Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...