Homeಮುಖಪುಟಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

ಇಡಿ ಮುಖ್ಯಸ್ಥ ಮಿಶ್ರಾಗೆ 3ನೇ ಅವಧಿಗೆ ಅಧಿಕಾರ ವಿಸ್ತರಣೆ ಕಾನೂನು ಬಾಹಿರ: ಸುಪ್ರೀಂ ಕೋರ್ಟ್

- Advertisement -
- Advertisement -

ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಸಂಜಯ್ ಕುಮಾರ್ ಮಿಶ್ರಾ ಅವರಿಗೆ ಮೂರನೇ ಅವಧಿಗೆ ಅಧಿಕಾರ ವಿಸ್ತರಿಸುವ ಕೇಂದ್ರ ಸರ್ಕಾರದ ಆದೇಶವನ್ನು ಕಾನೂನುಬಾಹಿರ ಎಂದು ಕರೆದಿರುವ ಸುಪ್ರೀಂ ಕೋರ್ಟ್ ಆ ಆದೇಶವನ್ನು ವಜಾ ಮಾಡಿದೆ.

ಜುಲೈ 31ರ ಒಳಗೆ ಇಡಿ ಮುಖ್ಯಸ್ಥರ ಹುದ್ದೆಗೆ ಬೇರೊಬ್ಬರನ್ನು ನೇಮಕ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್ ಮತ್ತು ಸಂಜಯ್ ಕರೋಲ್ ಅವರ ಪೀಠವು ಮಿಶ್ರಾಗೆ ನೀಡಲಾದ ವಿಸ್ತರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಮತ್ತು ಇತರರು ಈ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ನವೆಂಬರ್ 19, 2018ರಂದು 1984-ಬ್ಯಾಚ್ ಭಾರತೀಯ ಕಂದಾಯ ಸೇವಾ ಅಧಿಕಾರಿ ಮಿಶ್ರಾ ಅವರನ್ನು ಮೊದಲು 2 ವರ್ಷಗಳ ಅವಧಿಗೆ ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ನೇಮಿಸಲಾಯಿತು. 2020ರಲ್ಲಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರ ಅಧಿಕಾರಾವಧಿಯನ್ನು ಒಂದು ವರ್ಷಕ್ಕೆ ವಿಸ್ತರಿಸಿತು.

ಆ ಬಳಿಕ ಸೆಪ್ಟೆಂಬರ್ 2021 ರಲ್ಲಿ, ಮಿಶ್ರಾ ಅವರ ಅಧಿಕಾರಾವಧಿಯನ್ನು ಇನ್ನು ಮುಂದೆ ವಿಸ್ತರಿಸದಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ನಿರ್ದೇಶಕರು ಐದು ವರ್ಷಗಳವರೆಗೆ ಅಧಿಕಾರಾವಧಿಯನ್ನು ಹೊಂದಿರಬಹುದು ಎಂದು ಸರ್ಕಾರವು ನವೆಂಬರ್ 2021ರಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಮತ್ತು ಕೇಂದ್ರ ವಿಜಿಲೆನ್ಸ್ ಕಮಿಷನ್ ಕಾಯಿದೆ ಸುಗ್ರೀವಾಜ್ಞೆಗಳನ್ನು ತಂದಿತು. ಇದರಿಂದ ಮಿಶ್ರಾ ಅವರು ಇನ್ನೊಂದು ವರ್ಷ ಮುಂದುವರಿಯಲು ಸಾಧ್ಯವಾಯಿತು.

ಇಂದಿನ ತೀರ್ಪಿನಲ್ಲಿ ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ ಕಾಯ್ದೆ ಮತ್ತು ಕೇಂದ್ರ ವಿಜಿಲೆನ್ಸ್ ಕಮಿಷನ್ ಕಾಯಿದೆಯಲ್ಲಿನ ತಿದ್ದುಪಡಿಗಳನ್ನು ಸುಪ್ರೀಂ ಕೋರ್ಟ್ ದೃಢಪಡಿಸಿತು. ಸಿಬಿಐ ಮುಖ್ಯಸ್ಥ ಮತ್ತು ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು ಅವರ ಕಡ್ಡಾಯ ಎರಡು ವರ್ಷಗಳ ನಂತರ ಸಂಭವನೀಯ ಮೂರು ವರ್ಷಗಳವರೆಗೆ ವಿಸ್ತರಿಸುವ ಅಧಿಕಾರವನ್ನು ಕೇಂದ್ರಕ್ಕೆ ನೀಡಿದೆ. ಆದರೆ ಆನಂತರ ಮತ್ತೆ ಅಧಿಕಾರ ಅವಧಿ ವಿಸ್ತರಿಸುವುದು ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿದೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ರಾಜಕೀಯ ಎದುರಾಳಿಗಳನ್ನು ಸಂಕಷ್ಟಕ್ಕೆ ಸಿಲುಕಿಸಲು ಇಡಿ, ಸಿಬಿಐ ನಂತಹ ತನಿಖಾ ಸಂಸ್ಥೆಗಳ ಸ್ವಾಯುತ್ತತೆ ಕಸಿದುಕೊಂಡು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ಇದನ್ನೂ ಓದಿ; ಜಮ್ಮು ಕಾಶ್ಮೀರದ 370ನೇ ವಿಧಿ ರದ್ಧತಿ ನಿರ್ಧಾರ ಸಮರ್ಥಿಸಿ ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...