Homeಮುಖಪುಟಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

ಮೋದಿ ಅವಧಿಯಲ್ಲಿ ಮಾಧ್ಯಮ ಸಂಸ್ಥೆಗಳ ಮೇಲೆ ಇ.ಡಿ., ಐ.ಟಿ. ಅಸ್ತ್ರ; ಇಲ್ಲಿದೆ ವಿವರ

- Advertisement -
- Advertisement -

ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವ ಮಾಧ್ಯಮಗಳ ಮೇಲೆ ತರಹೇವಾರಿ ದಾಳಿಗಳನ್ನು ಸರ್ಕಾರ ನಡೆಸುತ್ತಿರುವುದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ತುರ್ತು ಪರಿಸ್ಥಿತಿ ಹೇರಿದ್ದ ಕಾಲದಲ್ಲಿ ನೇರವಾಗಿ ಮಾಧ್ಯಮಗಳನ್ನು ನಿಯಂತ್ರಿಸಲಾಗುತ್ತಿತ್ತು. ಆದರೆ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವ ಈ ಕಾಲಘಟ್ಟದಲ್ಲಿ ಮಾಧ್ಯಮಗಳ ಬಾಯಿ ಮುಚ್ಚಿಸಲು ನಾನಾ ಮಾರ್ಗಗಳನ್ನು ಪ್ರಭುತ್ವ ಕಂಡುಕೊಂಡಿದೆ.

ಪತ್ರಿಕೆಗಳಿಗೆ ಸರ್ಕಾರಿ ಜಾಹೀರಾತುಗಳನ್ನು ತಡೆದು ತೊಂದರೆ ಕೊಡುವುದು, ಟ್ರೋಲ್‌ ಪಡೆಯ ಮೂಲಕ ದಾಳಿ ನಡೆಸುವುದು ಒಂದು ಕಡೆಯಾದರೆ ಆದಾಯ ತೆರಿಗೆ (ಐ.ಟಿ.), ಜಾರಿ ನಿರ್ದೇಶನಾಲಯ (ಇ.ಡಿ.) ಥರದ ಸಂಸ್ಥೆಗಳ ಮೂಲಕ ದಾಳಿ, ಸರ್ಚ್, ಪರಿಶೀಲನೆ ನಡೆಸುವ ಕೆಲಸವೂ ನಡೆಯುತ್ತಿದೆ. ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಬಳಿಕ ಈ ವಿದ್ಯಮಾನಗಳು ಆಗಾಗ್ಗೆ ವರದಿಯಾಗುತ್ತಿವೆ.

2002ರ ಗುಜರಾತ್ ಗಲಭೆ ಮತ್ತು ಮೋದಿ ಸರ್ಕಾರದ ಬಹುಸಂಖ್ಯಾತವಾದದ ಕುರಿತು ಎರಡು ಭಾಗಗಳಲ್ಲಿ ಬಿಬಿಸಿ ಸುದ್ದಿಸಂಸ್ಥೆಯು ಸಾಕ್ಷ್ಯಚಿತ್ರವನ್ನು ಬಿಡುಗಡೆ ಮಾಡಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಜೊತೆಗೆ ಈ ಸಾಕ್ಷ್ಯಚಿತ್ರಗಳನ್ನು ಭಾರತದಲ್ಲಿ ನಿರ್ಬಂಧಿಸಲಾಯಿತು. ಅದರ ಬೆನ್ನಲ್ಲೇ ಆದಾಯ ತೆರಿಗೆ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ರೈಡ್‌ ಮಾಡಿದ್ದಾರೆ. ಹೀಗಾಗಿ ಸರ್ಕಾರವನ್ನು ಪ್ರಶ್ನಿಸುವ ಮಾಧ್ಯಮಗಳ ವಿರುದ್ಧ ಐ.ಟಿ., ಇ.ಡಿ.ಗಳನ್ನು ಸರ್ಕಾರ ಬಳಸುತ್ತದೆ ಎಂಬ ಟೀಕೆ ಮುನ್ನೆಲೆಗೆ ಬಂದಿದೆ.

