Homeಮುಖಪುಟಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

- Advertisement -
- Advertisement -

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಸೋಮವಾರ (ಫೆ.20)ದಂದು ಛತ್ತೀಸ್‌ಗಢದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದೆ. ಈ ದಾಳಿಗಳ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಡಿ ದಾಳಿ ಕುರಿತು ಟ್ವೀಟ್ ಮಾಡಿರುವ ಖರ್ಗೆ, ”ಕಳೆದ 9 ವ‍ರ್ಷಗಳಲ್ಲಿ 95 ಪ್ರತಿಶತದಷ್ಟು ದಾಳಿಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆದಿವೆ ಅದರಲ್ಲೂ ವಿಶೇಷವಾಗಿ ನಮ್ಮ ಪಕ್ಷದ ನಾಯಕರ ಮೇಲೆಯೇ ನಡೆದಿವೆ. ಇದು ಬಿಜೆಪಿಯ ಹೇಡಿತನವನ್ನು ತೋರಿಸುತ್ತದೆ ಆದರೆ ಕಾಂಗ್ರೆಸ್ ಈ ಕುತಂತ್ರಗಳಿಗೆ ಮಣಿಯುವುದಿಲ್ಲ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಈ ಹೇಡಿತನದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ”ಭಾರತ್ ಜೋಡೋ ಯಾತ್ರೆ”ಯ ಅಗಾಧ ಯಶಸ್ಸಿನಿಂದಾಗಿ ಬಿಜೆಪಿಯ ಅಶಾಂತಿ ಎದ್ದು ಕಾಣುತ್ತಿದೆ. ಮೋದಿಜಿಯವರಲ್ಲಿ ಸ್ವಲ್ಪವಾದರೂ ಪ್ರಾಮಾಣಿಕತೆಯಿದ್ದರೆ, ನಿಮ್ಮ ಆತ್ಮೀಯ ಗೆಳೆಯನ ಮೆಗಾ ಹಗರಣಗಳ ಮೇಲೆ ದಾಳಿ ಮಾಡಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಈ ಪ್ರಯತ್ನವನ್ನು ನಾವು ದೃಢವಾಗಿ ಎದುರಿಸುತ್ತೇವೆ” ಎಂದು ಖರ್ಗೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಗೆಹ್ಲೋಟ್, ”ಇದು ದುರದೃಷ್ಟಕರ ಸಂಗತಿಯಾಗಿದೆ, ಯಾವುದೇ ರಾಜ್ಯದಲ್ಲಿ ಚುನಾವಣೆಗಳು ಬಂದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತಿವೆ. 2014 ರಿಂದ ನಿರಂತರವಾಗಿ ಇಡಿ, ಐಟಿ ಮತ್ತು ಸಿಬಿಐ ದುರ್ಬಳಕೆಯಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತವೆ. ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಇಂತಹ ಕ್ರಮ ಖಂಡನೀಯ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ

”ಇಡಿ ದಾಳಿಯಿಂದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದು ಬಿಜೆಪಿಯ ನಾಟಕವಲ್ಲದೆ ಬೇರೇನೂ ಅಲ್ಲ ಎಂದು ದೇಶದ ಜನರು ಅರ್ಥಮಾಡಿಕೊಳ್ಳುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದರು.

”ಈ ರೀತಿ ದಾಳಿ ನಡೆಸುವುದರಿಂದ ಕಾಂಗ್ರೆಸ್ ಹೆದರುತ್ತದೆ ಎಂದು ಅವರು ಭಾವಿಸುತ್ತಾರೆ? ಕಾಂಗ್ರೆಸ್ ಪಕ್ಷವು ಬ್ರಿಟಿಷರ ವಿರುದ್ಧ ಹೋರಾಡಿದ ಪಕ್ಷ ಮತ್ತು ನಮ್ಮ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಜೈಲಿಗೆ ಹೋಗಿದ್ದಾರೆ. ಇದೀಗ ಬಿಜೆಪಿಯವರು ನಮ್ಮ ಮೇಲಿನ ದ್ವೇ‍ಷದಿಂದ ಇಂತಹ ದಾಳಿಗಳನ್ನು ನಡೆಸುತ್ತಿದ್ದಾರೆ, ನಾವು ಈಗಲೂ ಇದರ ವಿರುದ್ಧ ಹೋರಾಡುತ್ತೇವೆ” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇಡಿ ದಾಳಿ ಬಗ್ಗೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಬಿಜೆಪಿಯು ‘ಫೇರ್ ಅಂಡ್ ಲವ್ಲಿ’ ಯೋಜನೆಯನ್ನು ನಡೆಸುತ್ತಿದೆ. ಏಕೆಂದರೆ, ಹಿಮಂತ ಬಿಸ್ವ ಶರ್ಮಾ ಅಥವಾ ಸುವೇಂದು ಅಧಿಕಾರಿ ಅಥವಾ ಇತರರು ಬಿಜೆಪಿ ಸೇರಿದರು. ಈಗ ಇದ್ದಕ್ಕಿದ್ದಂತೆ ಅವರೆಲ್ಲಾ ಪ್ರಾಮಾಣಿಕರಾಗಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ತನಿಖೆಯೂ ನಡೆಯುವುದಿಲ್ಲ, ಯಾವ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರು ಅಗತ್ಯವಿರುವ ಕಡೆಯಲ್ಲಿ ದಾಳಿಗಳನ್ನು ನಡೆಸಲು ಬಿಡುವುದಿಲ್ಲ. ಈ ಹಿಂದೆ ಯಾರ ವಿರುದ್ಧ ಇಡಿ ದಾಳಿ ನಡೆಸಿತ್ತೋ, ಅವರು ಈಗ ಬಿಜೆಪಿ ಸೇರಿದ ನಂತರ ನಿರಪರಾಧಿಗಳಾಗಿದ್ದಾರೆ” ಎಂದು ಜೈರಾಮ್ ರಮೇಶ್ ಆರೋಪಿಸಿದರು.

”ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿಯನ್ನು ತೊಳೆಯುವ ಯಂತ್ರ” ಎಂದು ಖರ್ಗೆಯವರನ್ನು ಜೈರಾಮ್ ರಮೇಶ್ ಹೊಗಳಿದ್ದಾರೆ.

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮೂರು ದಿನಗಳ ಮುಂಚಿತವಾಗಿ, ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಮುಂಜಾನೆ ಶೋಧ ನಡೆಸಿತು. ವಿವಿಧ ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.

ಛತ್ತೀಸ್‌ಗಢದ ಕಾಂಗ್ರೆಸ್ ಖಜಾಂಚಿ ರಾಮಗೋಪಾಲ್ ಅಗರ್ವಾಲ್ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ. ಭಿಲಾಯಿ ಶಾಸಕ ದೇವೇಂದ್ರ ಯಾದವ್, ಗಿರೀಶ್ ದೇವಾಂಗನ್, ಆರ್ ಪಿ ಸಿಂಗ್, ವಿನೋದ್ ತಿವಾರಿ, ಸನ್ನಿ ಅಗರ್ವಾಲ್ ಮೇಲೆಯೂ ಇಡಿ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೂರ್ಯಕಾಂತ್ ತಿವಾರಿಯಿಂದ ರಾಮ್‌ಗೋಪಾಲ್ ಅಗರ್ವಾಲ್ 52 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನುವ ಬಗ್ಗೆ ಜಾರಿ ನಿರ್ದೇಶನಾಲಯದ ಬಳಿ ಬಲವಾದ ಸಾಕ್ಷ್ಯವನ್ನು ಇವೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...