HomeಮುಖಪುಟPFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

PFI ಕಚೇರಿಗಳ ಮೇಲೆ ಇಡಿ ದಾಳಿ ಜನರ ಗಮನ ಬೇರೆಡೆಗೆ ಸೆಳೆಯುವ ಯತ್ನ: ಮುಹಮ್ಮದ್ ಶಾಕಿಫ್

ಪಿಎಫ್‌ಐ ಸಿಎಎ ಕಾಯ್ದೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದೆ. ಆ ಕಾಯ್ದೆ ಸಂವಿಧಾನ ವಿರೋಧಿಯಾದುದು ಎಂಬುದು ನಮ್ಮ ಅಭಿಮತ. ಹಾಗಾಗಿ ನಮ್ಮ ಹೋರಾಟವನ್ನು ಹಣಿಯಲು ಕೇಂದ್ರ ಸರ್ಕಾರ ಮುಂದಾಗಿದೆ.

- Advertisement -
- Advertisement -

ಸಿಎಎ ವಿರೋಧಿ ಹೋರಾಟದ ಬಳಿಕ ಈಗ ಐತಿಹಾಸಿಕ ರೈತರ ಹೋರಾಟವು ಮೋದಿ ಸರಕಾರದ ಬುಡ ಅಲ್ಲಾಡಿಸುತ್ತಿದೆ. ಎಂದಿನಿಂತೆ ಅದು ಸಾಂವಿಧಾನಿಕ ಸಂಸ್ಥೆ EDಯನ್ನು ದುರ್ಬಳಕೆ ಮಾಡಿಕೊಂಡು PFI ವಿರುದ್ಧ ಕಾರ್ಯಾಚರಣೆಗಿಳಿದಿದೆ. ಜನರ ದಿಕ್ಕು ತಪ್ಪಿಸಲು ನಡೆಸುವ ಇಂತಹ ದುಷ್ಟ ತಂತ್ರಗಳಿಂದ PFIಯನ್ನು ಧೃತಿಗೆಡಿಸಲಾಗದು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯದರ್ಶಿ ಮುಹಮ್ಮದ್ ಶಾಕಿಫ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಇಂದು ಜಾರಿ ನಿರ್ದೇಶನಾಲಯವು ಏಕಕಾಲದಲ್ಲಿ ಹಲವು ಪಿಎಫ್‌ಐ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ. ಅಧಿಕಾರದಲ್ಲಿರುವ ಸರಕಾರ ಜನಾಕ್ರೋಶದ ಒತ್ತಡಕ್ಕೆ ಗುರಿಯಾದಾಗ, ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಇಂತಹ ದಾಳಿಗಳನ್ನು ಮಾಡುತ್ತದೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಎದುರಾಳಿಗಳ ವಿರುದ್ಧ ಮತ್ತು ದೇಶದಲ್ಲಿರುವ ಭಿನ್ನಮತವನ್ನು ದಮನಿಸುವುದಕ್ಕಾಗಿ ಮೋದಿ ಸರಕಾರ ಯಾವಾಗಲೂ ರಾಷ್ಟ್ರೀಯ ಏಜೆನ್ಸಿಗಳನ್ನು ಬಳಸುತ್ತಿದೆ. ಈ ಏಜೆನ್ಸಿಗಳ ವಿಶ್ವಾಸಾರ್ಹತೆಯ ಮೇಲೆ ಪ್ರಶ್ನೆ ಎದ್ದಿದೆ. ದಿಲ್ಲಿಯಲ್ಲಿ ರೈತರು ಪಟ್ಟು ಹಿಡಿದು ಬೃಹತ್ ಹೋರಾಟ ನಡೆಸುತ್ತಿದ್ದಾರೆ. ಹೀಗಿರುವಾಗ ಈ ದಾಳಿಗಳು ವಿಷಯಾಂತರಗೊಳಿಸುವ ಗಿಮಿಕ್ ಅಲ್ಲದೆ ಬೇರೇನೂ ಅಲ್ಲ ಎಂದು ಶಾಕಿಫ್ ಹೇಳಿದ್ದಾರೆ.

ಪಿಎಫ್‌ಐ ಸಿಎಎ ಕಾಯ್ದೆಯನ್ನು ವಿರೋಧಿಸಿ ಹೋರಾಟ ನಡೆಸುತ್ತಿದೆ. ಆ ಕಾಯ್ದೆ ಸಂವಿಧಾನ ವಿರೋಧಿಯಾದುದು ಎಂಬುದು ನಮ್ಮ ಅಭಿಮತ. ಹಾಗಾಗಿ ನಮ್ಮ ಹೋರಾಟವನ್ನು ಹಣಿಯಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಪಾಪ್ಯುಲರ್ ಫ್ರಂಟ್ ಇದರಿಂದ ಆಘಾತಗೊಳ್ಳುವುದಿಲ್ಲ ಎಂದಿದ್ದಾರೆ.

ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಮತ್ತು ಕಾನೂನಾತ್ಮಕವಾಗಿ ನಡೆಯುತ್ತಿರುವ ಪಿಎಫ್‌ಐ ಸಂಘಟನೆಯ ನಮ್ಮ ಚಟುವಟಿಕೆಗಳು ಪಾರದರ್ಶಕವಾಗಿವೆ ಮತ್ತು ಸಾರ್ವಜನಿಕವಾಗಿವೆ. ನಮ್ಮಲ್ಲಿ ಮುಚ್ಚುಮರೆ ಏನೂ ಇಲ್ಲ. ಸಂಘಟನೆಯು ಕಾನೂನಾತ್ಮಕವಾಗಿ ಮತ್ತು ಪ್ರಜಾಸತ್ತಾತ್ಮಕವಾಗಿ ಇದನ್ನು ಎದುರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌‌ತಕ್‌ ಚಾನೆಲ್‌‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...