Homeಮುಖಪುಟಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

- Advertisement -
- Advertisement -

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಸೋಮವಾರ (ಫೆ.20)ದಂದು ಛತ್ತೀಸ್‌ಗಢದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದೆ. ಈ ದಾಳಿಗಳ ಕುರಿತು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಡಿ ದಾಳಿ ಕುರಿತು ಟ್ವೀಟ್ ಮಾಡಿರುವ ಖರ್ಗೆ, ”ಕಳೆದ 9 ವ‍ರ್ಷಗಳಲ್ಲಿ 95 ಪ್ರತಿಶತದಷ್ಟು ದಾಳಿಗಳು ವಿರೋಧ ಪಕ್ಷದ ನಾಯಕರ ಮೇಲೆಯೇ ನಡೆದಿವೆ ಅದರಲ್ಲೂ ವಿಶೇಷವಾಗಿ ನಮ್ಮ ಪಕ್ಷದ ನಾಯಕರ ಮೇಲೆಯೇ ನಡೆದಿವೆ. ಇದು ಬಿಜೆಪಿಯ ಹೇಡಿತನವನ್ನು ತೋರಿಸುತ್ತದೆ ಆದರೆ ಕಾಂಗ್ರೆಸ್ ಈ ಕುತಂತ್ರಗಳಿಗೆ ಮಣಿಯುವುದಿಲ್ಲ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

”ಈ ಹೇಡಿತನದ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ”ಭಾರತ್ ಜೋಡೋ ಯಾತ್ರೆ”ಯ ಅಗಾಧ ಯಶಸ್ಸಿನಿಂದಾಗಿ ಬಿಜೆಪಿಯ ಅಶಾಂತಿ ಎದ್ದು ಕಾಣುತ್ತಿದೆ. ಮೋದಿಜಿಯವರಲ್ಲಿ ಸ್ವಲ್ಪವಾದರೂ ಪ್ರಾಮಾಣಿಕತೆಯಿದ್ದರೆ, ನಿಮ್ಮ ಆತ್ಮೀಯ ಗೆಳೆಯನ ಮೆಗಾ ಹಗರಣಗಳ ಮೇಲೆ ದಾಳಿ ಮಾಡಿ, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಈ ಪ್ರಯತ್ನವನ್ನು ನಾವು ದೃಢವಾಗಿ ಎದುರಿಸುತ್ತೇವೆ” ಎಂದು ಖರ್ಗೆ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಎಎನ್‌ಐ ಜೊತೆ ಮಾತನಾಡಿದ ಗೆಹ್ಲೋಟ್, ”ಇದು ದುರದೃಷ್ಟಕರ ಸಂಗತಿಯಾಗಿದೆ, ಯಾವುದೇ ರಾಜ್ಯದಲ್ಲಿ ಚುನಾವಣೆಗಳು ಬಂದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತಿವೆ. 2014 ರಿಂದ ನಿರಂತರವಾಗಿ ಇಡಿ, ಐಟಿ ಮತ್ತು ಸಿಬಿಐ ದುರ್ಬಳಕೆಯಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದಾಗಲೂ ಇಡಿ ಮತ್ತು ಸಿಬಿಐ ದಾಳಿಗಳು ನಡೆಯುತ್ತವೆ. ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಇಂತಹ ಕ್ರಮ ಖಂಡನೀಯ” ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ಇಡಿ ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ ವ್ಯಂಗ್ಯ

”ಇಡಿ ದಾಳಿಯಿಂದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಇದು ಬಿಜೆಪಿಯ ನಾಟಕವಲ್ಲದೆ ಬೇರೇನೂ ಅಲ್ಲ ಎಂದು ದೇಶದ ಜನರು ಅರ್ಥಮಾಡಿಕೊಳ್ಳುತ್ತಿದ್ದಾರೆ” ಎಂದು ಗೆಹ್ಲೋಟ್ ಹೇಳಿದರು.

