HomeಮುಖಪುಟNDA ನಲ್ಲಿ 'ಐಟಿ, ಇಡಿ, ಸಿಬಿಐ' ಎಂಬ ಮೂರು ಪಕ್ಷಗಳು ಬಲಿಷ್ಠವಾಗಿವೆ, ಮೈತ್ರಿ ಪಕ್ಷಗಳ ಅಗತ್ಯವಿಲ್ಲ:...

NDA ನಲ್ಲಿ ‘ಐಟಿ, ಇಡಿ, ಸಿಬಿಐ’ ಎಂಬ ಮೂರು ಪಕ್ಷಗಳು ಬಲಿಷ್ಠವಾಗಿವೆ, ಮೈತ್ರಿ ಪಕ್ಷಗಳ ಅಗತ್ಯವಿಲ್ಲ: ಬಿಜೆಪಿ ವಿರುದ್ಧ ಠಾಕ್ರೆ ವಾಗ್ದಾಳಿ

- Advertisement -
- Advertisement -

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ, ” ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ದಲ್ಲಿ ಆದಾಯ ತೆರಿಗೆ ಇಲಾಖೆ(ಐಟಿ), ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ”ಮೂರು ಪಕ್ಷಗಳು ಪ್ರಬಲ”ವಾಗಿವೆ ಎಂದು ಟೀಕೆ ಮಾಡಿದ್ದಾರೆ.

ಶಿವಸೇನಾ (ಯುಬಿಟಿ) ಪಕ್ಷದ ಮುಖವಾಣಿ ‘ಸಾಮ್ನಾ’ದ ಕಾರ್ಯನಿರ್ವಾಹಕ ಸಂಪಾದಕ, ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರಿಗೆ ನೀಡಿದ ಸಂದರ್ಶನದಲ್ಲಿ ಠಾಕ್ರೆ ಈ ಹೇಳಿಕೆಗಳನ್ನು ನೀಡಿದ್ದಾರೆ. ಸಂದರ್ಶನದ ಮೊದಲ ಭಾಗವು ಬುಧವಾರ ಸಾಮ್ನಾದಲ್ಲಿ ಪ್ರಕಟವಾಯಿತು ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಚಾನೆಲ್‌ಗಳಲ್ಲಿ ಪ್ರಸಾರವಾಯಿತು.

”ಹಲವು ವರ್ಷಗಳ ನಂತರ, ಈ ದೇಶದಲ್ಲಿ ಎನ್‌ಡಿಎ ಎಂಬ ‘ಅಮೀಬಾ’ ಇನ್ನೂ ಜೀವಂತವಾಗಿದೆ ಎಂದು ನನಗೆ ತಿಳಿಯಿತು. INDIA ಎಂದು ಕರೆಯಲ್ಪಡುವ ದೇಶಭಕ್ತ ನಾಯಕರ ಮೈತ್ರಿಯನ್ನು ಎದುರಿಸಲು, ನಮ್ಮ ಪ್ರಧಾನಿ ಇದ್ದಕ್ಕಿದ್ದಂತೆ 36 ಪಕ್ಷಗಳ (ಬಿಜೆಪಿ ನೇತೃತ್ವದ ಎನ್‌ಡಿಎ ಭಾಗ) ಸಭೆಯನ್ನು ಕರೆದರು. ವಾಸ್ತವವಾಗಿ, ಅವರಿಗೆ 36 ಪಕ್ಷಗಳ ಅಗತ್ಯವಿಲ್ಲ. ಪ್ರಸ್ತುತ ಎನ್‌ಡಿಎಯಲ್ಲಿ ಇಡಿ, ಆದಾಯ ತೆರಿಗೆ ಮತ್ತು ಸಿಬಿಐ ಮೂರು ಪಕ್ಷಗಳು ಪ್ರಬಲವಾಗಿವೆ” ಎಂದು ಠಾಕ್ರೆ ವ್ಯಂಗ್ಯ ಮಾಡಿದ್ದಾರೆ.

”ಶಿವಸೇನೆ ಮತ್ತು ಅಕಾಲಿದಳದಂತಹ ಹಳೆಯ ಮಿತ್ರಪಕ್ಷಗಳು ಈಗಾಗಲೇ ಎನ್‌ಡಿಎ ತೊರೆದಿವೆ ಮತ್ತು ಎನ್‌ಡಿಎ ಸಭೆಯಲ್ಲಿ ಕೆಲವು ಪಕ್ಷಗಳು ಒಬ್ಬನೇ ಒಬ್ಬ ಸಂಸದನನ್ನು ಸಹ ಹೊಂದಿಲ್ಲ” ಎಂದು ಅವರು ಟೀಕೆ ಮಾಡಿದರು.

