Homeಮುಖಪುಟವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

ವಿಜಯ್ ಮಲ್ಯ, ಚೋಕ್ಸಿ, ನೀರವ್ ಮೋದಿಯಿಂದ ನಷ್ಟಗೊಳಗಾದ ಬ್ಯಾಂಕ್‌ಗಳಿಗೆ 9,371 ಕೋಟಿ ಮೌಲ್ಯದ ಆಸ್ತಿ ಹಸ್ತಾಂತರ

- Advertisement -
- Advertisement -

ವಂಚನೆ ಮಾಡಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಮಾಡಿದ ಆರ್ಥಿಕ ವಂಚನೆಯಿಂದಾಗಿ ನಷ್ಟ ಅನುಭವಿಸಿದ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ , 8,441 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವರ್ಗಾಯಿಸಿದೆ. ಇದುವರೆಗೆ ಒಟ್ಟು 9,371.17 ಕೋಟಿ ರೂ.ಗಳ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವರ್ಗಾಯಿಸಿದೆ.

ಪರಾರಿಯಾದ ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ, 22,586 ಕೋಟಿ ವಂಚಿಸಿದ್ದಾರೆ. ಅದರಲ್ಲಿ 80.45% (, 18,170 ಕೋಟಿ)  ವಶಪಡಿಸಿಕೊಂಡಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಮೂವರು ವಂಚಕರಿಂದ 18,170.02 ಕೋಟಿ ರೂಗಳ (ಬ್ಯಾಂಕುಗಳ ಒಟ್ಟು ನಷ್ಟದ 80.45%) ಆಸ್ತಿಯನ್ನು ಪಿಎಂಎಲ್‌ಎ ಅಡಿಯಲ್ಲಿ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದೆ. ಈ ಪೈಕಿ, ಒಂದು ಭಾಗ (9,371.17 ಕೋಟಿ ರೂ)ದ ಆಸ್ತಿಯನ್ನು ಸರ್ಕಾರಿ ಬ್ಯಾಂಕುಗಳು ಮತ್ತು ಸರ್ಕಾರಕ್ಕೆ ಇಡಿ ವರ್ಗಾಯಿಸಿದೆ.

ಇದನ್ನೂ ಓದಿ: ತಲೆಬೋಳಿಸಿ, ಗಂಗಾಜಲದಿಂದ ಪ್ರಾಯಶ್ಚಿತ- ಮತ್ತೆ ಟಿಎಂಸಿ ಸೇರಿದ ಬಿಜೆಪಿ ಕಾರ್ಯಕರ್ತರು!

ಮುಂಬೈನ ವಿಶೇಷ ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಯ ಆದೇಶದ ಪ್ರಕಾರ ಸಂಸ್ಥೆಯು ಸುಮಾರು 6,600 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಎಸ್‌ಬಿಐ ನೇತೃತ್ವದ ಒಕ್ಕೂಟ ಬ್ಯಾಂಕುಗಳಿಗೆ ವರ್ಗಾಯಿಸಿದೆ ಎಂದು ತಿಳಿಸಿದೆ. ಷೇರುಗಳ ಮಾರಾಟದಿಂದ 800 ಕೋಟಿ ರೂ.ಗಳ ಹೆಚ್ಚಿನ ಹಣವು ಜೂನ್ 25 ರೊಳಗೆ ದೊರೆಯುತ್ತದೆ ಎಂದು ನಿರೀಕ್ಷಿಸಲಾಗಿರುವುದಾಗಿ ಕೇಂದ್ರ ತನಿಖಾ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಬಿಐ ನೇತೃತ್ವದ ಒಕ್ಕೂಟದ ಪರವಾಗಿ ಡಿಆರ್‌ಟಿ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್‌ನ ಷೇರುಗಳನ್ನು 5,824.50 ಕೋಟಿ ರೂ.ಗಳಿಗೆ ಮಾರಾಟ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ಮೂವರು ಆರೋಪಿಗಳು ವಾಸಿಸುತ್ತಿರುವ ದೇಶಗಳಿಗೆ ಹಸ್ತಾಂತರದ ಮನವಿಗಳನ್ನು ಕಳುಹಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ವಿಜಯ್‌‌‌‌‌‌‌‌‌‌‌‌‌‌‌ ಮಲ್ಯ ಮತ್ತು‌‌‌‌‌‌‌‌‌‌‌‌ ನೀರವ್ ಮೋದಿ ಲಂಡನ್‌ನಲ್ಲಿ ವಾಸಿಸುತ್ತಿದ್ದರೆ, ಮೆಹುಲ್ ಚೋಕ್ಸಿ ಭಾರತದಿಂದ ಓಡಿಹೋದ ನಂತರ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಕಾಣಿಸಿಕೊಂಡಿದ್ದಾರೆ.

ಹಸ್ತಾಂತರ ಪ್ರಕ್ರಿಯೆ ಕುರಿತು ಯುಕೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ವಿಜಯ್ ಮಲ್ಯ ಅವರಿಗೆ ಅನುಮತಿ ನಿರಾಕರಿಸಲಾಗಿದ್ದು, ಅವರನ್ನು ಭಾರತಕ್ಕೆ ಹಸ್ತಾಂತರಿಸುವುದು ಬಹುತೇಕ ಅಂತಿಮವಾಗಿದೆ. ನೀರವ್ ಮೋದಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಕೂಡ ಅಂತಿಮವಾಗಿದೆ. ಆದರೆ, ಮೆಹುಲ್ ಚೋಕ್ಸಿ ಮಾತ್ರ ಹಸ್ತಾಂತರ ಪ್ರಕ್ರಿಯೆ ಕುರಿತು ಆಂಟಿಗುವಾದಲ್ಲಿ ಕಾನೂನು ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: TRP ಹಗರಣದ 2ನೇ ಚಾರ್ಜ್‌ಶೀಟ್‌‌ನಲ್ಲಿ ಅರ್ನಾಬ್‌ ಗೋಸ್ವಾಮಿ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...