಹ ಸಚಿವ ಪರಮೇಶ್ವರ್ ಬೆಂಬಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಇಡಿ ದಾಳಿ | ಗೃಹ ಸಚಿವ ಪರಮೇಶ್ವರ್ ಬೆಂಬಲಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

- Advertisement -
- Advertisement -

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಇಡಿ ದಾಳಿ ಮುಂದುವರಿಸುತ್ತಿದ್ದಂತೆ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಮ್ಮ ಸಂಪುಟ ಸಹೋದ್ಯೋಗಿಗೆ ಬೆಂಬಲಿಸಿದ್ದು, ಅವರನ್ನು “ಸ್ವಚ್ಛ ಮತ್ತು ಪ್ರಾಮಾಣಿಕ ವ್ಯಕ್ತಿ” ಎಂದು ಗುರುವಾರ ಕರೆದ್ದಾರೆ. ಇಡಿ ದಾಳಿ | ಗೃಹ ಸಚಿವ

ನಟಿ ರನ್ಯಾ ರಾವ್ ಅವರ ಖಾತೆಗಳಿಗೆ “ನಕಲಿ” ವಹಿವಾಟುಗಳನ್ನು ನಡೆಸಿದ ಆರೋಪ ಹೊತ್ತಿರುವ ಹವಾಲಾ ನಿರ್ವಾಹಕರು ಮತ್ತು ವಸತಿ ಪ್ರವೇಶ ನಿರ್ವಾಹಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಶೋಧ ನಡೆಸುತ್ತಿದೆ. ರನ್ಯಾ ಅವರನ್ನು ಈ ಹಿಂದೆ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಪರಮೇಶ್ವರ ಅವರನ್ನು ಸಮರ್ಥಿಸಿಕೊಂಡ ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್, “ಅವರು ಕೆಲವು ಕುಟುಂಬ ಕಾರ್ಯಕ್ರಮ ಅಥವಾ ಮದುವೆಯ ಸಮಯದಲ್ಲಿ ರನ್ಯಾ ರಾವ್ ಅವರಿಗೆ ಸುಮಾರು 15-25 ಲಕ್ಷ ರೂ.ಗಳನ್ನು ಉಡುಗೊರೆಯಾಗಿ ನೀಡಿರಬಹುದು. ಅದರ ಅರ್ಥ ಕಳ್ಳಸಾಗಣೆಯಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವರು ಅವರನ್ನು ಪ್ರೋತ್ಸಾಹಿಸಿದ್ದಾರೆ ಎಂದರ್ಥವಲ್ಲ” ಎಂದು ಹೇಳಿದ್ದಾರೆ.

ರನ್ಯಾ ರಾವ್ ಪ್ರಕರಣ ಸೇರಿದಂತೆ ಭಾರತದಲ್ಲಿ ದೊಡ್ಡ ಚಿನ್ನದ ಕಳ್ಳಸಾಗಣೆ ದಂಧೆಯ ಕುರಿತು ಸಿಬಿಐ ಮತ್ತು ಡಿಆರ್‌ಐ (ಕಂದಾಯ ಗುಪ್ತಚರ ನಿರ್ದೇಶನಾಲಯ) ದೂರನ್ನು ಇಡಿ ಗಮನಕ್ಕೆ ತೆಗೆದುಕೊಂಡ ನಂತರ ಕೆಲವು ತಿಂಗಳ ಹಿಂದೆ ಪಿಎಂಎಲ್‌ಎ ಪ್ರಕರಣ ದಾಖಲಿಸಲಾಗಿದೆ.