ಜುಲೈ 18ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ಸಭೆಯಲ್ಲಿ ಎನ್‌ಡಿಎ ಭಾಗವಾಗಿರುವ 36 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಅದೇ ದಿನ, ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಶಿವಸೇನೆ (ಯುಬಿಟಿ) ಸೇರಿದಂತೆ 26 ವಿರೋಧ ಪಕ್ಷಗಳು ಬೆಂಗಳೂರಿನಲ್ಲಿ ಸಭೆ ನಡೆಸಿದ್ದವು. ಈ ಮೈತ್ರಿಕೂಟವನ್ನು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಎಂದು ಹೆಸರಿಸಲಾಯಿತು.

ಮಣಿಪುರ ಹಿಂಸಾಚಾರ: ಪ್ರಧಾನಿಗೆ ಠಾಕ್ರೆ ತರಾಟೆ

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಠಾಕ್ರೆ, ”ಪ್ರಧಾನಿ ಮೋದಿ ಸಮಸ್ಯೆಯನ್ನು ಪರಿಹರಿಸಲು ಮಣಿಪುರಕ್ಕೆ ಏಕೆ ಭೇಟಿ ನೀಡಲಿಲ್ಲ?” ಎಂದು ಪ್ರಶ್ನೆ ಮಾಡಿದ್ದಾರೆ.

”ಮಣಿಪುರ ನಮ್ಮ ದೇಶದ ಭಾಗವಾಗಿರುವುದರಿಂದ ನಾನು ಮಣಿಪುರವನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಿದ್ದೇನೆ. ಮಣಿಪುರವು ದೇಶದ ಗಡಿಯಂಚಿನಲ್ಲಿದೆ ಎಂದು ನಾನು ಭಯಪಡುತ್ತೇನೆ. ಮಣಿಪುರದಲ್ಲಿ ಡಬಲ್ ಇಂಜಿನ್ (ಬಿಜೆಪಿ) ಸರ್ಕಾರ ವಿಫಲವಾಗಿದೆ” ಎಂದು ಠಾಕ್ರೆ ಹೇಳಿದರು.

”ಈಗ ಎರಡು ರಾಜ್ಯಗಳು (ಮಣಿಪುರ ಮತ್ತು ಕಾಶ್ಮೀರ) ಹೊತ್ತಿ ಉರಿಯುತ್ತಿವೆ. ಒಂದೇ ಸಮಯದಲ್ಲಿ ಎರಡು ರಾಜ್ಯಗಳಲ್ಲಿ ಅಸ್ಥಿರತೆ ಇದೆ. ಕಾಶ್ಮೀರದಲ್ಲಿ ಕಳೆದ ಆರು ವರ್ಷಗಳಿಂದ ಚುನಾವಣೆಯೇ ನಡೆದಿಲ್ಲ. ಸರ್ಕಾರಕ್ಕೆ ಚುನಾವಣೆ ನಡೆಸಲು ಇಷ್ಟವಿಲ್ಲ ಎಂದು ತೋರುತ್ತದೆ. ಅದಕ್ಕಾಗಿಯೇ ನಾನು 2024 ದೇಶಕ್ಕೆ ನಿರ್ಣಾಯಕ ವರ್ಷ ಎಂದು ಹೇಳುತ್ತಿದ್ದೇನೆ. ಈ (ಬಿಜೆಪಿ) ಸರ್ಕಾರ 2024 ರಲ್ಲಿ ಮತ್ತೆ ಬಂದರೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯುವುದಿಲ್ಲ, ಮತ್ತೆ ಚುನಾವಣೆಗಳು ನಡೆಯುವುದಿಲ್ಲ” ಎಂದು ಠಾಕ್ರೆ ಹೇಳಿದರು.

”ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಸಾಮಾನ್ಯ ಜನರು ರಾಜ್ಯ ಮತ್ತು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಬೇಕಾಗಿದೆ” ಎಂದರು.

ಇದನ್ನೂ ಓದಿ: ಇಂದು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ: INDIA ಒಕ್ಕೂಟದ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...