Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...