Homeಮುಖಪುಟ'ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ, ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸುತ್ತಿದೆ': ಸುಪ್ರೀಂ ಕೋರ್ಟ್

‘ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ, ಒಕ್ಕೂಟ ವ್ಯವಸ್ಥೆಯನ್ನು ಉಲ್ಲಂಘಿಸುತ್ತಿದೆ’: ಸುಪ್ರೀಂ ಕೋರ್ಟ್

- Advertisement -
- Advertisement -

 

ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮದ (ಟಿಎಎಸ್‌ಎಂಎಸಿ) ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯವನ್ನು (ಇಡಿ) ಗುರುವಾರ (ಮೇ.22) ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಮುಂದಿನ ತನಿಖೆಗೆ ತಡೆ ನೀಡಿದೆ.

“ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ, ದೇಶದ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದೆ. ನಿಗಮದ ವಿರುದ್ಧ ಅಪರಾಧ ಆರೋಪ  ಹೇಗೆ ಸಾಧ್ಯ?” ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರು ಇಡಿ ಪರ ಸುಪ್ರೀಂ ಕೋರ್ಟ್‌ಗೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರನ್ನು ಪ್ರಶ್ನಿಸಿದ್ದಾರೆ.

ಟಿಎಎಸ್‌ಎಂಎಸಿ ಪ್ರಧಾನ ಕಛೇರಿಯ ಮೇಲೆ ಇಡಿ ದಾಳಿ ನಡೆಸಿದ್ದರ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಸರ್ಕಾರ ಮತ್ತು ಟಿಎಎಸ್‌ಎಂಎಸಿ ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಅವರ ಪೀಠ ಗುರುವಾರ ವಿಚಾರಣೆ ನಡೆಸಿದೆ.

ಸರ್ಕಾರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, “2014-21ರ ನಡುವೆ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಗಳ ಸಂಬಂಧ ಮದ್ಯದಂಗಡಿ ನಿರ್ವಾಹಕರ ವಿರುದ್ಧ ರಾಜ್ಯ ಸರ್ಕಾರ 41 ಎಫ್‌ಐಆರ್‌ಗಳನ್ನು ದಾಖಲಿಸಿದೆ. ಆದಾಗ್ಯೂ, 2025 ರಲ್ಲಿ ಇಡಿ ಟಿಎಎಸ್‌ಎಂಎಸಿ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿ ಅಧಿಕಾರಿಗಳ ಫೋನ್‌ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ಆರೋಪಿಸಿದ್ದಾರೆ.

“ಇದು ಮದ್ಯದಂಗಡಿಗಳಿಗೆ ಪರಾವನಿಗೆ ನೀಡುವ ನಿಗಮ. ಮಳಿಗೆಗಳನ್ನು ನೀಡಿದ ಕೆಲವರು ವಾಸ್ತವವಾಗಿ ಹಣವನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ಆದ್ದರಿಂದ, ಸರ್ಕಾರ 2014-21ರ ಅವಧಿಯಲ್ಲಿ ಹಲವು ವ್ಯಕ್ತಿಗಳ ವಿರುದ್ಧ 41 ಎಫ್‌ಐಆರ್‌ಗಳನ್ನು ದಾಖಲಿಸಿದೆ, ನಿಗಮದ ವಿರುದ್ಧ ಅಲ್ಲ. ಇಡಿ 2025ರಲ್ಲಿ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ನಿಗಮದ ಪ್ರಧಾನ ಕಚೇರಿ ಮೇಲೆ ದಾಳಿ ಮಾಡಿದೆ. ಎಲ್ಲರ ಪೋನ್‌ಗಳನ್ನು ಕದ್ದಾಲಿಸಿದೆ” ಎಂದು ಹೇಳಿದ್ದಾರೆ.

ಈ ಹಂತದಲ್ಲಿ ಪ್ರತಿಕ್ರಿಯಿಸಿದ ಸಿಜೆಐ ಗವಾಯಿ ಅವರು, “ನಿಗಮದ ವಿರುದ್ಧ ಅಪರಾಧ ಆರೋಪ ಹೇಗೆ ಸಾಧ್ಯ?” ಎಂದು ಇಡಿ ಪರ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರನ್ನು ಪ್ರಶ್ನಿಸಿದ್ದಾರೆ. “ನೀವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಬಹುದು, ಆದರೆ ನಿಗಮದ ವಿರುದ್ಧ ಕ್ರಿಮಿನಲ್ ಪ್ರಕರಣ ಹೇಗೆ? ನಿಮ್ಮ ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ” ಎಂದು ಕಿಡಿಕಾರಿದ್ದಾರೆ.

“ತಪ್ಪಿತಸ್ಥರ ವಿರುದ್ದ ರಾಜ್ಯ ಸರ್ಕಾರ ಈಗಾಗಲೇ ಪ್ರಕರಣ ದಾಖಲಿಸಿರುವಾಗ ಇಡಿ ಹೇಗೆ ಮಧ್ಯದಲ್ಲಿ ಪ್ರವೇಶಿಸಿದೆ? ಇಡಿ ಪ್ರಕರಣದಲ್ಲಿ ಮಧ್ಯಪ್ರವೇಶಿಸುವ ಬಗ್ಗೆ ಅಫಿಡವಿಟ್ ಸಲ್ಲಿಸಿದೆಯಾ? ಇಡಿ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಲ್ಲಂಘಿಸುತ್ತಿದೆ” ಎಂದು ಸಿಜೆಐ ಖಾರವಾಗಿ ಹೇಳಿದ್ದಾರೆ.