ಇದನ್ನೂ ಓದಿರಿ: ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಇಮೇಜ್‌ಗೆ ಧಕ್ಕೆ ತಂದಿದ್ದಕ್ಕೆ ಬಿಬಿಸಿ ಕಚೇರಿಗಳ ಮೇಲೆ ದಾಳಿ: ದಿಗ್ವಿಜಯ ಸಿಂಗ್

“ಅಂತಾರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆಗಳ ಅಕ್ರಮದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದು, ಅದರಂತೆ ಬಿಬಿಸಿ ಮೇಲೂ ಆರೋಪ ಕೇಳಿಬಂದಿದೆ. ಹಾಗಾಗಿ ಸಮೀಕ್ಷೆ ಮಾಡುತ್ತಿದ್ದೇವೆ” ಎಂದು ಅಧಿಕಾರಿಗಳು ಹೇಳಿದ್ದಾರೆ. ಕೆಲವು ಪತ್ರಕರ್ತರ ದಾಖಲೆಗಳು ಮತ್ತು ಫೋನ್‌ಗಳನ್ನು ಅಧಿಕಾರಿಗಳು ತೆಗೆದುಕೊಂಡು ಹೋಗಿದ್ದಾರೆ ಎಂದೂ ಮೂಲಗಳು ಹೇಳಿವೆ. ಬಿಬಿಸಿಯ ಮೇಲೆ ದಾಳಿ ಮಾಡಿದಂತೆಯೇ ಸರ್ಕಾರ ಇತ್ತೀಚಿನ ವರ್ಷಗಳಲ್ಲಿ ಹಲವು ಮಾಧ್ಯಮಗಳ ಮೇಲೆ ಐ.ಟಿ. ಮತ್ತು ಇ.ಡಿ. ಬಾಣಗಳನ್ನು ಬಳಸಿದೆ.

ನ್ಯಾಷನಲ್ ಹೆರಾಲ್ಡ್‌ ಮೇಲೆ ಇ.ಡಿ. ರೈಡ್‌

ಕಾಂಗ್ರೆಸ್‌ ಪಕ್ಷದ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮೇಲೆ ಇ.ಡಿ. ಪ್ರಹಾರ ನಡೆಸಿದೆ. ಮನಿಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಳೆದ ವರ್ಷ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಿದ್ದರು. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿಯವರು ವಿಚಾರಣೆಗೂ ಹಾಜರಾಗಿದ್ದರು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದ್ದು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದೆ. ಇದರ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಜ್ಯಸಭೆಯ ವಿರೋಧ ಪಕ್ಷದ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ಪ್ರಶ್ನಿಸಿತ್ತು. ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್‌ ಗಾಂಧಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ನೀಡಿತ್ತು. ಕಾಂಗ್ರೆಸ್‌ ಕಾರ್ಯಕರ್ತರು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.

ನ್ಯೂಸ್‌ ಕ್ಲಿಕ್‌, ನ್ಯೂಸ್‌ ಲಾಂಡ್ರಿ ಮೇಲೆ ಕಾರ್ಯಾಚರಣೆ

ಪರ್ಯಾಯ ಮಾಧ್ಯಮಗಳಾಗಿ ಭಾರೀ ಸಂಚಲನ ಮೂಡಿಸಿರುವ ನ್ಯೂಸ್‌ಕ್ಲಿಕ್ ಮತ್ತು ನ್ಯೂಸ್‌ಲಾಂಡ್ರಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು 2021ರ ಫೆಬ್ರುವರಿಯಲ್ಲಿ ಭೇಟಿ ನೀಡಿ, ಕಾರ್ಯಾಚರಣೆ ನಡೆಸಿದ್ದರು. ಅಧಿಕಾರಿಗಳು ಇದನ್ನು “ಸರ್ವೆ” ಎಂದು ಕರೆದಿದ್ದು, “ದಾಳಿ” ಅಲ್ಲ ಎಂದು ತಿಳಿಸಿದ್ದರು.

ಸರ್ವೇಗಳು ತೆರಿಗೆ ವಂಚನೆಯ ಆರೋಪಗಳಿಗೆ ಸಂಬಂಧಿಸಿದ್ದು, ಪೋರ್ಟಲ್‌ಗಳ ಖಾತೆ ಪುಸ್ತಕಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ನ್ಯೂಸ್‌ ಕ್ಲಿಕ್ ವೆ‌ಬ್ ಪೋರ್ಟಲ್‌ 2018-19 ರ ಹಣಕಾಸು ವರ್ಷದಲ್ಲಿ ವರ್ಲ್ಡ್‌ವೈಡ್ ಮೀಡಿಯಾ ಹೋಲ್ಡಿಂಗ್ಸ್ ಎಲ್‌ಎಲ್‌ಸಿ ಯುಎಸ್‌ಎಯಿಂದ 9.59 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‌ಡಿಐ) ಪಡೆದಿದೆ ಎಂದು ಆರೋಪಿಸಿದ್ದ ದೆಹಲಿ ಪೊಲೀಸರು ‘ನ್ಯೂಸ್‌ ಕ್ಲಿಕ್‌’ ಮೇಲೆ ಫೆಬ್ರವರಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಇದರ ನಂತರ ನ್ಯೂಸ್‌ಕ್ಲಿಕ್ ಮತ್ತು ಅದರ ಸಂಸ್ಥಾಪಕರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

ಮುಖ್ಯವಾಹಿನಿಯ ಮಾಧ್ಯಮಗಳು ನಿರ್ಲಕ್ಷಿಸುವ ಜನಪರ ಸುದ್ದಿಗಳನ್ನು ಪ್ರಕಟ ಮಾಡುವ ವೆಬ್‌ ಪೋರ್ಟಲ್‌ ನ್ಯೂಸ್‌ ಕ್ಲಿಕ್ ಆಗಿದೆ.

