Homeಮುಖಪುಟಅನಿಲ್ ಅಂಬಾನಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಇಡಿ

ಅನಿಲ್ ಅಂಬಾನಿ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಇಡಿ

- Advertisement -
- Advertisement -

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ವಿರುದ್ಧ 3,000 ಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಲುಕ್ ಔಟ್ ನೋಟಿಸ್ ಹೊರಡಿಸಿದೆ.

ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಅಂಬಾನಿಗೆ ಇಡಿ ಶುಕ್ರವಾರ ಸಮನ್ಸ್ ನೀಡಿದೆ. ಈ ಬೆನ್ನಲ್ಲೇ ಅವರ ವಿರುದ್ದ ಲುಕ್ ಔಟ್ ನೋಟಿಸ್ ಜಾರಿಗೊಳಿಸಿರುವ ಬಗ್ಗೆ ವರದಿಯಾಗಿದೆ.

ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ವ್ಯಕ್ತಿಗಳು ದೇಶ ತೊರೆಯುವುದನ್ನು ತಡೆಯಲು ಲುಕ್ ಔಟ್ ನೋಟಿಸ್ ಹೊರಡಿಸಲಾಗುತ್ತದೆ. ದೇಶದ ಎಲ್ಲಾ ವಿಮಾನ ನಿಲ್ದಾಣಗಳು, ಬಂದರುಗಳು ಸೇರಿದಂತೆ ದೇಶ ತೊರೆಯಲು ಸಾಧ್ಯವಾಗುವ ಎಲ್ಲಾ ಮಾರ್ಗಗಳಿಗೆ ಇದನ್ನು ರವಾನಿಸಲಾಗುತ್ತದೆ. ಕಾನೂನು ಕ್ರಮ ಎದುರಿಸುತ್ತಿರುವ ವ್ಯಕ್ತಿ ವಿದೇಶಗಳಿಗೆ ಪಲಾಯನ ಮಾಡಲು ಮುಂದಾದರೆ ಈ ಮೂಲಕ ಸಿಕ್ಕಿ ಬೀಳುತ್ತಾರೆ.

2017 ರಿಂದ 2019ರ ನಡುವೆ ಯೆಸ್ ಬ್ಯಾಂಕ್ ರಿಲಯನ್ಸ್ ಗ್ರೂಪ್ ಕಂಪನಿಗಳಿಗೆ ನೀಡಿದ ಸುಮಾರು 3,000 ಕೋಟಿ ರೂಪಾಯಿ ಸಾಲವನ್ನು ಬೇರೆಡೆಗೆ ತಿರುಗಿಸಿದ ಆರೋಪದ ಬಗ್ಗೆ ಇಡಿ ತನಿಖೆ ನಡೆಸುತ್ತಿದೆ. ಸಾಲ ಮಂಜೂರು ಮಾಡುವ ಮುನ್ನ ಬ್ಯಾಂಕಿನ ಪ್ರವರ್ತಕರು ಅಥವಾ ಪ್ರಮೋಟರ್ಸ್ ಹಣವನ್ನು ತಮ್ಮ ವೈಯಕ್ತಿಕ ಖಾತೆಗಳ ಮೂಲಕ ಸ್ವೀಕರಿಸಿದ್ದಾರೆ. ನಿಯಮಗಳನ್ನು ಮೀರಿ ಅಂಬಾನಿಗೆ ಲಾಭ ಮಾಡಿ ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನು ‘ಕ್ವಿಡ್ ಪ್ರೊ ಕ್ವೋ’ ಅಥವಾ ಕೊಡು ಕೊಳ್ಳುವಿಕೆ ಎಂದು ಪರಿಗಣಿಸಲಾಗಿದೆ.

ಜುಲೈ 24ರಂದು ಪ್ರಕರಣಕ್ಕೆ ಸಂಬಂಧಿಸಿದ ಅಂಬಾನಿಗೆ ಸಂಬಂಧಿಸಿದ 50ಕ್ಕೂ ಹೆಚ್ಚು ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿತ್ತು ಮತ್ತು ಕನಿಷ್ಠ ಮೂರು ದಿನಗಳವರೆಗೆ ಪರಿಶೀಲನೆ ಮಾಡಿತ್ತು. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಈ ದಾಳಿ ನಡೆಸಲಾಗಿದೆ.

ರಿಲಯನ್ಸ್ ಪವರ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಎಂಬ ಎರಡು ಸಮೂಹ ಕಂಪನಿಗಳು ತಮ್ಮ ವಿರುದ್ಧ ತೆಗೆದುಕೊಂಡ ಕ್ರಮವನ್ನು ಒಪ್ಪಿಕೊಂಡರೂ, ಈ ದಾಳಿಯಿಂದ ತಮ್ಮ ವ್ಯವಹಾರ ಕಾರ್ಯಾಚರಣೆಗಳು, ಆರ್ಥಿಕ ಕಾರ್ಯಕ್ಷಮತೆ, ಷೇರುದಾರರು, ಉದ್ಯೋಗಿಗಳು ಅಥವಾ ಯಾವುದೇ ಇತರ ಪಾಲುದಾರರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಷೇರು ವಿನಿಮಯ ಕೇಂದ್ರಗಳಿಗೆ ತಿಳಿಸಿವೆ.

ಭಾರತವು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದೆ ಎಂದು ತನಗೆ ತಿಳಿದುಬಂದಿದೆ: ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...