”ಈ ರೀತಿ ದಾಳಿ ನಡೆಸುವುದರಿಂದ ಕಾಂಗ್ರೆಸ್ ಹೆದರುತ್ತದೆ ಎಂದು ಅವರು ಭಾವಿಸುತ್ತಾರೆ? ಕಾಂಗ್ರೆಸ್ ಪಕ್ಷವು ಬ್ರಿಟಿಷರ ವಿರುದ್ಧ ಹೋರಾಡಿದ ಪಕ್ಷ ಮತ್ತು ನಮ್ಮ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕೋಸ್ಕರ ಹೋರಾಡಿ ಜೈಲಿಗೆ ಹೋಗಿದ್ದಾರೆ. ಇದೀಗ ಬಿಜೆಪಿಯವರು ನಮ್ಮ ಮೇಲಿನ ದ್ವೇ‍ಷದಿಂದ ಇಂತಹ ದಾಳಿಗಳನ್ನು ನಡೆಸುತ್ತಿದ್ದಾರೆ, ನಾವು ಈಗಲೂ ಇದರ ವಿರುದ್ಧ ಹೋರಾಡುತ್ತೇವೆ” ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

ಇಡಿ ದಾಳಿ ಬಗ್ಗೆ ಮಾತನಾಡಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ”ಬಿಜೆಪಿಯು ‘ಫೇರ್ ಅಂಡ್ ಲವ್ಲಿ’ ಯೋಜನೆಯನ್ನು ನಡೆಸುತ್ತಿದೆ. ಏಕೆಂದರೆ, ಹಿಮಂತ ಬಿಸ್ವ ಶರ್ಮಾ ಅಥವಾ ಸುವೇಂದು ಅಧಿಕಾರಿ ಅಥವಾ ಇತರರು ಬಿಜೆಪಿ ಸೇರಿದರು. ಈಗ ಇದ್ದಕ್ಕಿದ್ದಂತೆ ಅವರೆಲ್ಲಾ ಪ್ರಾಮಾಣಿಕರಾಗಿದ್ದಾರೆ ಮತ್ತು ಅವರ ವಿರುದ್ಧ ಯಾವುದೇ ತನಿಖೆಯೂ ನಡೆಯುವುದಿಲ್ಲ, ಯಾವ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ಮೋದಿ ಅವರು ಅಗತ್ಯವಿರುವ ಕಡೆಯಲ್ಲಿ ದಾಳಿಗಳನ್ನು ನಡೆಸಲು ಬಿಡುವುದಿಲ್ಲ. ಈ ಹಿಂದೆ ಯಾರ ವಿರುದ್ಧ ಇಡಿ ದಾಳಿ ನಡೆಸಿತ್ತೋ, ಅವರು ಈಗ ಬಿಜೆಪಿ ಸೇರಿದ ನಂತರ ನಿರಪರಾಧಿಗಳಾಗಿದ್ದಾರೆ” ಎಂದು ಜೈರಾಮ್ ರಮೇಶ್ ಆರೋಪಿಸಿದರು.

”ರಾಜ್ಯಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿಯನ್ನು ತೊಳೆಯುವ ಯಂತ್ರ” ಎಂದು ಖರ್ಗೆಯವರನ್ನು ಜೈರಾಮ್ ರಮೇಶ್ ಹೊಗಳಿದ್ದಾರೆ.

ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮೂರು ದಿನಗಳ ಮುಂಚಿತವಾಗಿ, ಕಲ್ಲಿದ್ದಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಮುಂಜಾನೆ ಶೋಧ ನಡೆಸಿತು. ವಿವಿಧ ಕಾಂಗ್ರೆಸ್ ಮುಖಂಡರ ಮನೆ ಮತ್ತು ಕಚೇರಿಗಳಲ್ಲಿ ಇಡಿ ಅಧಿಕಾರಿಗಳು ಶೋಧಕಾರ್ಯ ನಡೆಸಿದರು.

ಛತ್ತೀಸ್‌ಗಢದ ಕಾಂಗ್ರೆಸ್ ಖಜಾಂಚಿ ರಾಮಗೋಪಾಲ್ ಅಗರ್ವಾಲ್ ಅವರ ಮನೆಯಲ್ಲಿ ಶೋಧ ನಡೆಸಲಾಗಿದೆ. ಭಿಲಾಯಿ ಶಾಸಕ ದೇವೇಂದ್ರ ಯಾದವ್, ಗಿರೀಶ್ ದೇವಾಂಗನ್, ಆರ್ ಪಿ ಸಿಂಗ್, ವಿನೋದ್ ತಿವಾರಿ, ಸನ್ನಿ ಅಗರ್ವಾಲ್ ಮೇಲೆಯೂ ಇಡಿ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಸೂರ್ಯಕಾಂತ್ ತಿವಾರಿಯಿಂದ ರಾಮ್‌ಗೋಪಾಲ್ ಅಗರ್ವಾಲ್ 52 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ ಎನ್ನುವ ಬಗ್ಗೆ ಜಾರಿ ನಿರ್ದೇಶನಾಲಯದ ಬಳಿ ಬಲವಾದ ಸಾಕ್ಷ್ಯವನ್ನು ಇವೆ ಎಂದು ಹೇಳಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...