Homeಮುಖಪುಟಅರ್ನಾಬ್, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಶಿವಸೇನೆ ಶಾಸಕನ ಮನೆ ಮೇಲೆ ಇ.ಡಿ ದಾಳಿ!

ಅರ್ನಾಬ್, ಕಂಗನಾ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದ ಶಿವಸೇನೆ ಶಾಸಕನ ಮನೆ ಮೇಲೆ ಇ.ಡಿ ದಾಳಿ!

ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ಅರ್ನಾಬ್ ಮತ್ತು ಇನ್ನಿತರರ ವಿರುದ್ಧ ಮರು ತನಿಖೆಗೆ ಒತ್ತಾಯಿಸಿದ್ದರು.

- Advertisement -
- Advertisement -

ಅರ್ನಾಬ್ ಗೋಸ್ವಾಮಿ ಮತ್ತು ನಟಿ ಕಂಗನಾ ವಿರುದ್ಧ ಆರೋಪ ಮಾಡಿದ್ದ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಮನೆ ಮತ್ತು ಕಛೇರಿಗಳ ಮೇಲೆ ಮಹಾರಾಷ್ಟ್ರ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಸಕ ಮತ್ತು ಅವರ ಮಗ ವಿಹಾಂಗ್ ಸರ್ನಾಯಕ್ ಅವರನ್ನು ವಿಚಾರಣೆಗೊಳಪಡಿಸಿದ್ದಾರೆ.

ಬಾಲಿವುಡ್ ನಟಿ ಕಂಗನಾ ರಣಾವತ್ ‘ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ’ ಹೋಲಿಸಿದ್ದರು. ಆಗ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಶಾಸಕ ಪ್ರತಾಪ್ ಸರ್ನಾಯಕ್ ಒತ್ತಾಯಿಸಿದ್ದರು. ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ಅರ್ನಾಬ್ ಮತ್ತು ಇನ್ನಿತರರ ವಿರುದ್ಧ ಮರು ತನಿಖೆಗೆ ಒತ್ತಾಯಿಸಿದ್ದರು.

ಇದನ್ನೂ ಓದಿ: ನೋಟು ಅಮಾನ್ಯೀಕರಣದ ಸಂಭ್ರಮ ಸಮಾಧಿಯ ಮೇಲೆ ಕೇಕ್ ಕತ್ತರಿಸಿದಂತೆ- ಶಿವಸೇನೆ

ಶಿವಸೇನೆ ಶಾಸಕರೊಂದಿಗೆ ಸಂಪರ್ಕ ಹೊಂದಿದ್ದ ಥಾಣೆ ಮತ್ತು ಮುಂಬೈನ 10 ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿದೆ ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ಈ ದಾಳಿಯನ್ನು ಖಂಡಿಸಿದ ಶಿವಸೇನೆ, “ಬಿಜೆಪಿಯ ರಾಜಕೀಯ ದುರುದ್ದೇಶಪೂರಿತ ದಾಳಿ ಇದು” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಮುಂದಿನ 25 ವರ್ಷಗಳ ಕಾಲ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಬಿಜೆಪಿ ಪಕ್ಷವು ಮರೆತುಬಿಡಬೇಕು. ನೀವು ಇಂದು ಪ್ರಾರಂಭಿಸಿದ್ದೀರಿ, ಅದನ್ನು ಹೇಗೆ ಕೊನೆಗೊಳಿಸಬೇಕು ಎಂದು ನಮಗೆ ತಿಳಿದಿದೆ” ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಇದನ್ನೂ ಓದಿ: ‘ಕರಾಚಿ ಸ್ವೀಟ್ಸ್’‌ ಅಂಗಡಿ ಹೆಸರು ಬದಲಿಸುವಂತೆ ಶಿವಸೇನೆ ಮುಖಂಡನ ಧಮಕಿ!

“ಶಾಸಕರು ಮನೆಯಲ್ಲಿ ಇಲ್ಲದಿದ್ದಾಗ ಅವರ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ. ನೀವು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಜನರಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದೀರಿ. ಈ ಕ್ರಮಗಳು ನಿಮಗೆ ಹಿನ್ನಡೆ ಉಂಟುಮಾಡುತ್ತವೆ. ನಿಮ್ಮ ಸಮಯ ಹತ್ತಿರವಾಗಿದೆ ಎಂದು ನಾನು ಭಾವಿಸುತ್ತೇನೆ. ಅದು ಸಿಬಿಐ ಅಥವಾ ಇ.ಡಿ ಆಗಿರಲಿ. ನಮ್ಮ ಸರ್ಕಾರ, ಶಾಸಕರು ಮತ್ತು ನಾಯಕರು ಯಾರಿಗೂ ಶರಣಾಗುವುದಿಲ್ಲ. ನಾವು ಹೋರಾಟ ಮುಂದುವರಿಸುತ್ತೇವೆ” ಎಂದು ಅವರು ಹೇಳಿದರು.

ಮಹಾರಾಷ್ಟ್ರದಲ್ಲಿ ಅಧಿಕಾರ ಹಂಚಿಕೆ ವಿವಾದದ ನಂತರ ಶಿವಸೇನೆ ಕಳೆದ ವರ್ಷ ಬಿಜೆಪಿಯೊಂದಿಗಿನ ತನ್ನ ದೀರ್ಘಕಾಲದ ಸಂಬಂಧವನ್ನು ಕಡಿದುಕೊಂಡಿತು. ನಂತರ ಸೈದ್ಧಾಂತಿಕ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆಗೆ ಮೈತ್ರಿ ಮಾಡಿಕೊಂಡು ಶಿವಸೇನೆ ಅಧಿಕಾರಕ್ಕೆ ಬಂದಿತು. ಅಂದಿನಿಂದು ಬಿಜೆಪಿ ಮತ್ತು ಶಿವಸೇನೆಯ ನಡುವೆ ಬಹಿರಂಗ ಗುದ್ದಾಟ ನಡೆಯುತ್ತಿದೆ.


ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...