HomeಮುಖಪುಟPFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

PFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

ಪಿಎಫ್‌ಐ ಸಿಎಎ ಕಾಯ್ದೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದೆ. ಆ ಕಾಯ್ದೆ ಸಂವಿಧಾನ ವಿರೋಧಿಯಾದುದು ಎಂಬುದು ನಮ್ಮ ಅಭಿಮತ. ಹಾಗಾಗಿ ನಮ್ಮ ಹೋರಾಟವನ್ನು ಹಣಿಯಲು ಕೇಂದ್ರ ಸರ್ಕಾರ ಮುಂದಾಗಿದೆ.

- Advertisement -
- Advertisement -

ಸಿಎಎ ವಿರೋಧಿ ಹೋರಾಟದ ಬಳಿಕ ಈಗ ಐತಿಹಾಸಿಕ ರೈತರ ಹೋರಾಟವು ಮೋದಿ ಸರಕಾರದ ಬುಡ ಅಲ್ಲಾಡಿಸುತ್ತಿದೆ. ಎಂದಿನಿಂತೆ ಅದು ಸಾಂವಿಧಾನಿಕ ಸಂಸ್ಥೆ EDಯನ್ನು ದುರ್ಬಳಕೆ ಮಾಡಿಕೊಂಡು PFI ವಿರುದ್ಧ ಕಾರ್ಯಾಚರಣೆಗಿಳಿದಿದೆ. ಜನರ ದಿಕ್ಕು ತಪ್ಪಿಸಲು ನಡೆಸುವ ಇಂತಹ ದುಷ್ಟ ತಂತ್ರಗಳಿಂದ PFIಯನ್ನು ಧೃತಿಗೆಡಿಸಲಾಗದು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಮುಹಮ್ಮದ್ ಶಾಕಿಫ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಇಂದು ಜಾರಿ ನಿರ್ದೇಶನಾಲಯವು ಏಕಕಾಲದಲ್ಲಿ ಹಲವು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ. ಅಧಿಕಾರದಲ್ಲಿರುವ ಸರಕಾರ ಜನಾಕ್ರೋಶದ ಒತ್ತಡಕ್ಕೆ ಗುರಿಯಾದಾಗ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ದಾಳಿಗಳನ್ನು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಎದುರಾಳಿಗಳ ವಿರುದ್ಧ ಮತ್ತು ದೇಶದಲ್ಲಿರುವ ಭಿನ್ನಮತವನ್ನು ದಮನಿಸುವುದಕ್ಕಾಗಿ ಮೋದಿ ಸರಕಾರ ಯಾವಾಗಲೂ ರಾಷ್ಟ್ರೀಯ ಏಜೆನ್ಸಿಗಳನ್ನು ಬಳಸುತ್ತಿದೆ. ಈ ಏಜೆನ್ಸಿಗಳ ವಿಶ್ವಾಸಾರ್ಹತೆಯ ಮೇಲೆ ಪ್ರಶ್ನೆ ಎದ್ದಿದೆ. ದಿಲ್ಲಿಯಲ್ಲಿ ರೈತರು ಪಟ್ಟು ಹಿಡಿದು ಬೃಹತ್ ಹೋರಾಟ ನಡೆಸುತ್ತಿದ್ದಾರೆ. ಹೀಗಿರುವಾಗ ಈ ದಾಳಿಗಳು ವಿಷಯಾಂತರಗೊಳಿಸುವ ಗಿಮಿಕ್ ಅಲ್ಲದೆ ಬೇರೇನೂ ಅಲ್ಲ ಎಂದು ಶಾಕಿಫ್ ಹೇಳಿದ್ದಾರೆ.

ಪಿಎಫ್‌ಐ ಸಿಎಎ ಕಾಯ್ದೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದೆ. ಆ ಕಾಯ್ದೆ ಸಂವಿಧಾನ ವಿರೋಧಿಯಾದುದು ಎಂಬುದು ನಮ್ಮ ಅಭಿಮತ. ಹಾಗಾಗಿ ನಮ್ಮ ಹೋರಾಟವನ್ನು ಹಣಿಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಪಾಪ್ಯುಲರ್ ಫ್ರಂಟ್ ಇದರಿಂದ ಆಘಾತಗೊಳ್ಳುವುದಿಲ್ಲ ಎಂದಿದ್ದಾರೆ.

ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಮತ್ತು ಕಾನೂನಾತ್ಮಕವಾಗಿ ನಡೆಯುತ್ತಿರುವ ಪಿಎಫ್‌ಐ ಸಂಘಟನೆಯ ನಮ್ಮ ಚಟುವಟಿಕೆಗಳು ಪಾರದರ್ಶಕವಾಗಿವೆ ಮತ್ತು ಸಾರ್ವಜನಿಕವಾಗಿವೆ. ನಮ್ಮಲ್ಲಿ ಮುಚ್ಚುಮರೆ ಏನೂ ಇಲ್ಲ. ಸಂಘಟನೆಯು ಕಾನೂನಾತ್ಮಕವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಇದನ್ನು ಎದುರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌‌ತಕ್‌ ಚಾನೆಲ್‌‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...