Homeಮುಖಪುಟಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

ಕೇರಳ ಸಿಎಂ ಪಿಣರಾಯಿ ವಿಜಯನ್ ಮಗಳ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಇಡಿ

- Advertisement -
- Advertisement -

ಚುನಾವಣೆ ಸಮೀಪಿಸುತ್ತಿದ್ದಂತೆಯೇ ದೇಶದ ವಿಪಕ್ಷ ನಾಯಕರ ಮೇಲೆ ದಾಳಿಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ, ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ವಿಜಯನ್ ಮತ್ತು ಅವರ ಐಟಿ ಕಂಪನಿ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ ಮಿನರಲ್ ಕಂಪನಿಯಿಂದ ವೀಣಾ ವಿಜಯನ್ ಅವರ ಸಂಸ್ಥೆಗೆ ಅಕ್ರಮವಾಗಿ ಹಣ ಪಾವತಿಯಾಗಿದೆ ಎಂದು ಆರೋಪಿಸಲಾಗಿದೆ.

ಗಂಭೀರ ವಂಚನೆ ದೂರಿನ ಆಧಾರದ ಮೇಲೆ ಇಡಿ ಪ್ರಕರಣ ದಾಖಲಿಸಿದ್ದು, ಈ ಬಗ್ಗೆ ಕೇಂದ್ರದಿಂದ ತನಿಖೆ ನಡೆಸುವಂತೆ ಕೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕೊಚ್ಚಿ ಮೂಲದ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್‌) ಖಾಸಗಿ ಕಂಪನಿಯು 2017 ಮತ್ತು 2018ರ ನಡುವೆ ಯಾವುದೇ ಸೇವೆಗಳನ್ನು ಒದಗಿಸದಿದ್ದರೂ ಸಹ ವೀಣಾ ವಿಜಯನ್ ಒಡೆತನದ ಎಕ್ಸಾಲಾಜಿಕ್ ಸಲ್ಯೂಷನ್ ಕಂಪನಿಗೆ ₹1.72 ಕೋಟಿ ಹಣ ಪಾವತಿಸಿದೆ ಎಂದು ಆರೋಪಿಸಲಾಗಿದೆ.

“ಪ್ರಮುಖ ವ್ಯಕ್ತಿಯೊಂದಿಗೆ ವೀಣಾ ಅವರ ಸಂಪರ್ಕದಿಂದಾಗಿ ಯಾವುದೇ ಸೇವೆಗಳನ್ನು ಒದಗಿಸದಿದ್ದರೂ, ಸಿಎಂಆರ್‌ಎಲ್ ಎಕ್ಸಾಲಾಜಿಕ್‌ಗೆ ಮಾಸಿಕ ಪಾವತಿಗಳನ್ನು ಮಾಡಿದೆ ಎಂದು ವರದಿಯೊಂದು ಹೇಳಿಕೊಂಡಿದೆ.

ಗಂಭೀರ ವಂಚನೆ ಬಗ್ಗೆ ತನಿಖೆಯ ವಿರುದ್ಧ ಕಳೆದ ತಿಂಗಳು ಎಕ್ಸಾಲಾಜಿಕ್ ಕಂಪನಿಯು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.  ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದ್ದು, “ಇಂತಹ ನಿಯೋಜನೆಗಾಗಿ ಕೇಂದ್ರ ಸರ್ಕಾರದ ಕೈಗಳಿಗೆ ಸಂಕೋಲೆ ಹಾಕಲು ಸಾಧ್ಯವಿಲ್ಲ” ಎಂದು ಹೇಳಿತ್ತು.

ಜನವರಿಯಲ್ಲಿ ಕೇರಳ ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ವಿಜಯನ್, ತಮ್ಮ ಪತ್ನಿಯ ನಿವೃತ್ತಿ ಹಣವನ್ನು ಬಳಸಿಕೊಂಡು ತಮ್ಮ ಪುತ್ರಿ ಕಂಪನಿಯನ್ನು ಪ್ರಾರಂಭಿಸಿದ್ದಾರೆ. ತಮ್ಮ ಮತ್ತು ಅವರ ಕುಟುಂಬದ ವಿರುದ್ಧ ಮಾಡಲಾಗುತ್ತಿರುವ ಆರೋಪಗಳು ಸುಳ್ಳು ಎಂದು ಹೇಳಿದ್ದರು.

ಇದನ್ನೂ ಓದಿ; ಜಾರಿ ನಿರ್ದೇಶನಾಲಯದ ಕಸ್ಟಡಿ ನಂತರ ಸಿಬಿಐ ವಶಕ್ಕೆ ಅರವಿಂದ್ ಕೇಜ್ರಿವಾಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...