ಮಾಧ್ಯಮಗಳು ಮತ್ತು ಅವುಗಳ ಸುದ್ದಿಗಳನ್ನು ವಿಶ್ಲೇಷಿಸುವ ವೆಬ್‌ಪೋರ್ಟಲ್‌ ‘ನ್ಯೂಸ್‌ ಲಾಂಡ್ರಿ’. ಗ್ರೌಂಡ್ ರಿಪೋರ್ಟ್‌ಗಳಿಗೆ ಈ ಜಾಲತಾಣ ಹೆಸರುವಾಸಿಯಾಗಿದೆ. ಜೊತೆಗೆ ಖಚಿತ ಅಂಕಿ-ಅಂಶಗಳನ್ನು ಆಧರಿಸಿ ಸುದ್ದಿಯ ವಿಭಿನ್ನ ದೃಷ್ಟಿಕೋನಗಳನ್ನು ತೆರೆದಿಡುತ್ತಿದೆ. ಪ್ರಭುತ್ವದ ಪರ ಕೆಲಸ ಮಾಡುವ ಮಾಧ್ಯಮಗಳನ್ನು ವಿಶಿಷ್ಟವಾಗಿ ಗೇಲಿ ಮಾಡುವಲ್ಲಿ ‘ನ್ಯೂಸ್‌ಲಾಂಡ್ರಿ’ ಹೆಸರುವಾಸಿ.

ಎರಡು ಪೋರ್ಟಲ್‌ಗಳು ಕೂಡಾ ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿರುವ ಜನಪರ ಸುದ್ದಿ ಸಂಸ್ಥೆಗಳಾಗಿವೆ. ಸರ್ಕಾರದ ರೈತ ಕಾಯ್ದೆಗಳ ವಿರುದ್ಧ ನಡೆದ ಪ್ರತಿಭಟನೆಯನ್ನು ವರದಿ ಮಾಡಿದ ಕಾರಣದಿಂದ ಈ ಸಂಸ್ಥೆಗಳ ಮೇಲೆ ಐಟಿ ಸರ್ಚ್ ಮಾಡಿದೆ ಎಂಬ ಆರೋಪಗಳು ಬಂದಿದ್ದವು.

ದೈನಿಕ್‌ ಭಾಸ್ಕರ್‌‌ ಮೇಲೆ ರೈಡ್‌

ಉತ್ತರ ಭಾರತದ ಪ್ರಮುಖ ಪತ್ರಿಕೆಗಳಲ್ಲಿ ದೈನಿಕ್‌ ಭಾಸ್ಕರ್ ಒಂದಾಗಿದ್ದು, 12 ರಾಜ್ಯಗಳಲ್ಲಿ ಈ ಪತ್ರಿಕೆಯ ಆವೃತ್ತಿಗಳಿವೆ. ಸುಮಾರು 65 ವರ್ಷಗಳ ಇತಿಹಾಸವಿರುವ ಈ ಪತ್ರಿಕೆ ಪ್ರಭುತ್ವಕ್ಕೆ ಸೊಪ್ಪು ಹಾಕುವುದಿಲ್ಲ ಎಂಬ ಪ್ರಶಂಸೆಗೆ ಪಾತ್ರವಾಗಿದೆ.

‘ದೈನಿಕ್ ಭಾಸ್ಕರ್‌’ ಸಂಸ್ಥೆಯು ಆದಾಯ ತೆರಿಗೆ ಪಾವತಿಯಲ್ಲಿ ಅಕ್ರಮ ಎಸಗಿದೆ ಎಂಬ ಆರೋಪದ ಮೇಲೆ ಸಂಸ್ಥೆಯ ಪ್ರಧಾನ ಕಚೇರಿ ಮತ್ತು ಪ್ರಾದೇಶಿಕ ಕಚೇರಿಗಳ ಮೇಲೆ 2021ರ ಜುಲೈ 12ರಂದು ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದೇಶದ ಒಟ್ಟು ಆರು ರಾಜ್ಯಗಳಲ್ಲಿ ಏಕಕಾಲದಲ್ಲಿ ಪರಿಶೀಲನೆ ನಡೆದಿತ್ತು.

