Homeಮುಖಪುಟಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

- Advertisement -
- Advertisement -

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಸೋಮವಾರ (ಫೆ.20)ದಂದು ಛತ್ತೀಸ್‌ಗಢದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದೆ. ಈ ದಾಳಿಗಳ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಡಿ ದಾಳಿ ಕುರಿತು ಟ್ವೀಟ್ ಮಾಡಿರುವ ಖರ್ಗೆ, ”ಕಳೆದ 9 ವ‍ರ್ಷಗಳಲ್ಲಿ 95 ಪ್ರತಿಶತದಷ್ಟು ದಾಳಿಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆದಿವೆ ಅದರಲ್ಲೂ ವಿಶೇಷವಾಗಿ ನಮ್ಮ ಪಕ್ಷದ ನಾಯಕರ ಮೇಲೆಯೇ ನಡೆದಿವೆ. ಇದು ಬಿಜೆಪಿಯ ಹೇಡಿತನವನ್ನು ತೋರಿಸುತ್ತದೆ ಆದರೆ ಕಾಂಗ್ರೆಸ್ ಈ ಕುತಂತ್ರಗಳಿಗೆ ಮಣಿಯುವುದಿಲ್ಲ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಈ ಹೇಡಿತನದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ”ಭಾರತ್ ಜೋಡೋ ಯಾತ್ರೆ”ಯ ಅಗಾಧ ಯಶಸ್ಸಿನಿಂದಾಗಿ ಬಿಜೆಪಿಯ ಅಶಾಂತಿ ಎದ್ದು ಕಾಣುತ್ತಿದೆ. ಮೋದಿಜಿಯವರಲ್ಲಿ ಸ್ವಲ್ಪವಾದರೂ ಪ್ರಾಮಾಣಿಕತೆಯಿದ್ದರೆ, ನಿಮ್ಮ ಆತ್ಮೀಯ ಗೆಳೆಯನ ಮೆಗಾ ಹಗರಣಗಳ ಮೇಲೆ ದಾಳಿ ಮಾಡಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಈ ಪ್ರಯತ್ನವನ್ನು ನಾವು ದೃಢವಾಗಿ ಎದುರಿಸುತ್ತೇವೆ” ಎಂದು ಖರ್ಗೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಗೆಹ್ಲೋಟ್, ”ಇದು ದುರದೃಷ್ಟಕರ ಸಂಗತಿಯಾಗಿದೆ, ಯಾವುದೇ ರಾಜ್ಯದಲ್ಲಿ ಚುನಾವಣೆಗಳು ಬಂದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತಿವೆ. 2014 ರಿಂದ ನಿರಂತರವಾಗಿ ಇಡಿ, ಐಟಿ ಮತ್ತು ಸಿಬಿಐ ದುರ್ಬಳಕೆಯಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತವೆ. ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಇಂತಹ ಕ್ರಮ ಖಂಡನೀಯ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ

”ಇಡಿ ದಾಳಿಯಿಂದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದು ಬಿಜೆಪಿಯ ನಾಟಕವಲ್ಲದೆ ಬೇರೇನೂ ಅಲ್ಲ ಎಂದು ದೇಶದ ಜನರು ಅರ್ಥಮಾಡಿಕೊಳ್ಳುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದರು.

”ಈ ರೀತಿ ದಾಳಿ ನಡೆಸುವುದರಿಂದ ಕಾಂಗ್ರೆಸ್ ಹೆದರುತ್ತದೆ ಎಂದು ಅವರು ಭಾವಿಸುತ್ತಾರೆ? ಕಾಂಗ್ರೆಸ್ ಪಕ್ಷವು ಬ್ರಿಟಿಷರ ವಿರುದ್ಧ ಹೋರಾಡಿದ ಪಕ್ಷ ಮತ್ತು ನಮ್ಮ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಜೈಲಿಗೆ ಹೋಗಿದ್ದಾರೆ. ಇದೀಗ ಬಿಜೆಪಿಯವರು ನಮ್ಮ ಮೇಲಿನ ದ್ವೇ‍ಷದಿಂದ ಇಂತಹ ದಾಳಿಗಳನ್ನು ನಡೆಸುತ್ತಿದ್ದಾರೆ, ನಾವು ಈಗಲೂ ಇದರ ವಿರುದ್ಧ ಹೋರಾಡುತ್ತೇವೆ” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇಡಿ ದಾಳಿ ಬಗ್ಗೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಬಿಜೆಪಿಯು ‘ಫೇರ್ ಅಂಡ್ ಲವ್ಲಿ’ ಯೋಜನೆಯನ್ನು ನಡೆಸುತ್ತಿದೆ. ಏಕೆಂದರೆ, ಹಿಮಂತ ಬಿಸ್ವ ಶರ್ಮಾ ಅಥವಾ ಸುವೇಂದು ಅಧಿಕಾರಿ ಅಥವಾ ಇತರರು ಬಿಜೆಪಿ ಸೇರಿದರು. ಈಗ ಇದ್ದಕ್ಕಿದ್ದಂತೆ ಅವರೆಲ್ಲಾ ಪ್ರಾಮಾಣಿಕರಾಗಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ತನಿಖೆಯೂ ನಡೆಯುವುದಿಲ್ಲ, ಯಾವ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರು ಅಗತ್ಯವಿರುವ ಕಡೆಯಲ್ಲಿ ದಾಳಿಗಳನ್ನು ನಡೆಸಲು ಬಿಡುವುದಿಲ್ಲ. ಈ ಹಿಂದೆ ಯಾರ ವಿರುದ್ಧ ಇಡಿ ದಾಳಿ ನಡೆಸಿತ್ತೋ, ಅವರು ಈಗ ಬಿಜೆಪಿ ಸೇರಿದ ನಂತರ ನಿರಪರಾಧಿಗಳಾಗಿದ್ದಾರೆ” ಎಂದು ಜೈರಾಮ್ ರಮೇಶ್ ಆರೋಪಿಸಿದರು.

”ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿಯನ್ನು ತೊಳೆಯುವ ಯಂತ್ರ” ಎಂದು ಖರ್ಗೆಯವರನ್ನು ಜೈರಾಮ್ ರಮೇಶ್ ಹೊಗಳಿದ್ದಾರೆ.

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮೂರು ದಿನಗಳ ಮುಂಚಿತವಾಗಿ, ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಮುಂಜಾನೆ ಶೋಧ ನಡೆಸಿತು. ವಿವಿಧ ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.

ಛತ್ತೀಸ್‌ಗಢದ ಕಾಂಗ್ರೆಸ್ ಖಜಾಂಚಿ ರಾಮಗೋಪಾಲ್ ಅಗರ್ವಾಲ್ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ. ಭಿಲಾಯಿ ಶಾಸಕ ದೇವೇಂದ್ರ ಯಾದವ್, ಗಿರೀಶ್ ದೇವಾಂಗನ್, ಆರ್ ಪಿ ಸಿಂಗ್, ವಿನೋದ್ ತಿವಾರಿ, ಸನ್ನಿ ಅಗರ್ವಾಲ್ ಮೇಲೆಯೂ ಇಡಿ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೂರ್ಯಕಾಂತ್ ತಿವಾರಿಯಿಂದ ರಾಮ್‌ಗೋಪಾಲ್ ಅಗರ್ವಾಲ್ 52 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನುವ ಬಗ್ಗೆ ಜಾರಿ ನಿರ್ದೇಶನಾಲಯದ ಬಳಿ ಬಲವಾದ ಸಾಕ್ಷ್ಯವನ್ನು ಇವೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...