“ನಾನು ಪರಮೇಶ್ವರ ಅವರೊಂದಿಗೆ ಮಾತನಾಡಿದೆ, ಬೆಳಿಗ್ಗೆ ಅವರನ್ನು ಭೇಟಿ ಮಾಡಿದೆ. ಅವರು 15-25 ಲಕ್ಷ ರೂ. ನೀಡಿದ್ದಾರೆ, ನಾವು ಸಾರ್ವಜನಿಕ ಜೀವನದಲ್ಲಿ ಇದ್ದೇವೆ, ಅನೇಕ ಟ್ರಸ್ಟ್‌ಗಳನ್ನು ನಡೆಸುತ್ತಿದ್ದೇವೆ. ಕುಟುಂಬ ಕಾರ್ಯಕ್ರಮ ಅಥವಾ ಮದುವೆಯಲ್ಲಿ ಉಡುಗೊರೆಗಳನ್ನು ನೀಡಿರಬಹುದು. ಪರಮೇಶ್ವರ ಅವರಂತಹ ಪ್ರಭಾವಿ ವ್ಯಕ್ತಿ ಕಳ್ಳಸಾಗಣೆ ಮುಂತಾದ ಅಕ್ರಮಗಳಲ್ಲಿ ತೊಡಗಿಸಿಕೊಳ್ಳಲು ಅವಳನ್ನು ಪ್ರೋತ್ಸಾಹಿಸುತ್ತಾರೆಯೇ” ಎಂದು ಶಿವಕುಮಾರ್ ಕೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, “ಅವರು (ರಾವ್) ಏನಾದರೂ ತಪ್ಪು ಮಾಡಿದ್ದರೆ, ಕಾನೂನಿನ ಪ್ರಕಾರ ಅವರಿಗೆ ಶಿಕ್ಷೆಯಾಗಲಿ. ಪರಮೇಶ್ವರ ಅವರ ಬಗ್ಗೆ ಹೇಳಬೇಕು ಎಂದರೆ, ಅವರು ಕಾನೂನು ಪಾಲಿಸುವ ನಾಗರಿಕ. ಅವರು ರಾಜ್ಯದ ಗೃಹ ಸಚಿವರಾಗಿದ್ದು, ನಮಗೆ ಅವರ ಬಗ್ಗೆ ಹೆಮ್ಮೆಯಿದೆ. ಅವರು ದೊಡ್ಡ ನಾಯಕನಾಗಿದ್ದು, ಎಂಟು ವರ್ಷಗಳ ಕಾಲ ಪಕ್ಷದ ಅಧ್ಯಕ್ಷರಾಗಿದ್ದರು. ಅವರು ರಾಜ್ಯಕ್ಕೆ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಅವರು 1989 ರಿಂದ ನನ್ನೊಂದಿಗೆ ಶಾಸಕರಾಗಿದ್ದಾರೆ, ಅವರು ಸಚಿವರಾಗಿದ್ದಾರೆ. ಅವರು ಶುದ್ಧ ಮತ್ತು ಪ್ರಾಮಾಣಿಕ ವ್ಯಕ್ತಿ… ಅವರು ಮದುವೆಗೆ ಉಡುಗೊರೆ ನೀಡಿರಬಹುದು, ಅಷ್ಟೇ. ಈ ಬಗ್ಗೆ ಅವರು ಉತ್ತರಿಸುತ್ತಾರೆ.” ಎಂದು ಶಿವಕುಮಾರ್ ಹೇಳಿದ್ದಾರೆ.

ತಾನು ಪರಮೇಶ್ವರ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. “ಅವರು ಇಂದು ನಡೆಯುವ ಸಚಿವ ಸಂಪುಟಕ್ಕೆ ಹಾಜರಾಗುತ್ತಿದ್ದಾರೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶೈಕ್ಷಣಿಕ ಟ್ರಸ್ಟ್ ಹಣವನ್ನು “ತಿರುಚಿ” ರನ್ಯಾ ರಾವ್ ಅವರ ಕ್ರೆಡಿಟ್ ಕಾರ್ಡ್ ಬಿಲ್‌ಗೆ 40 ಲಕ್ಷ ರೂ.ಗಳನ್ನು ಪಾವತಿಸಲಾಗಿದೆ ಎಂದು ಶಂಕಿಸಲಾಗಿದ್ದು, ಇದನ್ನು ಪ್ರಭಾವಿ ವ್ಯಕ್ತಿಯ ಸೂಚನೆಯ ಮೇರೆಗೆ ಮಾಡಲಾಗಿದೆ ಎಂದು ED ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಟ್ರಸ್ಟ್ ಪರಮೇಶ್ವರ ಅವರೊಂದಿಗೆ ಸಂಬಂಧ ಹೊಂದಿದ್ದು, ಉಲ್ಲೇಖಿಸಲಾದ “ಪ್ರಭಾವಿ” ವ್ಯಕ್ತಿ “ರಾಜಕೀಯವಾಗಿ ದೊಡ್ಡ ವ್ಯಕ್ತಿ” ಎಂದು ಮೂಲಗಳು ಹೇಳಿಕೊಂಡಿವೆ. ಕ್ರೆಡಿಟ್ ಬಿಲ್ ಪಾವತಿಗೆ ದಾಖಲೆಗಳು ಅಥವಾ ವೋಚರ್‌ಗಳ ಕೊರತೆಯಿದೆ ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ.