‘ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಗಂಗಾ ತಟದಲ್ಲಿ ಹೆಣಗಳನ್ನು ಮನಬಂದಂತೆ ವಿಲೇವಾರಿ ಮಾಡಲಾಗಿದೆ. ಸರ್ಕಾರವು ಸಾವಿನ ಸಂಖ್ಯೆಯನ್ನು ಮುಚ್ಚಿಡಲು ಯತ್ನಿಸುತ್ತಿದೆ. ಆದರೆ, ಗಂಗೆ ತನ್ನ ಒಡಲಲ್ಲಿ ಇರುವ ಹೆಣಗಳನ್ನು ಹೊರಹಾಕುತ್ತಿದ್ದಾಳೆ’ ಎಂದು ದೈನಿಕ್‌ ಭಾಸ್ಕರ್‌ ಪತ್ರಿಕೆಯು 2021ರ ಜೂನ್‌ ಕೊನೆಯ ವಾರದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ವೈಫಲ್ಯವನ್ನು ಎತ್ತಿ ಹಿಡಿದು ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿತ್ತು.

ಇದನ್ನೂ ಓದಿರಿ: ದಲಿತ ಯುವ ಹೋರಾಟಗಾರ ಸಂದೇಶ್ ವಿರುದ್ಧ ಎಫ್‌ಐಆರ್‌; ಬಂಧನ

ಭಾರತ್ ಸಮಾಚಾರ್‌ ಕಚೇರಿ ಪರಿಶೀಲನೆ

ಉತ್ತರ ಪ್ರದೇಶದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಒಂದಾದ ಭಾರತ್ ಸಮಾಚಾರ್‌ ಕಚೇರಿಯ ಮೇಲೆ 2021ರ ಜುಲೈ 12ರಂದು ಆದಾಯ ತೆರಿಗೆ ಇಲಾಖೆ ಪರಿಶೀಲನೆ ನಡೆಸಿತ್ತು.

ಆದಾಯ ತೆರಿಗೆ ಪಾವತಿಯಲ್ಲಿ ಮತ್ತು ಕಂಪನಿಗೆ ಸಂಬಂಧಿಸಿದ ಖರೀದಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಲಾಗಿತ್ತು. ಸರ್ಕಾರವನ್ನು ಎದುರು ಹಾಕಿಕೊಂಡಿದ್ದ ಈ ಪತ್ರಿಕೆಯು ಐಟಿ ದಾಳಿಗೂ ಮುನ್ನ ಕೋವಿಡ್ ವೈಫಲ್ಯಗಳನ್ನು ಸರಣಿಯಾಗಿ ತೆರೆದಿಟ್ಟಿತ್ತು. “ಕೋವಿಡ್‌ ಕಾರಣಕ್ಕೆ ಸಂಭವಿಸಿದ ಸಾವುಗಳ ಸಂಖ್ಯೆಯನ್ನು ಉತ್ತರ ಪ್ರದೇಶ ಸರ್ಕಾರ ಬಚ್ಚಿಟ್ಟಿದೆ. ಆಕ್ಸಿಜನ್‌ ಪೂರೈಕೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಕಾರಣದಿಂದಲೇ ಎರಡನೇ ಅಲೆಯಲ್ಲಿ ಹೆಚ್ಚಿನ ಸಾವುಗಳು ಸಂಭವಿಸಿವೆ” ಎಂದು 2021ರ ಜೂನ್‌ ಮತ್ತು ಜುಲೈನಲ್ಲಿ ಒಂದರ ಹಿಂದೆ ಒಂದು ವರದಿಯನ್ನು ಪ್ರಸಾರ ಮಾಡಿತ್ತು. ಈ ಕಾರಣಕ್ಕಾಗಿಯೇ ಐಟಿ ಪರಿಶೀಲನೆ ನಡೆಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.

‘ನೀವು ಎಷ್ಟು ಬೇಕಾದರೂ ದನಿ ಅಡಗಿಸಲು ಯತ್ನಿಸಿ, ನಾವೂ ಅಷ್ಟೇ ದೊಡ್ಡ ದನಿಯಲ್ಲಿ ಸತ್ಯ ಹೇಳುತ್ತೇವೆ. ನಾವು ಮೊದಲೂ ಹೆದರುತ್ತಿರಲಿಲ್ಲ, ಈಗಲೂ ಹೆದರುವುದಿಲ್ಲ’ ಎಂದು ಭಾರತ್ ಸಮಾಚಾರ್‌ ಚಾಟಿ ಬೀಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...