Homeಮುಖಪುಟವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

- Advertisement -
- Advertisement -

ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ)  ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.

ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್‌‌‌‌‌‌‌‌‌‌‌‌‌‌‌ ಮಲ್ಯ ಮತ್ತು‌‌‌‌‌‌‌‌‌‌‌‌ ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...