ಇದಕ್ಕೂ ಮೊದಲು ಶಿವಕುಮಾರ್ ಅವರು, “ದತ್ತಿ ಸಂಸ್ಥೆಗಳು ಸಾಮಾನ್ಯವಾಗಿ ಜನರಿಗೆ ಸಹಾಯ ಮಾಡುತ್ತವೆ… ಮದುವೆ, ಶಾಲಾ ಶುಲ್ಕ, ಆಸ್ಪತ್ರೆ ಬಿಲ್‌ಗಳಿಗೆ ಸಣ್ಣ ದತ್ತಿ ನೀಡಿರಬಹುದು, ಅಂತಹ ಸಹಾಯವನ್ನು ಮಾಡಿರಬಹುದು, ನಾನು ಅದನ್ನು ನಿರಾಕರಿಸುತ್ತಿಲ್ಲ. ಉಳಿದ ವಿಷಯ, ಅವರು (ED) ಏನು ಮಾಡುತ್ತಾರೆಂದು ನೋಡೋಣ” ಎಂದು ಹೇಳಿದ್ದಾರೆ.

ಇಡಿ ದಾಳಿಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮುಖ್ಯಮಂತ್ರಿ ಮತ್ತು ಪ್ರಧಾನ ಕಾರ್ಯದರ್ಶಿ ಏನು ಹೇಳಿದ್ದಾರೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಪ್ರತ್ಯೇಕ ನಿಲುವು ತೆಗೆದುಕೊಳ್ಳಲು ಸಾಧ್ಯವಿಲ್ಲ, ಆದರೆ ನಾನು ಏನು ಹೇಳಿದ್ದಾನೋ ಅದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

ಇಡಿ ದಾಳಿಗಳ ವಿರುದ್ಧ ಪಕ್ಷವು ಪ್ರತಿಭಟಿಸುತ್ತದೆಯೇ ಎಂಬ ಪ್ರಶ್ನೆ ಉತ್ತರಿಸಿದ ಅವರು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಪ್ರಕರಣ ಸೇರಿದಂತೆ ದೇಶಾದ್ಯಂತ ಕಾಂಗ್ರೆಸ್ ಕಾನೂನುಬದ್ಧವಾಗಿ ಮತ್ತು ರಾಜಕೀಯವಾಗಿ ಹೋರಾಡಲಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ಇಡಿ ದಾಳಿ | ಗೃಹ ಸಚಿವ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಳೆಗೆ ಬೆಚ್ಚಿಬೀಳುತ್ತಿರುವ ಬೆಂಗಳೂರಿಗರು; ಪುನರಾವರ್ತಿತ ಸಮಸ್ಯೆಗೆ ಪರಿಹಾರ ಹುಡುಕುವಲ್ಲಿ ಸರ್ಕಾರ ವಿಫಲ

ಮಳೆಗೆ ಬೆಚ್ಚಿಬೀಳುತ್ತಿರುವ ಬೆಂಗಳೂರಿಗರು; ಪುನರಾವರ್ತಿತ ಸಮಸ್ಯೆಗೆ ಪರಿಹಾರ ಹುಡುಕುವಲ್ಲಿ ಸರ್ಕಾರ ವಿಫಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...