ಪ್ರಕರಣ ಸಂಬಂಧ ಇಡಿಗೆ ನೋಟಿಸ್ ಜಾರಿ ಮಾಡಲು ಪೀಠ ಆದೇಶಿಸಿದೆ. ಅರ್ಜಿದಾರರ ವಿರುದ್ದದ ಮುಂದಿನ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಲಾಗುವುದು ಎಂದು ಪೀಠವು ಆದೇಶದಲ್ಲಿ ತಿಳಿಸಿದೆ. ಇಡಿ ಪರವಾಗಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು, ಪ್ರತಿಕ್ರಿಯೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಟಿಎಎಸ್‌ಎಂಎಸಿ ಅಧಿಕಾರಿಗಳು ಮದ್ಯದ ಬಾಟಲಿಗಳ ಬೆಲೆ ಏರಿಕೆ, ಟೆಂಡರ್ ಬದಲಾವಣೆ, ಲಂಚ ಪಡೆಯುವುದು ಸೇರಿದಂತೆ ವಿವಿಧ ರೀತಿಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. 1,000 ಕೋಟಿ ರೂಪಾಯಿಗೂ ಹೆಚ್ಚಿನ ಆರ್ಥಿಕ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ಮಾರ್ಚ್ 6 ರಿಂದ ಮಾರ್ಚ್ 8 ರವರೆಗೆ ಟಿಎಎಸ್‌ಎಂಎಸಿ ಪ್ರಧಾನ ಕಚೇರಿಗೆ ದಾಳಿ ನಡೆಸಿದ್ದ ಇಡಿ ಶೋಧ ನಡೆಸಿತ್ತು.

ರಾಜ್ಯ ಸರ್ಕಾರ ಅಥವಾ ಟಿಎಎಸ್‌ಎಂಎಸಿ ಹಲವು ವರ್ಷಗಳಿಂದ ಟಿಎಎಸ್‌ಎಂಎಸಿ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಸುಮಾರು 41-46 ಎಫ್ಐಆರ್‌ಗಳಲ್ಲಿ ಇರುವ ಆರೋಪಗಳ ಆಧಾರದ ಮೇಲೆ ಇಡಿ ಹಣ ವರ್ಗಾವಣೆಯನ್ನು ಶಂಕಿಸಿದೆ.

ಮಾರ್ಚ್‌ನಲ್ಲಿ ಟಿಎಎಸ್‌ಎಂಎಸಿ ಕೇಂದ್ರ ಕಚೇರಿ ಮೇಲೆ ಇಡಿ ನಡೆಸಿದ ದಾಳಿ ಮತ್ತು ನಂತರ ಶೋಧ ಕಾರ್ಯವನ್ನು ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರ ತೀವ್ರವಾಗಿ ಖಂಡಿಸಿದೆ. ರಾಜ್ಯ ಸರ್ಕಾರ ಈಗಾಗಲೇ ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವಾಗ ಇಡಿ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿ ರಾಜ್ಯದ ಅಧಿಕಾರವನ್ನು ಅತಿಕ್ರಮಿಸಿದೆ ಎಂದು ಆರೋಪಿಸಿದೆ.

ಇಡಿ ದಾಳಿಯ ಕಾನೂನುಬದ್ಧತೆಯನ್ನು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಆದರೆ, ಹೈಕೋರ್ಟ್ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಹಿಂದೂ ಧಾರ್ಮಿಕ ದತ್ತಿ ಮಂಡಳಿಗಳ ಜೊತೆ ವಕ್ಫ್ ಬೋರ್ಡ್ ಹೋಲಿಕೆ ಸಲ್ಲದು: ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ನಕಲಿ ಗೋರಕ್ಷಕರು ಬೆನ್ನಟ್ಟಿದ್ದರಿಂದ ನದಿಗೆ ಹಾರಿದ ವ್ಯಕ್ತಿ ಕಣ್ಮರೆ; ನಾಲ್ವರ ಬಂಧನ

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಹೆದ್ದಾರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ್ದರಿಂದ ಹೆದರಿದ ಆತ ಸುರಕ್ಷತೆಗಾಗಿ ನದಿಗೆ ಹಾರಿದ್ದಾನೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ರಾಂಬನ್ ಜಿಲ್ಲೆಯ ಉಖ್ರಾಲ್ ತಹಸಿಲ್‌ನ ಪೋಗಲ್‌ನ ಮುಂಡ್‌ಖಾಲ್...

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ)...

ಮಹಿಳಾ ಮೀಸಲಾತಿ ಮಸೂದೆ: ಏಪ್ರಿಲ್ 15 ರಂದು ಕಾಂಗ್ರೆಸ್ ಸರ್ವಪಕ್ಷ ಸಭೆ ಕರೆಯಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚಿಸಲು ಏಪ್ರಿಲ್ 15 ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,...

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...

ನಕಲಿ ನ್ಯಾಯಾಧೀಶನನ್ನು ಬಂಧಿಸಿದ ದೆಹಲಿ ಪೊಲೀಸರು; ಬಂದೂಕು ಹೊಂದಿದ್ದ ವ್ಯಕ್ತಿಗಳು

ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಂಗ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿಂದ ಬಂದೂಕು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರ...

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...