ವಿಧಾನಸಭೆ ಚುನಾವಣೆಯ ಹಿನ್ನೆಲೆ ಕೇಂದ್ರೀಯ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯವು ಹಂಚಿಕೆಗಾಗಿ ಹಣವನ್ನು ಸಾಗಿಸುತ್ತಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗಂಭೀರವಾದ ಆರೋಪವನ್ನು ಮಾಡಿದ್ದಾರೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಗಳು ಮತ್ತು ಇಡಿ ದಾಳಿಗಳು ಏಕಕಾಲದಲ್ಲಿ ನಡೆಯುತ್ತಿವೆ. ಈ ಚುನಾವಣೆಯಲ್ಲಿ ಹಣವನ್ನು ಹಂಚಲು ಇಡಿ ಹಣವನ್ನು ಸಾಗಿಸುತ್ತಿದೆ ಮತ್ತು ಈ ವಿಷಯದಲ್ಲಿ ಭಾರತದ ಚುನಾವಣಾ ಆಯೋಗ ಮಧ್ಯಪ್ರವೇಶಿಸಬೇಕು ಎಂದು ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್ನ ಪ್ರವರ್ತಕರು ಕಾಂಗ್ರೆಸ್ ಆಡಳಿತವಿರುವ ಛತ್ತೀಸ್ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ಗೆ ಸುಮಾರು 508 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂದು ಕ್ಯಾಶ್ ಕೊರಿಯರ್’ನ ಹೇಳಿಕೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ ವಿಶ್ಲೇಷಣೆ ಆಧರಿಸಿ ಆರೋಪ ಮಾಡಲಾಗಿದೆ ಎಂದು ಇಡಿ ಹೇಳಿದೆ.
ಬಾಘೇಲ್ ಅವರು ವಿರುದ್ಧ ಆರೋಪಗಳನ್ನು ನಿರಾಕರಿಸಿದ ಗೆಹ್ಲೂಟ್, EDಯ ಪತ್ರಿಕಾ ಹೇಳಿಕೆಯು ಬಿಜೆಪಿಯ ಎರಡನೇ ಚುನಾವಣಾ ಪ್ರಣಾಳಿಕೆ ಎಂದು ಆರೋಪಿಸಿದ್ದಾರೆ. ಗೆಹ್ಲೋಟ್ ಅವರು ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಸರ್ದಾರ್ಪುರ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಇಡಿ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಕುತೂಹಲಕಾರಿಯಾಗಿದೆ. ಇಡಿ ಮತ್ತು ಐಟಿಯಂತಹ ಏಜೆನ್ಸಿಗಳ ಆದೇಶವು ಆರ್ಥಿಕ ಅಪರಾಧಿಗಳನ್ನು ಬಂಧಿಸುವುದಾಗಿದೆ. ಆದರೆ ಅವರು ಇಡೀ ದೇಶದ ರಾಜಕಾರಣಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ತಮ್ಮ ಪಕ್ಷದೊಳಗಿನ ಟಿಕೆಟ್ ವಿಚಾರದ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್ ಗೆಹ್ಲೋಟ್, ಅಭ್ಯರ್ಥಿಗಳ ಘೋಷಣೆ ವೇಳೆ ಇದು ಸಾಮಾನ್ಯ ಮತ್ತು ಸ್ವಾಭಾವಿಕ ಪ್ರತಿಕ್ರಿಯೆ. ಈ ಎಲ್ಲಾ ಅಸಮಾಧಾನಗಳನ್ನು ಸರಿಪಡಿಸಲಾಗುವುದು ಮತ್ತು ಕಾಂಗ್ರೆಸ್ನ್ನು ಮರಳಿ ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡಲಾಗುವುದು ಎಂದು ಹೇಳಿದ್ದಾರೆ.
ಇದನ್ನು ಓದಿ: ಗುಂಡ್ಲುಪೇಟೆ: ಬಂಡೀಪುರ ಅರಣ್ಯದಲ್ಲಿ ಗುಂಡಿನ ಚಕಮಕಿ: ಯುವಕ ಬಲಿ