ಛತ್ತೀಸ್ಗಢದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳು ದಾಳಿಗಳ ಮೂಲಕ ತಮ್ಮ ಕಾರ್ಯಕರ್ತರ ಆತ್ಮಸ್ಥೈರ್ಯವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ನಕ್ಸಲ್ ಪೀಡಿತ ಬಾಳಘಟ್ಟ ಜಿಲ್ಲೆಯ ಕಟಂಗಿ ಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಾನು ನಿನ್ನೆ ಛತ್ತೀಸ್ಗಢದಲ್ಲಿದ್ದೆ ಮತ್ತು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಟೀಂ ಕೂಡ ಅಲ್ಲಿತ್ತು. ಇಡಿ, ಸಿಬಿಐ ಮತ್ತು ಐಟಿ ದಾಳಿಗಳ ಮೂಲಕ ಅವರು ನಮ್ಮ ಪಕ್ಷದ ಕಾರ್ಯಕರ್ತರನ್ನು ಹೆದರಿಸಿ ತಮ್ಮ ಮನೆಗಳಲ್ಲಿ ಕುಳಿತುಕೊಳ್ಳುವಂತೆ ಮಾಡಲು ಯತ್ನಿಸುತ್ತಾರೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿ ಪಕ್ಷವು ವಿಧಾನಸಭಾ ಚುನಾವಣೆಯನ್ನು ಗೆಲ್ಲಲಿದೆ ಎಂದು ಅವರು ಹೇಳಿದ್ದಾರೆ.
ಈ ದಾಳಿಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಹತಾಶರಾಗುತ್ತಾರೆ ಎಂದು ಅವರು ಯೋಚಿಸುತ್ತಿದ್ದಾರೆ. ಆದರೆ ಅದು ಆಗುವುದಿಲ್ಲ. ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಖರ್ಗೆ ಅವರು ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಛತ್ತೀಸ್ಗಢದಲ್ಲಿ ತನ್ನ ಸರ್ಕಾರವನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯ(ಇಡಿ), ಕೇಂದ್ರೀಯ ತನಿಖಾ ದಳ(ಸಿಬಿಐ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಗಳನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆ NREGA ಯೋಜನೆಯನ್ನು ಮೋದಿ ಹಿಂದೆ ಬಲವಾಗಿ ಟೀಕಿಸಿದ್ದರು, ಆದರೆ ಅದೇ ಕಾರ್ಯಕ್ರಮವು COVID-19 ಸಾಂಕ್ರಾಮಿಕ ಸಮಯದಲ್ಲಿ ಉದ್ಯೋಗವನ್ನು ಒದಗಿಸಲು ಸರ್ಕಾರಕ್ಕೆ ಸಹಾಯ ಮಾಡಿತು. ತಮ್ಮ ಪಕ್ಷವು ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ದೇಶದಲ್ಲಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ಹಸಿರು ಕ್ರಾಂತಿಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿಯೇ ಸರ್ಕಾರವು ಲಕ್ಷಾಂತರ ಜನರಿಗೆ ಉಚಿತ ಪಡಿತರವನ್ನು ನೀಡಲು ಕಾಂಗ್ರೆಸ್ ಸರಕಾರದ ದೂರದೃಷ್ಟಿಯ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.
ಮೊಬೈಲ್ ಫೋನ್ಗಳು ಮತ್ತು ಲ್ಯಾಪ್ಟಾಪ್ಗಳನ್ನು ಇಂದು ಭಾರತದಲ್ಲಿ ಕೋಟ್ಯಾಂತರ ಜನರು ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ರಾಜೀವ್ ಗಾಂಧಿಯವರ ದೂರದೃಷ್ಟಿಯ ಕ್ರಮಗಳು ಕಾರಣ ಎಂದು ಹೇಳಿದ್ದಾರೆ. ಇದರ ಜೊತೆಗೆ ದೇಶದ ಅಭಿವೃದ್ಧಿಯಲ್ಲಿ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆಯನ್ನು ಖರ್ಗೆ ಸ್ಮರಿಸಿಕೊಂಡಿದ್ದಾರೆ.
ಇದನ್ನು ಓದಿ: ಉತ್ತರಪ್ರದೇಶ: ABVP ಬಗ್ಗೆ ಹೇಳಿಕೆ; ಕಾಂಗ್ರೆಸ್ ರಾಜ್ಯಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು