Homeಮುಖಪುಟವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

- Advertisement -
- Advertisement -

ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ)  ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.

ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್‌‌‌‌‌‌‌‌‌‌‌‌‌‌‌ ಮಲ್ಯ ಮತ್ತು‌‌‌‌‌‌‌‌‌‌‌‌ ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...